Sunday, December 21 2025 | 05:37:11 AM
Breaking News

Matribhumi Samachar

ಸಾಫ್ಟ್‌ವೇರ್ ಅಪ್ಲಿಕೇಶನ್‌ನ ಉನ್ನತೀಕರಣಕ್ಕಾಗಿ (ಸುಧಾರಿತ ಅಂಚೆ ತಂತ್ರಜ್ಞಾನ 2.O) 24 ಮತ್ತು 25 ಜೂನ್ 2025 (ಮಂಗಳವಾರ ಮತ್ತು ಬುಧವಾರ) ಅಂಚೆ ಕಚೇರಿಗಳು ಕಾರ್ಯನಿರ್ವಹಿಸುವುದಿಲ್ಲ

ದಿನಾಂಕ 26.06.2025 ರಂದು ನಿಗದಿಪಡಿಸಲಾದ ಸಾಫ್ಟ್‌ವೇರ್ ಅನುಷ್ಠಾನಕ್ಕಾಗಿ ಈ ಕೆಳಗೆ ತಿಳಿಸಲಾದ ಅಂಚೆ ಕಚೇರಿಗಳಲ್ಲಿ ಮತ್ತು ಸಂಬಂಧಿತ ಉಪ/ಶಾಖೆ ಅಂಚೆ ಕಚೇರಿಗಳಲ್ಲಿ ದಿನಾಂಕ 24 ಮತ್ತು 25 ಜೂನ್ 2025 (ಮಂಗಳವಾರ ಮತ್ತು ಬುಧವಾರ) ರಂದು ಸಾರ್ವಜನಿಕರಿಗೆ ಅಂಚೆ ಸೇವೆಗಳನ್ನು ಒದಗಿಸಲು ಸಾಧ್ಯವಾಗುವುದಿಲ್ಲ. ಎಚ್‌ಎಎಲ್ ಮುಖ್ಯ ಅಂಚೆ ಕಚೇರಿ ಜಾಲಹಳ್ಳಿ ಮುಖ್ಯ ಅಂಚೆ ಕಚೇರಿ ಬಸವನಗುಡಿ ಮುಖ್ಯ ಅಂಚೆ ಕಚೇರಿ ಗ್ರಾಹಕರಿಗೆ ಸೇವೆಯ ದಕ್ಷತೆ, ರಕ್ಷಣೆ ಹಾಗೂ ಗುಣಮಟ್ಟ ಹೆಚ್ಚಿಸಲು …

Read More »

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಮಂಗಳವಾರ ಉತ್ತರ ಪ್ರದೇಶದ ವಾರಣಾಸಿಯಲ್ಲಿ ʻಕೇಂದ್ರ ವಲಯ ಮಂಡಳಿʼಯ 25ನೇ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು 2025ರ ಜೂನ್ 24ರ ಮಂಗಳವಾರ ಉತ್ತರ ಪ್ರದೇಶದ ವಾರಣಾಸಿಯಲ್ಲಿ `ಕೇಂದ್ರ ವಲಯ ಮಂಡಳಿ’ಯ 25ನೇ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಸಭೆಯಲ್ಲಿ ಸದಸ್ಯ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಪ್ರತಿ ರಾಜ್ಯದ ಇಬ್ಬರು ಹಿರಿಯ ಸಚಿವರು ಭಾಗವಹಿಸಲಿದ್ದಾರೆ. ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳು ಮತ್ತು ಇತರ ಹಿರಿಯ ಅಧಿಕಾರಿಗಳು ಹಾಗೂ ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ. ʻಕೇಂದ್ರ ವಲಯ ಮಂಡಳಿʼಯು ಛತ್ತೀಸ್‌ಗಢ, ಮಧ್ಯಪ್ರದೇಶ, ಉತ್ತರಾಖಂಡ ಮತ್ತು ಉತ್ತರ ಪ್ರದೇಶ ರಾಜ್ಯಗಳನ್ನು ಒಳಗೊಂಡಿದೆ. ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಬರುವ ಅಂತರ-ರಾಜ್ಯ ಮಂಡಳಿ ಸಚಿವಾಲಯವು ಉತ್ತರ ಪ್ರದೇಶ ಸರ್ಕಾರದ ಸಹಯೋಗದೊಂದಿಗೆ ಈ ಸಭೆಯನ್ನು ಆಯೋಜಿಸಿದೆ. ʻರಾಜ್ಯಗಳ ಪುನರ್‌ಸಂಘಟನೆ ಕಾಯ್ದೆ-1956ʼರ ಸೆಕ್ಷನ್ 15 ರಿಂದ 22ರ ಅಡಿಯಲ್ಲಿ, ಐದು ವಲಯ ಮಂಡಳಿಗಳನ್ನು ಸ್ಥಾಪಿಸಲಾಯಿತು. ಕೇಂದ್ರ ಗೃಹ ಸಚಿವರು ಈ ಐದು ವಲಯ ಮಂಡಳಿಗಳ ಅಧ್ಯಕ್ಷರಾಗಿದ್ದಾರೆ. ಸದಸ್ಯ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು / ಲೆಫ್ಟಿನೆಂಟ್ ಗವರ್ನರ್ಗಳು / ಆಡಳಿತಗಾರರು ಇದರ ಸದಸ್ಯರಾಗಿರುತ್ತಾರೆ. ಈ ಸದಸ್ಯರಲ್ಲಿ, ಒಂದು ಸದಸ್ಯ ರಾಜ್ಯದ ಮುಖ್ಯಮಂತ್ರಿ (ಪ್ರತಿ ವರ್ಷ ಆವರ್ತನೆ) ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಾರೆ. ಪ್ರತಿ ಸದಸ್ಯ ರಾಜ್ಯದಿಂದ, ರಾಜ್ಯಪಾಲರು ಇಬ್ಬರು ಮಂತ್ರಿಗಳನ್ನು ಮಂಡಳಿಯ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡುತ್ತಾರೆ. ಪ್ರತಿ ʻವಲಯ ಮಂಡಳಿʼಯು ಮುಖ್ಯ ಕಾರ್ಯದರ್ಶಿಗಳ ಮಟ್ಟದಲ್ಲಿ ಶಾಶ್ವತ ಸಮಿತಿಯನ್ನು ರಚಿಸಿದೆ. ರಾಜ್ಯಗಳು ಪ್ರಸ್ತಾಪಿಸಿದ ಸಮಸ್ಯೆಗಳನ್ನು ಮೊದಲಿಗೆ ಚರ್ಚೆಗಾಗಿ ಸಂಬಂಧಪಟ್ಟ ವಲಯ ಮಂಡಳಿಯ ಶಾಶ್ವತ ಸಮಿತಿಯ ಮುಂದಿಡಲಾಗುತ್ತದೆ. ಶಾಶ್ವತ ಸಮಿತಿಯ ಪರಿಶೀಲನೆಯ ನಂತರ, ಉಳಿದ ಸಮಸ್ಯೆಗಳನ್ನು ಹೆಚ್ಚಿನ ಚರ್ಚೆಗಾಗಿ ವಲಯ ಮಂಡಳಿ ಸಭೆಯ ಮುಂದಿಡಲಾಗುತ್ತದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಸರ್ವಾಂಗೀಣ ಅಭಿವೃದ್ಧಿಗಾಗಿ ಸಹಕಾರ ಮತ್ತು ಸ್ಪರ್ಧಾತ್ಮಕ ಒಕ್ಕೂಟ ವ್ಯವಸ್ಥೆಯನ್ನು ಬಳಸಿಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ. ಬಲವಾದ ರಾಜ್ಯಗಳು ಬಲವಾದ ರಾಷ್ಟ್ರವನ್ನು ನಿರ್ಮಿಸಬಲ್ಲವು ಎಂಬ ನಂಬಿಕೆಯೊಂದಿಗೆ, ʻವಲಯ ಮಂಡಳಿʼಗಳು ಎರಡು ಅಥವಾ ಹೆಚ್ಚು ರಾಜ್ಯಗಳ ಮೇಲೆ ಪರಿಣಾಮ ಬೀರುವ ಅಥವಾ ಕೇಂದ್ರ ಮತ್ತು ರಾಜ್ಯಗಳ ಮೇಲೆ ಪರಿಣಾಮ ಬೀರುವ ವಿಷಯಗಳ ಬಗ್ಗೆ ಸಂವಾದ ಮತ್ತು ಚರ್ಚೆಗೆ ರಚನಾತ್ಮಕ ಕಾರ್ಯವಿಧಾನವನ್ನು ಒದಗಿಸುತ್ತವೆ.  ಈ ಮೂಲಕ ಪರಸ್ಪರ ಸಹಕಾರವನ್ನು ಹೆಚ್ಚಿಸಲು ಪ್ರಮುಖ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತವೆ. ʻವಲಯ ಮಂಡಳಿʼಗಳು ಸಲಹೆದಾರನ ಪಾತ್ರವನ್ನು ವಹಿಸುತ್ತದೆ; ಆದಾಗ್ಯೂ, ಕಳೆದ ಕೆಲವು ವರ್ಷಗಳಲ್ಲಿ, ಈ ಮಂಡಳಿಗಳು ವಿವಿಧ ಕ್ಷೇತ್ರಗಳಲ್ಲಿ ಪರಸ್ಪರ ತಿಳಿವಳಿಕೆ ಮತ್ತು ಸಹಕಾರದ ಆರೋಗ್ಯಕರ ಬಂಧಗಳನ್ನು ಉತ್ತೇಜಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುವುದನ್ನು ಕಾಣಬಹುದು. ಎಲ್ಲಾ ರಾಜ್ಯ ಸರ್ಕಾರಗಳು, ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳ ಸಹಕಾರದೊಂದಿಗೆ, ಕಳೆದ ಹನ್ನೊಂದು ವರ್ಷಗಳಲ್ಲಿ ವಿವಿಧ ವಲಯ ಮಂಡಳಿಗಳು ಮತ್ತು ಅವುಗಳ ಶಾಶ್ವತ ಸಮಿತಿಗಳ ಒಟ್ಟು 61 ಸಭೆಗಳು ನಡೆದಿವೆ. ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಲೈಂಗಿಕ ಅಪರಾಧಗಳ ಪ್ರಕರಣಗಳ ತ್ವರಿತ ತನಿಖೆ ಮತ್ತು ಅವುಗಳ ತ್ವರಿತ ವಿಲೇವಾರಿಗಾಗಿ ತ್ವರಿತ ವಿಶೇಷ ನ್ಯಾಯಾಲಯಗಳ (ಎಫ್‌ಟಿಎಸ್‌ಸಿ) ಅನುಷ್ಠಾನ ಸೇರಿದಂತೆ ರಾಷ್ಟ್ರೀಯ ಪ್ರಾಮುಖ್ಯತೆಯ ವಿಶಾಲ ವಿಷಯಗಳ ಬಗ್ಗೆಯೂ ವಲಯ ಮಂಡಳಿಗಳು ಚರ್ಚಿಸುತ್ತವೆ. ಪ್ರತಿ ಹಳ್ಳಿಯ ಗೊತ್ತುಪಡಿಸಿದ ಪ್ರದೇಶದಲ್ಲಿ ಶಾಶ್ವತ ಬ್ಯಾಂಕಿಂಗ್ ಶಾಖೆಯ ಸೌಲಭ್ಯಗಳನ್ನು ಒದಗಿಸುವುದು; ತುರ್ತು ಪ್ರತಿಕ್ರಿಯೆ ಬೆಂಬಲ ವ್ಯವಸ್ಥೆ …

Read More »

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ನೇತೃತ್ವ ವಹಿಸಿ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಭಾರತ ಮತ್ತು ಪ್ರಪಂಚದಾದ್ಯಂತ ಇರುವ ಜನರಿಗೆ ಅಂತಾರಾಷ್ಟ್ರೀಯ ಯೋಗ ದಿನದ ಶುಭಾಶಯಗಳನ್ನು ತಿಳಿಸಿದರು. ಈ ವರ್ಷವು 11ನೇ ಬಾರಿಗೆ ಜೂನ್ 21ರಂದು ಜಗತ್ತು ಒಟ್ಟಾಗಿ ಸೇರಿ ಯೋಗವನ್ನು ಸಾಮೂಹಿಕವಾಗಿ ಅಭ್ಯಾಸ …

Read More »

ಪರಂಪರೆಯನ್ನು ಸಂಧಿಸಿದ ಯೋಗ: ಎ.ಎಸ್.ಐ. (ಭಾರತೀಯ ಪುರಾತತ್ವ ಸಮೀಕ್ಷಾ ಇಲಾಖೆಯ) ಸ್ಮಾರಕಗಳಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಅಂತಾರಾಷ್ಟ್ರೀಯ ಯೋಗ ದಿನವನ್ನು  ಭಾರತದಾದ್ಯಂತ ಭವ್ಯವಾಗಿ ಆಚರಿಸಲಾಯಿತು.  ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಭಾರತೀಯ ಪುರಾತತ್ವ ಸಮೀಕ್ಷಾ ಇಲಾಖೆ (ಎ.ಎಸ್.ಐ.-ASI) ಯ ಆಧೀನದಲ್ಲಿರುವ 81 ಪರಂಪರೆಯ ಸ್ಮಾರಕಗಳಲ್ಲಿ ಶನಿವಾರದಂದು ಆಯುಷ್ ಸಚಿವಾಲಯದ ಸಹಯೋಗದಲ್ಲಿ ರೋಮಾಂಚಕ ಯೋಗ ಅಧಿವೇಶನ/ಸತ್ರಗಳನ್ನು ಆಯೋಜಿಸಲಾಗಿತ್ತು. ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಆಯೋಜನೆಯಾಗಿದ್ದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇತೃತ್ವ ನೀಡಿದರು. ಅವರು ಯೋಗದ ಎಲ್ಲರನ್ನೂ ಒಳಗೊಳ್ಳುವ ಸ್ವಭಾವವನ್ನು ಉಲ್ಲೇಖಿಸಿ, “ಯೋಗವು ಎಲ್ಲರಿಗೂ …

Read More »

