ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (ನವೆಂಬರ್ 18, 2025) ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಆರನೇ ‘ರಾಷ್ಟ್ರೀಯ ಜಲ ಪ್ರಶಸ್ತಿ’ಗಳು ಮತ್ತು ‘ಜಲ ಸಂಚಾಯ್-ಜನ ಭಾಗೀದಾರಿ ಪ್ರಶಸ್ತಿ’ಗಳನ್ನು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರಪತಿ ಅವರು, ಮಾನವ ನಾಗರಿಕತೆಯ ಕಥೆಯು ನದಿ ಕಣಿವೆಗಳಲ್ಲಿ, ಸಮುದ್ರ ತೀರಗಳಲ್ಲಿ ಮತ್ತು ವಿವಿಧ ಜಲಮೂಲಗಳ ಸುತ್ತಲೂ ನೆಲೆಸಿದ ಗುಂಪುಗಳ ಕಥೆಯೇ ಆಗಿದೆ ಎಂದು ಹೇಳಿದರು. ನಮ್ಮ ಸಂಪ್ರದಾಯದಲ್ಲಿ, ನದಿಗಳು, ಸರೋವರಗಳು …
Read More »ಜಾಗತಿಕ ಹವಾಮಾನ ಹಣಕಾಸನ್ನು ಮರುರೂಪಿಸಲು ಭಾರತ ಹೊಂದಿರುವ ಅವಕಾಶವನ್ನು ವಿವರಿಸುವ ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿ
ಜಾಗತಿಕ ಹವಾಮಾನ ಹಣಕಾಸನ್ನು ಹೆಚ್ಚಿನ ಪಾರದರ್ಶಕತೆ ಮತ್ತು ಸಾಮಾನ್ಯ ಮಾನದಂಡಗಳೊಂದಿಗೆ ಮರುರೂಪಿಸಲು ಬಲವಾದ ಅವಕಾಶವಿದೆ ಎಂಬ ಮಾಹಿತಿಯನ್ನು ವಿವರಿಸುವ ಕೇಂದ್ರ ಸಚಿವರಾದ ಶ್ರೀ ಭೂಪೇಂದರ್ ಯಾದವ್ ಅವರ ಲೇಖನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ. ಭವಿಷ್ಯಕ್ಕಾಗಿ ಹೆಚ್ಚು ಪರಿಣಾಮಕಾರಿ ರೀತಿಯಲ್ಲಿ ಜಾಗತಿಕ ವಾಸ್ತುಶಿಲ್ಪಕ್ಕೆ ಮಾರ್ಗದರ್ಶನ ನೀಡುವ ಪ್ರಾಯೋಗಿಕ ನಾಯಕತ್ವದ ಉದಾಹರಣೆಯಾಗಿ ಭಾರತದ ಕರಡು ಹವಾಮಾನ ಹಣಕಾಸು ವರ್ಗೀಕರಣ ಮತ್ತು ಬೆಳೆಯುತ್ತಿರುವ ದೇಶೀಯ ಹಸಿರು ಹಣಕಾಸು ವ್ಯವಸ್ಥೆಯನ್ನು ಈ …
Read More »ನವೆಂಬರ್ 19 ರಂದು ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 19 ರಂದು ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಪ್ರಧಾನಮಂತ್ರಿ ಅವರು ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿರುವ ಭಗವಾನ್ ಶ್ರೀ ಸತ್ಯ ಸಾಯಿ ಬಾಬಾ ಅವರ ಪವಿತ್ರ ದೇವಾಲಯ ಮತ್ತು ಮಹಾಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಲಿದ್ದಾರೆ. ಬೆಳಗ್ಗೆ 10:30ರ ಸುಮಾರಿಗೆ ಪ್ರಧಾನಮಂತ್ರಿ ಅವರು ಭಗವಾನ್ ಶ್ರೀ ಸತ್ಯ ಸಾಯಿ ಬಾಬಾ ಅವರ ಶತಮಾನೋತ್ಸವ ಆಚರಣೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ …
Read More »ದೆಹಲಿಯಲ್ಲಿ ನಡೆದ ಆರನೇ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮದಲ್ಲಿ ನೀಡಿದ ಭಾಷಣದ ಕೆಲವು ತುಣುಕುಗಳನ್ನು ಹಂಚಿಕೊಂಡ ಪ್ರಧಾನಮಂತ್ರಿ
