ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೈಪ್ರಸ್ ಅಧ್ಯಕ್ಷ ಘನತೆವೆತ್ತ ನಿಕೋಸ್ ಕ್ರಿಸ್ಟೋಡೌಲಿಡೆಸ್ ಅವರೊಂದಿಗೆ ಇಂದು ಲಿಮಾಸೋಲ್ ನಲ್ಲಿ ಸೈಪ್ರಸ್ ಮತ್ತು ಭಾರತದ ವಾಣಿಜ್ಯ ನಾಯಕರೊಂದಿಗೆ ದುಂಡುಮೇಜಿನ ಸಂವಾದ ನಡೆಸಿದರು. ಬ್ಯಾಂಕಿಂಗ್, ಹಣಕಾಸು ಸಂಸ್ಥೆಗಳು, ಉತ್ಪಾದನೆ, ರಕ್ಷಣೆ, ಲಾಜಿಸ್ಟಿಕ್ಸ್, ಕಡಲ, ಹಡಗು, ತಂತ್ರಜ್ಞಾನ, ನಾವೀನ್ಯತೆ, ಡಿಜಿಟಲ್ ತಂತ್ರಜ್ಞಾನಗಳು, ಎಐ, ಐಟಿ ಸೇವೆಗಳು, ಪ್ರವಾಸೋದ್ಯಮ ಮತ್ತು ಚಲನಶೀಲತೆಯಂತಹ ವೈವಿಧ್ಯಮಯ ಕ್ಷೇತ್ರಗಳನ್ನು ಪ್ರತಿನಿಧಿಸುವವರು ಭಾಗವಹಿಸಿದರು. ಕಳೆದ 11 ವರ್ಷಗಳಲ್ಲಿ ಭಾರತದ ತ್ವರಿತ ಆರ್ಥಿಕ …
Read More »ಪವನ ಶಕ್ತಿಯು ಭಾರತದ ನವೀಕರಿಸಬಹುದಾದ ಇಂಧನ ವಲಯದ ಕಾರ್ಯತಂತ್ರದ ಕೇಂದ್ರಬಿಂದು: ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ
ವಿಶ್ವ ಪವನ ದಿನ 2025″ ರ ಅಂಗವಾಗಿ ಇಂದು ಬೆಂಗಳೂರಿನಲ್ಲಿ ನಡೆದ ಪಾಲುದಾರರ ಸಮ್ಮೇಳನವನ್ನುದ್ದೇಶಿಸಿ ಮಾತನಾಡಿದ ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಅವರು, “ನವೀಕರಿಸಬಹುದಾದ ಇಂಧನ ವಲಯದಲ್ಲಿ ಭಾರತದ ಕಾರ್ಯತಂತ್ರದಲ್ಲಿ ಪವನ ಶಕ್ತಿಯು ಕೇಂದ್ರ ಸ್ಥಾನದಲ್ಲಿದೆ” ಎಂದು ಹೇಳಿದರು. ಈ ಸಂದರ್ಭದಲ್ಲಿ ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ರಾಜ್ಯ ಸಚಿವರಾದ ಶ್ರೀ ಶ್ರೀಪಾದ್ ಯೆಸ್ಸೊ ನಾಯಕ್ ಮತ್ತು ಕರ್ನಾಟಕ ಸರ್ಕಾರದ ಇಂಧನ …
Read More »ದಕ್ಷಿಣ ರಾಜ್ಯಗಳಲ್ಲಿ ಗ್ರಾಹಕ ನ್ಯಾಯ ಬಲಪಡಿಸಲು ಭಾರತ ಸರ್ಕಾರದ ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಚೆನ್ನೈನಲ್ಲಿ ಪ್ರಾದೇಶಿಕ ಕಾರ್ಯಾಗಾರ