ಸಂಬಲ್ ಪುರದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಿದ ಶ್ರೀ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್ ಅವರು ಇಂದು ಬೆಳಿಗ್ಗೆ ಒಡಿಶಾದ ಸಂಬಲ್ಪುರದ ಮಾ ಸಮಲೇಶ್ವರಿ ದೇವಾಲಯ ಸಂಕೀರ್ಣದ ನದಿ ದಂಡೆಯ ಬಳಿ 11 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ನಡೆದ ಯೋಗ ಅಧಿವೇಶನದಲ್ಲಿ ಭಾಗವಹಿಸಿದರು. ಅಧಿಕಾರಿಗಳು, ಗಣ್ಯರು ಮತ್ತು ಸಂಬಲ್ಪುರದ ನಿವಾಸಿಗಳು ಅವರೊಂದಿಗೆ ಅಧಿವೇಶನದಲ್ಲಿ ಭಾಗವಹಿಸಿದರು. ಯೋಗವು ಕಾಲಾತೀತ ಮತ್ತು ಸಮಗ್ರ ವಿಧಾನವಾಗಿದ್ದು, ಯೋಗವು ಜಗತ್ತಿಗೆ ಭಾರತದ ಕೊಡುಗೆಯಾಗಿದೆ ಎಂದು ಶ್ರೀ ಧರ್ಮೇಂದ್ರ ಪ್ರಧಾನ್ ತಮ್ಮ ಸಂದೇಶದಲ್ಲಿ ತಿಳಿಸಿದರು. ಯೋಗವನ್ನು ಜಾಗತಿಕ ಸಾಮೂಹಿಕ ಆಂದೋಲನ ಮತ್ತು ಜಾಗತಿಕ ಸಾಮರಸ್ಯ ಮತ್ತು ಶಾಂತಿಯ ಸಾಧನವನ್ನಾಗಿ ಮಾಡುವ ನಿಟ್ಟಿನಲ್ಲಿ  ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ನಿರಂತರ ಪ್ರಯತ್ನಕ್ಕಾಗಿ ಅವರು ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಎಲ್ಲರೂ, ವಿಶೇಷವಾಗಿ ಯುವ ಪೀಳಿಗೆ ಯೋಗವನ್ನು ಅಳವಡಿಸಿಕೊಳ್ಳಬೇಕೆಂದು ಶ್ರೀ ಪ್ರಧಾನ್ ಒತ್ತಾಯಿಸಿದರು. ಶಿಕ್ಷಣ ಸಚಿವಾಲಯವು ದಿಲ್ಲಿ ವಿಶ್ವವಿದ್ಯಾಲಯದ ಸಮಾವೇಶ ಕೇಂದ್ರ ಮತ್ತು ಇತರ ಮೂರು ಪ್ರತಿಷ್ಠಿತ ಸ್ಥಳಗಳಾದ ಬಿಹಾರದ ಬೋಧ್ ಗಯಾದ ಮಹಾಬೋಧಿ ದೇವಾಲಯ; ಕರ್ನಾಟಕದ ಮೈಸೂರು ಅರಮನೆ; ಮತ್ತು ಕರ್ನಾಟಕದ ಸೋಮನಾಥಪುರದ ಸೋಮನಾಥಪುರ ದೇವಾಲಯ ಆವರಣದಲ್ಲಿ ಸಾಮೂಹಿಕ ಯೋಗ ಸತ್ರ/ಅಧಿವೇಶನಗಳನ್ನು ಆಯೋಜಿಸಿತ್ತು. ದಿಲ್ಲಿ ವಿಶ್ವವಿದ್ಯಾಲಯದಲ್ಲಿ, ಶಿಕ್ಷಣ ಸಚಿವಾಲಯದ (ಡಿ.ಒ.ಎಚ್.ಇ.-DoHE) ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಡಾ. ವಿನೀತ್ ಜೋಶಿ; ಡಿ.ಒ.ಎಚ್.ಇ.ಯ ಸಹಾಯಕ ಕಾರ್ಯದರ್ಶಿ ಶ್ರೀ ಸುನಿಲ್ ಕುಮಾರ್ ಬರ್ನ್ವಾಲ್, ದಿಲ್ಲಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಯೋಗೇಶ್ ಸಿಂಗ್; ಅಧ್ಯಾಪಕರು, ಸಿಬ್ಬಂದಿ, ಸಚಿವಾಲಯದ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಯೋಗ ಅಧಿವೇಶನದಲ್ಲಿ ಭಾಗವಹಿಸಿದ್ದರು. ಬೋಧ್ ಗಯಾದಲ್ಲಿ, ಈ ಕಾರ್ಯಕ್ರಮವನ್ನು ದಕ್ಷಿಣ ಬಿಹಾರದ ಕೇಂದ್ರೀಯ ವಿಶ್ವವಿದ್ಯಾಲಯ, ಐಐಎಂ ಬೋಧ್ ಗಯಾ ಮತ್ತು ರಾಜ್ಯ/ಜಿಲ್ಲಾ ಆಡಳಿತ ಜಂಟಿಯಾಗಿ ಆಯೋಜಿಸಿದ್ದವು. ಮೈಸೂರಿನಲ್ಲಿ, ಇದನ್ನು ಭಾರತೀಯ ಭಾಷೆಗಳ ಕೇಂದ್ರೀಯ ಸಂಸ್ಥೆ, ಮೈಸೂರು ಮತ್ತು ರಾಜ್ಯ/ಜಿಲ್ಲಾ ಆಡಳಿತ ಜಂಟಿಯಾಗಿ ಆಯೋಜಿಸಿದ್ದವು ಮತ್ತು ಸೋಮನಾಥಪುರದಲ್ಲಿ, ಪ್ರಾದೇಶಿಕ ಶಿಕ್ಷಣ ಸಂಸ್ಥೆ ಮತ್ತು ರಾಜ್ಯ/ಜಿಲ್ಲಾ ಆಡಳಿತ ಜಂಟಿಯಾಗಿ ಕಾರ್ಯಕ್ರಮವನ್ನು ಆಯೋಜಿಸಿದ್ದವು. ಈ ಸ್ಥಳಗಳಲ್ಲಿ, ಸಚಿವಾಲಯ ಮತ್ತು ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು, ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಜನಸಾಮಾನ್ಯರು ಯೋಗ ಅಧಿವೇಶನಗಳಲ್ಲಿ ಭಾಗವಹಿಸಿದರು.

