ಮಲಯಾಳಂ ಚಿತ್ರರಂಗ ಮತ್ತು ಸಾಹಿತ್ಯದಲ್ಲಿ ಅತ್ಯಂತ ಗೌರವಾನ್ವಿತ ವ್ಯಕ್ತಿಗಳಲ್ಲಿ ಒಬ್ಬರಾದ ಶ್ರೀ ಎಂ.ಟಿ.ವಾಸುದೇವನ್ ನಾಯರ್ ಜಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಮಾನವ ಭಾವನೆಗಳ ಆಳವಾದ ಅನ್ವೇಷಣೆಯೊಂದಿಗೆ ಶ್ರೀ ಎಂ.ಟಿ.ವಾಸುದೇವನ್ ನಾಯರ್ ಜಿ ಅವರ ಕೃತಿಗಳು ಹಲವು ಪೀಳಿಗೆಗಳನ್ನು ರೂಪಿಸಿವೆ ಮತ್ತು ಇನ್ನೂ ಅನೇಕರಿಗೆ ಸ್ಫೂರ್ತಿ ನೀಡುವುದನ್ನು ಮುಂದುವರಿಸುತ್ತಿವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು. ಪ್ರಧಾನಮಂತ್ರಿ ಅವರು ತಮ್ಮ X …
Read More »ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ನಡೆದ ವೀರ್ ಬಾಲ್ ದಿವಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡರು
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಆಯೋಜಿಸಲಾಗಿದ್ದ ವೀರ ಬಾಲ ದಿವಸ್ ಕಾರ್ಯಕ್ರಮಲ್ಲಿ ಪಾಲ್ಗೊಂಡರು. 3ನೇ ವೀರ್ ಬಾಲ್ ದಿವಸ್ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಸಾಹಿಬ್ ಜಾದೆಗಳ ಸಾಟಿಯಿಲ್ಲದ ಶೌರ್ಯ ಮತ್ತು ತ್ಯಾಗದ ನೆನಪಿಗಾಗಿ ತಮ್ಮ ಸರ್ಕಾರ ವೀರ್ ಬಾಲ್ ದಿವಸ್ ಆರಂಭಿಸಿದೆ ಎಂದರು. ಈ ದಿನವು ಈಗ ಕೋಟ್ಯಂತರ ಭಾರತೀಯರಿಗೆ ರಾಷ್ಟ್ರೀಯ ಸ್ಫೂರ್ತಿಯ ಹಬ್ಬವಾಗಿದೆ ಎಂದು ಅವರು ಹೇಳಿದರು. ಈ ದಿನವು …
Read More »2024ರ ಡಿಸೆಂಬರ್ 27 ರಂದು ಉಪರಾಷ್ಟ್ರಪತಿ ಜಮ್ಮು (ಜಮ್ಮು ಮತ್ತು ಕಾಶ್ಮೀರ) ಭೇಟಿ
ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು 2024ರ ಡಿಸೆಂಬರ್ 27ರಂದು ಜಮ್ಮು (ಜಮ್ಮು ಮತ್ತು ಕಾಶ್ಮೀರ) ವಿಗೆ ಒಂದು ದಿನದ ಭೇಟಿ ನೀಡಲಿದ್ದಾರೆ. ಉಪರಾಷ್ಟ್ರಪತಿ ಅವರು ತಮ್ಮ ಭೇಟಿಯ ವೇಳೆ ಎಸ್ ಎಂವಿಡಿಯು ಕ್ಯಾಂಪಸ್ ನಲ್ಲಿರುವ ಮಾತ್ರಿಕಾ ಸಭಾಂಗಣದಲ್ಲಿ ನಡೆಯಲಿರುವ ಶ್ರೀ ಮಾತಾ ವೈಷ್ಣವೋದೇವಿ ವಿಶ್ವವಿದ್ಯಾಲಯದ 10ನೇ ಘಟಿಕೋತ್ಸವದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಅಲ್ಲದೆ, ಉಪರಾಷ್ಟ್ರಪತಿ ಶ್ರೀ ಮಾತಾ ವೈಷ್ಣವೋದೇವಿ ದೇವಾಲಯ ಮತ್ತು ಭೈರೋನ್ ಬಾಬಾ ಮಂದಿರಕ್ಕೆ ಭೇಟಿ ನೀಡಲಿದ್ದಾರೆ. …
Read More »ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರದಾನ ಮಾಡಿದ ಭಾರತದ ರಾಷ್ಟ್ರಪತಿ
ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ಇಂದು (ಡಿಸೆಂಬರ್ 26, 2024) ನಡೆದ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಅಸಾಧಾರಣ ಹಾಗೂ ವಿಶೇಷ ಸಾಧನೆಗಳಿಗಾಗಿ ಏಳು ವಿಭಾಗಗಳಲ್ಲಿ ಒಟ್ಟು 17 ಮಕ್ಕಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರವನ್ನು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ, ಎಲ್ಲಾ ಪ್ರಶಸ್ತಿ ವಿಜೇತರನ್ನು ರಾಷ್ಟ್ರಪತಿಯವರು ಅಭಿನಂದಿಸಿದರು ಮತ್ತು ಸಾಧಕ ಮಕ್ಕಳ ಕುರಿತಾಗಿ ಸಮಾರಂಭವನ್ನು ಉದ್ದೇಶಿಸಿ ಮಾತನಾಡುತ್ತಾ “ಇಡೀ ದೇಶ ಮತ್ತು ಸಮಾಜವು ಇವರ …
Read More »ಮಾಜಿ ಪ್ರಧಾನಮಂತ್ರಿ ದಿವಂಗತ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಶತಮಾನೋತ್ಸವದ ಅಂಗವಾಗಿ ಅವರ ಸ್ಮೃತಿ ಸ್ಥಳ ‘ಸದೈವ್ ಅಟಲ್’ ನಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಮಾಜಿ ಪ್ರಧಾನಮಂತ್ರಿ ದಿವಂಗತ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವದ ಸಂದರ್ಭದಲ್ಲಿ ಅವರ ಸ್ಮೃತಿ ಸ್ಥಳ ‘ಸದೈವ್ ಅಟಲ್’ ನಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು. ಸಾಮಾಜಿಕ ವೇದಿಕೆ ಎಕ್ಸ್ ನಲ್ಲಿನ ತಮ್ಮ ಖಾತೆಯ ಸರಣಿ ಸಂದೇಶಗಳಲ್ಲಿ, ಶ್ರೀ ಅಮಿತ್ ಶಾ ಅವರು “ಉತ್ತಮ ಆಡಳಿತ ಮತ್ತು ಸಾರ್ವಜನಿಕ ಕಲ್ಯಾಣಕ್ಕಾಗಿ ಅಟಲ್ ಜಿ ಅವರ ಸಮರ್ಪಣೆ ಭವಿಷ್ಯದ …
Read More »ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ನವದೆಹಲಿಯಲ್ಲಿರುವ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿ.ಆರ್..ಪಿ.ಎಫ್.) ಪ್ರಧಾನ ಕಚೇರಿಗೆ ಭೇಟಿ ನೀಡಿದರು
ಕೇಂದ್ರ ಗೃಹ ಸಚಿವರು ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ನವದೆಹಲಿಯಲ್ಲಿರುವ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿ.ಆರ್..ಪಿ.ಎಫ್) ಪ್ರಧಾನ ಕಛೇರಿಗೆ ಭೇಟಿ ನೀಡಿದರು. ಗೃಹ ಸಚಿವರು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿದರು ಮತ್ತು ಸಿಆರ್ಪಿಎಫ್ನ ಕಾರ್ಯಾಚರಣೆಗಳು ಮತ್ತು ಆಡಳಿತಾತ್ಮಕ ದಕ್ಷತೆಯ ಸಮಗ್ರ ಪರಿಶೀಲನೆ ನಡೆಸಿದರು. ಕೇಂದ್ರ ಗೃಹ ಕಾರ್ಯದರ್ಶಿ ಸೇರಿದಂತೆ ಗೃಹ ಸಚಿವಾಲಯದ ಹಲವಾರು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಸಭೆಯಲ್ಲಿ, ಸಿಆರ್ಪಿಎಫ್ನ …
Read More »ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಜನ್ಮ ವಾರ್ಷಿಕೋತ್ಸವದಂದು ಅವರನ್ನು ಸ್ಮರಿಸಿದ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾಮಾನ ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಜನ್ಮದಿನವಾದ ಇಂದು ಅವರನ್ನು ಸ್ಮರಿಸಿಕೊಂಡರು. ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ: “महामना पंडित मदन मोहन मालवीय जी को उनकी जयंती पर कोटि-कोटि नमन। वे एक सक्रिय स्वतंत्रता सेनानी होने के साथ-साथ जीवनपर्यंत भारत में शिक्षा के अग्रदूत बने …