ದೆಹಲಿಯಲ್ಲಿ ನಡೆದ ಆರನೇ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮದಲ್ಲಿ ನೀಡಿದ ಭಾಷಣದ ಕೆಲವು ತುಣುಕುಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ. ಪ್ರತ್ಯೇಕ ಪೋಸ್ಟ್ಗಳಲ್ಲಿ ಹಂಚಿಕೊಂಡಿರುವ, ಶ್ರೀ ಮೋದಿ ಅವರು; “ರಾಮನಾಥ ಗೋಯೆಂಕಾ ಅವರಿಗೆ, ಯಾವಾಗಲೂ ರಾಷ್ಟ್ರವೇ ಮೊದಲನೆಯದಾಗಿತ್ತು. ಅವರು ಯಾವಾಗಲೂ ಸತ್ಯ ಮತ್ತು ವಸ್ತುನಿಷ್ಠ ಪರವಾಗಿ ನಿಲ್ಲುತ್ತಿದ್ದರು. ಎಲ್ಲಕ್ಕಿಂತ ಮುಖ್ಯವಾಗಿ ಅವರಿಗೆ ಕರ್ತವ್ಯ ಮುಖ್ಯವಾಗಿತ್ತು.” “ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಕ್ರಿಯವಾಗಿ ತೊಡಗಿಸಿಕೊಂಡಾಗ ಮಾತ್ರ ಪ್ರಜಾಪ್ರಭುತ್ವ ಬಲಗೊಳ್ಳುತ್ತದೆ. ಇತ್ತೀಚಿನ ಬಿಹಾರ ಚುನಾವಣೆಯಲ್ಲಿ …
Read More »ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದಿಂದ ರೈತರಿಗೆ ಮತ್ತೊಂದು ಮಹತ್ವದ ಪರಿಹಾರ
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯವು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ (PMFBY) ರೈತರಿಗೆ ಪ್ರಮುಖ ಸೌಲಭ್ಯವೊಂದನ್ನು ವಿಸ್ತರಿಸಿದೆ. ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯ ಅಡಿಯಲ್ಲಿ ‘ಕಾಡು ಪ್ರಾಣಿಗಳ ದಾಳಿ’ ಮತ್ತು ‘ಭತ್ತದ ಗದ್ದೆಗಳು ಜಲಾವೃತವಾಗುವಿಕೆ’ಯಿಂದ ಉಂಟಾಗುವ ಬೆಳೆ ನಷ್ಟವನ್ನು ಸರಿದೂಗಿಸುವ ವಿಧಾನಗಳನ್ನು ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಈಗ ಮಾನ್ಯ ಮಾಡಿದೆ. ಪರಿಷ್ಕೃತ ಚೌಕಟ್ಟಿನ ಅಡಿಯಲ್ಲಿ, ಕಾಡು ಪ್ರಾಣಿಗಳ ದಾಳಿಯಿಂದಾಗುವ ಬೆಳೆ ನಷ್ಟವನ್ನು …
Read More »ಏಷ್ಯನ್ ಆರ್ಚರಿ ಚಾಂಪಿಯನ್ಶಿಪ್ 2025ರಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತೀಯ ಬಿಲ್ಲುಗಾರಿಕಾ ತಂಡವನ್ನು ಅಭಿನಂದಿಸಿದ ಪ್ರಧಾನಮಂತ್ರಿ
2025ರ ಏಷ್ಯನ್ ಬಿಲ್ಲುಗಾರಿಕಾ ಚಾಂಪಿಯನ್ಶಿಪ್ನಲ್ಲಿ ಇದುವರೆಗೆ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತೀಯ ಬಿಲ್ಲುಗಾರಿಕೆ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಚಾಂಪಿಯನ್ಶಿಪ್ನಲ್ಲಿ ಭಾರತ ತಂಡವು ತನ್ನ ಅತ್ಯುತ್ತಮ ಪ್ರದರ್ಶನವನ್ನು ನೀಡಿದ್ದು, 6 ಚಿನ್ನ ಸೇರಿದಂತೆ ಒಟ್ಟು 10 ಪದಕಗಳನ್ನು ಗೆದ್ದಿದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. 18 ವರ್ಷಗಳ ನಂತರ ಪಡೆದ ಐತಿಹಾಸಿಕ ರಿಕರ್ವ್ ಪುರುಷರ ಚಿನ್ನದ ಪದಕಕ್ಕೆ ಒತ್ತು ನೀಡ್ದಿದ ಪ್ರಧಾನಮಂತ್ರಿ ಅವರು, ವೈಯಕ್ತಿಕ …
Read More »ಮದೀನಾದಲ್ಲಿ ಭಾರತೀಯ ಪ್ರಜೆಗಳು ಭಾಗಿಯಾಗಿದ್ದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೌದಿ ಅರೇಬಿಯಾದ ಮದೀನಾದಲ್ಲಿ ಭಾರತೀಯ ಪ್ರಜೆಗಳನ್ನು ಒಳಗೊಂಡ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಅವರು ಹೃದಯಾಂತರಾಳದ ಸಂತಾಪ ಸೂಚಿಸಿದರು ಮತ್ತು ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು. ರಿಯಾದ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮತ್ತು ಜೆಡ್ಡಾದಲ್ಲಿನ ರಾಯಭಾರ ಕಚೇರಿ ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಅಗತ್ಯ ಬೆಂಬಲ …
Read More »ಈ ವರ್ಷದ ಹಿಂಗಾರು (ರಬಿ) ಬೆಳೆ ಅವಧಿಯಲ್ಲಿ ಬಿತ್ತನೆಯು 208 ಲಕ್ಷ ಹೆಕ್ಟೇರ್ ಮೀರಿದೆ
ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯು ನವೆಂಬರ್ 11, 2025 ರಂದು ರಬಿ ಬೆಳೆಗಳ ಅವಧಿಯಲ್ಲಿ ಕೃಷಿ ಪ್ರದೇಶದ ವ್ಯಾಪ್ತಿಯ ಪ್ರಗತಿಯನ್ನು ಬಿಡುಗಡೆ ಮಾಡಿದೆ. ವಿಸ್ತೀರ್ಣ: ಲಕ್ಷ ಹೆಕ್ಟೇರ್ಗಳಲ್ಲಿ ಕ್ರ.ಸಂ. ಬೆಳೆ ಸಾಮಾನ್ಯ ಪ್ರದೇಶ (2019-20 ರಿಂದ 2023-24) ಬಿತ್ತನೆಯ ಪ್ರದೇಶ 2024-25 ಕ್ಕಿಂತ ಹೆಚ್ಚಳ (+) / ಕಡಿತ (-) 2025 – 26 2024-25 1 ಗೋಧಿ 312.35 66.23 56.55 9.68 2 ಅಕ್ಕಿ …
Read More »ಎಲೆಕ್ಟ್ರಾನಿಕ್ಸ್ ಘಟಕಗಳ ತಯಾರಿಕಾ ಯೋಜನೆ (ಇ.ಸಿ.ಎಂ.ಎಸ್) ಅಡಿಯಲ್ಲಿ ₹ 7,172 ಕೋಟಿ ಹೂಡಿಕೆ, ₹ 65,111 ಕೋಟಿ ಉತ್ಪಾದನೆ ಮತ್ತು 11,808 ನೇರ ಉದ್ಯೋಗ ಸೃಷ್ಟಿಸುವ 17 ಅನುಮೋದನೆಗಳ 2ನೇ ಕಂತನ್ನು ಭಾರತ ಪ್ರಕಟಿಸಿದೆ
₹5,532 ಕೋಟಿ ಮೌಲ್ಯದ ಏಳು ಅರ್ಜಿಗಳ ಅನುಮೋದನೆಯನ್ನು ಈ ಹಿಂದೆ ಘೋಷಿಸಿದ್ದರ ಮುಂದುವರಿದ ಭಾಗವಾಗಿ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಎಲೆಕ್ಟ್ರಾನಿಕ್ಸ್ ಘಟಕ ತಯಾರಿಕಾ ಯೋಜನೆ (ಇ.ಸಿ.ಎಂ.ಎಸ್) ಅಡಿಯಲ್ಲಿ ಇನ್ನೂ 17 ಪ್ರಸ್ತಾವನೆಗಳನ್ನು ಅನುಮೋದಿಸಿದೆ. ಈ ಅನುಮೋದಿತ ಯೋಜನೆಗಳು ದೇಶಾದ್ಯಂತ ವ್ಯಾಪಿಸಿದ್ದು, ಒಟ್ಟು ₹7,172 ಕೋಟಿ ಹೂಡಿಕೆಯೊಂದಿಗೆ, ₹65,111 ಕೋಟಿ ಉತ್ಪಾದನೆಯ ಅಂದಾಜು ಮಾಡಲಾಗಿದ್ದು, 11,808 ನೇರ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿದೆ. ಅನುಮೋದಿತ ಘಟಕಗಳು 9 ರಾಜ್ಯಗಳಾದ ಗೋವಾ, ಗುಜರಾತ್, …
Read More »ಸಾಫ್ಟ್ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ ಸಹಯೋಗದಲ್ಲಿ ಬೆಂಗಳೂರು ಟೆಕ್ ಶೃಂಗಸಭೆ 2025
ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದಡಿ ಸ್ಥಾಪಿಸಲಾದ ಸಾಫ್ಟ್ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ (ಎಸ್.ಟಿ.ಪಿ.ಐ), ಕರ್ನಾಟಕ ಸರ್ಕಾರದೊಂದಿಗೆ ಸೇರಿ ಬೆಂಗಳೂರು ಟೆಕ್ ಶೃಂಗಸಭೆ 2025ರ (ಬಿ.ಟಿ.ಎಸ್-2025) 28ನೇ ಆವೃತ್ತಿಯನ್ನು ಜಂಟಿಯಾಗಿ ಆಯೋಜಿಸುತ್ತಿದೆ. ಈ ಕಾರ್ಯಕ್ರಮವು ನವೆಂಬರ್ 18 ರಿಂದ 20, 2025ರ ವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ. ಎಸ್.ಟಿ.ಪಿ.ಐ ಬೆಂಗಳೂರು ಟೆಕ್ ಶೃಂಗಸಭೆ 2025ರ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಅವುಗಳಲ್ಲಿ ಪ್ರಮುಖ ಕಾರ್ಯಕ್ರಮಗಳು ಈ ಕೆಳಗಿನಂತಿವೆ: 1. …
Read More »
Matribhumi Samachar Kannad