Read More »

11ನೇ ಅಂತಾರಾಷ್ಟ್ರೀಯ ಯೋಗ ದಿನದಂದು ಪ್ರಧಾನಮಂತ್ರಿಯವರು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 11ನೇ ಅಂತಾರಾಷ್ಟ್ರೀಯ ಯೋಗ ದಿನದಂದು ಭಾರತ ಮತ್ತು ವಿಶ್ವದಾದ್ಯಂತದ ಜನರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ಯೋಗ ದಿನಾಚರಣೆಯ ನೇತೃತ್ವ ವಹಿಸಿದ್ದರು ಮತ್ತು ಯೋಗ ಅಧಿವೇಶನದಲ್ಲಿ ಭಾಗವಹಿಸಿದರು. “ಹನ್ನೊಂದು ವರ್ಷಗಳ ನಂತರ, ಯೋಗವು ಪ್ರಪಂಚದಾದ್ಯಂತ ಕೋಟ್ಯಂತರ ಜನರ ಜೀವನಶೈಲಿಯ ಅವಿಭಾಜ್ಯ ಅಂಗವಾಗಿದೆ” ಎಂದು ಅವರು ಹೇಳಿದರು. ದೃಷ್ಟಿ ಕಳೆದುಕೊಂಡವರು (ದಿವ್ಯಾಂಗರು) ಬ್ರೈಲ್‌ ಲಿಪಿಯಲ್ಲಿ ಯೋಗ ಗ್ರಂಥಗಳನ್ನು ಓದುವುದನ್ನು …

Read More »

ಉಪ ರಾಷ್ಟ್ರಪತಿಗಳು ಭಾರತದ ರಾಷ್ಟ್ರಪತಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ

ಗೌರವಾನ್ವಿತ ಉಪ ರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು ಇಂದು ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು. ಸಾಮಾಜಿಕ ಮಾಧ್ಯಮ  ‘ಎಕ್ಸ್’ ನಲ್ಲಿ ರಾಷ್ಟ್ರಪತಿಗಳಿಗೆ ಶುಭ ಹಾರೈಸುತ್ತಾ ಅವರು ಹೀಗೆ ಹೇಳಿದ್ದಾರೆ: ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಜನ್ಮದಿನದ ಹೃತ್ಪೂರ್ವಕ ಶುಭಾಶಯಗಳು. ವಿನಮ್ರ ಹಿನ್ನೆಲೆಯಿಂದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಅವರ ಅಸಾಧಾರಣ ಪಯಣವು ಅವರ ವಿನಮ್ರತೆ, ಸರಳತೆ ಮತ್ತು ಉದಾತ್ತತೆಯ ಸಂಕೇತವಾಗಿದೆ, …

Read More »

ಕರ್ನಾಟಕದಿಂದ ಯುಕೆಗೆ ಜಾಮೂನು ಹಣ್ಣಿನ ಮೊದಲ ರಫ್ತು ರವಾನೆಗೆ ಎಪಿಇಡಿಎ ಹಸಿರು ನಿಶಾನೆ

ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರ (ಎಪಿಇಡಿಎ) 2025ರ ಜೂನ್ 19 ರಂದು ಕರ್ನಾಟಕದಿಂದ ಯುನೈಟೆಡ್ ಕಿಂಗ್ ಡಮ್ ಗೆ  ಜಾಮೂನು ಹಣ್ಣು (ಕುಂದಾನಾ ಪ್ರಭೇದ) ಮೊದಲ ರಫ್ತು ರವಾನೆಗಾಗಿ ವರ್ಚುವಲ್ ಫ್ಲ್ಯಾಗ್ಆಫ್ (ಹಸಿರು ನಿಶಾನೆ) ಆಯೋಜಿಸಿತ್ತು. ಈ ಹೆಗ್ಗುರುತು ರಫ್ತು ಜಾಗತಿಕ ಮಾರುಕಟ್ಟೆಗಳಲ್ಲಿ ವಿವಿಧ ಪ್ರದೇಶಗಳಿಂದ ಭಾರತದ ಸಾಂಪ್ರದಾಯಿಕ ಹಣ್ಣುಗಳನ್ನು ಉತ್ತೇಜಿಸುವಲ್ಲಿ ಮಹತ್ವದ ಹೆಜ್ಜೆಯಾಗಿದೆ. ಗಮನಾರ್ಹವಾಗಿ, ಜಾಮೂನು ಹಣ್ಣುಗಳನ್ನು ನೇರವಾಗಿ ರೈತ ಉತ್ಪಾದಕ ಸಂಸ್ಥೆಯಿಂದ (ಎಫ್ …

Read More »

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರಿಂದ ಬೆಂಗಳೂರಿನ ಆದಿಚುಂಚನಗಿರಿ ವಿಶ್ವವಿದ್ಯಾಲಯ (ACU) ಕ್ಯಾಂಪಸ್ ಉದ್ಘಾಟನೆ

ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ಬೆಂಗಳೂರಿನಲ್ಲಿ ಆದಿಚುಂಚನಗಿರಿ ವಿಶ್ವವಿದ್ಯಾಲಯದ (ಎಸಿಯು) ಬೆಂಗಳೂರು ಕ್ಯಾಂಪಸ್ ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ, ನಮ್ಮ ಸಂಸ್ಕೃತಿಯ ಮೂಲ ತತ್ವ “ಸರ್ವ ಜನ ಹಿತಾಯ, ಸರ್ವ ಜನ ಸುಖಾಯ” ಎಂಬುದಾಗಿದೆ. ಇದರರ್ಥ ಕೇವಲ ತನ್ನ ಬಗ್ಗೆ ಮಾತ್ರವಲ್ಲದೆ ಎಲ್ಲರ ಕಲ್ಯಾಣ ಮತ್ತು ಸಂತೋಷದ ಬಗ್ಗೆ ಚಿಂತಿಸುವುದು ಎಂದು ಹೇಳಿದರು. …

Read More »

ಲಂಡನ್‌ನಲ್ಲಿ ನಡೆದ ವಿಶ್ವ ತಂಡ ಬ್ಲಿಟ್ಜ್ ಚಾಂಪಿಯನ್ಶಿಶಿಪ್‌ನ ಬ್ಲಿಟ್ಜ್ ಸೆಮಿಫೈನಲ್‌ನಲ್ಲಿ ಅದ್ಭುತ ಗೆಲುವು ಸಾಧಿಸಿದ್ದಕ್ಕಾಗಿ ದಿವ್ಯಾ ದೇಶಮುಖ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

ಲಂಡನ್‌ನಲ್ಲಿ ನಡೆದ ವಿಶ್ವ ಟೀಮ್ ಬ್ಲಿಟ್ಜ್ ಚಾಂಪಿಯನ್ಶಿಪ್‌ನ ಬ್ಲಿಟ್ಜ್ ಸೆಮಿಫೈನಲ್‌ನ ಎರಡನೇ ಸುತ್ತಿನಲ್ಲಿ, ವಿಶ್ವದ ನಂ. 1 ಹೌ ಯಿಫಾನ್ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ್ದಕ್ಕಾಗಿ ಭಾರತೀಯ ಚೆಸ್ ಪ್ರತಿಭೆ ದಿವ್ಯಾ ದೇಶಮುಖ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಅಭಿನಂದಿಸಿದ್ದಾರೆ. X ನ ಪೋಸ್ಟ್‌ ನಲ್ಲಿ ಶ್ರೀ ಮೋದಿಯವರು: “ಲಂಡನ್‌ನಲ್ಲಿ ನಡೆದ ವಿಶ್ವ ಟೀಮ್ ಬ್ಲಿಟ್ಜ್ ಚಾಂಪಿಯನ್ಶಿಶಿಪ್‌ನ ಬ್ಲಿಟ್ಜ್ ಸೆಮಿಫೈನಲ್‌ನ ಎರಡನೇ ಸುತ್ತಿನಲ್ಲಿ ವಿಶ್ವದ ನಂ. 1 …

Read More »