ಭಾರತದ 76ನೇ ಗಣರಾಜ್ಯೋತ್ಸವದ ಶುಭಾಶಯಗಳು ಮತ್ತು ಶುಭಸಂದೇಶಗಳಿಗಾಗಿ ವಿಶ್ವ ನಾಯಕರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಧನ್ಯವಾದಗಳನ್ನು ತಿಳಿಸಿದರು. ನೇಪಾಳದ ಪ್ರಧಾನಮಂತ್ರಿಯವರು ಎಕ್ಸ್ ತಾಣದಲ್ಲಿ ನೀಡಿದ ಹೇಳಿಕೆಗೆ ಪ್ರತಿಕ್ರಿಯೆಯಾಗಿ, ಪ್ರಧಾನಮಂತ್ರಿಯವರು ಈ ರೀತಿ ಹೇಳಿದರು: “ಪ್ರಧಾನಮಂತ್ರಿ @kpsharmaoli, ನಿಮ್ಮ ಆತ್ಮೀಯ ಶುಭಾಶಯಗಳಿಗೆ ಧನ್ಯವಾದಗಳು. ಭಾರತವು ತನ್ನ ಗಣರಾಜ್ಯಕ್ಕೆ 75 ವರ್ಷಗಳನ್ನು ಪೂರೈಸುತ್ತಿರುವಾಗ, ನಮ್ಮ ಎರಡು ರಾಷ್ಟ್ರಗಳ ಪ್ರಜೆಗಳ ನಡುವಿನ ಸ್ನೇಹದ ಐತಿಹಾಸಿಕ ಬಂಧಗಳನ್ನು ನಾವು ಆಳವಾಗಿ ಪಾಲಿಸುತ್ತೇವೆ ಮತ್ತು …
Read More »76ನೇ ಗಣರಾಜ್ಯೋತ್ಸವ ಆಚರಣೆಗೆ ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾದ ಮೈ ಭಾರತ್ ಯುವ ಸ್ವಯಂಸೇವಕರು ಮತ್ತು ಪ್ರಮುಖ ಕ್ರೀಡಾಪಟುಗಳೊಂದಿಗೆ ಕೇಂದ್ರ ಸಚಿವರಾದ ಡಾ.ಮನ್ಸುಖ್ ಮಾಂಡವಿಯಾ ಆತಿಥ್ಯ ವಹಿಸಿದರು
76ನೇ ಗಣರಾಜ್ಯೋತ್ಸವದ ಸ್ಮರಣೀಯ ಮುನ್ನ, ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವರಾದ ಡಾ.ಮನ್ಸುಖ್ ಮಾಂಡವಿಯಾ ಅವರು ಇಂದು ನವದೆಹಲಿಯಲ್ಲಿ ಮೈ ಭಾರತ್ ಯುವ ಸ್ವಯಂಸೇವಕರು, ಅವರ ಕುಟುಂಬಗಳು ಮತ್ತು ಪ್ರಸಿದ್ಧ ಕ್ರೀಡಾಪಟುಗಳಿಗೆ ಆತಿಥ್ಯ ನೀಡಿದರು. ಒಟ್ಟು 200 ಮೈ ಭಾರತ್ ಸ್ವಯಂಸೇವಕರು ಮತ್ತು ಅವರ ಕುಟುಂಬಗಳು ಮತ್ತು 160 ಪ್ರಸಿದ್ಧ ಕ್ರೀಡಾಪಟುಗಳನ್ನು ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾಗಿದ್ದು, ರಾಷ್ಟ್ರ ನಿರ್ಮಾಣ ಮತ್ತು ಕ್ರೀಡೆಯಲ್ಲಿ ಅವರ ಅತ್ಯುತ್ತಮ ಕೊಡುಗೆಗಳನ್ನು ಗುರುತಿಸಲಾಗಿದೆ. ಸಭಿಕರನ್ನುದ್ದೇಶಿಸಿ …
Read More »ಜೀವನ ರಕ್ಷಾಪದಕ ಸರಣಿ ಪ್ರಶಸ್ತಿಗಳು-2024 ರನ್ನು ಪ್ರದಾನ ಮಾಡಲು ಮಾಡಿರುವ ಆಯ್ಕೆಯನ್ನು ಅನುಮೋದಿಸಿದ ರಾಷ್ಟ್ರಪತಿ
ಸರ್ವೋತ್ತಮ ಜೀವನ ರಕ್ಷಾಪದಕ 17 ಮಂದಿಗೆ, ಉತ್ತಮ ಜೀವನ ರಕ್ಷಾ ಪದಕ 09 ಮಂದಿಗೆ ಮತ್ತು 23 ಜನರಿಗೆ ಜೀವನ ರಕ್ಷಾ ಪದಕ ಸೇರಿದಂತೆ ಒಟ್ಟಾರೆ 49 ವ್ಯಕ್ತಿಗಳಿಗೆ 2024 ರ ಜೀವನ ರಕ್ಷಾ ಪದಕ ಸರಣಿ ಪ್ರಶಸ್ತಿಗಳನ್ನು ( ಹಾಗೂ ಇವುಗಳಲ್ಲಿ ಆರು ಪ್ರಶಸ್ತಿ ಪುರಸ್ಕೃತರಿಗೆ ಮರಣೋತ್ತರ ಪ್ರಶಸ್ತಿ ) ಪ್ರದಾನ ಮಾಡಲು ಭಾರತದ ರಾಷ್ಟ್ರಪತಿಗಳು ಅನುಮೋದನೆ ನೀಡಿದ್ದಾರೆ. ವಿವಿಧ ಜೀವನ ರಕ್ಷಾ ಪದಕ ಪುರಸ್ಕೃತರ ವಿವರಗಳು ಕೆಳಕಂಡಂತಿವೆ:- …
Read More »2025ನೇ ಸಾಲಿನ ಪದ್ಮ ಪ್ರಶಸ್ತಿಗಳು ಪ್ರಕಟ
ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಗಳನ್ನು ಅಂದರೆ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀಗಳನ್ನು ಮೂರು ವರ್ಗಗಳಲ್ಲಿ ಪ್ರದಾನ ಮಾಡಲಾಗುವುದು. ಈ ಪ್ರಶಸ್ತಿಗಳನ್ನು ವಿವಿಧ ವಿಭಾಗಗಳು/ ಕ್ಷೇತ್ರಗಳಲ್ಲಿ ಚಟುವಟಿಕೆಗಳನ್ನು ಅಂದರೆ ಕಲೆ, ಸಾಮಾಜಿಕ ಸೇವೆ, ಸಾರ್ವಜನಿಕ ವ್ಯವಹಾರ, ವಿಜ್ಞಾನ ಮತ್ತು ಇಂಜಿನಿಯರಿಂಗ್, ವ್ಯಾಪಾರ ಮತ್ತು ಉದ್ಯಮ, ವೈದ್ಯಕೀಯ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ನಾಗರಿಕ ಸೇವೆ ಇತ್ಯಾದಿಗಳಲ್ಲಿ ನೀಡಲಾಗುವುದು. ‘ಪದ್ಮವಿಭೂಷಣ’ ಪ್ರಶಸ್ತಿಯನ್ನು ಅಸಾಧಾರಣ ಮತ್ತು ಅತ್ಯುನ್ನತ ಸೇವೆಗಾಗಿ ನೀಡಲಾಗುವುದು …
Read More »ಗಣರಾಜ್ಯೋತ್ಸವ ಪರೇಡ್ 2025ರಲ್ಲಿ ಇದೇ ಮೊದಲ ಬಾರಿಗೆ ಮೂರು ಸರ್ಕಾರಿ ಶಾಲಾ ಬ್ಯಾಂಡ್ ತಂಡಗಳು ಪ್ರದರ್ಶನ ನೀಡಲಿವೆ
2025ರ ಜನವರಿ 26 ರಂದು ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ ಪರೇಡಿನಲ್ಲಿ ಪ್ರದರ್ಶನ ನೀಡಲು ಮೂರು ಸರ್ಕಾರಿ ಶಾಲಾ ತಂಡಗಳು ಸಜ್ಜಾಗಿವೆ. ಜಾರ್ಖಂಡ್ ನ ಪ್ರಧಾನಮಂತ್ರಿ ಶ್ರೀ ಕೆ.ಜಿ.ಬಿ.ವಿ.ಪಟಮ್ಡಾ ತಂಡವು ಸೇನಾ ಬ್ಯಾಂಡ್ ನೊಂದಿಗೆ ಸಮನ್ವಯಗೊಂಡು ರಾಷ್ಟ್ರಪತಿಗಳ ವೇದಿಕೆಯ ಎದುರಿನ ವೇದಿಕೆಯಲ್ಲಿ (ರಾಸ್ಟ್ರಮ್ ನಲ್ಲಿ) ಪ್ರದರ್ಶನ ನೀಡುವ ಗೌರವವನ್ನು ಪಡೆಯಲಿದೆ. ಏತನ್ಮಧ್ಯೆ, ಸಿಕ್ಕಿಂನ ಗ್ಯಾಂಗ್ಟಾಕಿನ ಸರ್ಕಾರಿ ಹಿರಿಯ ಸೆಕೆಂಡರಿ ಶಾಲೆ ವೆಸ್ಟ್ ಪಾಯಿಂಟ್ ಮತ್ತು ಕರ್ನಾಟಕದ ಬೆಳಗಾವಿ ಕಂಟೋನ್ಮೆಂಟ್ನ ಪಿಎಂ ಶ್ರೀ ಕೇಂದ್ರೀಯ ವಿದ್ಯಾಲಯ ಸಂಖ್ಯೆ 2 ರ ತಂಡಗಳು ವಿಜಯ್ ಚೌಕ್ನಲ್ಲಿ ತಮ್ಮ ಪ್ರದರ್ಶನವನ್ನು ನೀಡಲಿವೆ. ಹೊಸದಿಲ್ಲಿಯ ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ 2025 ರ ಜನವರಿ 24-25 ರಂದು ನಡೆಯುವ ರಾಷ್ಟ್ರೀಯ ಶಾಲಾ ಬ್ಯಾಂಡ್ ಸ್ಪರ್ಧೆ 6.0 ರ ಗ್ರ್ಯಾಂಡ್ ಫಿನಾಲೆಯಲ್ಲಿ ಸ್ಪರ್ಧಿಸುತ್ತಿರುವ 16 ತಂಡಗಳಲ್ಲಿ ಈ ಶಾಲಾ ಬ್ಯಾಂಡ್ ಗಳು ಸೇರಿವೆ. ಜಾರ್ಖಂಡಿನ ಪೂರ್ವ ಸಿಂಗ್ಭೂಮ್ ನ ಪಟಾಮ್ಡಾದ ಪಿಎಂ ಶ್ರೀ ಕಸ್ತೂರ್ಬಾ ಗಾಂಧಿ ಬಾಲಿಕಾ ವಿದ್ಯಾಲಯದ (ಕೆಜಿಬಿವಿ) ಪೈಪ್ ಬ್ಯಾಂಡ್ ಬಾಲಕಿಯರ ತಂಡವು ದೃಢನಿಶ್ಚಯ ಮತ್ತು ಸಾಧನೆಯ ಸ್ಪೂರ್ತಿದಾಯಕ ಪ್ರಯಾಣವನ್ನು ಪ್ರದರ್ಶಿಸುತ್ತದೆ. ಈ 25 ಸದಸ್ಯರ ತಂಡವು ಕೃಷಿ ಮತ್ತು ದಿನಗೂಲಿ ಕಾರ್ಮಿಕರನ್ನು ಅವಲಂಬಿಸಿರುವ ದೀನದಲಿತ ಕುಟುಂಬಗಳ ಹುಡುಗಿಯರನ್ನು ಒಳಗೊಂಡಿದೆ. ಹೆಚ್ಚಿನವರಿಗೆ, ಇದು ದಿಲ್ಲಿಗೆ ಅವರ ಮೊದಲ ರೈಲು ಪ್ರಯಾಣವಾಗಿದೆ. ಅವರು ರಾಮಗಢ ಸೇನಾ ರೆಜಿಮೆಂಟಲ್ ಕೇಂದ್ರದಲ್ಲಿರುವ ಸಿಖ್ ರೆಜಿಮೆಂಟ್ ಮತ್ತು ಪಂಜಾಬ್ ರೆಜಿಮೆಂಟಿನ ಬೋಧಕರಿಂದ ಮಾರ್ಗದರ್ಶನ ಪಡೆದಿದ್ದಾರೆ. ಹಿತ್ತಾಳೆ (ಬ್ರಾಸ್) ಬ್ಯಾಂಡ್ ಬಾಲಕಿಯರ ತಂಡ: ಸಿಕ್ಕಿಂನ ಗ್ಯಾಂಗ್ಟಾಕಿನ ಸರ್ಕಾರಿ ವೆಸ್ಟ್ ಪಾಯಿಂಟ್ ಸೀನಿಯರ್ ಸೆಕೆಂಡರಿ ಶಾಲೆಯು ರಾಜ್ಯ, ವಲಯ ಮತ್ತು ರಾಷ್ಟ್ರ ಮಟ್ಟದ ಪ್ರಶಂಸೆಗಳನ್ನು ಪಡೆಯುವ ಮೂಲಕ ಶ್ರೇಷ್ಠತೆಯ ಮಾನದಂಡಗಳನ್ನು ನಿಗದಿಪಡಿಸಿದೆ. ಏಳು ಚಾಂಪಿಯನ್ ತಂಡಗಳ ವಿರುದ್ಧ ಸ್ಪರ್ಧಿಸಿದ ತಂಡವು ಸಾಟಿಯಿಲ್ಲದ ಸಮರ್ಪಣೆಯನ್ನು ಪ್ರದರ್ಶಿಸಿತು ಮತ್ತು ಪೂರ್ವ ವಲಯದ ಚಾಂಪಿಯನ್ ಆಗಿ ಹೊರಹೊಮ್ಮಿತು. ಈ ವಿದ್ಯಾರ್ಥಿಗಳಲ್ಲಿ ಅನೇಕರು ವಿನಮ್ರ ಮತ್ತು ಸವಾಲಿನ ಹಿನ್ನೆಲೆಯಿಂದ ಬಂದವರು. ಕರ್ನಾಟಕದ ಬೆಳಗಾವಿ ಕಂಟೋನ್ಮೆಂಟ್ನ ಪಿಎಂ ಶ್ರೀ ಕೇಂದ್ರೀಯ ವಿದ್ಯಾಲಯ ಸಂಖ್ಯೆ 2 ರ ಪೈಪ್ ಬ್ಯಾಂಡ್ (ಬಾಲಕರ) ತುಕಡಿಯಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಪೋಷಕರನ್ನು ಹೊಂದಿರುವ ಕುಟುಂಬಗಳ ಅನೇಕ ವಿದ್ಯಾರ್ಥಿಗಳು ಇದ್ದಾರೆ. ಈ ತಂಡಕ್ಕೆ ಎಂಎಲ್ಐಆರ್ಸಿ (ಮರಾಠಾ ಲೈಟ್ ಇನ್ಫೆಂಟ್ರಿ ರೆಜಿಮೆಂಟಲ್ ಸೆಂಟರ್ ಬೆಳಗಾವಿ) ತರಬೇತಿ ನೀಡಿದೆ. “ಸಂಪೂರ್ಣ ಸರ್ಕಾರದ ವಿಧಾನ”ಕ್ಕೆ ಅನುಗುಣವಾಗಿ, ಸೇನಾ ರೆಜಿಮೆಂಟಲ್ ಕೇಂದ್ರಗಳ ಬ್ಯಾಂಡ್ ಬೋಧಕರು / ತಂಡಗಳಿಂದ ಪಿಎಂ ಶ್ರೀ ಶಾಲಾ ಬ್ಯಾಂಡ್ ತಂಡಗಳಿಗೆ ತರಬೇತಿ ನೀಡಲು ಉಪಕ್ರಮವನ್ನು ತೆಗೆದುಕೊಳ್ಳಲಾಗಿದೆ. ತರಬೇತಿಯು 11 ರಾಜ್ಯಗಳು …
Read More »ಪ್ರಧಾನಮಂತ್ರಿ ಗತಿಶಕ್ತಿ ನೇತೃತ್ವದ ನೆಟ್ ವರ್ಕ್ ಯೋಜನಾ ಗುಂಪಿನ 86ನೇ ಸಭೆ ಬಹು ಮಾದರಿ ಸಂಪರ್ಕಕ್ಕಾಗಿ ನಾಲ್ಕು ರೈಲು ಮತ್ತು ರಸ್ತೆ ಯೋಜನೆಗಳನ್ನು ಮೌಲ್ಯಮಾಪನ ಮಾಡಿತು
ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆಯ (ಡಿಪಿಐಐಟಿ) ಜಂಟಿ ಕಾರ್ಯದರ್ಶಿ ಶ್ರೀ ಇ. ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ನೆಟ್ ವರ್ಕ್ ಯೋಜನಾ ಗುಂಪಿನ (ಎನ್ ಪಿ ಜಿ) 86ನೇ ಸಭೆ, ಪಿಎಂ ಗತಿಶಕ್ತಿಯ ತತ್ವಗಳಿಗೆ ಅನುಗುಣವಾಗಿ ನಾಲ್ಕು ಯೋಜನೆಗಳನ್ನು (2 ರೈಲ್ವೆ ಮತ್ತು 2 ಹೆದ್ದಾರಿ ಅಭಿವೃದ್ಧಿ ಯೋಜನೆಗಳು) ಮೌಲ್ಯಮಾಪನ ಮಾಡಿತು. ರಸ್ತೆ ಮತ್ತು ರೈಲು ವಲಯಗಳಲ್ಲಿನ ಮೂಲಸೌಕರ್ಯ ಯೋಜನೆಗಳನ್ನು ಮೌಲ್ಯಮಾಪನ ಮಾಡಲು 2025ರ ಜನವರಿ 24 …
Read More »ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎನ್ ಸಿ ಸಿ ಕೆಡೆಟ್ ಗಳು, ಎನ್ ಎಸ್ ಎಸ್ ಸ್ವಯಂಸೇವಕರು, ಬುಡಕಟ್ಟು ಅತಿಥಿಗಳು ಮತ್ತು ಸ್ತಬ್ಧಚಿತ್ರ ಕಲಾವಿದರೊಂದಿಗೆ ಸಂವಾದ ನಡೆಸಿದರು
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿನ್ನೆ (2025ರ ಜನವರಿ 24) ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಮುಂಬರುವ ಗಣರಾಜ್ಯೋತ್ಸವದ ಮೆರವಣಿಗೆಯ ಭಾಗವಾಗಲಿರುವ ಎನ್ ಸಿ ಸಿ ಕೆಡೆಟ್ ಗಳು, ಎನ್ ಎಸ್ ಎಸ್ ಸ್ವಯಂಸೇವಕರು, ಬುಡಕಟ್ಟು ಅತಿಥಿಗಳು ಮತ್ತು ಸ್ತಬ್ಧಚಿತ್ರ ಕಲಾವಿದರೊಂದಿಗೆ ಸಂವಾದ ನಡೆಸಿದರು. ಸಂವಾದದ ಸಮಯದಲ್ಲಿ, ಅನೇಕ ಭಾಗವಹಿಸುವವರು ಪ್ರಧಾನಿಯನ್ನು ವೈಯಕ್ತಿಕವಾಗಿ ಭೇಟಿಯಾದ ಸಂತಸವನ್ನು ವ್ಯಕ್ತಪಡಿಸಿದರು. ಇದಕ್ಕೆ ಪ್ರಧಾನಮಂತ್ರಿ “ಇದು ಭಾರತೀಯ ಪ್ರಜಾಪ್ರಭುತ್ವದ ಶಕ್ತಿಯನ್ನು ಪ್ರದರ್ಶಿಸುತ್ತದೆ” …
Read More »ಇಂಡೋನೇಷ್ಯಾ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿಯವರ ಹೇಳಿಕೆಯ ಇಂಗ್ಲಿಷ್ ಅವತರಣಿಕೆ
