ಕೇಂದ್ರ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಇಂದು ಗುಜರಾತ್ ಭೇಟಿಯ ಸಂದರ್ಭದಲ್ಲಿ ನೆಲಗಡಲೆ ಬೆಳೆಗಾರರನ್ನು ಭೇಟಿ ಮಾಡಿದರು. ಜುನಾಗಢದ ಮಾಣೆಕ್ವಾಡಾ ಗ್ರಾಮದಲ್ಲಿ ನೆಲಗಡಲೆ ಹೊಲಗಳಿಗೆ ಭೇಟಿ ನೀಡಿ ರೈತರೊಂದಿಗೆ ಸಂವಾದ ನಡೆಸಿ ಮಾಹಿತಿ ಸಂಗ್ರಹಿಸಿದರು. ಕೇಂದ್ರ ಸಚಿವರು ರೈತರೊಂದಿಗೆ ಹೊಲದಲ್ಲಿ ನೆಲಗಡಲೆ ಬೆಳೆಗಳ ಕಳೆ ತೆಗೆಯುವ ಮತ್ತು ಜಮೀನು ಒಪ್ಪಗೊಳಿಸುವ ಕಾರ್ಯದಲ್ಲಿ ಭಾಗವಹಿಸಿದರು. ಸಂವಾದದ ಸಮಯದಲ್ಲಿ, ಶ್ರೀ ಚೌಹಾಣ್ ಅವರು …
Read More »ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಂದ ರೂ. 40 ಕೋಟಿ ಮೌಲ್ಯದ 4 ಕೆಜಿಗೂ ಹೆಚ್ಚು ಕೊಕೇನ್ ಅನ್ನು ಡಿ.ಆರ್.ಐ. ವಶಪಡಿಸಿಕೊಂಡಿದೆ; ಒಬ್ಬರನ್ನು ಬಂಧಿಸಲಾಗಿದೆ
ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿ.ಆರ್.ಐ) ಬೆಂಗಳೂರು ವಲಯ ಘಟಕದ ಅಧಿಕಾರಿಗಳು ನಿರ್ದಿಷ್ಟ ಗುಪ್ತಚರ ಮಾಹಿತಿಯ ಮೇರೆಗೆ ಕಾರ್ಯನಿರ್ವಹಿಸುತ್ತಾ, 18.07.2025ರ ಮುಂಜಾನೆ ದೋಹಾದಿಂದ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಭಾರತೀಯ ಪುರುಷ ಪ್ರಯಾಣಿಕನನ್ನು ತಡೆದರು. ಪ್ರಯಾಣಿಕನ ಸಾಮಾನುವಸ್ತುಗಳನ್ನು ಅವರು ಎಚ್ಚರಿಕೆಯಿಂದ ಪರಿಶೀಲಿಸಿದಾಗ, ಪ್ರಯಾಣಿಕರು ಅಸಾಧಾರಣವಾಗಿ ಭಾರದ ಎರಡು ಸೂಪರ್ ಹೀರೋ ಕಾಮಿಕ್ಸ್/ ನಿಯತಕಾಲಿಕ ಪುಸ್ತಕಗಳನ್ನು ಅಸಹಜ ರೀತಿಯಲ್ಲಿ ಹೊತ್ತೊಯ್ಯುತ್ತಿರುವುದು ಕಂಡುಬಂತು. ನಿಯತಕಾಲಿಕೆಗಳ ಮುಖಪುಟದಲ್ಲಿ ಮರೆಮಾಡಲಾಗಿರುವ ಬಿಳಿ ಪುಡಿಯನ್ನು ಅಧಿಕಾರಿಗಳು ಎಚ್ಚರಿಕೆಯಿಂದ …
Read More »ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಅವರು ರಾಜಸ್ಥಾನದಲ್ಲಿ 435 ಮೆಗಾವ್ಯಾಟ್ ಸೌರ ಸ್ಥಾವರಕ್ಕೆ ಹಸಿರು ನಿಶಾನೆ ತೋರಿದರು, ಇದು ವೇಗ ಮತ್ತು ಸುಸ್ಥಿರತೆಯ ಮಾದರಿ ಎಂದು ಬಣ್ಣಿಸಿದರು
ರಾಜಸ್ಥಾನವು ಶುದ್ಧ ಇಂಧನದ ಜಾಗತಿಕ ಕೇಂದ್ರವಾಗಿ ಪರಿವರ್ತನೆಯಾಗುತ್ತಿರುವುದನ್ನು ಒತ್ತಿಹೇಳುತ್ತಾ, ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ, ರಾಜ್ಯವು ಈಗ ಭರವಸೆ, ಇಂಧನ ಸ್ವಾತಂತ್ರ್ಯ ಮತ್ತು ಸ್ವಾವಲಂಬನೆಯ ದೀಪವಾಗಿದೆ ಎಂದು ಹೇಳಿದರು. ಝೆಲೆಸ್ಟ್ರಾ ಇಂಡಿಯಾ ಅಭಿವೃದ್ಧಿಪಡಿಸಿದ 435 ಮೆಗಾವ್ಯಾಟ್ ಗೋರ್ಬಿಯಾ ಸೌರ ವಿದ್ಯುತ್ ಯೋಜನೆಯನ್ನು ಸಚಿವರು ಇಂದು ರಾಜಸ್ಥಾನದಲ್ಲಿ ಉದ್ಘಾಟಿಸಿದರು. ದೂರದೃಷ್ಟಿಯ ನಾಯಕತ್ವ ಮತ್ತು ಪ್ರಾಮಾಣಿಕ ಉದ್ದೇಶದ ಮೂಲಕ ಏನು ಸಾಧ್ಯ ಎಂಬುದಕ್ಕೆ ಗೋರ್ಬಿಯಾ ಯೋಜನೆ …
Read More »‘ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಮಾದಕವಸ್ತು ಮುಕ್ತ ಯುವಕರು’ ಎಂಬ ಧ್ಯೇಯವಾಕ್ಯದೊಂದಿಗೆ ವಾರಣಾಸಿಯ ರುದ್ರಾಕ್ಷಿ ಕನ್ವೆನ್ಷನ್ ಸೆಂಟರ್ನಲ್ಲಿ ‘ಯುವ ಆಧ್ಯಾತ್ಮಿಕ ಶೃಂಗಸಭೆ’ ಪ್ರಾರಂಭವಾಯಿತು; ಭಾರತದಾದ್ಯಂತ ಸುಮಾರು 122 ಆಧ್ಯಾತ್ಮಿಕ ಮತ್ತು ಸಾಮಾಜಿಕ-ಸಾಂಸ್ಕೃತಿಕ ಸಂಸ್ಥೆಗಳಿಂದ 600 ಕ್ಕೂ ಹೆಚ್ಚು ಯುವಕರು ಪಾಲ್ಗೊಂಡರು
ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವು ಉತ್ತರ ಪ್ರದೇಶದ ವಾರಣಾಸಿಯಲ್ಲಿ ‘ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಮಾದಕವಸ್ತು ಮುಕ್ತ ಯುವಕರು’ ಎಂಬ ಧ್ಯೇಯವಾಕ್ಯದೊಂದಿಗೆ ‘ಯುವ ಆಧ್ಯಾತ್ಮಿಕ ಶೃಂಗಸಭೆ’ಯನ್ನು ಪ್ರಾರಂಭಿಸಿದೆ. ಈ ಶೃಂಗಸಭೆಯಲ್ಲಿ ದೇಶಾದ್ಯಂತದ 122 ಆಧ್ಯಾತ್ಮಿಕ ಮತ್ತು ಸಾಮಾಜಿಕ-ಸಾಂಸ್ಕೃತಿಕ ಸಂಸ್ಥೆಗಳನ್ನು ಪ್ರತಿನಿಧಿಸುವ 600ಕ್ಕೂ ಹೆಚ್ಚು ಯುವ ಭಾಗಿದಾರರನ್ನು ಪಾಲ್ಗೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಯುವಜನ ವ್ಯವಹಾರಗಳು, ಕ್ರೀಡೆ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು, …
Read More »ಉದ್ಯೋಗದಾತರು ಮತ್ತು ಉದ್ಯೋಗಿಗಳ ನೋಂದಣಿ ಪ್ರಚಾರ ಯೋಜನೆ (SPREE) ಕುರಿತು ಜಾಗೃತಿ ಮೂಡಿಸಲು ಬೆಂಗಳೂರಿನಲ್ಲಿ ನೌಕರರ ರಾಜ್ಯ ವಿಮಾ ನಿಗಮ (ESIC) ಪ್ರಾದೇಶಿಕ ಕಚೇರಿಯಿಂದ ಪತ್ರಿಕಾಗೋಷ್ಠಿ ನಡೆಯಿತು
ಕಾರ್ಮಿಕರ ರಾಜ್ಯ ವಿಮಾ ನಿಗಮ, ಪ್ರಾದೇಶಿಕ ಕಛೇರಿ, ಕರ್ನಾಟಕ ಬೆಂಗಳೂರು ವತಿಯಿಂದ ಇಂದು ಶ್ರೀ ಮನೋಜ್ ಕುಮಾರ್, ಪ್ರಾದೇಶಿಕ ನಿರ್ದೇಶಕರು, ಇವರ ಅಧ್ಯಕ್ಷತೆಯಲ್ಲಿ ಕರ್ನಾಟಕದಲ್ಲಿ ಇ.ಎಸ್.ಐ ಯೋಜನೆಯ ಬಗ್ಗೆ ಪತ್ರಿಕಾಗೋಷ್ಠಿ ನಡೆಯಿತು. ಶ್ರೀ ಅರಸದ ಕಿಶೋರ್, ಜಂಟಿ ನಿರ್ದೇಶಕರು (ಉಸ್ತುವಾರಿ), ಉಪ ಪ್ರಾದೇಶಿಕ ಕಛೇರಿ, ಪೀಣ್ಯ ಹಾಗೂ ಶ್ರೀಮತಿ ಕಣಿತ ಸೆಲ್ವಿ, ಜಂಟಿ ನಿರ್ದೇಶಕರು (ಉಸ್ತುವಾರಿ), ಉಪ ಪ್ರಾದೇಶಿಕ ಕಛೇರಿ, ಬೊಮ್ಮಸಂದ್ರ ಅವರು ಉಪಸ್ಥಿತರಿದ್ದರು. ಪತ್ರಿಕಾಗೋಷ್ಠಿಯಲ್ಲಿ ಶ್ರೀ ಮನೋಜ್ ಕುಮಾರ್ ಅವರು …
