Saturday, January 10 2026 | 06:09:55 PM
Breaking News

ಹೆಚ್ಚುತ್ತಿರುವ ಸ್ಥೂಲಕಾಯದ ಸಮಸ್ಯೆಯನ್ನು ಕಡಿಮೆ ಮಾಡಲು ದೇಶಾದ್ಯಂತ ಉಪಕ್ರಮಕ್ಕೆ ಕೇಂದ್ರ ಆರೋಗ್ಯ ಸಚಿವರಾದ​​​​​​​ ಶ್ರೀ ಜೆ.ಪಿ. ನಡ್ಡಾ ಚಾಲನೆ

Connect us on:

ಆರೋಗ್ಯಕರ ಸಮಾಜವು ಬಲವಾದ ಮತ್ತು ಅಭಿವೃದ್ಧಿ ಹೊಂದಿದ ರಾಷ್ಟ್ರದ ಅಡಿಪಾಯ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ಜೆ.ಪಿ. ನಡ್ಡಾ ಒತ್ತಿ ಹೇಳಿದ್ದಾರೆ. ಬೆಂಗಳೂರಿನ ನಿಮ್ಹಾನ್ಸ್‌ನಲ್ಲಿ ಇಂದು ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ಆಯೋಜಿಸಿದ್ದ ವಿಶ್ವ ಆಹಾರ ಸುರಕ್ಷತಾ ದಿನದ ಕಾರ್ಯಕ್ರಮದಲ್ಲಿ  ದಿಕ್ಸೂಚಿ ಭಾಷಣ ಮಾಡಿದ ಸಚಿವರು, ತೈಲದಲ್ಲಿ ಕರಿದ ಆಹಾರಗಳ  ಸೇವನೆಯನ್ನು ಶೇಕಡಾ 10 ರಷ್ಟು ಕಡಿಮೆ ಮಾಡಲು ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಯವರು ನೀಡಿರುವ  ಕರೆಯನ್ನು ನೆನಪಿಸಿಕೊಂಡರು.

ಎಚ್ಚರಿಕೆಯಿಂದ ತಿನ್ನುವ ಪ್ರಾಮುಖ್ಯತೆಯನ್ನು ಎತ್ತಿ ತೋರಿಸಿದ ಶ್ರೀ ನಡ್ಡಾ, ಜನರು ತಮ್ಮ ಕ್ಯಾಲೋರಿ ಸೇವನೆಯ ಪ್ರಮಾಣವನ್ನು ಮೇಲ್ವಿಚಾರಣೆ ಮಾಡಲು ಮತ್ತು ಸಮತೋಲಿತ ಆಹಾರ ಸೇವನೆಯ ಪದ್ಧತಿಯನ್ನು ಕಾಪಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.  ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್)ಯ ಇತ್ತೀಚಿನ ಅಧ್ಯಯನವನ್ನು ಉಲ್ಲೇಖಿಸಿದ ಅವರು, ಇದು 2008 ಮತ್ತು 2020ರ ನಡುವೆ ಭಾರತದಲ್ಲಿ ಬೊಜ್ಜು ಪ್ರಮಾಣವು ನಗರ ಪ್ರದೇಶಗಳಲ್ಲಿ 39.6% ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 23.1%ಕ್ಕೆ ಏರಿದೆ ಎಂಬುದನ್ನು ಬಹಿರಂಗಪಡಿಸಿದೆ. ಈಗಲೇ ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ, 2050ರ ವೇಳೆಗೆ ಭಾರತದ ಜನಸಂಖ್ಯೆಯ ಮೂರನೇ ಒಂದು ಭಾಗದಷ್ಟು ಜನರು ಬೊಜ್ಜು ಸಮಸ್ಯೆ ಎದುರಿಸುವ  ಸಾಧ್ಯತೆ ಇದೆ ಎಂದು ಎಚ್ಚರಿಸಿದರು.

ಜಾಗೃತಿ ಅಭಿಯಾನದ ಭಾಗವಾಗಿ, ಸಚಿವರು “ಈಟ್ ರೈಟ್ ಆಕ್ಟಿವಿಟಿ ಪುಸ್ತಕ”ವನ್ನು ಬಿಡುಗಡೆ ಮಾಡಿದರು, ಇದನ್ನು ಶಿಕ್ಷಣ ಇಲಾಖೆಯ ಮೂಲಕ ಶಾಲಾ ಮಕ್ಕಳಿಗೆ ಮತ್ತು ರೈಲ್ವೆ ಮಂಡಳಿಯಿಂದ ಪ್ರಯಾಣಿಕರಿಗೆ ವಿತರಿಸಲಾಗುವುದು.

ಶ್ರೀ ನಡ್ಡಾ ಅವರು ನವೀನ ವರ್ತನೆ ಬದಲಾವಣೆ ತಂತ್ರವನ್ನು ಅಂದರೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಆಶ್ರಯದಲ್ಲಿ ಎಫ್‌ಎಸ್‌ಎಸ್‌ಎಐ ಅಭಿವೃದ್ಧಿಪಡಿಸಿದ ಶಾಲೆಗಳು, ಕೆಲಸದ ಸ್ಥಳಗಳು ಮತ್ತು ಸಾರ್ವಜನಿಕ ಸಂಸ್ಥೆಗಳಲ್ಲಿ ಸಕ್ಕರೆ ಮತ್ತು ತೈಲ ಬೋರ್ಡ್ ಗಳ  ವ್ಯಾಪಕ ಪ್ರಚಾರವನ್ನು ಶ್ಲಾಘಿಸಿದರು, ಇದು ಪ್ರಬಲ ದೃಶ್ಯ ಪ್ರಚಾರ ಸಾಧನವಾಗಿ  ಕಾರ್ಯನಿರ್ವಹಿಸುತ್ತದೆ, ದೈನಂದಿನ ಆಹಾರ ಪದಾರ್ಥಗಳಲ್ಲಿ ಅಡಗಿರುವ ಸಕ್ಕರೆ ಮತ್ತು ಕೊಬ್ಬಿನ ಬಗ್ಗೆ ಸ್ಪಷ್ಟ, ಸಂಬಂಧಿತ ಮಾಹಿತಿಯನ್ನು ಪ್ರದರ್ಶಿಸುತ್ತದೆ.

ಎನ್‌ಸಿಇಆರ್‌ಟಿ ಶಾಲಾ ಪಠ್ಯಕ್ರಮದಲ್ಲಿ ಆರೋಗ್ಯಕರ ಆಹಾರ ಪದ್ಧತಿಯನ್ನು ಒಂದು ವಿಷಯವಾಗಿ ಸೇರಿಸಿದೆ ಎಂದೂ  ಅವರು ಮಾಹಿತಿ ನೀಡಿದರು. ಸಮ್ಮೇಳನದಲ್ಲಿ ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕಾರ್ಯದರ್ಶಿ ಶ್ರೀಮತಿ ಪುಣ್ಯ ಸಲೀಲಾ ಶ್ರೀವಾಸ್ತವ; ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕಾರ್ಯದರ್ಶಿ ಶ್ರೀ ಸಂಜಯ್ ಕುಮಾರ್; ರೈಲ್ವೆ ಮಂಡಳಿಯ ಅಧ್ಯಕ್ಷ ಶ್ರೀ ಸತೀಶ್ ಕುಮಾರ್, ಎಫ್‌ಎಸ್‌ಎಸ್‌ಎಐ ಕಾರ್ಯನಿರ್ವಾಹಕ ನಿರ್ದೇಶಕ ಶ್ರೀ ಯು.ಎಸ್. ಧ್ಯಾನಿ; ಮತ್ತು ದಕ್ಷಿಣ ವಲಯ  ನಿರ್ದೇಶಕ ಶ್ರೀ ವಿ.ಕೆ. ಪಂಚಮ್ ಅವರು ಮಾತನಾಡಿದರು.

About Matribhumi Samachar

Check Also

ಭಾರತದ ರಾಷ್ಟ್ರಪತಿ ಒಡಿಶಾದ ರಾಯರಂಗಪುರದಲ್ಲಿ # ಸ್ಕಿಲ್ ದ ನೇಶನ್ ಎ.ಐ. ಸವಾಲಿಗೆ ಚಾಲನೆ ನೀಡಿದರು ಮತ್ತು ಇಗ್ನೋ ಪ್ರಾದೇಶಿಕ ಕೇಂದ್ರ ಹಾಗು ಕೌಶಲ್ಯ ಕೇಂದ್ರವನ್ನು ವರ್ಚುವಲ್ ಆಗಿ ಉದ್ಘಾಟಿಸಿದರು

ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ಇಂದು (ಜನವರಿ 1, 2026) ನಡೆದ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು …