ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ನೇತೃತ್ವ ವಹಿಸಿ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಭಾರತ ಮತ್ತು ಪ್ರಪಂಚದಾದ್ಯಂತ ಇರುವ ಜನರಿಗೆ ಅಂತಾರಾಷ್ಟ್ರೀಯ ಯೋಗ ದಿನದ ಶುಭಾಶಯಗಳನ್ನು ತಿಳಿಸಿದರು. ಈ ವರ್ಷವು 11ನೇ ಬಾರಿಗೆ ಜೂನ್ 21ರಂದು ಜಗತ್ತು ಒಟ್ಟಾಗಿ ಸೇರಿ ಯೋಗವನ್ನು ಸಾಮೂಹಿಕವಾಗಿ ಅಭ್ಯಾಸ …
Read More »ಪರಂಪರೆಯನ್ನು ಸಂಧಿಸಿದ ಯೋಗ: ಎ.ಎಸ್.ಐ. (ಭಾರತೀಯ ಪುರಾತತ್ವ ಸಮೀಕ್ಷಾ ಇಲಾಖೆಯ) ಸ್ಮಾರಕಗಳಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
ಅಂತಾರಾಷ್ಟ್ರೀಯ ಯೋಗ ದಿನವನ್ನು ಭಾರತದಾದ್ಯಂತ ಭವ್ಯವಾಗಿ ಆಚರಿಸಲಾಯಿತು. ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಭಾರತೀಯ ಪುರಾತತ್ವ ಸಮೀಕ್ಷಾ ಇಲಾಖೆ (ಎ.ಎಸ್.ಐ.-ASI) ಯ ಆಧೀನದಲ್ಲಿರುವ 81 ಪರಂಪರೆಯ ಸ್ಮಾರಕಗಳಲ್ಲಿ ಶನಿವಾರದಂದು ಆಯುಷ್ ಸಚಿವಾಲಯದ ಸಹಯೋಗದಲ್ಲಿ ರೋಮಾಂಚಕ ಯೋಗ ಅಧಿವೇಶನ/ಸತ್ರಗಳನ್ನು ಆಯೋಜಿಸಲಾಗಿತ್ತು. ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಆಯೋಜನೆಯಾಗಿದ್ದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇತೃತ್ವ ನೀಡಿದರು. ಅವರು ಯೋಗದ ಎಲ್ಲರನ್ನೂ ಒಳಗೊಳ್ಳುವ ಸ್ವಭಾವವನ್ನು ಉಲ್ಲೇಖಿಸಿ, “ಯೋಗವು ಎಲ್ಲರಿಗೂ …
Read More »ಸಂಬಲ್ ಪುರದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಿದ ಶ್ರೀ ಧರ್ಮೇಂದ್ರ ಪ್ರಧಾನ್
ಕೇಂದ್ರ ಶಿಕ್ಷಣ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್ ಅವರು ಇಂದು ಬೆಳಿಗ್ಗೆ ಒಡಿಶಾದ ಸಂಬಲ್ಪುರದ ಮಾ ಸಮಲೇಶ್ವರಿ ದೇವಾಲಯ ಸಂಕೀರ್ಣದ ನದಿ ದಂಡೆಯ ಬಳಿ 11 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ನಡೆದ ಯೋಗ ಅಧಿವೇಶನದಲ್ಲಿ ಭಾಗವಹಿಸಿದರು. ಅಧಿಕಾರಿಗಳು, ಗಣ್ಯರು ಮತ್ತು ಸಂಬಲ್ಪುರದ ನಿವಾಸಿಗಳು ಅವರೊಂದಿಗೆ ಅಧಿವೇಶನದಲ್ಲಿ ಭಾಗವಹಿಸಿದರು. ಯೋಗವು ಕಾಲಾತೀತ ಮತ್ತು ಸಮಗ್ರ ವಿಧಾನವಾಗಿದ್ದು, ಯೋಗವು ಜಗತ್ತಿಗೆ ಭಾರತದ ಕೊಡುಗೆಯಾಗಿದೆ ಎಂದು ಶ್ರೀ ಧರ್ಮೇಂದ್ರ ಪ್ರಧಾನ್ ತಮ್ಮ ಸಂದೇಶದಲ್ಲಿ ತಿಳಿಸಿದರು. ಯೋಗವನ್ನು ಜಾಗತಿಕ ಸಾಮೂಹಿಕ ಆಂದೋಲನ ಮತ್ತು ಜಾಗತಿಕ ಸಾಮರಸ್ಯ ಮತ್ತು ಶಾಂತಿಯ ಸಾಧನವನ್ನಾಗಿ ಮಾಡುವ ನಿಟ್ಟಿನಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ನಿರಂತರ ಪ್ರಯತ್ನಕ್ಕಾಗಿ ಅವರು ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಎಲ್ಲರೂ, ವಿಶೇಷವಾಗಿ ಯುವ ಪೀಳಿಗೆ ಯೋಗವನ್ನು ಅಳವಡಿಸಿಕೊಳ್ಳಬೇಕೆಂದು ಶ್ರೀ ಪ್ರಧಾನ್ ಒತ್ತಾಯಿಸಿದರು. ಶಿಕ್ಷಣ ಸಚಿವಾಲಯವು ದಿಲ್ಲಿ ವಿಶ್ವವಿದ್ಯಾಲಯದ ಸಮಾವೇಶ ಕೇಂದ್ರ ಮತ್ತು ಇತರ ಮೂರು ಪ್ರತಿಷ್ಠಿತ ಸ್ಥಳಗಳಾದ ಬಿಹಾರದ ಬೋಧ್ ಗಯಾದ ಮಹಾಬೋಧಿ ದೇವಾಲಯ; ಕರ್ನಾಟಕದ ಮೈಸೂರು ಅರಮನೆ; ಮತ್ತು ಕರ್ನಾಟಕದ ಸೋಮನಾಥಪುರದ ಸೋಮನಾಥಪುರ ದೇವಾಲಯ ಆವರಣದಲ್ಲಿ ಸಾಮೂಹಿಕ ಯೋಗ ಸತ್ರ/ಅಧಿವೇಶನಗಳನ್ನು ಆಯೋಜಿಸಿತ್ತು. ದಿಲ್ಲಿ ವಿಶ್ವವಿದ್ಯಾಲಯದಲ್ಲಿ, ಶಿಕ್ಷಣ ಸಚಿವಾಲಯದ (ಡಿ.ಒ.ಎಚ್.ಇ.-DoHE) ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಡಾ. ವಿನೀತ್ ಜೋಶಿ; ಡಿ.ಒ.ಎಚ್.ಇ.ಯ ಸಹಾಯಕ ಕಾರ್ಯದರ್ಶಿ ಶ್ರೀ ಸುನಿಲ್ ಕುಮಾರ್ ಬರ್ನ್ವಾಲ್, ದಿಲ್ಲಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಯೋಗೇಶ್ ಸಿಂಗ್; ಅಧ್ಯಾಪಕರು, ಸಿಬ್ಬಂದಿ, ಸಚಿವಾಲಯದ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಯೋಗ ಅಧಿವೇಶನದಲ್ಲಿ ಭಾಗವಹಿಸಿದ್ದರು. ಬೋಧ್ ಗಯಾದಲ್ಲಿ, ಈ ಕಾರ್ಯಕ್ರಮವನ್ನು ದಕ್ಷಿಣ ಬಿಹಾರದ ಕೇಂದ್ರೀಯ ವಿಶ್ವವಿದ್ಯಾಲಯ, ಐಐಎಂ ಬೋಧ್ ಗಯಾ ಮತ್ತು ರಾಜ್ಯ/ಜಿಲ್ಲಾ ಆಡಳಿತ ಜಂಟಿಯಾಗಿ ಆಯೋಜಿಸಿದ್ದವು. ಮೈಸೂರಿನಲ್ಲಿ, ಇದನ್ನು ಭಾರತೀಯ ಭಾಷೆಗಳ ಕೇಂದ್ರೀಯ ಸಂಸ್ಥೆ, ಮೈಸೂರು ಮತ್ತು ರಾಜ್ಯ/ಜಿಲ್ಲಾ ಆಡಳಿತ ಜಂಟಿಯಾಗಿ ಆಯೋಜಿಸಿದ್ದವು ಮತ್ತು ಸೋಮನಾಥಪುರದಲ್ಲಿ, ಪ್ರಾದೇಶಿಕ ಶಿಕ್ಷಣ ಸಂಸ್ಥೆ ಮತ್ತು ರಾಜ್ಯ/ಜಿಲ್ಲಾ ಆಡಳಿತ ಜಂಟಿಯಾಗಿ ಕಾರ್ಯಕ್ರಮವನ್ನು ಆಯೋಜಿಸಿದ್ದವು. ಈ ಸ್ಥಳಗಳಲ್ಲಿ, ಸಚಿವಾಲಯ ಮತ್ತು ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು, ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಜನಸಾಮಾನ್ಯರು ಯೋಗ ಅಧಿವೇಶನಗಳಲ್ಲಿ ಭಾಗವಹಿಸಿದರು.
