Wednesday, January 07 2026 | 07:10:23 AM
Breaking News

ನಾಲ್ಕು ಕಾರ್ಮಿಕ ಸಂಹಿತೆಗಳ ಅನುಷ್ಠಾನವನ್ನು ಸ್ವಾಗತಿಸಿದ ಪ್ರಧಾನಮಂತ್ರಿ

Connect us on:

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಲ್ಕು ಕಾರ್ಮಿಕ ಸಂಹಿತೆಗಳ ಅನುಷ್ಠಾನವನ್ನು ಸ್ವಾಗತಿಸಿದ್ದಾರೆ. ಇದು ಸ್ವಾತಂತ್ರ್ಯಾ ನಂತರದ ಅತ್ಯಂತ ಸಮಗ್ರ ಮತ್ತು ಪ್ರಗತಿಪರ ಕಾರ್ಮಿಕ ಆಧಾರಿತ ಸುಧಾರಣೆಗಳಲ್ಲಿ ಒಂದಾಗಿದೆ ಎಂದು ಬಣ್ಣಿಸಿದ್ದಾರೆ. ಈ ಸುಧಾರಣೆಗಳು ಕಾರ್ಮಿಕರನ್ನು ಹೆಚ್ಚು ಸಬಲೀಕರಣಗೊಳಿಸುತ್ತವೆ ಮತ್ತು ಅನುಸರಣೆಯನ್ನು ಗಮನಾರ್ಹವಾಗಿ ಸರಳಗೊಳಿಸುತ್ತವೆ ಮತ್ತು ‘ಸುಲಭ ವ್ಯವಹಾರ’ವನ್ನು ಉತ್ತೇಜಿಸುತ್ತವೆ ಎಂದು ಅವರು ಹೇಳಿದರು.

ನಾಲ್ಕು ಕಾರ್ಮಿಕ ಸಂಹಿತೆಗಳು ಸಾರ್ವತ್ರಿಕ ಸಾಮಾಜಿಕ ಭದ್ರತೆ, ಕನಿಷ್ಠ ಮತ್ತು ಸಮಯೋಚಿತ ವೇತನ ಪಾವತಿ, ಸುರಕ್ಷಿತ ಕೆಲಸದ ಸ್ಥಳಗಳು ಮತ್ತು ಜನರಿಗೆ, ವಿಶೇಷವಾಗಿ ನಾರಿ ಶಕ್ತಿ ಮತ್ತು ಯುವ ಶಕ್ತಿಗೆ ಲಾಭದಾಯಕ ಅವಕಾಶಗಳಿಗೆ ಬಲವಾದ ಅಡಿಪಾಯವಾಗಿ ಕಾರ್ಯನಿರ್ವಹಿಸುತ್ತವೆ ಎಂದು ಪ್ರಧಾನಮಂತ್ರಿ ಹೇಳಿದರು.

ಸುಧಾರಣೆಗಳು ಕಾರ್ಮಿಕರ ಹಕ್ಕುಗಳನ್ನು ರಕ್ಷಿಸುವ ಮತ್ತು ಭಾರತದ ಆರ್ಥಿಕ ಬೆಳವಣಿಗೆಯನ್ನು ಬಲಪಡಿಸುವ ಭವಿಷ್ಯಕ್ಕೆ ಸಿದ್ಧವಾದ ಪರಿಸರ ವ್ಯವಸ್ಥೆಯನ್ನು ನಿರ್ಮಿಸುತ್ತವೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಅವು ಉದ್ಯೋಗ ಸೃಷ್ಟಿಯನ್ನು ಉತ್ತೇಜಿಸುತ್ತವೆ, ಉತ್ಪಾದಕತೆಯನ್ನು ಹೆಚ್ಚಿಸುತ್ತವೆ ಮತ್ತು ವಿಕಸಿತ ಭಾರತದತ್ತ ರಾಷ್ಟ್ರದ ಪ್ರಯಾಣವನ್ನು ವೇಗಗೊಳಿಸುತ್ತವೆ ಎಂದು ಅವರು ಹೇಳಿದರು.

ಸರಣಿ ಪೋಸ್ಟ್‌ನಲ್ಲಿ ಶ್ರೀ ನರೇಂದ್ರ ಮೋದಿ ಅವರು ಹೀಗೆ ಹೇಳಿದ್ದಾರೆ;

“ಶ್ರಮೇವ ಜಯತೆ!

