Friday, December 12 2025 | 01:34:25 AM
Breaking News

ತಿರುವಳ್ಳುವರ್ ದಿನದಂದು, ನಮ್ಮ ನಾಡಿನ ಶ್ರೇಷ್ಠ ತತ್ವಜ್ಞಾನಿಗಳು, ಕವಿಗಳು ಮತ್ತು ಚಿಂತಕರಲ್ಲಿ ಒಬ್ಬರಾದ ಧೀಮಂತ ತಿರುವಳ್ಳುವರ್ ಅವರನ್ನು ನಾವು ಸ್ಮರಿಸುತ್ತೇವೆ: ಪ್ರಧಾನಮಂತ್ರಿ

Connect us on:

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಿರುವಳ್ಳುವರ್ ದಿನದಂದು ತಮಿಳಿನ ಮಹಾನ್ ತತ್ವಜ್ಞಾನಿ, ಕವಿ ಮತ್ತು ಚಿಂತಕರಾದ ತಿರುವಳ್ಳುವರ್ ಅವರನ್ನು ಸ್ಮರಿಸಿದ್ದಾರೆ. ಧೀಮಂತ ತಿರುವಳ್ಳವರ್ ಅವರ ವಚನ/ಪದ್ಯಗಳು ತಮಿಳು ಸಂಸ್ಕೃತಿಯ ಸಾರ ಮತ್ತು ನಮ್ಮ ತಾತ್ವಿಕ ಪರಂಪರೆಯನ್ನು ಪ್ರತಿಬಿಂಬಿಸುತ್ತವೆ ಎಂದು ಪ್ರಧಾನಮಂತ್ರಿ ಶ್ರೀ ಮೋದಿ ಅವರು ಬಣ್ಣಿಸಿದ್ದಾರೆ.

“ವೈವಿಧ್ಯಮಯ ವಿಷಯಗಳ ಬಗ್ಗೆ ಆಳವಾದ ಒಳನೋಟ ನೀಡುವ ಅವರ ಸಮಯಾತೀತವಾದ ಕೃತಿ, ತಿರುಕ್ಕುರಲ್, ಸ್ಪೂರ್ತಿಯ ಸೆಲೆಯಾಗಿದೆ, ” ಎಂದು ಶ್ರೀ ಮೋದಿ ಹೇಳಿದರು.

ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

“ತಿರುವಳ್ಳುವರ್ ದಿನದಂದು, ನಾವು ನಮ್ಮ ನಾಡಿನ ಶ್ರೇಷ್ಠ ದಾರ್ಶನಿಕರು, ಕವಿಗಳು ಮತ್ತು ಚಿಂತಕರಲ್ಲಿ ಒಬ್ಬರಾದ ಮಹಾನ್ ವ್ಯಕ್ತಿ ತಿರುವಳ್ಳುವರ್ ಅವರನ್ನು ಸ್ಮರಿಸುತ್ತೇವೆ. ಅವರ ವಚನ/ಪದ್ಯಗಳು ತಮಿಳು ಸಂಸ್ಕೃತಿಯ ಸಾರ ಮತ್ತು ನಮ್ಮ ತಾತ್ವಿಕ ಪರಂಪರೆಯನ್ನು ಪ್ರತಿಬಿಂಬಿಸುತ್ತವೆ. ಅವರ ಬೋಧನೆಗಳು ಸದಾಚಾರ, ಕರುಣೆ ಮತ್ತು ನ್ಯಾಯವನ್ನು ಒತ್ತಿಹೇಳುತ್ತವೆ. ವಿವಿಧ ವಿಚಾರಗಳ ಬಗ್ಗೆ ಆಳವಾದ ಒಳನೋಟಗಳನ್ನು ನೀಡುವ ಅವರ ಸಮಯಾತೀತ ಕೃತಿಯಾದ ತಿರುಕ್ಕುರಲ್, ಸ್ಫೂರ್ತಿಯ ಸೆಲೆಯಾಗಿದೆ. ನಮ್ಮ ಸಮಾಜಕ್ಕಾಗಿ ಅವರ ದೂರದೃಷ್ಟಿಯನ್ನು ಸಾಕಾರಗೊಳಿಸಲು ನಾವು ಶ್ರಮಿಸುವುದನ್ನು ಮುಂದುವರಿಸುತ್ತೇವೆ.”

 

भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के लिए आप निम्न लिंक पर क्लिक कर सकते हैं

सारांश कनौजिया की पुस्तकें

 

ऑडियो बुक : भारत 1885 से 1950 (इतिहास पर एक दृष्टि)

 

About Matribhumi Samachar

Check Also

2023 ಮತ್ತು 2024ರ ರಾಷ್ಟ್ರೀಯ ಕರಕುಶಲ ಪ್ರಶಸ್ತಿಗಳನ್ನು ಪ್ರದಾನ ಮಾಡಿದ ಭಾರತದ ರಾಷ್ಟ್ರಪತಿ

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (2025ರ ಡಿಸೆಂಬರ್ 9) ನವದೆಹಲಿಯಲ್ಲಿ 2023 ಮತ್ತು 2024 ರ …