Thursday, February 05 2026 | 10:27:01 PM
Breaking News

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ನವದೆಹಲಿಯಲ್ಲಿ ಎನ್‌ಸಿಆರ್‌ಬಿಯೊಂದಿಗೆ ಮೂರು ಹೊಸ ಕ್ರಿಮಿನಲ್ ಕಾನೂನುಗಳ ಅನುಷ್ಠಾನದ ಕುರಿತು ಪರಿಶೀಲನಾ ಸಭೆ ನಡೆಸಿದರು

Connect us on:

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ  ನವದೆಹಲಿಯಲ್ಲಿ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಜೊತೆ ಮೂರು ಹೊಸ ಕ್ರಿಮಿನಲ್ ಕಾನೂನುಗಳ ಅನುಷ್ಠಾನದ ಕುರಿತು ಪರಿಶೀಲನಾ ಸಭೆ ನಡೆಯಿತು. ಸಭೆಯು ಅಖಿಲ ಭಾರತ ಮಟ್ಟದಲ್ಲಿ ICJS 2.0 ನೊಂದಿಗೆ CCTNS 2.0, NAFIS, ಜೈಲುಗಳು, ನ್ಯಾಯಾಲಯಗಳು, ಪ್ರಾಸಿಕ್ಯೂಷನ್ ಮತ್ತು ಫೋರೆನ್ಸಿಕ್ಸ್‌ನ ಏಕೀಕರಣದ ಅನುಷ್ಠಾನದ ಕುರಿತು ಸಮಾಲೋಚನೆ ನಡೆಸಿತು. ಕೇಂದ್ರ ಗೃಹ ಕಾರ್ಯದರ್ಶಿ, ಎನ್‌ಸಿಆರ್‌ಬಿ ನಿರ್ದೇಶಕರು ಮತ್ತು ಗೃಹ ಸಚಿವಾಲಯದ ಹಲವಾರು ಹಿರಿಯ ಅಧಿಕಾರಿಗಳು, NCRB ಮತ್ತು NIC ಅಧಿಕಾರಿಗಲು ಸಭೆಯಲ್ಲಿ ಉಪಸ್ಥಿತರಿದ್ದರು.

0I9A6555.JPG

ICJS 2.0 ನಲ್ಲಿ ಹೊಸ ಕ್ರಿಮಿನಲ್ ಕಾನೂನುಗಳ ಸಂಪೂರ್ಣ ಅನುಷ್ಠಾನಕ್ಕೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲು NCRBಗೆ ಗೃಹ ಸಚಿವರು ಸೂಚನೆ ನೀಡಿದರು. ಶ್ರೀ ಅಮಿತ್ ಶಾ ಅವರು ಪ್ರತಿ ರಾಜ್ಯ / ಯುಟಿಯಲ್ಲಿ eSakshya, Nyaya Shruti, eSign ಮತ್ತು eSummons ನಂತಹ ಅಪ್ಲಿಕೇಶನ್‌ಗಳ ಬಳಕೆಗೆ ಒತ್ತು ನೀಡಲು ತಿಳಿಸಿದರು.

ತಂತ್ರಜ್ಞಾನದ ಬಳಕೆಗೆ ಒತ್ತು ನೀಡಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವರು, ಸಂತ್ರಸ್ತರು ಮತ್ತು ದೂರುದಾರರಿಗೆ ಅನುಕೂಲವಾಗುವಂತೆ ಎಲ್ಲಾ ಅಪರಾಧ ಪ್ರಕರಣಗಳಿಗೆ ಪೂರ್ವನಿರ್ಧರಿತ ಹಂತಗಳಲ್ಲಿ ಮತ್ತು ದಾಖಲಾತಿಯಿಂದ ಪ್ರಕರಣದ ವಿಲೇವಾರಿಯವರೆಗಿನ ಸಮಯಾವಧಿಯಲ್ಲಿ ಎಚ್ಚರಿಕೆಗಳನ್ನು ವಹಿಸಲು ಆದೇಶಿಸಿದರು. ತನಿಖಾ ಅಧಿಕಾರಿಗಳು ಮತ್ತು ಹಿರಿಯ ಅಧಿಕಾರಿಗಳಿಗೆ ಎಚ್ಚರಿಕೆಗಳು ಪೂರ್ವ-ನಿರ್ಧರಿತ ಸಮಯದ ಪ್ರಕಾರ ತನಿಖೆಯ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಸಹಾಯ ಮಾಡುತ್ತದೆ. MHA, NCRB ನ ಅಧಿಕಾರಿಗಳ ತಂಡವು ತಾಂತ್ರಿಕ ಯೋಜನೆಗಳ ಅಳವಡಿಕೆಯನ್ನು ಹೆಚ್ಚಿಸಲು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಭೇಟಿ ನೀಡಬೇಕು ಮತ್ತು ಸಾಧ್ಯವಿರುವ ಎಲ್ಲ ರೀತಿಯಲ್ಲಿ ಅವರಿಗೆ ಸಹಾಯ ಮಾಡಬೇಕು ಎಂದು ಅವರು ಹೇಳಿದರು.

ಅಪರಾಧ ಮತ್ತು ಕ್ರಿಮಿನಲ್ ಟ್ರ್ಯಾಕಿಂಗ್ ನೆಟ್‌ವರ್ಕ್ ಮತ್ತು ಸಿಸ್ಟಮ್ಸ್ (CCTNS) ಮತ್ತು ಇಂಟರ್-ಆಪರೇಬಲ್ ಕ್ರಿಮಿನಲ್ ಜಸ್ಟೀಸ್ ಸಿಸ್ಟಮ್ (ICJS) ಯ ಪ್ರಗತಿಯನ್ನು ನಿಯಮಿತವಾಗಿ ಮೇಲ್ವಿಚಾರಣೆ ಮಾಡಲು ಮತ್ತು ಯೋಜನೆಗೆ ಪ್ರಚೋದನೆಯನ್ನು ನೀಡಲು ರಾಜ್ಯ/UTಗಳ ಹಿರಿಯ ಪೊಲೀಸ್ ರಚನೆಗಳೊಂದಿಗೆ ನಿಯಮಿತ ಸಂವಾದವಿರಬೇಕು ಎಂದು ಶ್ರೀ ಅಮಿತ್ ಶಾ ಹೇಳಿದರು. ಅಪರಿಚಿತ ಮೃತ ದೇಹಗಳು ಮತ್ತು ವ್ಯಕ್ತಿಗಳ ಗುರುತು ಪತ್ತೆ ಹಚ್ಚಲು ಬಯೋಮೆಟ್ರಿಕ್ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.

0I9A6552.JPG

ತನಿಖಾ ಅಧಿಕಾರಿಗಳು ಮತ್ತು ಕ್ರಿಮಿನಲ್ ಜಸ್ಟಿಸ್ ಸಿಸ್ಟಮ್‌ನ ಇತರ ಮಧ್ಯಸ್ಥಗಾರರಿಗೆ ಅನುಕೂಲವಾಗುವಂತೆ ಎನ್‌ಸಿಆರ್‌ಬಿ ಡೇಟಾ ಸಮೃದ್ಧ ವೇದಿಕೆಯನ್ನು ರಚಿಸಬೇಕು. ಹೊಸ ಕ್ರಿಮಿನಲ್ ಕಾನೂನುಗಳು ಮತ್ತು ರಾಷ್ಟ್ರೀಯ ಸ್ವಯಂಚಾಲಿತ ಫಿಂಗರ್‌ಪ್ರಿಂಟ್ ಐಡೆಂಟಿಫಿಕೇಶನ್ ಸಿಸ್ಟಮ್ (NAFIS) ನ ತಾಂತ್ರಿಕ ಅನುಷ್ಠಾನದಲ್ಲಿ NCRB ಯ ಪ್ರಯತ್ನಗಳಿಗೆ ಸಚಿವ ಶ್ರೀ ಅಮಿತ್‌ ಶಾ ಶ್ಲಾಘನೆ ವ್ಯಕ್ತಪಡಿಸಿದರು.

About Matribhumi Samachar

Check Also

ಭಾರತದ ರಾಷ್ಟ್ರಪತಿ ಒಡಿಶಾದ ರಾಯರಂಗಪುರದಲ್ಲಿ # ಸ್ಕಿಲ್ ದ ನೇಶನ್ ಎ.ಐ. ಸವಾಲಿಗೆ ಚಾಲನೆ ನೀಡಿದರು ಮತ್ತು ಇಗ್ನೋ ಪ್ರಾದೇಶಿಕ ಕೇಂದ್ರ ಹಾಗು ಕೌಶಲ್ಯ ಕೇಂದ್ರವನ್ನು ವರ್ಚುವಲ್ ಆಗಿ ಉದ್ಘಾಟಿಸಿದರು

ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ಇಂದು (ಜನವರಿ 1, 2026) ನಡೆದ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು …