Thursday, January 01 2026 | 04:04:55 PM
Breaking News

ರಾಷ್ಟ್ರಪತಿಯವರು ಬೆಂಗಳೂರಿನಲ್ಲಿ ನಿಮ್ಹಾನ್ಸ್‌ ನ ಸುವರ್ಣ ಮಹೋತ್ಸವ ಆಚರಣೆಯಲ್ಲಿ ಭಾಗವಹಿಸಿದರು

Connect us on:

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (ಜನವರಿ 3, 2025) ಬೆಂಗಳೂರಿನಲ್ಲಿ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನಗಳ ಸಂಸ್ಥೆಯ (ನಿಮ್ಹಾನ್ಸ್) ಸುವರ್ಣ ಮಹೋತ್ಸವ ಆಚರಣೆಯಲ್ಲಿ ಭಾಗವಹಿಸಿದರು.‌

ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರಪತಿಯವರು, ಅಸಾಮಾನ್ಯ ರೋಗಿಗಳ ಆರೈಕೆಯೊಂದಿಗೆ ನವೀನ ಸಂಶೋಧನೆ ಮತ್ತು ಕಠಿಣ ಶೈಕ್ಷಣಿಕ ಕಾರ್ಯಕ್ರಮವು ನಿಮ್ಹಾನ್ಸ್ ಅನ್ನು ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಕ್ಷೇತ್ರದಲ್ಲಿ ನಿರ್ವಿವಾದ ನಾಯಕನನ್ನಾಗಿ ಮಾಡಿದೆ ಎಂದು ಹೇಳಿದರು. ಬಳ್ಳಾರಿ ಮಾದರಿ ಸಮುದಾಯ ಆಧಾರಿತ ಮಾನಸಿಕ ಆರೋಗ್ಯ ಸೇವೆ ಇತಿಹಾಸ ನಿರ್ಮಿಸಿದೆ. ಈಗ, ಟೆಲಿ ಮನಸ್‌ (MANAS) ವೇದಿಕೆಯು ಅಗತ್ಯವಿರುವವರನ್ನು ತಲುಪಲು ತಂತ್ರಜ್ಞಾನವನ್ನು ಬಳಸುತ್ತಿದೆ. ಕಳೆದ ಎರಡು ವರ್ಷಗಳಲ್ಲಿ ದೇಶಾದ್ಯಂತ ಇರುವ 53 ಟೆಲಿ ಮನಸ್ ಕೇಂದ್ರಗಳು ಸುಮಾರು 17 ಲಕ್ಷ ಜನರಿಗೆ ಅವರು ಆಯ್ಕೆ ಮಾಡಿದ ಭಾಷೆಯಲ್ಲಿ ಸೇವೆ ಸಲ್ಲಿಸಿವೆ ಎಂಬುದನ್ನು ತಿಳಿದು ಸಂತೋಷವಾಗಿದೆ ಎಂದು ಅವರು ಹೇಳಿದರು.

ಈ ಹಿಂದೆ ಕೆಲವು ಸಮಾಜಗಳಲ್ಲಿ ಮಾನಸಿಕ ಆರೋಗ್ಯದ ಸಮಸ್ಯೆಗಳು ಮತ್ತು ಕಾಳಜಿಗಳಿಗೆ ಸಾಕಷ್ಟು ಗಮನವನ್ನು ನೀಡುತ್ತಿರಲಿಲ್ಲ ಎಂದು ರಾಷ್ಟ್ರಪತಿಯವರು ಹೇಳಿದರು. ಇತ್ತೀಚಿನ ದಿನಗಳಲ್ಲಿ ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡುತ್ತಿದೆ. ಮಾನಸಿಕ ಕಾಯಿಲೆಗಳಿಗೆ ಸಂಬಂಧಿಸಿದ ಅವೈಜ್ಞಾನಿಕ ನಂಬಿಕೆಗಳು ಮತ್ತು ಕಳಂಕವು ಹಿಂದಿನ ವಿಷಯವಾಗಿದೆ, ಇದು ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ಜನರಿಗೆ ಸಹಾಯ ಪಡೆಯಲು ಸುಲಭವಾಗಿದೆ. ಇದು ವಿಶೇಷವಾಗಿ, ಪ್ರಪಂಚದಾದ್ಯಂತ ಅನೇಕ ಮಾನಸಿಕ ಆರೋಗ್ಯ ಸಮಸ್ಯೆಗಳು ಸಾಂಕ್ರಾಮಿಕವಾಗುತ್ತಿರುವ ಈ ಸಮಯದಲ್ಲಿ ಸ್ವಾಗತಾರ್ಹ ಬೆಳವಣಿಗೆಯಾಗಿದೆ ಎಂದು ಅವರು ಹೇಳಿದರು.