Read More »ಜುಲೈ 18ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜುಲೈ 18ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:30 ರ ಸುಮಾರಿಗೆ ಬಿಹಾರದ ಮೋತಿಹರಿಯಲ್ಲಿ 7,200 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಅವರು ಶಿಲಾನ್ಯಾಸ, ಉದ್ಘಾಟನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಅವರು ಸಾರ್ವಜನಿಕ ಸಮಾರಂಭವನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಮಧ್ಯಾಹ್ನ 3 ಗಂಟೆಗೆ ದುರ್ಗಾಪುರದಲ್ಲಿ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿ 5000 ಕೋಟಿ ರೂ.ಗೂ ಅಧಿಕ …
Read More »ʻಸ್ವಚ್ಛ ಸರ್ವೇಕ್ಷಣಾ 2024-25ʼ ಪ್ರಶಸ್ತಿಗಳನ್ನು ಪ್ರದಾನ ಮಾಡಿದ ರಾಷ್ಟ್ರಪತಿ
ಫಲಿತಾಂಶ ಹೊರಬಿದ್ದಿದೆ! ಭಾರತದ ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ನವದೆಹಲಿಯ ವಿಜ್ಞಾನ ಭವನದಲ್ಲಿ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ (ಎಂಒಎಚ್ಯುಎ) ಆಯೋಜಿಸಿದ್ದ ʻಸ್ವಚ್ಛ ಸರ್ವೇಕ್ಷಣಾ 2024-25ʼ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಕೇಂದ್ರ ಸಚಿವರಾದ ಶ್ರೀ ಮನೋಹರ್ ಲಾಲ್ ಮತ್ತು ಸಹಾಯಕ ಸಚಿವರಾದ ಶ್ರೀ ತೋಖಾನ್ ಸಾಹು ಅವರ ಉಪಸ್ಥಿತಿಯಲ್ಲಿ 23 ʻಸೂಪರ್ ಸ್ವಚ್ಛ ಲೀಗ್ ನಗರʼಗಳು ಪ್ರಶಸ್ತಿ ಸ್ವೀಕರಿಸಿದವು. ಭಾರತದಲ್ಲಿ ಹೊಸ ತಲೆಮಾರಿನ ಸ್ವಚ್ಛ ನಗರಗಳು ಉದಯಿಸಿದ್ದು …
Read More »ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ವಾಪಸ್ಸಾಗಿದ್ದನ್ನು ಸ್ವಾಗತಿಸಿ ನಿರ್ಣಯ ಕೈಗೊಂಡ ಕೇಂದ್ರ ಸಚಿವ ಸಂಪುಟ
