ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆಗಳ ರಾಜ್ಯ ಸಚಿವರಾದ ಶ್ರೀ ವಿ ಸೋಮಣ್ಣ ಇಂದು ತುಮಕೂರು ಜಿಲ್ಲೆ, ಗುಬ್ಬಿ ತಾಲೂಕು, ಕಸಬಾ, ಚೇಳೂರು ಮತ್ತು ಹಾಗಲವಾಡಿ ಹೋಬಳಿಗಳ ಪ್ರವಾಸ ಕೈಗೊಂಡಿದ್ದರು.

ಕಸಬಾ ಹೋಬಳಿ ವ್ಯಾಪ್ತಿಯ 6 ಪಂಚಾಯಿತಿ, ಚೇಳೂರು ಮತ್ತು ಹಾಗಲವಾಡಿ ಹೋಬಳಿ ವ್ಯಾಪ್ತಿಯ 9 ಪಂಚಾಯಿತಿಯ ದಿವ್ಯಾಂಗ ಫಲಾನುಭವಿಗಳಿಗೆ ಭಾರತ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ADIP ಯೋಜನೆಯಡಿಯಲ್ಲಿ ದಿವ್ಯಾಂಗ ಫಲಾನುಭವಿಗಳಿಗೆ ಸಹಾಯಕ ಸಲಕರಣೆ ವಿತರಿಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರ ಆಹವಾಲು ಸ್ವೀಕರಿಸಿ ಸ್ಥಳದಲ್ಲಿಯೇ ಇಲಾಖಾ ಅಧಿಕಾರಿಗಳಿಗೆ ಪರಿಹಾರ ಕ್ರಮಕೈಗೊಳ್ಳಲು ಆದೇಶಿಸಿದರು. ಬೆಳಗ್ಗೆ 10.00 ರಿಂದ ಕಸಬಾ ಪಂಚಾಯಿತಿ ಆವರಣದಲ್ಲಿ ಆಗಮಿಸಿದ ನೂರಾರು ಸಾರ್ವಜನಿಕರ ಆಹವಾಲುಗಳನ್ನು ಇಲಾಖೆ ಅಧಿಕಾರಿಗಳೊಂದಿಗೆ ಸ್ವೀಕರಿಸಿ ಸಮಸ್ಯೆ ಪರಿಹಾರ ಕಂಡುಕೊಳ್ಳಲು ಕ್ರಮ ಜರುಗಿಸಿದ್ದಾರೆ.
भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के लिए आप निम्न लिंक पर क्लिक कर सकते हैं
ऑडियो बुक : भारत 1885 से 1950 (इतिहास पर एक दृष्टि)
Matribhumi Samachar Kannad