Read More »ಇಂದು, ಅಟಲ್ ಬಿಹಾರಿ ವಾಜಪೇಯಿಯವರ 100ನೇ ಜನ್ಮ ದಿನಾಚರಣೆಯಂದು, ನಮ್ಮ ದೇಶಕ್ಕೆ ಅವರು ನೀಡಿದ ಸ್ಮರಣೀಯ ಕೊಡುಗೆ ಮತ್ತು ಅವರ ಪ್ರಯತ್ನಗಳು ಅನೇಕ ಜನರ ಜೀವನವನ್ನು ಹೇಗೆ ಪರಿವರ್ತಿಸಿವೆ ಎಂಬುದರ ಕುರಿತು ಕೆಲವು ಆಲೋಚನೆಗಳನ್ನು ಬರೆದಿದ್ದೇನೆ: ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿಯವರ 100ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಅವರನ್ನು ಗೌರವಿಸಿ ತಾವು ಬರೆದ ಲೇಖನವನ್ನು ಹಂಚಿಕೊಂಡಿದ್ದಾರೆ. ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ: “ಇಂದು, ಅಟಲ್ ಜಿ ಅವರ 100ನೇ ಜನ್ಮ ದಿನಾಚರಣೆಯಂದು, ನಮ್ಮ ದೇಶಕ್ಕೆ ಅವರು ನೀಡಿದ ಸ್ಮರಣೀಯ ಕೊಡುಗೆ ಮತ್ತು ಅವರ ಪ್ರಯತ್ನಗಳು ಅನೇಕ ಜನರ ಜೀವನವನ್ನು ಹೇಗೆ ಪರಿವರ್ತಿಸಿವೆ ಎಂಬುದರ ಕುರಿತು ಕೆಲವು ಆಲೋಚನೆಗಳನ್ನು ಬರೆದಿದ್ದೇನೆ.” …
Read More »ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ನವದೆಹಲಿಯಲ್ಲಿ ಎನ್ಸಿಆರ್ಬಿಯೊಂದಿಗೆ ಮೂರು ಹೊಸ ಕ್ರಿಮಿನಲ್ ಕಾನೂನುಗಳ ಅನುಷ್ಠಾನದ ಕುರಿತು ಪರಿಶೀಲನಾ ಸಭೆ ನಡೆಸಿದರು
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ನವದೆಹಲಿಯಲ್ಲಿ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಜೊತೆ ಮೂರು ಹೊಸ ಕ್ರಿಮಿನಲ್ ಕಾನೂನುಗಳ ಅನುಷ್ಠಾನದ ಕುರಿತು ಪರಿಶೀಲನಾ ಸಭೆ ನಡೆಯಿತು. ಸಭೆಯು ಅಖಿಲ ಭಾರತ ಮಟ್ಟದಲ್ಲಿ ICJS 2.0 ನೊಂದಿಗೆ CCTNS 2.0, NAFIS, ಜೈಲುಗಳು, ನ್ಯಾಯಾಲಯಗಳು, ಪ್ರಾಸಿಕ್ಯೂಷನ್ ಮತ್ತು ಫೋರೆನ್ಸಿಕ್ಸ್ನ ಏಕೀಕರಣದ ಅನುಷ್ಠಾನದ ಕುರಿತು ಸಮಾಲೋಚನೆ ನಡೆಸಿತು. ಕೇಂದ್ರ ಗೃಹ ಕಾರ್ಯದರ್ಶಿ, ಎನ್ಸಿಆರ್ಬಿ ನಿರ್ದೇಶಕರು …
Read More »ಡಿಸೆಂಬರ್ 25, ಬುಧವಾರದಂದು ನವದೆಹಲಿಯಲ್ಲಿ ನಡೆಯುವ ರಾಷ್ಟ್ರೀಯ ಸಮ್ಮೇಳನದಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು 10000 M-PACS ಗಳು, ಡೈರಿ ಮತ್ತು ಮೀನುಗಾರಿಕಾ ಸಹಕಾರ ಸಂಘಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು 10,000 ಕ್ಕೂ ಹೆಚ್ಚು ಹೊಸದಾಗಿ ಸ್ಥಾಪಿಸಲಾದ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಸಹಕಾರ ಸಂಘಗಳು (M-PACS), ಡೈರಿ ಮತ್ತು ಮೀನುಗಾರಿಕೆ ಸಹಕಾರಿ ಸಂಸ್ಥೆಗಳನ್ನು ಬುಧವಾರ, ಡಿಸೆಂಬರ್ 25 ರಂದು ನವದೆಹಲಿಯ ಪುಸಾದ ICAR ಕನ್ವೆನ್ಷನ್ ಸೆಂಟರ್ನಲ್ಲಿ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಸಹಕಾರಿಗಳ ರಾಷ್ಟ್ರೀಯ ಸಮ್ಮೇಳನದ ಸಂದರ್ಭದಲ್ಲಿ. ಶ್ರೀ ಅಮಿತ್ ಶಾ ಅವರು ಹೊಸದಾಗಿ ರಚನೆಯಾದ ಸಹಕಾರ ಸಂಘಗಳಿಗೆ ನೋಂದಣಿ ಪ್ರಮಾಣಪತ್ರಗಳು, ರುಪೇ …
Read More »
Matribhumi Samachar Kannad