ಭಾರತದ ಅನಂತ ಆಕಾಂಕ್ಷೆಗಳನ್ನು ಪ್ರತಿನಿಧಿಸುವ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ತಮ್ಮ ಬಾಹ್ಯಾಕಾಶ ಪ್ರಯಾಣದಿಂದ 2025ರ ಜುಲೈ 15 ರಂದು ಸುರಕ್ಷಿತವಾಗಿ ಭೂಮಿಗೆ ಮರಳಿದ್ದಾರೆ. ಇದು ಇಡೀ ರಾಷ್ಟ್ರಕ್ಕೆ ಹೆಮ್ಮೆ, ವೈಭವ ಮತ್ತು ಸಂತೋಷದ ಕ್ಷಣವಾಗಿದೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ತಮ್ಮ ಐತಿಹಾಸಿಕ 18 ದಿನಗಳ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ಭೂಮಿಗೆ ಹಿಂತಿರುಗಿರುವುದರ ರಾಷ್ಟ್ರದ ಸಂಭ್ರಮಾಚರಣೆಗೆ ಸಚಿವ ಸಂಪುಟವು ಕೈ …
Read More »ಪ್ರಧಾನಮಂತ್ರಿ ಧನ್ ಧಾನ್ಯ ಕೃಷಿ ಯೋಜನೆಗೆ ಸಂಪುಟದ ಅನುಮೋದನೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, 2025-26ರಿಂದ ಆರು ವರ್ಷಗಳ ಅವಧಿಗೆ 100 ಜಿಲ್ಲೆಗಳನ್ನು ಒಳಗೊಳ್ಳುವ “ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆ”ಗೆ ಅನುಮೋದನೆ ನೀಡಿದೆ. ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆ ನೀತಿ ಆಯೋಗದ ಮಹತ್ವಾಕಾಂಕ್ಷೆಯ ಜಿಲ್ಲಾ ಕಾರ್ಯಕ್ರಮದಿಂದ ಸ್ಫೂರ್ತಿ ಪಡೆದಿದೆ ಮತ್ತು ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳ ಮೇಲೆ ಪ್ರತ್ಯೇಕವಾಗಿ ಕೇಂದ್ರೀಕರಿಸುವ ಯೋಜನೆಗಳಲ್ಲಿ ಇದು ಮೊದಲನೆಯದು. ಈ ಯೋಜನೆಯು ಕೃಷಿ ಉತ್ಪಾದಕತೆಯನ್ನು …
Read More »ನವೀಕರಿಸಬಹುದಾದ ಇಂಧನ ಬೆಳವಣಿಗೆಯನ್ನು ವೇಗಗೊಳಿಸಲು ಎನ್.ಎಲ್.ಸಿ.ಐ.ಎಲ್ ಗೆ ಹೂಡಿಕೆ ವಿನಾಯಿತಿಗೆ ಒದಗಿಸಲು ಕೇಂದ್ರ ಸಂಪುಟದ ಅನುಮೋದನೆ
ಪ್ರಧಾನಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕುರಿತಾದ ಸಂಪುಟ ಸಮಿತಿ ಸಭೆಯು, ‘ನವರತ್ನ’ ಕೇಂದ್ರ ಸಾರ್ವಜನಿಕ ವಲಯದ ಉದ್ದಿಮೆಗಳಿಗೆ (ಸಿಪಿಎಸ್ಇ) ಅನ್ವಯವಾಗುವ ಹೂಡಿಕೆ ಮಾರ್ಗಸೂಚಿಗಳಿಂದ ಎನ್.ಎಲ್.ಸಿ. ಇಂಡಿಯಾ ಲಿಮಿಟೆಡ್ (ಎನ್.ಎಲ್.ಸಿ.ಐ.ಎಲ್)ಗೆ ವಿಶೇಷ ವಿನಾಯಿತಿ ನೀಡಲು ತನ್ನ ಅನುಮೋದನೆ ನೀಡಿದೆ. ಈ ಕಾರ್ಯತಂತ್ರದ ನಿರ್ಧಾರವು ಎನ್.ಎಲ್.ಸಿ.ಐ.ಎಲ್ ತನ್ನ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾದ ಎನ್.ಎಲ್.ಸಿ. ಇಂಡಿಯಾ ರಿನ್ಯೂವೇಬಲ್ಸ್ ಲಿಮಿಟೆಡ್ (ಎನ್.ಐ.ಆರ್.ಎಲ್) ನಲ್ಲಿ 7,000 ಕೋಟಿ ರೂ.ಗಳನ್ನು ಹೂಡಿಕೆ ಮಾಡಲು ಅನುವು ಮಾಡಿಕೊಡುತ್ತದೆ …
Read More »
Matribhumi Samachar Kannad