ಗ್ರಾಹಕರ ಕುಂದುಕೊರತೆ ಪರಿಹಾರ ಕಾರ್ಯವಿಧಾನಗಳನ್ನು ಬಲಪಡಿಸಲು ಮತ್ತು ಸಾಂಸ್ಥಿಕ ದಕ್ಷತೆ ಉತ್ತೇಜಿಸುವ ತನ್ನ ಬದ್ಧತೆಯನ್ನು ಪುನರುಚ್ಚರಿಸಲು ಭಾರತ ಸರ್ಕಾರದ ಗ್ರಾಹಕ ವ್ಯವಹಾರಗಳ ಇಲಾಖೆಯು, 2025 ಜೂನ್ 13ರಂದು ಚೆನ್ನೈನಲ್ಲಿ “ದಕ್ಷಿಣ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಗ್ರಾಹಕ ರಕ್ಷಣೆ” ಕುರಿತು ಪ್ರಾದೇಶಿಕ ಕಾರ್ಯಾಗಾರ ಆಯೋಜಿಸಿತ್ತು. ಭಾರತ ಸರ್ಕಾರದ ಗ್ರಾಹಕ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿ ಶ್ರೀಮತಿ ನಿಧಿ ಖರೆ ತಮ್ಮ ಮುಖ್ಯ ಭಾಷಣದಲ್ಲಿ, ಡಿಜಿಟಲ್ ಯುಗಕ್ಕೆ ಹೊಂದಾಣಿಕೆಯ ಕಾನೂನು ಮತ್ತು ಡಿಜಿಟಲ್ ಕಾರ್ಯವಿಧಾನಗಳು …
Read More »ಅಹಮದಾಬಾದ್ ದುರಂತದ ಬಗ್ಗೆ ಪ್ರಧಾನಮಂತ್ರಿ ದುಃಖ ವ್ಯಕ್ತಪಡಿಸಿದ್ದಾರೆ, ತ್ವರಿತ ಮತ್ತು ಪರಿಣಾಮಕಾರಿ ನೆರವಿನ ಭರವಸೆ ನೀಡಿದ್ದಾರೆ
ಅಹಮದಾಬಾದ್ ನಲ್ಲಿ ಇಂದು ಸಂಭವಿಸಿದ ದುರಂತದ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ಮತ್ತು ಆಘಾತ ವ್ಯಕ್ತಪಡಿಸಿದ್ದಾರೆ. ಈ ದುರಂತವು ಇಡೀ ರಾಷ್ಟ್ರವನ್ನು ದಿಗ್ಭ್ರಮೆಗೊಳಿಸಿದೆ ಮತ್ತು ದುಃಖಕ್ಕೆ ತಳ್ಳಿದೆ ಮತ್ತು ಇದು ಪದಗಳಲ್ಲಿ ಹೇಳಲಾಗದಷ್ಟು ಹೃದಯವಿದ್ರಾವಕವಾಗಿದೆ ಎಂದು ಅವರು ಹೇಳಿದ್ದಾರೆ. ಸಂತ್ರಸ್ತರಿಗೆ ತ್ವರಿತ ಮತ್ತು ಪರಿಣಾಮಕಾರಿ ಸಹಾಯವನ್ನು ಖಚಿತಪಡಿಸಿಕೊಳ್ಳಲು ಸಚಿವರು ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಶ್ರೀ ಮೋದಿ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ …
Read More »ಇಲೇಕ್ಟ್ರಿಸಿಟೀ ಡೇರಿವೇಟಿವ್ಝ ಪ್ರಾರಂಭಿಸಲು ಎಂಸಿಎಕ್ಸ್ ಗೆ ಸೆಬಿ ಅನುಮೋದನೆ
ಭಾರತದ ಇಂಧನ ಮಾರುಕಟ್ಟೆಯ ವಿಕಾಸದಲ್ಲಿ ಒಂದು ಪ್ರಮುಖ ಮೈಲಿಗಲ್ಲು ಮುಂಬೈ: ಭಾರತದ ಪ್ರಮುಖ ಸರಕು ಉತ್ಪನ್ನಗಳ ವಿನಿಮಯ ಕೇಂದ್ರವಾದ ಮಲ್ಟಿ ಕಮಾಡಿಟಿ ಎಕ್ಸ್ಚೇಂಜ್ ಆಫ್ ಇಂಡಿಯಾ ಲಿಮಿಟೆಡ್ (ಎಂಸಿಎಕ್ಸ್), ಭಾರತದ ಇಂಧನ ವ್ಯಾಪಾರ ಕ್ಷೇತ್ರದ ವಿಕಾಸದಲ್ಲಿ ಒಂದು ಪ್ರಮುಖ ಮೈಲಿಗಲ್ಲನ್ನು ಗುರುತಿಸುವ ಇಲೇಕ್ಟ್ರಿಸಿಟೀ ಡೇರಿವೇಟಿವ್ಝ ಪ್ರಾರಂಭಿಸಲು ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ನಿಂದ ಅನುಮೋದನೆ ಪಡೆದಿದೆ. ಈ ಬೆಳವಣಿಗೆಯು ನಿಯಂತ್ರಕರಾದ ಸೆಬಿ ಮತ್ತು ಕೇಂದ್ರ ವಿದ್ಯುತ್ …
Read More »ಭಾರತವು ವಿಶ್ವದ ಆಹಾರ ಬುಟ್ಟಿಯಾಗಲಿದೆ: ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್
ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಭಾರತವನ್ನು ವಿಶ್ವದ ಆಹಾರ ಬುಟ್ಟಿಯಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಘೋಷಿಸಿದ್ದಾರೆ. ದೇಶದ 145 ಕೋಟಿ ನಾಗರಿಕರಿಗೆ ಆಹಾರವನ್ನು ನೀಡುವುದರ ಜೊತೆಗೆ, ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳು, ಕೃಷಿ ವಿಶ್ವವಿದ್ಯಾಲಯಗಳು, ಕೃಷಿ ವಿಜ್ಞಾನ ಕೇಂದ್ರಗಳು (ಕೆವಿಕೆಗಳು), ರೈತರು ಮತ್ತು ವಿಜ್ಞಾನಿಗಳೊಂದಿಗೆ ಸಹಯೋಗದೊಂದಿಗೆ ಈ ಗುರಿಯನ್ನು ಸಾಧಿಸಲು ಸಮಗ್ರ ಮಾರ್ಗಸೂಚಿಯನ್ನು ರೂಪಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಬೆಂಗಳೂರಿನ ಐಸಿಎಆರ್-ಐಐಎಚ್ಆರ್ ಆವರಣದಲ್ಲಿ ಇಂದು ರೈತರನ್ನು ಉದ್ದೇಶಿಸಿ ಮಾತನಾಡಿದ ಸಚಿವರು, 2047ರ ವೇಳೆಗೆ ವಿಕಸಿತ ಭಾರತ (ಅಭಿವೃದ್ಧಿ ಹೊಂದಿದ ಭಾರತ) ಎಂಬ ಪ್ರಧಾನಮಂತ್ರಿಯವರ ದೃಷ್ಟಿಕೋನಕ್ಕೆ ಅನುಗುಣವಾಗಿ ಈ ಉಪಕ್ರಮವನ್ನು ರೂಪಿಸಲಾಗಿದೆ ಎಂದು ಸ್ಪಷ್ಟಪಡಿಸಿದರು. ಈ ಅಭಿಯಾನದ ಧ್ಯೇಯವಾಕ್ಯ “ವಿಕಸಿತ ಕೃಷಿ ಭಾರತ”. ಈ ಕಾರ್ಯಕ್ರಮದ ಭಾಗವಾಗಿ, “ಪ್ರಯೋಗಾಲಯದಿಂದ ಭೂಮಿಗೆ” ಉಪಕ್ರಮವನ್ನು ಪ್ರಾರಂಭಿಸಲಾಗಿದ್ದು, ವೈಜ್ಞಾನಿಕ ಜ್ಞಾನ ಮತ್ತು ಬೆಂಬಲವನ್ನು ಒದಗಿಸಲು ದೇಶಾದ್ಯಂತ 16,000 ಕ್ಕೂ ಹೆಚ್ಚು ವಿಜ್ಞಾನಿಗಳು ರೈತರೊಂದಿಗೆ ತೊಡಗಿಸಿಕೊಂಡಿದ್ದಾರೆ. ಕಳೆದ ಹತ್ತು ದಿನಗಳಲ್ಲಿ, 1,896 ತಂಡಗಳು 8,188 ಹಳ್ಳಿಗಳಲ್ಲಿ ಸುಮಾರು 9 ಲಕ್ಷ ರೈತರೊಂದಿಗೆ ಸಂವಾದ ನಡೆಸಿವೆ. ಕರ್ನಾಟಕದಲ್ಲಿಯೇ, ಕೃಷಿ ಮತ್ತು ಸಂಬಂಧಿತ ಇಲಾಖೆಗಳ ವಿಜ್ಞಾನಿಗಳು ಮತ್ತು ಅಧಿಕಾರಿಗಳನ್ನು ಒಳಗೊಂಡ 70ಕ್ಕೂ ಹೆಚ್ಚು ಅಂತರಶಿಸ್ತೀಯ ತಂಡಗಳು ಪ್ರತಿದಿನ ತೋಟಗಳಿಗೆ ಭೇಟಿ ನೀಡುತ್ತಿವೆ. ಅವಶ್ಯಕತೆ ಆಧಾರಿತ, ಸಮಸ್ಯೆ ಆಧಾರಿತ ಕೃಷಿ ಸಂಶೋಧನಾ ಕಾರ್ಯಕ್ರಮಗಳನ್ನು ರೂಪಿಸಲು ಈ ತಂಡಗಳು ರೈತರಿಂದ ನೇರವಾಗಿ ಹಿಮ್ಮಾಹಿತಿಯನ್ನು ಪಡೆದುಕೊಂಡು ದಾಖಲಿಸುತ್ತಿವೆ. ಇಲ್ಲಿಯವರೆಗೆ, 639 ತಂಡಗಳು 2,495 ಹಳ್ಳಿಗಳಿಗೆ ಭೇಟಿ ನೀಡಿ, 2,77,264 ರೈತರೊಂದಿಗೆ ತೊಡಗಿಸಿಕೊಂಡಿವೆ. “ಒಂದು ರಾಷ್ಟ್ರ, ಒಂದು ಕೃಷಿ, ಒಂದು ತಂಡ” ಎಂಬ ಪರಿಕಲ್ಪನೆಯನ್ನು ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಹೊಂದಿದೆ ಎಂದು ಶ್ರೀ ಚೌಹಾಣ್ ಹೇಳಿದರು. ರೈತರು ತಮ್ಮ ಉತ್ಪನ್ನಗಳಿಗೆ ನ್ಯಾಯಯುತ ಬೆಲೆಯನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು, ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ (ಎಂ.ಐ.ಎಸ್.) ಅಡಿಯಲ್ಲಿ ಕೇಂದ್ರ ಸರ್ಕಾರವು ಸಾರಿಗೆ ವೆಚ್ಚವನ್ನು ಭರಿಸುತ್ತದೆ ಮತ್ತು ಆ ಮೂಲಕ ಮಾರುಕಟ್ಟೆಗಳಿಗೆ ಪ್ರವೇಶವನ್ನು ಬೆಂಬಲಿಸುತ್ತದೆ. …
Read More »ಬಲವಾದ ಮತ್ತು ಸ್ಪಂದನಶೀಲ ʻಡಿಆರ್ಆರ್ʼ ಹಣಕಾಸು ವ್ಯವಸ್ಥೆಯು ಸದೃಢತೆಯ ಮೂಲಾಧಾರವೆಂದು ಭಾರತ ನಂಬಿದೆ: ಡಾ. ಪಿ.ಕೆ.ಮಿಶ್ರಾ
ಪ್ರಧಾನಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಡಾ. ಪಿ.ಕೆ. ಮಿಶ್ರಾ ಅವರು 2025ರ ಜೂನ್ 4ರಂದು ಜಿನೀವಾದಲ್ಲಿ ನಡೆದ ʻವಿಪತ್ತು ಅಪಾಯ ತಗ್ಗಿಸಲು (ಡಿಆರ್ಆರ್) ಹಣಕಾಸು ನೆರವು ಕುರಿತ ಸಚಿವರ ದುಂಡುಮೇಜಿನ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ನಿರ್ಣಾಯಕ ಸಭೆಯನ್ನು ಆಯೋಜಿಸಿದ್ದಕ್ಕಾಗಿ ಅವರು ʻವಿಪತ್ತು ಅಪಾಯ ತಗ್ಗಿಸುವ ಕುರಿತಾದ ವಿಶ್ವಸಂಸ್ಥೆಯ ಕಚೇರಿʼ(ಯುಎನ್ಡಿಆರ್ಆರ್) ಮತ್ತು ಅದರ ಪಾಲುದಾರರನ್ನು ಶ್ಲಾಘಿಸಿದರು. ಜಿ20 ಅಧ್ಯಕ್ಷತೆ ಮೂಲಕ ಜಾಗತಿಕ ಸಂವಾದವನ್ನು ಮುಂದುವರಿಸುವಲ್ಲಿ ಬ್ರೆಜಿಲ್ ಮತ್ತು ದಕ್ಷಿಣ ಆಫ್ರಿಕಾದ ಕೊಡುಗೆಗಳನ್ನು ಸಹ ಭಾರತ ಗುರುತಿಸಿತು. ʻವಿಪತ್ತು ಅಪಾಯ ತಗ್ಗಿಸಲು ಹಣಕಾಸು ನೆರವುʼ ಎಂಬುದು ಬಾಹ್ಯ ವಿಷಯವಲ್ಲ. ಬದಲಿಗೆ, ಅದು ರಾಷ್ಟ್ರೀಯ ವಿಪತ್ತು ನಿರ್ವಹಣಾ ವ್ಯವಸ್ಥೆಗಳ ಪರಿಣಾಮಕಾರಿ ಕಾರ್ಯನಿರ್ವಹಣೆಯಾಗಿದೆ. ಜೊತೆಗೆ ಹೆಚ್ಚುತ್ತಿರುವ ಹವಾಮಾನ ಮತ್ತು ವಿಪತ್ತು ಅಪಾಯಗಳ ಹಿನ್ನೆಲೆಯಲ್ಲಿ ಅಭಿವೃದ್ಧಿ ಲಾಭಗಳನ್ನು ರಕ್ಷಿಸಲು ಇದು ಅತ್ಯಂತ ಮುಖ್ಯವಾಗಿದೆ ಎಂದು ಡಾ. ಮಿಶ್ರಾ ಒತ್ತಿಹೇಳಿದರು. ಬಲವಾದ ಮತ್ತು ಸ್ಪಂದನಶೀಲವಾದ ʻವಿಪತ್ತು ಅಪಾಯ ತಗ್ಗಿಸಲು ಹಣಕಾಸು ನೆರವುʼ ವ್ಯವಸ್ಥೆಯು ದೇಶವೊಂದರ ಸದೃಢತೆಗೆ ಮೂಲಾಧಾರವಾಗಿದೆ ಎಂಬ ಭಾರತದ ನಂಬಿಕೆಯನ್ನು ಅವರು ಪುನರುಚ್ಚರಿಸಿದರು. ʻವಿಪತ್ತು ಅಪಾಯ ತಗ್ಗಿಸುವಿಕೆಗಾಗಿ ಹಣಕಾಸು ನೆರವುʼ ಕ್ಷೇತ್ರದಲ್ಲಿ ಭಾರತದ ಪ್ರಯಾಣವನ್ನು ಎತ್ತಿ ತೋರಿದ ಅವರು, ಈ ಮೊದಲಿನ ಹಣಕಾಸು ಆಯೋಗಗಳು ಈ ನಿಟ್ಟಿನಲ್ಲಿ 60 ದಶಲಕ್ಷ ರೂಪಾಯಿಗಳ (ಸುಮಾರು 0.7 ದಶಲಕ್ಷ ಅಮೆರಿಕನ್ ಡಾಲರ್) ಆರಂಭಿಕ ನಿಧಿ ಹಂಚಿಕೆ ಮಾಡಿವೆ ಎಂದು ಮಾಹಿತಿ ನೀಡಿದರು. ಇಂದು, 15ನೇ ಹಣಕಾಸು ಆಯೋಗದ ಅಡಿಯಲ್ಲಿ ಈ ನಿಟ್ಟಿನಲ್ಲಿ ಒಟ್ಟು ವೆಚ್ಚವು 2.32 ಲಕ್ಷ ಕೋಟಿ ರೂಪಾಯಿಗಳನ್ನು (ಸುಮಾರು 28 ಶತಕೋಟಿ ಅಮೆರಿಕನ್ ಡಾಲರ್) ಮೀರಿದೆ ಎಂದು ಹೇಳಿದರು. ʻವಿಪತ್ತು ನಿರ್ವಹಣಾ ಕಾಯ್ದೆ-2005ʼರ ಬೆಂಬಲದೊಂದಿಗೆ ರಾಷ್ಟ್ರೀಯ ಮಟ್ಟದಿಂದ ರಾಜ್ಯ ಮತ್ತು ಜಿಲ್ಲಾ ಮಟ್ಟಗಳಿಗೆ ಪೂರ್ವನಿರ್ಧರಿತ, ನಿಯಮ ಆಧಾರಿತ ಹಂಚಿಕೆಗಳ ಮಹತ್ವವನ್ನು ಮಿಶ್ರಾ ಅವರು ಒತ್ತಿ ಹೇಳಿದರು. ಈ ರೂಪಾಂತರವು ವಿಪತ್ತು ಹಣಕಾಸು ಪ್ರತಿಕ್ರಿಯಾತ್ಮಕವಾಗಿರುವುದರ ಬದಲು, ರಚನಾತ್ಮಕ ಮತ್ತು ನಿರೀಕ್ಷಿತವಾಗಿರುವಂತೆ ಖಾತ್ರಿಪಡಿಸಿದೆ ಎಂದು ಅವರು ಹೇಳಿದರು. ನಾಲ್ಕು ಪ್ರಮುಖ ತತ್ವಗಳ ಮೇಲೆ ನಿರ್ಮಿಸಲಾದ ಭಾರತದ ʻವಿಪತ್ತು ಅಪಾಯ ತಗ್ಗಿಸುವಿಕೆಗಾಗಿ ಹಣಕಾಸು ನೆರವುʼ ಕಾರ್ಯವಿಧಾನವನ್ನು ಅವರು ಶ್ರೀ ಮಿಶ್ರಾ ವಿವರಿಸಿದರು. ಮೊದಲನೆಯ ತತ್ವವೆಂದರೆ ಸನ್ನದ್ಧತೆ, ಅಪಾಯ ತಗ್ಗಿಸುವಿಕೆ, …
Read More »ಸೋನಿಯ ವಾಯಿದೆ 3,573 ರೂ. ಮತ್ತು ಬೆಳ್ಳಿಯ ವಾಯಿದೆ 3,928 ರೂ. ಕುಸಿತ: ಕಚ್ಚಾ ತೈಲ ವಾಯಿದೆ 408 ರೂ. ಇಳಿಕೆ