Read More »11ನೇ ಅಂತಾರಾಷ್ಟ್ರೀಯ ಯೋಗ ದಿನದಂದು ಪ್ರಧಾನಮಂತ್ರಿಯವರು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 11ನೇ ಅಂತಾರಾಷ್ಟ್ರೀಯ ಯೋಗ ದಿನದಂದು ಭಾರತ ಮತ್ತು ವಿಶ್ವದಾದ್ಯಂತದ ಜನರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ಯೋಗ ದಿನಾಚರಣೆಯ ನೇತೃತ್ವ ವಹಿಸಿದ್ದರು ಮತ್ತು ಯೋಗ ಅಧಿವೇಶನದಲ್ಲಿ ಭಾಗವಹಿಸಿದರು. “ಹನ್ನೊಂದು ವರ್ಷಗಳ ನಂತರ, ಯೋಗವು ಪ್ರಪಂಚದಾದ್ಯಂತ ಕೋಟ್ಯಂತರ ಜನರ ಜೀವನಶೈಲಿಯ ಅವಿಭಾಜ್ಯ ಅಂಗವಾಗಿದೆ” ಎಂದು ಅವರು ಹೇಳಿದರು. ದೃಷ್ಟಿ ಕಳೆದುಕೊಂಡವರು (ದಿವ್ಯಾಂಗರು) ಬ್ರೈಲ್ ಲಿಪಿಯಲ್ಲಿ ಯೋಗ ಗ್ರಂಥಗಳನ್ನು ಓದುವುದನ್ನು …
Read More »ಉಪ ರಾಷ್ಟ್ರಪತಿಗಳು ಭಾರತದ ರಾಷ್ಟ್ರಪತಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ
ಗೌರವಾನ್ವಿತ ಉಪ ರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು ಇಂದು ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು. ಸಾಮಾಜಿಕ ಮಾಧ್ಯಮ ‘ಎಕ್ಸ್’ ನಲ್ಲಿ ರಾಷ್ಟ್ರಪತಿಗಳಿಗೆ ಶುಭ ಹಾರೈಸುತ್ತಾ ಅವರು ಹೀಗೆ ಹೇಳಿದ್ದಾರೆ: ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಜನ್ಮದಿನದ ಹೃತ್ಪೂರ್ವಕ ಶುಭಾಶಯಗಳು. ವಿನಮ್ರ ಹಿನ್ನೆಲೆಯಿಂದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಅವರ ಅಸಾಧಾರಣ ಪಯಣವು ಅವರ ವಿನಮ್ರತೆ, ಸರಳತೆ ಮತ್ತು ಉದಾತ್ತತೆಯ ಸಂಕೇತವಾಗಿದೆ, …
Read More »ಕರ್ನಾಟಕದಿಂದ ಯುಕೆಗೆ ಜಾಮೂನು ಹಣ್ಣಿನ ಮೊದಲ ರಫ್ತು ರವಾನೆಗೆ ಎಪಿಇಡಿಎ ಹಸಿರು ನಿಶಾನೆ
ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರ (ಎಪಿಇಡಿಎ) 2025ರ ಜೂನ್ 19 ರಂದು ಕರ್ನಾಟಕದಿಂದ ಯುನೈಟೆಡ್ ಕಿಂಗ್ ಡಮ್ ಗೆ ಜಾಮೂನು ಹಣ್ಣು (ಕುಂದಾನಾ ಪ್ರಭೇದ) ಮೊದಲ ರಫ್ತು ರವಾನೆಗಾಗಿ ವರ್ಚುವಲ್ ಫ್ಲ್ಯಾಗ್ಆಫ್ (ಹಸಿರು ನಿಶಾನೆ) ಆಯೋಜಿಸಿತ್ತು. ಈ ಹೆಗ್ಗುರುತು ರಫ್ತು ಜಾಗತಿಕ ಮಾರುಕಟ್ಟೆಗಳಲ್ಲಿ ವಿವಿಧ ಪ್ರದೇಶಗಳಿಂದ ಭಾರತದ ಸಾಂಪ್ರದಾಯಿಕ ಹಣ್ಣುಗಳನ್ನು ಉತ್ತೇಜಿಸುವಲ್ಲಿ ಮಹತ್ವದ ಹೆಜ್ಜೆಯಾಗಿದೆ. ಗಮನಾರ್ಹವಾಗಿ, ಜಾಮೂನು ಹಣ್ಣುಗಳನ್ನು ನೇರವಾಗಿ ರೈತ ಉತ್ಪಾದಕ ಸಂಸ್ಥೆಯಿಂದ (ಎಫ್ …
Read More »ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರಿಂದ ಬೆಂಗಳೂರಿನ ಆದಿಚುಂಚನಗಿರಿ ವಿಶ್ವವಿದ್ಯಾಲಯ (ACU) ಕ್ಯಾಂಪಸ್ ಉದ್ಘಾಟನೆ
ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ಬೆಂಗಳೂರಿನಲ್ಲಿ ಆದಿಚುಂಚನಗಿರಿ ವಿಶ್ವವಿದ್ಯಾಲಯದ (ಎಸಿಯು) ಬೆಂಗಳೂರು ಕ್ಯಾಂಪಸ್ ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ, ನಮ್ಮ ಸಂಸ್ಕೃತಿಯ ಮೂಲ ತತ್ವ “ಸರ್ವ ಜನ ಹಿತಾಯ, ಸರ್ವ ಜನ ಸುಖಾಯ” ಎಂಬುದಾಗಿದೆ. ಇದರರ್ಥ ಕೇವಲ ತನ್ನ ಬಗ್ಗೆ ಮಾತ್ರವಲ್ಲದೆ ಎಲ್ಲರ ಕಲ್ಯಾಣ ಮತ್ತು ಸಂತೋಷದ ಬಗ್ಗೆ ಚಿಂತಿಸುವುದು ಎಂದು ಹೇಳಿದರು. …
Read More »ಲಂಡನ್ನಲ್ಲಿ ನಡೆದ ವಿಶ್ವ ತಂಡ ಬ್ಲಿಟ್ಜ್ ಚಾಂಪಿಯನ್ಶಿಶಿಪ್ನ ಬ್ಲಿಟ್ಜ್ ಸೆಮಿಫೈನಲ್ನಲ್ಲಿ ಅದ್ಭುತ ಗೆಲುವು ಸಾಧಿಸಿದ್ದಕ್ಕಾಗಿ ದಿವ್ಯಾ ದೇಶಮುಖ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
ಲಂಡನ್ನಲ್ಲಿ ನಡೆದ ವಿಶ್ವ ಟೀಮ್ ಬ್ಲಿಟ್ಜ್ ಚಾಂಪಿಯನ್ಶಿಪ್ನ ಬ್ಲಿಟ್ಜ್ ಸೆಮಿಫೈನಲ್ನ ಎರಡನೇ ಸುತ್ತಿನಲ್ಲಿ, ವಿಶ್ವದ ನಂ. 1 ಹೌ ಯಿಫಾನ್ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ್ದಕ್ಕಾಗಿ ಭಾರತೀಯ ಚೆಸ್ ಪ್ರತಿಭೆ ದಿವ್ಯಾ ದೇಶಮುಖ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಅಭಿನಂದಿಸಿದ್ದಾರೆ. X ನ ಪೋಸ್ಟ್ ನಲ್ಲಿ ಶ್ರೀ ಮೋದಿಯವರು: “ಲಂಡನ್ನಲ್ಲಿ ನಡೆದ ವಿಶ್ವ ಟೀಮ್ ಬ್ಲಿಟ್ಜ್ ಚಾಂಪಿಯನ್ಶಿಶಿಪ್ನ ಬ್ಲಿಟ್ಜ್ ಸೆಮಿಫೈನಲ್ನ ಎರಡನೇ ಸುತ್ತಿನಲ್ಲಿ ವಿಶ್ವದ ನಂ. 1 …
Read More »ಪ್ರಧಾನಮಂತ್ರಿ ಅವರು ಭಾರತದ ಯುವಜನತೆಯ ಅಭಿವೃದ್ದಿಗಾಗಿ ಸಂಶೋಧನೆ ಮತ್ತು ನಾವೀನ್ಯತೆಯ ಪರಿಸರವನ್ನು ಸುಧಾರಿಸುವ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ
ಕ್ಯೂಎಸ್ ವಿಶ್ವ ವಿಶ್ವವಿದ್ಯಾಲಯವು ಬಹಿರಂಗ ಪಡಿಸಿದ 2026ರ ಶ್ರೇಯಾಂಕಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಸ್ವಾಗತಿಸಿದರು. ಇದು ಜಾಗತಿಕ ಶಿಕ್ಷಣ ಮತ್ತು ಸಂಶೋಧನೆಯಲ್ಲಿ ಭಾರತದ ಬೆಳೆಯುತ್ತಿರುವ ಸ್ಥಾನಮಾನಕ್ಕೆ ಸಾಕ್ಷಿಯಾಗಿದೆ ಎಂದು ಅವರು ತಿಳಿಸಿದ್ದಾರೆ. ಭಾರತದ ಯುವಜನತೆಯ ಅಭಿವೃದ್ದಿಗಾಗಿ ಸಂಶೋಧನೆ ಮತ್ತು ನಾವೀನ್ಯತೆಯ ಪರಿಸರ ವ್ಯವಸ್ಥೆಗಳನ್ನು ಮತ್ತಷ್ಟು ಹೆಚ್ಚಿಸುವ ಸರ್ಕಾರದ ಬದ್ಧತೆಯನ್ನು ಅವರು ಪುನರುಚ್ಚರಿಸಿದರು. ಕೇಂದ್ರ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್ ಅವರ X ಕುರಿತಾದ ಪೋಸ್ಟ್ ಗೆ ಪ್ರತಿಕ್ರಿಯಿಸಿದ …
Read More »ಮಹಾರಾಷ್ಟ್ರದ ಜೆಜುರಿ-ಮೋರ್ಗಾನ್ ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವ ಹಾನಿಗೆ ಪ್ರಧಾನಮಂತ್ರಿ ಸಂತಾಪ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮಹಾರಾಷ್ಟ್ರದ ಜೆಜುರಿ-ಮೋರ್ಗಾನ್ ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ. ಪ್ರಧಾನಮಂತ್ರಿಯವರ ಕಛೇರಿಯ ಹ್ಯಾಂಡಲ್ Xನಲ್ಲಿ ಪೋಸ್ಟ್ ಮಾಡಿ: “ಮಹಾರಾಷ್ಟ್ರದ ಜೆಜುರಿ-ಮೋರ್ಗಾನ್ ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆದ ಜೀವಹಾನಿಯಾದ ಬಗ್ಗೆ ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು …
Read More »
Matribhumi Samachar Kannad