Monday, December 15 2025 | 02:12:22 PM
Breaking News

Matribhumi Samachar

ಗುಜರಾತಿನ ವಡ್ ನಗರದ ಭವ್ಯ ಇತಿಹಾಸ 2500 ವರ್ಷಗಳಷ್ಟು ಹಳೆಯದು: ಪ್ರಧಾನಮಂತ್ರಿ

“ಗುಜರಾತಿನ ವಡ್ ನಗರದ ಭವ್ಯ ಇತಿಹಾಸವು 2500 ವರ್ಷಗಳಿಗಿಂತಲೂ ಹಳೆಯದಾಗಿದೆ ಮತ್ತು ಅದನ್ನು ಉಳಿಸಲು ಮತ್ತು ಸಂರಕ್ಷಿಸಲು ಅನನ್ಯ ಪ್ರಯತ್ನಗಳನ್ನು ತೆಗೆದುಕೊಳ್ಳಲಾಗಿದೆ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೇಳಿದರು. “ಎಕ್ಸ್” ತಾಣದ ಸಂದೇಶದಲ್ಲಿ, ಅವರು  ಹೀಗೆ ಹೇಳಿದ್ದಾರೆ; “गुजरात के वडनगर का गौरवशाली इतिहास 2500 साल से भी पुराना है। इसे संजोने और संरक्षित करने के लिए यहां …

Read More »

ತಿರು ಎಂ. ಜಿ. ರಾಮಚಂದ್ರನ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಿರು ಎಂ ಜಿ ರಾಮಚಂದ್ರನ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದರು. “ಬಡವರನ್ನು ಸಬಲೀಕರಣಗೊಳಿಸಲು ಮತ್ತು ಉತ್ತಮ ಸಮಾಜವನ್ನು ನಿರ್ಮಿಸಲು ಅವರು ಮಾಡಿದ ಪ್ರಯತ್ನಗಳಿಂದ ನಾವು ಬಹಳ ಪ್ರೇರಿತರಾಗಿದ್ದೇವೆ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಪ್ರಧಾನಮಂತ್ರಿ ಅವರು “ಎಕ್ಸ್” ತಾಣದಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದ್ದಾರೆ: “ತಿರು ಎಂ.ಜಿ.ಆರ್. ಅವರ ಜನ್ಮ ವಾರ್ಷಿಕೋತ್ಸವದಂದು ನಾನು …

Read More »

“ಮೂರನೇ ಉಡಾವಣಾ ಪ್ಯಾಡ್” ಸ್ಥಾಪನೆಗೆ ಸಂಪುಟದ ಅನುಮೋದನೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಇಸ್ರೋದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಮೂರನೇ ಉಡಾವಣಾ ಪ್ಯಾಡ್ (ಟಿ ಎಲ್ ಪಿ) ಸ್ಥಾಪನೆಗೆ ತನ್ನ ಅನುಮೋದನೆ ನೀಡಿದೆ. ಮೂರನೇ ಉಡಾವಣಾ ಪ್ಯಾಡ್ ಯೋಜನೆಯು ಇಸ್ರೋದ ಮುಂದಿನ ಪೀಳಿಗೆಯ ಉಡಾವಣಾ ವಾಹನಗಳಿಗಾಗಿ ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿ ಉಡಾವಣಾ ಮೂಲಸೌಕರ್ಯವನ್ನು ಸ್ಥಾಪಿಸಲು ಮತ್ತು ಶ್ರೀಹರಿಕೋಟಾದಲ್ಲಿ ಎರಡನೇ ಉಡಾವಣಾ ಪ್ಯಾಡ್ ಗೆ  ಸ್ಟ್ಯಾಂಡ್ ಬೈ …

Read More »

ಕಳೆದ ಒಂಬತ್ತು ವರ್ಷಗಳಲ್ಲಿ, ಸ್ಟಾರ್ಟ್ಅಪ್ ಇಂಡಿಯಾದ ಪರಿವರ್ತನಾ ಕಾರ್ಯಕ್ರಮವು ಅಸಂಖ್ಯಾತ ಯುವಕರನ್ನು ಸಬಲೀಕರಣಗೊಳಿಸಿದೆ, ಅವರ ನವೀನ ಆಲೋಚನೆಗಳನ್ನು ಯಶಸ್ವಿ ಸ್ಟಾರ್ಟ್ ಅಪ್ ಗಳಾಗಿ ಪರಿವರ್ತಿಸಿದೆ: ಪ್ರಧಾನಮಂತ್ರಿ

“ಸ್ಟಾರ್ಟ್ ಅಪ್ ಇಂಡಿಯಾದ ಈ ಯಶಸ್ಸು ಇಂದು ಒಂಬತ್ತು ವರ್ಷಗಳ ಸಂತಸವನ್ನು ಆಚರಿಸುತ್ತಿದೆ. ಕಳೆದ ಒಂಬತ್ತು ವರ್ಷಗಳಲ್ಲಿ, ಈ ಪರಿವರ್ತನಾ ಕಾರ್ಯಕ್ರಮವು ಅಸಂಖ್ಯಾತ ಯುವಕರನ್ನು ಸಬಲೀಕರಣಗೊಳಿಸಿದೆ. ಅವರ ನವೀನ ಹಾಗೂ ವೈವಿದ್ಯಮಯ ಆಲೋಚನೆಗಳನ್ನು ಯಶಸ್ವಿ ಸ್ಟಾರ್ಟ್ ಅಪ್ ಗಳಾಗಿ ಪರಿವರ್ತಿಸಿದೆ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು. “ಸರ್ಕಾರದ ಮಟ್ಟಿಗೆ ಹೇಳುವುದಾದರೆ, ಸ್ಟಾರ್ಟ್ ಅಪ್ ಸಂಸ್ಕೃತಿಯನ್ನು ಪ್ರೋತ್ಸಾಹಿಸಲು ನಾವು ಯಾವುದೇ ಅವಕಾಶವನ್ನು ಬಿಟ್ಟುಕೊಟ್ಟಿಲ್ಲ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ …

Read More »

ಸೂಕ್ತ ಸಮಯದಲ್ಲಿ ರೈತರ ಸಮಸ್ಯೆಗಳಿಗೆ ಅಗತ್ಯವಾಗಿ ಪರಿಹಾರ ಕಂಡುಕೊಳ್ಳಬೇಕಾಗಿದ್ದು, ರೈತರ ಕಾಳಜಿಯನ್ನು ಹಿಂದೆ ಸರಿಸಲು ಸಾಧ್ಯವಿಲ್ಲ – ಉಪರಾಷ್ಟ್ರಪತಿ

ರೈತರ ಸಮಸ್ಯೆಗಳಿಗೆ ಸಮಯೋಚಿತ ಪರಿಹಾರದ ಅಗತ್ಯವಿದ್ದು, ರೈತರ ಕಾಳಜಿಯನ್ನು ಹಿಂದೆ ಸರಿಸಲು ಸಾಧ್ಯವಿಲ್ಲ ಎಂದು ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್  ಒತ್ತಿ ಹೇಳಿದ್ದಾರೆ ಧಾರವಾಡದಲ್ಲಿಂದು ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಕೃಷಿ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಭೆ ಹಾಗೂ ಅಮೃತ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ಜಗದೀಪ್ ಧನ್ ಕರ್ ಅವರು. ರೈತರ ಸಂಕಷ್ಟಗಳು ತುರ್ತಾಗಿ ದೇಶದ ಗಮನಕ್ಕೆ ಬರಬೇಕು.  ರೈತರಿಗೆ ಆರ್ಥಿಕ ಭದ್ರತೆ ಅಗತ್ಯವಾಗಿದೆ. ಸಮಸ್ಯೆಗಳು ಏರುತ್ತಿದೆ ಮತ್ತು ಏರಿಕೆಯನ್ನು ತಡೆಯಲಾಗದು …

Read More »

ಮುಂಬೈ, ಚೆನ್ನೈ, ಕೋಲ್ಕತ್ತಾ, ಬೆಂಗಳೂರು, ಹೈದರಾಬಾದ್, ಕೊಚ್ಚಿನ್ ಮತ್ತು ಅಹಮದಾಬಾದ್ ವಿಮಾನ ನಿಲ್ದಾಣಗಳಲ್ಲಿ ‘ಫಾಸ್ಟ್ ಟ್ರ್ಯಾಕ್ ಇಮಿಗ್ರೇಷನ್-ಟ್ರಸ್ಟೆಡ್ ಟ್ರಾವೆಲರ್ ಪ್ರೋಗ್ರಾಂ’ (ಎಫ್‌ ಟಿ ಐ-ಟಿಟಿಪಿ) ಅನ್ನು ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ನಾಳೆ ಅಹಮದಾಬಾದ್‌ ನಲ್ಲಿ ಉದ್ಘಾಟಿಸಲಿದ್ದಾರೆ