ಅರಿವು ಹೆಚ್ಚಿಸುತ್ತಿರುವುದರಿಂದ ರೋಗಿಗಳು ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ಹಂಚಿಕೊಳ್ಳಲು ಸಾಧ್ಯವಾಗಿದೆ ಎಂದು ರಾಷ್ಟ್ರಪತಿಯವರು ಹೇಳಿದರು. ಎಲ್ಲಿಯಾದರೂ ಮತ್ತು ಯಾವುದೇ ಸಮಯದಲ್ಲೂ ಸಮಾಲೋಚನೆಯನ್ನು ಸುಗಮಗೊಳಿಸಲು ನಿಮ್ಹಾನ್ಸ್ ಟೆಲಿ ಮನಸ್ ಮತ್ತು ಮಕ್ಕಳು ಮತ್ತು ಹದಿಹರೆಯದವರ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸಲು ಸಂವಾದ್ ವೇದಿಕೆಯಂತಹ ಹಲವಾರು ಉಪಕ್ರಮಗಳನ್ನು ಕೈಗೊಂಡಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.

ನಮ್ಮ ಪ್ರಾಚೀನ ಋಷಿಮುನಿಗಳು ಮತ್ತು ಸಂತರಿಂದ ಪಡೆದ ಜ್ಞಾನ ಮತ್ತು ಜೀವನ ಪಾಠಗಳು ಮನಸ್ಸಿನ ಸಮತೋಲನದ ಮೇಲೆ ಪರಿಣಾಮ ಬೀರುವ ಜೀವನದ ಏರಿಳಿತಗಳನ್ನು ಅರ್ಥಮಾಡಿಕೊಳ್ಳುವ ಆಧ್ಯಾತ್ಮಿಕ ಚೌಕಟ್ಟನ್ನು ನಾವೆಲ್ಲರೂ ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ ಎಂದು ರಾಷ್ಟ್ರಪತಿಯವರು ಹೇಳಿದರು. ಜಗತ್ತಿನಲ್ಲಿ ನಾವು ಕಾಣುವ ಎಲ್ಲದಕ್ಕೂ ಮನಸ್ಸೇ ಮೂಲ ಎಂದು ನಮ್ಮ ಧರ್ಮಗ್ರಂಥಗಳು ಹೇಳುತ್ತವೆ. ಮಾನಸಿಕ ಮತ್ತು ದೈಹಿಕ ಯಾತನೆಯನ್ನು ನಿವಾರಿಸಲು ಆಧುನಿಕ ಆರೋಗ್ಯ ವ್ಯವಸ್ಥೆಗಳೊಂದಿಗೆ ಯೋಗದಂತಹ ಸಾಂಪ್ರದಾಯಿಕ ವಿಧಾನಗಳನ್ನು ಯಶಸ್ವಿಯಾಗಿ ಸಂಯೋಜಿಸಿದ್ದಕ್ಕಾಗಿ ಅವರು ನಿಮ್ಹಾನ್ಸ್ ಅನ್ನು ಶ್ಲಾಘಿಸಿದರು.

ಆರೋಗ್ಯವಂತ ಮನಸ್ಸು ಸ್ವಸ್ಥ ಸಮಾಜದ ಅಡಿಪಾಯ ಎಂದು ರಾಷ್ಟ್ರಪತಿಯವರು ಹೇಳಿದರು. ಜ್ಞಾನ ಮತ್ತು ಬುದ್ಧಿವಂತಿಕೆಯ ಜೊತೆಗೆ ಸಹಾನುಭೂತಿ ಮತ್ತು ದಯೆಯು ವೈದ್ಯರು ಮತ್ತು ಇತರ ಮಾನಸಿಕ ಆರೋಗ್ಯ ತಜ್ಞರಿಗೆ ಎಲ್ಲಾ ಸಮಯದಲ್ಲೂ, ಎಲ್ಲಾ ಸಂದರ್ಭಗಳಲ್ಲಿಯೂ ಅತ್ಯುನ್ನತ ಗುಣಮಟ್ಟದ ಆರೈಕೆಯನ್ನು ಒದಗಿಸುವಲ್ಲಿ ಮಾರ್ಗದರ್ಶನ ನೀಡುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

About Matribhumi Samachar

Check Also

ಹುಬ್ಬಳ್ಳಿಯಲ್ಲಿ ಹೊಸ ಯುಐಡಿಎಐ ಆಧಾರ್ ಸೇವಾ ಕೇಂದ್ರದ ಉದ್ಘಾಟನೆ

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು 29 ಡಿಸೆಂಬರ್ 2025ರಂದು ಹುಬ್ಬಳ್ಳಿಯ ಕೇಶವಪುರದಲ್ಲಿ ಹೊಸ ಯುಐಡಿಎಐ ಆಧಾರ್ ಸೇವಾ ಕೇಂದ್ರವನ್ನು ಉದ್ಘಾಟಿಸಿದೆ. …