ಇಂದು, ನಮ್ಮ ಸರ್ಕಾರವು ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತಂದಿದೆ. ಇದು ಸ್ವಾತಂತ್ರ್ಯಾನಂತರದ ಅತ್ಯಂತ ಸಮಗ್ರ ಮತ್ತು ಪ್ರಗತಿಪರ ಕಾರ್ಮಿಕ ಆಧಾರಿತ ಸುಧಾರಣೆಗಳಲ್ಲಿಒಂದಾಗಿದೆ. ಇದು ನಮ್ಮ ಕಾರ್ಮಿಕರನ್ನು ಹೆಚ್ಚು ಸಶಕ್ತಗೊಳಿಸುತ್ತದೆ. ಇದು ಅನುಸರಣೆಯನ್ನು ಗಮನಾರ್ಹವಾಗಿ ಸರಳಗೊಳಿಸುತ್ತದೆ ಮತ್ತು ‘ಸುಲಭ ವ್ಯವಹಾರ’ವನ್ನು ಉತ್ತೇಜಿಸುತ್ತದೆ.

# ಶ್ರಮೇವ ಜಯತೆ

# ಶ್ರಮೇವ ಜಯತೆ

“ಈ ಸಂಹಿತೆಗಳು ಸಾರ್ವತ್ರಿಕ ಸಾಮಾಜಿಕ ಭದ್ರತೆ, ಕನಿಷ್ಠ ಮತ್ತು ಸಮಯೋಚಿತ ವೇತನ ಪಾವತಿ, ಸುರಕ್ಷಿತ ಕೆಲಸದ ಸ್ಥಳಗಳು ಮತ್ತು ನಮ್ಮ ಜನರಿಗೆ, ವಿಶೇಷವಾಗಿ ನಾರಿ ಶಕ್ತಿ ಮತ್ತು ಯುವ ಶಕ್ತಿಗೆ ಲಾಭದಾಯಕ ಅವಕಾಶಗಳಿಗೆ ಬಲವಾದ ಅಡಿಪಾಯವಾಗಿ ಕಾರ್ಯನಿರ್ವಹಿಸುತ್ತವೆ.”

“ಇದು ಕಾರ್ಮಿಕರ ಹಕ್ಕುಗಳನ್ನು ರಕ್ಷಿಸುವ ಮತ್ತು ಭಾರತದ ಆರ್ಥಿಕ ಬೆಳವಣಿಗೆಯನ್ನು ಬಲಪಡಿಸುವ ಭವಿಷ್ಯಕ್ಕೆ ಸಿದ್ಧವಾದ ಪರಿಸರ ವ್ಯವಸ್ಥೆಯನ್ನು ನಿರ್ಮಿಸುತ್ತದೆ. ಈ ಸುಧಾರಣೆಗಳು ಉದ್ಯೋಗ ಸೃಷ್ಟಿಯನ್ನು ಉತ್ತೇಜಿಸುತ್ತವೆ, ಉತ್ಪಾದಕತೆಯನ್ನು ಹೆಚ್ಚಿಸುತ್ತವೆ ಮತ್ತು ವಿಕಸಿತ ಭಾರತದತ್ತ ನಮ್ಮ ಪ್ರಯಾಣವನ್ನು ವೇಗಗೊಳಿಸುತ್ತವೆ.”

About Matribhumi Samachar

Check Also

ಭಾರತದ ರಾಷ್ಟ್ರಪತಿ ಒಡಿಶಾದ ರಾಯರಂಗಪುರದಲ್ಲಿ # ಸ್ಕಿಲ್ ದ ನೇಶನ್ ಎ.ಐ. ಸವಾಲಿಗೆ ಚಾಲನೆ ನೀಡಿದರು ಮತ್ತು ಇಗ್ನೋ ಪ್ರಾದೇಶಿಕ ಕೇಂದ್ರ ಹಾಗು ಕೌಶಲ್ಯ ಕೇಂದ್ರವನ್ನು ವರ್ಚುವಲ್ ಆಗಿ ಉದ್ಘಾಟಿಸಿದರು

ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ಇಂದು (ಜನವರಿ 1, 2026) ನಡೆದ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು …