Friday, December 12 2025 | 01:34:38 AM
Breaking News

Matribhumi Samachar

ಡಿಜಿಟಲ್ ಉಪಕರಣಗಳ ಮೂಲಕ ಅಂಚೆ ಕಚೇರಿಗಳ ಆಧುನೀಕರಣ: ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ

ಕೇಂದ್ರ ಸಂಪರ್ಕ ಹಾಗೂ ಈಶಾನ್ಯ ಪ್ರದೇಶಾಭಿವೃದ್ಧಿ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಅವರು ಇಂದು ಬೆಂಗಳೂರಿನಲ್ಲಿ ಗ್ರಾಮೀಣ ಅಂಚೆ ಸೇವಕರೊಂದಿಗೆ ಸಂವಾದ ನಡೆಸಿದರು ಹಾಗೂ 2024-25ನೇ ಸಾಲಿನಲ್ಲಿನ ಉತ್ತಮ ಕಾರ್ಯನಿರ್ವಹಣೆಗಾಗಿ 15 ಗ್ರಾಮೀಣ ಅಂಚೆ ಸೇವಕರನ್ನು ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಸಚಿವರು, ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ 1.64 ಲಕ್ಷ ಅಂಚೆ ಕಚೇರಿಗಳಿವೆ. ಸೇವೆ ನೀಡುವ ಸಂಸ್ಥೆಗಳಲ್ಲಿ ಅಂಚೆ ಇಲಾಖೆಯು ಶೀಘ್ರ ವಿಶ್ವದಲ್ಲೇ ಮೊದಲ ಸ್ಥಾನ ಪಡೆಯುವ ನಿರೀಕ್ಷೆಯಿದೆ. ಅಂಚೆ ಇಲಾಖೆಯ …

Read More »

ಗುರು ಪೂರ್ಣಿಮೆಯಂದು ಬೆಂಗಳೂರಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು)-ವಿಆರ್ ಐಎಫ್ ಟೆಲಿಕಾಂ ಸೆಂಟರ್ ಆಫ್ ಎಕ್ಸಲೆನ್ಸ್ ಉದ್ಘಾಟಿಸಿದ ಕೇಂದ್ರ ಸಚಿವರಾದ ಜ್ಯೋತಿರಾದಿತ್ಯ ಸಿಂಧಿಯಾ: ‘ಕಲಿಕೆಯ ದೀಪಸ್ತಂಭ’ವೆಂದು ಬಣ್ಣನೆ

ಗುರುಪೂರ್ಣಿಮೆಯ ಪವಿತ್ರ ಸಂದರ್ಭದಲ್ಲಿ ಕೇಂದ್ರ ಸಂವಹನ ಮತ್ತು ಈಶಾನ್ಯ ರಾಜ್ಯಗಳ ಪ್ರದೇಶಾಭಿವೃದ್ಧಿ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಅವರು ಬೆಂಗಳೂರಿನಲ್ಲಿ ಇಂದು ವಿಟಿಯು-ವಿಆರ್ ಐಎಫ್ ಟೆಲಿಕಾಂ ಸೆಂಟರ್ ಆಫ್ ಎಕ್ಸಲೆನ್ಸ್ ಅನ್ನು ಉದ್ಘಾಟಿಸಿದರು. ಇದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಮತ್ತು ಟೆಲಿಕಾಂ ಸೆಂಟರ್ ಆಫ್ ಎಕ್ಸಲೆನ್ಸ್ (ಟಿಸಿಒಇ) ಇಂಡಿಯಾದ ಜಂಟಿ ಉಪಕ್ರಮವಾಗಿದ್ದು. ವಿಆರ್ ಐಎಫ್ ಪೂರಕ ವ್ಯವಸ್ಥೆಯಾದ ಈ ಕೇಂದ್ರವು 5ಜಿ, 6ಜಿ, ಎಐ (ಕೃತಕ ಬುದ್ಧಿಮತ್ತೆ), ಕ್ವಾಂಟಮ್ ಸಂವಹನ …

Read More »

ಪ್ರವಾಹ, ಭೂಕುಸಿತ ಬಾಧಿತ ರಾಜ್ಯಗಳಾದ ಅಸ್ಸಾಂ, ಮಣಿಪುರ, ಮೇಘಾಲಯ, ಮಿಜೋರಾಂ, ಕೇರಳ, ಉತ್ತರಾಖಂಡ್‌ಗೆ ಒಂದು ಸಾವಿರ ಕೋಟಿ ರೂಪಾಯಿಗಳಿಗೂ ಅಧಿಕ ಹಣ ಬಿಡುಗಡೆಗೆ ಅನುಮೋದನೆ ನೀಡಿದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರವು ಪ್ರವಾಹ, ಭೂಕುಸಿತದಿಂದ ಬಾಧಿತ ರಾಜ್ಯಗಳಾದ ಅಸ್ಸಾಂ, ಮಣಿಪುರ, ಮೇಘಾಲಯ, ಮಿಜೋರಾಂ, ಕೇರಳ, ಉತ್ತರಾಖಂಡ್‌ಗೆ 1,066.80 ಕೋಟಿ ರೂಪಾಯಿ ಆರ್ಥಿಕ ನೆರವು ಬಿಡುಗಡೆ ಮಾಡಲು ಅನುಮೋದನೆ ನೀಡಿದೆ. ಆರು ಪ್ರವಾಹ ಪೀಡಿತ ರಾಜ್ಯಗಳಲ್ಲಿ, ಅಸ್ಸಾಂ ರಾಜ್ಯಕ್ಕೆ 375.60 ಕೋಟಿ ರೂ., ಮಣಿಪುರಕ್ಕೆ 29.20 ಕೋಟಿ ರೂ., ಮೇಘಾಲಯಕ್ಕೆ 30.40 ಕೋಟಿ ರೂ., ಮಿಜೋರಾಂಗೆ 22.80 ಕೋಟಿ ರೂ., ಕೇರಳಕ್ಕೆ 153.20 ಕೋಟಿ ರೂ. ಮತ್ತು ಉತ್ತರಾಖಂಡಕ್ಕೆ 455.60 ಕೋಟಿ …

Read More »

ಖಾದಿ ಮತ್ತು ಗ್ರಾಮೋದ್ಯೋಗ ವಲಯದಲ್ಲಿನ ಉತ್ಪಾದನಾ ಕಾರ್ಯಕ್ಷಮತೆ ಹೆಚ್ಚಳ; ಸುಶ್ರೀ ಶೋಭಾ ಕರಂದ್ಲಾಜೆ

ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವರಾದ ಸುಶ್ರೀ ಶೋಭಾ ಕರಂದ್ಲಾಜೆ ಅವರು ಬೆಂಗಳೂರಿನ ಖಾದಿ ಮತ್ತು ಗ್ರಾಮೀಣ ಕೈಗಾರಿಕಾ ಆಯೋಗದ ವಲಯ ಕಚೇರಿಯಲ್ಲಿ ಇಂದು ಖಾದಿ ಗ್ರಾಮೋದ್ಯೋಗ, ಸ್ಫೂರ್ತಿ ಮತ್ತು ಪಿಎಂಇಜಿಪಿ ಯೋಜನೆಯ ಕುಶಲಕರ್ಮಿಗಳೊಂದಿಗೆ ಸಂವಾದ ನಡೆಸಿದರು. ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಭಾರತದಾದ್ಯಂತ ಖಾದಿ ಮತ್ತು …

Read More »

ಬ್ರೆಜಿಲ್ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರೆಜಿಲ್ ಗೆ ಅಧಿಕೃತ ಭೇಟಿ ನೀಡಿದ್ದಾರೆ. ಅವರು ಇಂದು ಬ್ರೆಜಿಲ್ ನ ಅಧ್ಯಕ್ಷ ಘನತೆವೆತ್ತ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರನ್ನು ಬ್ರೆಜಿಲ್ ನ ಅಲ್ವೊರಾಡಾ ಅರಮನೆಯಲ್ಲಿ ಭೇಟಿಯಾದರು. ಪ್ರಧಾನಿಯವರನ್ನು ಅಧ್ಯಕ್ಷ ಲುಲಾ ಅವರು ಆತ್ಮೀಯವಾಗಿ ಬರಮಾಡಿಕೊಂಡರು ಮತ್ತು ಭವ್ಯ ಮತ್ತು ವರ್ಣರಂಜಿತ ವಿಧ್ಯುಕ್ತ ಸ್ವಾಗತವನ್ನು ನೀಡಿದರು. ಪ್ರಧಾನಮಂತ್ರಿ ಮತ್ತು ಅಧ್ಯಕ್ಷ ಲುಲಾ ಅವರು ಸೀಮಿತ ಮತ್ತು ನಿಯೋಗ ಮಟ್ಟದ ಮಾತುಕತೆಗಳನ್ನು …

Read More »

ಜಂಟಿ ಹೇಳಿಕೆ: ಭಾರತ ಮತ್ತು ಬ್ರೆಜಿಲ್ – ಉನ್ನತ ಉದ್ದೇಶಗಳನ್ನು ಹೊಂದಿರುವ ಎರಡು ಶ್ರೇಷ್ಠ ರಾಷ್ಟ್ರಗಳು

ಭಾರತ ಗಣರಾಜ್ಯದ ಪ್ರಧಾನ ಮಂತ್ರಿಯವರಾದ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರು ಜುಲೈ 8, 2025 ರಂದು ಬ್ರೆಜಿಲ್ ಗೆ ಅಧಿಕೃತ ಭೇಟಿ ನೀಡಿದರು. ಫೆಡರೇಟಿವ್ ರಿಪಬ್ಲಿಕ್ ಆಫ್ ಬ್ರೆಜಿಲ್ ನ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರ ಆಹ್ವಾನದ ಮೇರೆಗೆ ಈ ಭೇಟಿಯನ್ನು ಕೈಗೊಳ್ಳಲಾಯಿತು. ಸುಮಾರು ಎಂಟು ದಶಕಗಳಿಂದ ಬ್ರೆಜಿಲ್-ಭಾರತ ಸಂಬಂಧಗಳ ಮೂಲಾಧಾರವಾಗಿರುವ ಸ್ನೇಹ ಮತ್ತು ವಿಶ್ವಾಸದ ಉತ್ಸಾಹದಲ್ಲಿ ಈ ಭೇಟಿ ನಡೆಯಿತು. …

Read More »

ಬ್ರೆಜಿಲ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ

ಗೌರವಾನ್ವಿತರೇ, ನನ್ನ ಆತ್ಮೀಯ ಸ್ನೇಹಿತ ಅಧ್ಯಕ್ಷ ಲೂಲಾ ಅವರೇ, ಉಭಯ ದೇಶಗಳ ನಿಯೋಗದ ಸದಸ್ಯರೇ, ಮಾಧ್ಯಮ ಸ್ನೇಹಿತರೇ, ನಮಸ್ಕಾರ, “ಬೋವಾ ತಾರ್ದೆ!” (ಶುಭ ಸಂಜೆ!) ನನ್ನ ಸ್ನೇಹಿತರಾದ ಅಧ್ಯಕ್ಷ ಲೂಲಾ ಅವರಿಗೆ ರಿಯೊ ಮತ್ತು ಬ್ರೆಸಿಲಿಯಾದಲ್ಲಿ ನೀಡಿದ ಆತ್ಮೀಯ ಸ್ವಾಗತಕ್ಕಾಗಿ ನಾನು ಹೃತ್ಪೂರ್ವಕವಾಗಿ ಧನ್ಯವಾದ ಅರ್ಪಿಸುತ್ತೇನೆ. ಅಮೆಜಾನ್ ನ ಸೌಂದಯರ್ಯ  ಮತ್ತು ನಿಮ್ಮ ಸೌಜನ್ಯದಿಂದ ನಾವು ನಿಜಕ್ಕೂ ಪುಳಕಿತರಾಗಿದ್ದೇವೆ. ಇಂದು ಬ್ರೆಜಿಲ್ ಅಧ್ಯಕ್ಷರಿಂದ ಬ್ರೆಜಿಲ್ ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯನ್ನು …

Read More »

ಹತ್ತಿ ಉತ್ಪಾದನೆ ಕುರಿತು ಚರ್ಚಿಸಲು ಸಭೆ: ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರಿಂದ ವಿಡಿಯೋ ಮೂಲಕ ಘೋಷಣೆ

ಕೇಂದ್ರ ಕೃಷಿ, ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು, ಬೆಳೆವಾರು ಸಮಸ್ಯೆಗಳನ್ನು ಚರ್ಚಿಸುವ ಸರಣಿ ಸಭೆಗಳ ಮುಂದುವರಿದ ಭಾಗವಾಗಿ, ಇಂದು ವಿಡಿಯೋ ಸಂದೇಶವೊಂದನ್ನು ಬಿಡುಗಡೆಗೊಳಿಸಿದ್ದಾರೆ. ಹತ್ತಿ ಉತ್ಪಾದನೆಯಲ್ಲಿನ ಬಿಕ್ಕಟ್ಟನ್ನು ಚರ್ಚಿಸಲು ಮುಂಬರುವ ಶುಕ್ರವಾರ, ಜುಲೈ 11, 2025 ರಂದು ಕೊಯಮತ್ತೂರಿನಲ್ಲಿ ಮಹತ್ವದ ಸಭೆಯೊಂದನ್ನು ಆಯೋಜಿಸಿರುವ ಬಗ್ಗೆ ಅವರು ಮಾಹಿತಿ ನೀಡಿದ್ದು, ಈ ನಿಟ್ಟಿನಲ್ಲಿ ದೇಶದ  ಸಮಸ್ತ ರೈತ ಸಹೋದರ ಸಹೋದರಿಯರಿಂದ ಸಲಹೆಗಳನ್ನು ಆಹ್ವಾನಿಸಿದ್ದಾರೆ. …

Read More »

ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ವಲಯದಲ್ಲಿ ಕ್ರಾಂತಿಕಾರಿ ಸುಧಾರಣೆಗಳು: ಕರಡು ಪಿ ಎನ್ ಜಿ ನಿಯಮಗಳು ಭಾರತದ ಅಪ್ ಸ್ಟ್ರೀಮ್ ತೈಲ ಮತ್ತು ಅನಿಲ ಮೂಲಸೌಕರ್ಯವನ್ನು ಆಧುನೀಕರಿಸುವ ಗುರಿಯನ್ನು ಹೊಂದಿವೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಿಯವರ ನೇತೃತ್ವದಲ್ಲಿ ತೈಲ ಮತ್ತು ಅನಿಲ ಪರಿಶೋಧನೆಯನ್ನು ವೇಗಗೊಳಿಸುವ ನಮ್ಮ ಪ್ರಯತ್ನದ ಭಾಗವಾಗಿ, ನಾವು ಪರಿಶೋಧನೆ ಮತ್ತು ಉತ್ಪಾದನೆಯನ್ನು ಉತ್ತೇಜಿಸಲು ಪ್ರಗತಿಶೀಲ ನೀತಿ ಸುಧಾರಣೆಗಳ ಸರಣಿಯನ್ನು ತರುತ್ತಿದ್ದೇವೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಕರಡು ನಿಯಮಗಳು, 2025 ಸೇರಿದಂತೆ ಈ ಸುಧಾರಣೆಗಳು ನಮ್ಮ ಇ&ಪಿ ಆಪರೇಟರ್ಗಳಿಗೆ ವ್ಯಾಪಾರ ಮಾಡುವ ಸುಲಭತೆಯನ್ನು ಗಮನಾರ್ಹವಾಗಿ ಹೆಚ್ಚಿಸುತ್ತವೆ” ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರಾದ ಶ್ರೀ ಹರ್‌ದೀಪ್‌ …

Read More »

ಮಧ್ಯಪ್ರದೇಶದಲ್ಲಿ ಪ್ರಸಾರಕ್ಕೆ ಉತ್ತೇಜನ: ಕೇಂದ್ರ ಸರ್ಕಾರವು ಪ್ರಸಾರ ಮೂಲಸೌಕರ್ಯ ಮತ್ತು ಜಾಲ ಅಭಿವೃದ್ಧಿ (ಬಿ ಐ ಎನ್ ಡಿ) ಯೋಜನೆಯಡಿ ಉಜ್ಜಯಿನಿಯಲ್ಲಿ ಆಕಾಶವಾಣಿ ಕೇಂದ್ರವನ್ನು ಸ್ಥಾಪಿಸಲಿದೆ

ಕೇಂದ್ರ ವಾರ್ತಾ ಮತ್ತು ಪ್ರಸಾರ ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾದ ಡಾ. ಎಲ್. ಮುರುಗನ್ ಅವರು ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಅವರನ್ನು ನವದೆಹಲಿಯ ತಮ್ಮ ನಿವಾಸದಲ್ಲಿ ಭೇಟಿಯಾದರು. ಮಧ್ಯಪ್ರದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಮತ್ತು ಭವಿಷ್ಯದ ಅಭಿವೃದ್ಧಿ ಉಪಕ್ರಮಗಳಿಗೆ ಸಂಬಂಧಿಸಿದ ವಿಷಯಗಳ ಮೇಲೆ ಸಭೆ ಕೇಂದ್ರೀಕರಿಸಿದರು. ಮಾಧ್ಯಮ ಸಂಪರ್ಕ, ಸಾರ್ವಜನಿಕ ಸಂವಹನ ಮತ್ತು ಪ್ರಸಾರ ಮೂಲಸೌಕರ್ಯ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಹಯೋಗವನ್ನು …

Read More »