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಮುಂಬೈ, ಚೆನ್ನೈ, ಕೋಲ್ಕತ್ತಾ, ಬೆಂಗಳೂರು, ಹೈದರಾಬಾದ್, ಕೊಚ್ಚಿನ್ ಮತ್ತು ಅಹಮದಾಬಾದ್ ವಿಮಾನ ನಿಲ್ದಾಣಗಳಲ್ಲಿ ‘ಫಾಸ್ಟ್ ಟ್ರ್ಯಾಕ್ ಇಮಿಗ್ರೇಷನ್ – ಟ್ರಸ್ಟೆಡ್ ಟ್ರಾವೆಲರ್ ಪ್ರೋಗ್ರಾಂʼ (ಎಫ್‌ ಟಿ ಐ-ಟಿ ಟಿ ಪಿ) ಅನ್ನು 16 ಜನವರಿ 2025 ರಂದು ಅಹಮದಾಬಾದ್‌ ನಿಂದ ಉದ್ಘಾಟಿಸಲಿದ್ದಾರೆ. ಗೃಹ ಸಚಿವರು ಈ ಹಿಂದೆ ಜೂನ್ 22, 2024 ರಂದು ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ …

Read More »

ಸೇನಾ ದಿನದಂದು ಭಾರತೀಯ ಸೇನೆಯ ಅಚಲ ಧೈರ್ಯಕ್ಕೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ

ಸೇನಾ ದಿನವಾದ ಇಂದು ಭಾರತೀಯ ಸೇನೆಯ ಅಚಲ ಧೈರ್ಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದ್ದಾರೆ. “ಭಾರತೀಯ ಸೇನೆಯು ದೃಢನಿಶ್ಚಯ, ವೃತ್ತಿಪರತೆ ಮತ್ತು ಸಮರ್ಪಣೆಯನ್ನು ಪ್ರತಿನಿಧಿಸುತ್ತದೆ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು. “ನಮ್ಮ ಸರ್ಕಾರವು ಸಶಸ್ತ್ರ ಪಡೆಗಳು ಮತ್ತು ಅವರ ಕುಟುಂಬಗಳ ಕಲ್ಯಾಣಕ್ಕೆ ಬದ್ಧವಾಗಿದೆ. ಕಳೆದ ಹಲವಾರು ವರ್ಷಗಳಲ್ಲಿ, ನಾವು ಹಲವಾರು ಸುಧಾರಣೆಗಳನ್ನು ಪರಿಚಯಿಸಿದ್ದೇವೆ ಮತ್ತು ಆಧುನೀಕರಣದ ಮೇಲೆ ಕೇಂದ್ರೀಕರಿಸಿದ್ದೇವೆ” ಎಂದು ಪ್ರಧಾನಮಂತ್ರಿ ಶ್ರೀ …

Read More »

ತಿರುವಳ್ಳುವರ್ ದಿನದಂದು, ನಮ್ಮ ನಾಡಿನ ಶ್ರೇಷ್ಠ ತತ್ವಜ್ಞಾನಿಗಳು, ಕವಿಗಳು ಮತ್ತು ಚಿಂತಕರಲ್ಲಿ ಒಬ್ಬರಾದ ಧೀಮಂತ ತಿರುವಳ್ಳುವರ್ ಅವರನ್ನು ನಾವು ಸ್ಮರಿಸುತ್ತೇವೆ: ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಿರುವಳ್ಳುವರ್ ದಿನದಂದು ತಮಿಳಿನ ಮಹಾನ್ ತತ್ವಜ್ಞಾನಿ, ಕವಿ ಮತ್ತು ಚಿಂತಕರಾದ ತಿರುವಳ್ಳುವರ್ ಅವರನ್ನು ಸ್ಮರಿಸಿದ್ದಾರೆ. ಧೀಮಂತ ತಿರುವಳ್ಳವರ್ ಅವರ ವಚನ/ಪದ್ಯಗಳು ತಮಿಳು ಸಂಸ್ಕೃತಿಯ ಸಾರ ಮತ್ತು ನಮ್ಮ ತಾತ್ವಿಕ ಪರಂಪರೆಯನ್ನು ಪ್ರತಿಬಿಂಬಿಸುತ್ತವೆ ಎಂದು ಪ್ರಧಾನಮಂತ್ರಿ ಶ್ರೀ ಮೋದಿ ಅವರು ಬಣ್ಣಿಸಿದ್ದಾರೆ. “ವೈವಿಧ್ಯಮಯ ವಿಷಯಗಳ ಬಗ್ಗೆ ಆಳವಾದ ಒಳನೋಟ ನೀಡುವ ಅವರ ಸಮಯಾತೀತವಾದ ಕೃತಿ, ತಿರುಕ್ಕುರಲ್, ಸ್ಪೂರ್ತಿಯ ಸೆಲೆಯಾಗಿದೆ, ” ಎಂದು ಶ್ರೀ …

Read More »

ಮುಂಚೂಣಿ ಯುದ್ಧ ನೌಕೆಗಳಾದ ಐ ಎನ್ ಎಸ್ ಸೂರತ್, ಐ ಎನ್ ಎಸ್ ನೀಲಗಿರಿ ಮತ್ತು ಐ ಎನ್ ಎಸ್ ವಘ್ ಶೀರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಬೈಯ ನೌಕಾ ಹಡಗುಕಟ್ಟೆಯಲ್ಲಿ ಮೂರು ಮುಂಚೂಣಿ ನೌಕಾ ಯುದ್ಧ ನೌಕೆಗಳಾದ ಐಎನ್ಎಸ್ ಸೂರತ್, ಐಎನ್ಎಸ್ ನೀಲಗಿರಿ ಮತ್ತು ಐಎನ್ಎಸ್ ವಘ್ ಶೀರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಬಳಿಕ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಜನವರಿ 15 ಅನ್ನು ಸೇನಾ ದಿನವಾಗಿ ಆಚರಿಸಲಾಗುತ್ತದೆ ಮತ್ತು ರಾಷ್ಟ್ರದ ಸುರಕ್ಷತೆ ಹಾಗು ಭದ್ರತೆಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡುವ ಪ್ರತಿಯೊಬ್ಬ ಧೈರ್ಯಶಾಲಿ ಯೋಧನಿಗೆ ನಮಸ್ಕರಿಸುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅವರು ಎಲ್ಲ ವೀರ ಯೋಧರನ್ನು ಅಭಿನಂದಿಸಿದರು. ಇಂದು ಭಾರತದ ಕಡಲ ಪರಂಪರೆ, ನೌಕಾಪಡೆಯ ಭವ್ಯ ಇತಿಹಾಸ ಮತ್ತು ಆತ್ಮನಿರ್ಭರ ಭಾರತ ಅಭಿಯಾನಕ್ಕೆ ದೊಡ್ಡ ದಿನವಾಗಿದೆ ಎಂದು ಹೇಳಿದ ಪ್ರಧಾನಮಂತ್ರಿ, ಛತ್ರಪತಿ ಶಿವಾಜಿ ಮಹಾರಾಜ್ ಅವರು ಭಾರತದ ನೌಕಾಪಡೆಗೆ ಹೊಸ ಶಕ್ತಿ ಮತ್ತು ದೂರದೃಷ್ಟಿಯನ್ನು ನೀಡಿದರು ಎಂದರು. ಶಿವಾಜಿ ಮಹಾರಾಜರ ಭೂಮಿಯಲ್ಲಿ 21ನೇ ಶತಮಾನದ ಭಾರತದ ನೌಕಾಪಡೆಯನ್ನು ಸಶಕ್ತಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಇಂದು ಪ್ರಮುಖ ಹೆಜ್ಜೆ ಇಟ್ಟಿದೆ ಎಂದರು. “ಇದೇ ಮೊದಲ ಬಾರಿಗೆ ವಿಧ್ವಂಸಕ ನೌಕೆ, ಯುದ್ಧನೌಕೆ ಮತ್ತು ಜಲಾಂತರ್ಗಾಮಿ ನೌಕೆಯ ತ್ರಿ-ಕಾರ್ಯಾರಂಭ ಮಾಡಲಾಗುತ್ತಿದೆ” ಎಂದು ಪ್ರಧಾನಿ ಒತ್ತಿ ಹೇಳಿದರು. ಎಲ್ಲಾ ಮೂರು ಮುಂಚೂಣಿ ನೌಕೆಗಳನ್ನು ಭಾರತದಲ್ಲಿ ತಯಾರಿಸಲಾಗಿದೆ ಎಂಬುದು ಹೆಮ್ಮೆಯ ವಿಷಯವಾಗಿದೆ ಎಂದು ಅವರು ಒತ್ತಿ ಹೇಳಿದರು. ಈ ಸಾಧನೆಗಾಗಿ ಅವರು ಭಾರತೀಯ ನೌಕಾಪಡೆ, ನಿರ್ಮಾಣ ಕಾರ್ಯದಲ್ಲಿ ಭಾಗಿಯಾಗಿರುವ ಎಲ್ಲಾ ಪಾಲುದಾರರು ಮತ್ತು ಭಾರತದ ನಾಗರಿಕರನ್ನು ಅಭಿನಂದಿಸಿದರು. “ಇಂದಿನ ಕಾರ್ಯಕ್ರಮವು ನಮ್ಮ ಭವ್ಯ ಪರಂಪರೆಯನ್ನು ನಮ್ಮ ಭವಿಷ್ಯದ ಆಕಾಂಕ್ಷೆಗಳೊಂದಿಗೆ ಸಂಪರ್ಕಿಸುತ್ತದೆ” ಎಂದು ಶ್ರೀ ಮೋದಿ ಉದ್ಗರಿಸಿದರು. ಭಾರತವು ದೀರ್ಘ ಸಮುದ್ರಯಾನ, ವಾಣಿಜ್ಯ, ನೌಕಾ ರಕ್ಷಣೆ ಮತ್ತು ಹಡಗು ಉದ್ಯಮಕ್ಕೆ ಸಂಬಂಧಿಸಿದ ಶ್ರೀಮಂತ ಇತಿಹಾಸವನ್ನು ಹೊಂದಿದೆ ಎಂದು ಅವರು ಹೇಳಿದರು. ಈ ಶ್ರೀಮಂತ ಇತಿಹಾಸವನ್ನು ಉಲ್ಲೇಖಿಸಿದ  ಅವರು, ಇಂದಿನ ಭಾರತವು ವಿಶ್ವದ ಪ್ರಮುಖ ಕಡಲ ಶಕ್ತಿಯಾಗಿ ಹೊರಹೊಮ್ಮುತ್ತಿದೆ ಎಂದರು. ಇಂದು ಕಾರ್ಯಾರಂಭ ಮಾಡಲಾದ ನೌಕೆಗಳು ಅದರ ಒಂದು ನೋಟವನ್ನು ಪ್ರದರ್ಶಿಸಿವೆ ಎಂದೂ ಅವರು ಹೇಳಿದರು. ಚೋಳ ರಾಜವಂಶದ ಕಡಲ ಪರಾಕ್ರಮಕ್ಕೆ ಸಮರ್ಪಿತವಾದ ಐಎನ್ ಎಸ್ ನೀಲಗಿರಿ ಮತ್ತು ಸೂರತ್ ಯುದ್ಧನೌಕೆ ಸೇರಿದಂತೆ ಹೊಸ ನೌಕೆಗಳ ಆರಂಭವನ್ನು ಪ್ರಧಾನಿ ಉಲ್ಲೇಖಿಸಿದರು, ಇದು ಗುಜರಾತ್ ನ ಬಂದರುಗಳು ಭಾರತವನ್ನು ಪಶ್ಚಿಮ ಏಷ್ಯಾದೊಂದಿಗೆ ಸಂಪರ್ಕಿಸಿದ ಯುಗವನ್ನು ನೆನಪಿಸುತ್ತದೆ. ಕೆಲವು ವರ್ಷಗಳ ಹಿಂದೆ ಮೊದಲ ಜಲಾಂತರ್ಗಾಮಿ ನೌಕೆ ಕಲ್ವರಿಯನ್ನು ನಿಯೋಜಿಸಿದ ನಂತರ ಪಿ 75 ವರ್ಗದಲ್ಲಿ ಆರನೇ ವಗ್ಶೀರ್ ಜಲಾಂತರ್ಗಾಮಿ ನೌಕೆಯನ್ನು ನಿಯೋಜಿಸಿದ್ದನ್ನು ಅವರು ಉಲ್ಲೇಖಿಸಿದರು. ಈ ಹೊಸ ಗಡಿನಾಡಿನ ರಕ್ಷಣಾ ವೇದಿಕೆಗಳು ಭಾರತದ ಭದ್ರತೆ ಮತ್ತು ಪ್ರಗತಿ ಎರಡನ್ನೂ ಹೆಚ್ಚಿಸುತ್ತವೆ ಎಂದು ಪ್ರಧಾನಿ ವಿವರಿಸಿದರು. “ಭಾರತವು ಇಂದು ಜಾಗತಿಕವಾಗಿ, ವಿಶೇಷವಾಗಿ ಜಾಗತಿಕ ದಕ್ಷಿಣದಲ್ಲಿ ವಿಶ್ವಾಸಾರ್ಹ ಮತ್ತು ಜವಾಬ್ದಾರಿಯುತ ಪಾಲುದಾರನಾಗಿ ಗುರುತಿಸಲ್ಪಟ್ಟಿದೆ” ಎಂದು ಪ್ರಧಾನಿ ಉದ್ಗರಿಸಿದರು. ಭಾರತವು ಅಭಿವೃದ್ಧಿಯ ಮನೋಭಾವದಿಂದ ಕಾರ್ಯನಿರ್ವಹಿಸುತ್ತದೆಯೇ ಹೊರತು ವಿಸ್ತರಣಾವಾದದಿಂದಲ್ಲ ಎಂದು ಅವರು ಒತ್ತಿ ಹೇಳಿದರು. ಮುಕ್ತ, ಸುರಕ್ಷಿತ, ಅಂತರ್ಗತ ಮತ್ತು ಸಮೃದ್ಧ ಇಂಡೋ-ಪೆಸಿಫಿಕ್ ಪ್ರದೇಶವನ್ನು ಭಾರತ ಸದಾ ಬೆಂಬಲಿಸುತ್ತದೆ ಎಂದು ಅವರು ಹೇಳಿದರು. ಕರಾವಳಿ ರಾಷ್ಟ್ರಗಳ ಅಭಿವೃದ್ಧಿಯ ವಿಷಯಕ್ಕೆ ಬಂದಾಗ, ಭಾರತವು ಸಾಗರ್ (ಈ ಪ್ರದೇಶದ ಎಲ್ಲರಿಗೂ ಭದ್ರತೆ ಮತ್ತು ಬೆಳವಣಿಗೆ) ಮಂತ್ರವನ್ನು ಪರಿಚಯಿಸಿತು ಮತ್ತು ಈ ದೃಷ್ಟಿಕೋನದೊಂದಿಗೆ ಮುಂದುವರಿಯಿತು ಎಂಬುದರತ್ತ  ಅವರು ಬೆಟ್ಟು ಮಾಡಿದರು. “ಒಂದು ಭೂಮಿ, …