ಗೌರವಾನ್ವಿತ ಅಧ್ಯಕ್ಷರು ಮತ್ತು ನನ್ನ ಸಹೋದರ ಪ್ರಬೋವೊ ಸುಬಿಯಾಂಟೊ, ಎರಡೂ ದೇಶಗಳ ಪ್ರತಿನಿಧಿಗಳು, ಮಾಧ್ಯಮದ ಸ್ನೇಹಿತರೇ, ನಮಸ್ಕಾರ! ಭಾರತದ ಮೊದಲ ಗಣರಾಜ್ಯೋತ್ಸವಕ್ಕೆ ಇಂಡೋನೇಷ್ಯಾ ನಮ್ಮ ಮುಖ್ಯ ಅತಿಥಿಯಾಗಿತ್ತು. ಮತ್ತು ನಾವು ನಮ್ಮ 75 ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಮತ್ತೊಮ್ಮೆ, ಇಂಡೋನೇಷ್ಯಾ ಈ ಮಹತ್ವದ ಸಂದರ್ಭದ ಭಾಗವಾಗಲು ಗೌರವಯುತವಾಗಿ ಒಪ್ಪಿಕೊಂಡಿದೆ ಎಂಬುದು ನಮಗೆ ಬಹಳ ಹೆಮ್ಮೆಯ ವಿಷಯವಾಗಿದೆ. ಈ ಸಂದರ್ಭದಲ್ಲಿ ನಾನು ಅಧ್ಯಕ್ಷ ಪ್ರಬೋವೊ ಅವರನ್ನು ಭಾರತಕ್ಕೆ ಹಾರ್ದಿಕವಾಗಿ ಸ್ವಾಗತಿಸುತ್ತೇನೆ. ಸ್ನೇಹಿತರೇ, 2018ರಲ್ಲಿ ನಾನು ಇಂಡೋನೇಷ್ಯಾಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ, ನಾವು ನಮ್ಮ ಪಾಲುದಾರಿಕೆಯನ್ನು ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯತ್ತ ಕೊಂಡೊಯ್ದಿದ್ದೇವೆ. ಇಂದು, ನಾವು ಅಧ್ಯಕ್ಷ ಪ್ರಬೋವೊ ಅವರೊಂದಿಗೆ ಪರಸ್ಪರ ಸಹಕಾರದ ವಿವಿಧ ಅಂಶಗಳ ಬಗ್ಗೆ ವ್ಯಾಪಕ ಚರ್ಚೆ ನಡೆಸಿದ್ದೇವೆ. ರಕ್ಷಣಾ ಕ್ಷೇತ್ರದಲ್ಲಿ ನಮ್ಮ ಸಹಕಾರವನ್ನು ಬಲಪಡಿಸಲು, ರಕ್ಷಣಾ ಉತ್ಪಾದನೆ ಮತ್ತು ಪೂರೈಕೆ ಸರಪಳಿ ಕ್ಷೇತ್ರಗಳಲ್ಲಿ ಒಟ್ಟಾಗಿ ಕೆಲಸ ಮಾಡಲು ನಾವು ನಿರ್ಧರಿಸಿದ್ದೇವೆ. ನಾವು ಕಡಲ ಭದ್ರತೆ, ಸೈಬರ್ ಭದ್ರತೆ, ಭಯೋತ್ಪಾದನೆ ನಿಗ್ರಹ ಮತ್ತು ಮೂಲಭೂತವಾದ ನಿಗ್ರಹದಲ್ಲಿ ಸಹಕಾರಕ್ಕೆ ಒತ್ತು ನೀಡಿದ್ದೇವೆ. ಕಡಲ ಸುರಕ್ಷತೆ ಮತ್ತು ಭದ್ರತೆ ಕುರಿತ ಇಂದು ಅಂಕಿತ ಹಾಕಲಾದ ಒಪ್ಪಂದವು ಅಪರಾಧ ತಡೆ, ಶೋಧ ಮತ್ತು ಪಾರುಗಾಣಿಕಾ/ಪರಿಹಾರ-ರಕ್ಷಣಾ ಕಾರ್ಯಾಚರಣೆ ಹಾಗು ಸಾಮರ್ಥ್ಯ ವರ್ಧನೆ ಕ್ಷೇತ್ರಗಳಲ್ಲಿ ನಮ್ಮ ಸಹಕಾರವನ್ನು ಬಲಪಡಿಸುತ್ತದೆ. ಕಳೆದ ಕೆಲವು ವರ್ಷಗಳಲ್ಲಿ, ನಮ್ಮ ದ್ವಿಪಕ್ಷೀಯ ವ್ಯಾಪಾರವು ವೇಗವಾಗಿ ಬೆಳೆದಿದೆ ಮತ್ತು ಕಳೆದ ವರ್ಷ ಇದು 30 ಬಿಲಿಯನ್ ಡಾಲರ್ ದಾಟಿದೆ. ಇದನ್ನು ಇನ್ನೂ ಒಂದು ಹೆಜ್ಜೆ ಮುಂದೆ ಕೊಂಡೊಯ್ಯಲು, ಮಾರುಕಟ್ಟೆ ಪ್ರವೇಶ ಮತ್ತು ವ್ಯಾಪಾರ ಬುಟ್ಟಿಯನ್ನು ವೈವಿಧ್ಯಮಯಗೊಳಿಸುವ ಬಗ್ಗೆಯೂ ನಾವು ಚರ್ಚೆ ನಡೆಸಿದ್ದೇವೆ. ಈ ಪ್ರಯತ್ನಗಳಲ್ಲಿ ಖಾಸಗಿ ವಲಯವೂ ಸಮಾನ ಪಾಲುದಾರನಾಗಿದೆ. ಇಂದು ನಡೆದ ಸಿಇಒ ಫೋರಂ ಸಭೆ ಮತ್ತು ಖಾಸಗಿ ವಲಯದಲ್ಲಿ ಅಂತಿಮಗೊಳಿಸಲಾದ ಒಪ್ಪಂದಗಳನ್ನು ನಾವು ಸ್ವಾಗತಿಸುತ್ತೇವೆ. ಫಿನ್ ಟೆಕ್, ಕೃತಕ ಬುದ್ಧಿಮತ್ತೆ, ಇಂಟರ್ನೆಟ್ ಆಫ್ ಥಿಂಗ್ಸ್ ಮತ್ತು ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯದಂತಹ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರವನ್ನು ಮತ್ತಷ್ಟು ಬಲಪಡಿಸಲು ನಾವು ನಿರ್ಧರಿಸಿದ್ದೇವೆ. ಆರೋಗ್ಯ ಮತ್ತು ಆಹಾರ ಭದ್ರತೆ ಕ್ಷೇತ್ರಗಳಲ್ಲಿ, ಭಾರತವು ಮಧ್ಯಾಹ್ನದ ಊಟ ಯೋಜನೆ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯಿಂದ ಕಲಿತದ್ದನ್ನು ಮತ್ತು ಅನುಭವವನ್ನು ಇಂಡೋನೇಷ್ಯಾದೊಂದಿಗೆ ಹಂಚಿಕೊಳ್ಳುತ್ತಿದೆ. ಇಂಧನ, ನಿರ್ಣಾಯಕ ಖನಿಜಗಳು, ವಿಜ್ಞಾನ ಮತ್ತು ತಂತ್ರಜ್ಞಾನ, ಬಾಹ್ಯಾಕಾಶ ಮತ್ತು ಸ್ಟೆಮ್ ಶಿಕ್ಷಣ ಕ್ಷೇತ್ರಗಳಲ್ಲಿ ನಾವು ಒಟ್ಟಾಗಿ ಕೆಲಸ ಮಾಡಲು ನಿರ್ಧರಿಸಿದ್ದೇವೆ. ಎರಡೂ ದೇಶಗಳ ವಿಪತ್ತು ನಿರ್ವಹಣಾ ಪ್ರಾಧಿಕಾರಗಳು ಜಂಟಿ ಸಮರಾಭ್ಯಾಸ ನಡೆಸಲು ಒಗ್ಗೂಡಬೇಕು. ಸ್ನೇಹಿತರೇ, ಭಾರತ ಮತ್ತು ಇಂಡೋನೇಷ್ಯಾ ನಡುವಿನ ಸಂಬಂಧವು ಸಾವಿರಾರು ವರ್ಷಗಳಷ್ಟು ಹಳೆಯದು. ರಾಮಾಯಣ ಮತ್ತು ಮಹಾಭಾರತದಿಂದ ಸ್ಫೂರ್ತಿ ಪಡೆದ ಕಥೆಗಳು ಮತ್ತು ‘ಬಲಿ ಜಾತ್ರೆ’ ನಮ್ಮ ಎರಡು ಮಹಾನ್ ರಾಷ್ಟ್ರಗಳ ನಡುವಿನ ಹಳೆಯ ಸಾಂಸ್ಕೃತಿಕ ಮತ್ತು ಐತಿಹಾಸಿಕ ಸಂಬಂಧಗಳಿಗೆ ಜೀವಂತ ಸಾಕ್ಷಿಗಳಾಗಿವೆ. ಬೌದ್ಧ ಬೊರೊಬುದೂರ್ ದೇವಾಲಯದ ನಂತರ, ಭಾರತವು ಈಗ ಪ್ರಂಬನನ್ ಹಿಂದೂ ದೇವಾಲಯದ ಸಂರಕ್ಷಣಾ ಪ್ರಯತ್ನಗಳಿಗೆ ಕೊಡುಗೆ ನೀಡಲಿದೆ ಎಂಬುದು ನನಗೆ ತುಂಬಾ ಸಂತೋಷದ ಸಂಗತಿಯಾಗಿದೆ. …
Read More »15ನೇ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಪಾಲ್ಗೊಂಡ ರಾಷ್ಟ್ರಪತಿ
ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (ಜನವರಿ 25, 2025) ಹೊಸದಿಲ್ಲಿಯಲ್ಲಿ ನಡೆದ 15 ನೇ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಪಾಲ್ಗೊಂಡು ಭಾಷಣ ಮಾಡಿದರು. ಈ ಸಂದರ್ಭದಲ್ಲಿ ರಾಷ್ಟ್ರಪತಿಗಳು ಚುನಾವಣೆಗಳನ್ನು ಸುಗಮವಾಗಿ ನಡೆಸುವಲ್ಲಿ ಅನುಕರಣೀಯ ಕಾರ್ಯಕ್ಷಮತೆಯನ್ನು ಪ್ರದರ್ಶಿಸಿದ ರಾಜ್ಯ ಮತ್ತು ಜಿಲ್ಲಾ ಅಧಿಕಾರಿಗಳಿಗೆ ಅತ್ಯುತ್ತಮ ಚುನಾವಣಾ ಅಭ್ಯಾಸ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಮುಖ್ಯ ಚುನಾವಣಾ ಆಯುಕ್ತ ಶ್ರೀ ರಾಜೀವ್ ಕುಮಾರ್ ಅವರಿಂದ “ಇಂಡಿಯಾ ವೋಟ್ಸ್ 2024: ಎ ಸಾಗಾ ಆಫ್ ಡೆಮಾಕ್ರಸಿ” ಪುಸ್ತಕದ ಮೊದಲ ಪ್ರತಿಯನ್ನು ಅವರು ಸ್ವೀಕರಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರಪತಿಗಳು, ನಮ್ಮ ಪ್ರಜಾಪ್ರಭುತ್ವವು ವಿಶ್ವದ ಅತ್ಯಂತ ಹಳೆಯ ಪ್ರಜಾಪ್ರಭುತ್ವ ಮಾತ್ರವಲ್ಲ, ವಿಶ್ವದ ಅತಿದೊಡ್ಡ, ವೈವಿಧ್ಯಮಯ, ಯುವ, ಅಂತರ್ಗತ ಮತ್ತು ಸೂಕ್ಷ್ಮ ಪ್ರಜಾಪ್ರಭುತ್ವವಾಗಿದೆ ಎಂಬುದು ನಮಗೆಲ್ಲರಿಗೂ ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು. ಭಾರತದ ಪ್ರಜಾಪ್ರಭುತ್ವವು ಆಧುನಿಕ ಜಗತ್ತಿಗೆ ವಿಶಿಷ್ಟ ಉದಾಹರಣೆಯಾಗಿದೆ. ವಿಶ್ವದ ಅನೇಕ ದೇಶಗಳು ನಮ್ಮ ಚುನಾವಣಾ ವ್ಯವಸ್ಥೆ ಮತ್ತು ನಿರ್ವಹಣೆಯಿಂದ ಕಲಿಯುತ್ತಿವೆ ಎಂದು ಅವರು ಹೇಳಿದರು. ನಮ್ಮ ಅಂತರ್ಗತ ಪ್ರಜಾಪ್ರಭುತ್ವದ ಪ್ರಭಾವಶಾಲಿ ನೋಟವು ಚುನಾವಣೆಗಳಲ್ಲಿ ಗೋಚರಿಸುತ್ತದೆ ಎಂದು ರಾಷ್ಟ್ರಪತಿ ಹೇಳಿದರು. ಚುನಾವಣೆಗಳಲ್ಲಿ ಹೆಚ್ಚುತ್ತಿರುವ ಮಹಿಳೆಯರ ಭಾಗವಹಿಸುವಿಕೆಯು ನಮ್ಮ ಸಮಾಜ ಮತ್ತು ದೇಶದ ಒಟ್ಟಾರೆ ಅಭಿವೃದ್ಧಿಯ ಪ್ರಮುಖ ಸಂಕೇತವಾಗಿದೆ. 85 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ಮತದಾರರು, ವಿಕಲಚೇತನ ಮತದಾರರು ಮತ್ತು ದೂರದ ಪ್ರದೇಶಗಳಲ್ಲಿ ವಾಸಿಸುವ ಬುಡಕಟ್ಟು ಮತದಾರರಿಗೆ ಮತದಾನ ಪ್ರಕ್ರಿಯೆಯನ್ನು ಸುಗಮಗೊಳಿಸಲು ಚುನಾವಣಾ ಆಯೋಗ ವಿಶೇಷ ಪ್ರಯತ್ನಗಳನ್ನು ಮಾಡಿದೆ ಎಂಬುದರತ್ತ ಅವರು ಗಮನ ಸೆಳೆದರು. ಈ ರೀತಿಯಾಗಿ, ಚುನಾವಣಾ ಆಯೋಗವು ಅಂತರ್ಗತ ಮತ್ತು ಸೂಕ್ಷ್ಮ ಚುನಾವಣಾ ನಿರ್ವಹಣೆಗೆ ಉತ್ತಮ ಉದಾಹರಣೆಯನ್ನು ನೀಡಿದೆ ಎಂದೂ ಅವರು ಹೇಳಿದರು. ಮತದಾನಕ್ಕೆ ಸಂಬಂಧಿಸಿದ ಆದರ್ಶಗಳು ಮತ್ತು ಜವಾಬ್ದಾರಿಗಳು ನಮ್ಮ ಪ್ರಜಾಪ್ರಭುತ್ವದ ಪ್ರಮುಖ ಆಯಾಮಗಳಾಗಿವೆ ಎಂದು ರಾಷ್ಟ್ರಪತಿ ಹೇಳಿದರು. ಚುನಾವಣಾ ಆಯೋಗ ಹೊರಡಿಸಿದ ಮತದಾರರ ಪ್ರತಿಜ್ಞೆ ಎಲ್ಲಾ ನಾಗರಿಕರಿಗೆ ಮಾರ್ಗದರ್ಶನ ನೀಡುತ್ತದೆ. ಪ್ರಜಾಪ್ರಭುತ್ವದಲ್ಲಿ ಸಂಪೂರ್ಣ ನಂಬಿಕೆಯ ಜೊತೆಗೆ, ಮತದಾರರು ಎಲ್ಲಾ ರೀತಿಯ ಸಂಕುಚಿತ ಮನೋಭಾವ, ತಾರತಮ್ಯ ಮತ್ತು ಪ್ರಲೋಭನೆಗಳನ್ನು ಮೀರಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸುವ ದೃಢ ಸಂಕಲ್ಪವನ್ನು ಹೊಂದಿರಬೇಕು ಎಂದು ಅವರು ಹೇಳಿದರು. ಪ್ರಬುದ್ಧ ಮತದಾರರು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತಾರೆ ಎಂದು ಅವರು ನುಡಿದರು. 2011 ರಿಂದ, ಭಾರತದ ಚುನಾವಣಾ ಆಯೋಗದ ಸಂಸ್ಥಾಪನಾ ದಿನದ ನೆನಪಿಗಾಗಿ ಪ್ರತಿವರ್ಷ ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ. ಈ ಕಾರ್ಯಕ್ರಮವು ಮತದಾರರ ಕೇಂದ್ರೀಕರಣವನ್ನು ಒತ್ತಿಹೇಳುವುದು, ನಾಗರಿಕರಲ್ಲಿ ಚುನಾವಣಾ ಜಾಗೃತಿಯನ್ನು ಹೆಚ್ಚಿಸುವುದು ಮತ್ತು ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಅವರ ಸಕ್ರಿಯ ಭಾಗವಹಿಸುವಿಕೆಯನ್ನು ಪ್ರೇರೇಪಿಸುವ ಗುರಿಯನ್ನು ಹೊಂದಿದೆ.
Read More »2025ರ ಗಣರಾಜ್ಯೋತ್ಸವದ ಮುನ್ನಾದಿನದಂದು ರಾಷ್ಟ್ರವನ್ನುದ್ದೇಶಿಸಿ ಭಾರತದ ಘನತೆವೆತ್ತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರ ಭಾಷಣ
ನನ್ನ ಪ್ರೀತಿಯ ದೇಶವಾಸಿಗಳೇ, ನಮಸ್ಕಾರ! ಈ ಐತಿಹಾಸಿಕ ಸಂದರ್ಭದಲ್ಲಿ ನಿಮ್ಮನ್ನು ಉದ್ದೇಶಿಸಿ ಮಾತನಾಡಲು ನನಗೆ ಸಂತೋಷವಾಗಿದೆ. ಗಣರಾಜ್ಯೋತ್ಸವದ ಮುನ್ನಾದಿನದಂದು, ನಾನು ನಿಮಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ! 75 ವರ್ಷಗಳ ಹಿಂದೆ ಇದೇ ಜನವರಿ 26ರಂದು ನಮ್ಮ ಸಂಸ್ಥಾಪಕ ದಾಖಲೆಯಾದ ಭಾರತದ ಸಂವಿಧಾನ ಜಾರಿಗೆ ಬಂದಿತು. ಸಂವಿಧಾನ ರಚನಾ ಸಭೆಯು ಸುಮಾರು ಮೂರು ವರ್ಷಗಳ ಚರ್ಚೆಯ ನಂತರ, 1949ರ ನವೆಂಬರ್ 26ರಂದು ಸಂವಿಧಾನವನ್ನು ಅಂಗೀಕರಿಸಿತು. ಆ ದಿನವನ್ನು, ಅಂದರೆ, ನವೆಂಬರ್ …
Read More »
Matribhumi Samachar Kannad