Read More »

ಕರ್ನಾಟಕಕ್ಕೆ 2025ರ ಜನವರಿ 16 ರಂದು ಉಪರಾಷ್ಟ್ರಪತಿ ಭೇಟಿ

ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು 2025ರ ಜನವರಿ 16 ರಂದು ಕರ್ನಾಟಕಕ್ಕೆ ಒಂದು ದಿನದ ಭೇಟಿ ನೀಡಲಿದ್ದಾರೆ. ಭೇಟಿಯ ವೇಳೆ ಉಪರಾಷ್ಟ್ರಪತಿ ಅವರು ಕರ್ನಾಟಕದ ಧಾರವಾಡದಲ್ಲಿರುವ ಕೃಷಿ ಕಾಲೇಜಿನ ಅಮೃತ ಮಹೋತ್ಸವ ಮತ್ತು ಹಳೆಯ ವಿದ್ಯಾರ್ಥಿಗಳ ಸಮ್ಮಿಲನ ಸಭೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಉಪರಾಷ್ಟ್ರಪತಿಗಳು ಭೇಟಿಯ ಸಂದರ್ಭದಲ್ಲಿ ಕರ್ನಾಟಕದ ಹುಬ್ಬಳ್ಳಿಯ ವರೂರಿನಲ್ಲಿರುವ ಶ್ರೀ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಸುಮೇರು ಪರ್ವತವನ್ನು ಉದ್ಘಾಟಿಸಲಿದ್ದಾರೆ.   भारत : 1885 …

Read More »