ನೈಸರ್ಗಿಕ ಅನಿಲ ವಾಯಿದೆಯಲ್ಲಿ 27.10 ರೂ. ಏರಿಕೆ: ಹತ್ತಿ-ಕ್ಯಾಂಡಿ ವಾಯಿದೆಯಲ್ಲಿ 1,760 ರೂ. ಕುಸಿತ: ಮೆಂಥಾ ತೈಲದಲ್ಲಿ 6.50 ರೂ. ಮೃದುತೆ: ಲೋಹಗಳ ವಾಯಿದೆಗಳಲ್ಲಿ ಎಲ್ಲೆಡೆ ಕುಸಿತ: ಸರಕು ವಾಯಿದೆಗಳಲ್ಲಿ 188,600 ಕೋಟಿ ರೂ. ಮತ್ತು ಸರಕು ಆಯ್ಕೆಗಳಲ್ಲಿ 1,402,398 ಕೋಟಿ ರೂ. ವಹಿವಾಟು ದಾಖಲು: ಸೋನ-ಬೆಳ್ಳಿಯ ವಾಯಿದೆಗಳಲ್ಲಿ 147,636 ಕೋಟಿ ರೂ. ವ್ಯಾಪಾರ: ಬುಲಿಯನ್ ಸೂಚ್ಯಂಕ ಬುಲ್ಡೆಕ್ಸ್ ಫ್ಯೂಚರ್ಸ್ 21,323 ಅಂಕಗಳ ಮಟ್ಟದಲ್ಲಿ ಮುಂಬೈ: ದೇಶದ ಪ್ರಮುಖ ಸರಕು …
Read More »ಕಡಿಮೆ ಮೌಲ್ಯದ ಭೀಮ್-ಯುಪಿಐ ವಹಿವಾಟುಗಳನ್ನು (ಪಿ2ಎಂ) ಉತ್ತೇಜಿಸಲು ಪ್ರೋತ್ಸಾಹಕ ಯೋಜನೆಗೆ ಸಂಪುಟದ ಅನುಮೋದನೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, 2024-25ನೇ ಹಣಕಾಸು ವರ್ಷಕ್ಕೆ ‘ವ್ಯಕ್ತಿಯಿಂದ ವ್ಯಾಪಾರಿಗೆ (ಪಿ2ಎಂ) ಕಡಿಮೆ ಮೌಲ್ಯದ ಭೀಮ್-ಯುಪಿಐ ವಹಿವಾಟುಗಳನ್ನು ಉತ್ತೇಜಿಸಲು ಪ್ರೋತ್ಸಾಹಕ ಯೋಜನೆ’ಯನ್ನು ಈ ಕೆಳಗಿನ ರೀತಿಯಲ್ಲಿ ಅನುಮೋದಿಸಿದೆ: ಕಡಿಮೆ ಮೌಲ್ಯದ ಭೀಮ್-ಯುಪಿಐ ವಹಿವಾಟುಗಳನ್ನು (ಪಿ2ಎಂ) ಉತ್ತೇಜಿಸಲು ಪ್ರೋತ್ಸಾಹಕ ಯೋಜನೆಯನ್ನು 01.04.2024 ರಿಂದ 31.03.2025 ರವರೆಗೆ ಅಂದಾಜು 1,500 ಕೋಟಿ ವೆಚ್ಚದಲ್ಲಿ ಜಾರಿಗೆ ತರಲಾಗುವುದು. ಸಣ್ಣ ವ್ಯಾಪಾರಿಗಳಿಗೆ …
Read More »ಅಸ್ಸಾಂನ ನಮ್ರೂಪ್ ನ ಬ್ರಹ್ಮಪುತ್ರ ವ್ಯಾಲಿ ಫರ್ಟಿಲೈಸರ್ ಕಾರ್ಪೊರೇಷನ್ ಲಿಮಿಟೆಡ್ (ಬಿವಿಎಫ್ಸಿಎಲ್) ನ ಹಾಲಿ ಆವರಣದಲ್ಲಿಹೊಸ ಬ್ರೌನ್ ಫೀಲ್ಡ್ ಅಮೋನಿಯಾ-ಯೂರಿಯಾ ಕಾಂಪ್ಲೆಕ್ಸ್ ನಮ್ರೂಪ್ 4 ರಸಗೊಬ್ಬರ ಘಟಕ ಸ್ಥಾಪನೆಗೆ ಸಂಪುಟದ ಅನುಮೋದನೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಅಸ್ಸಾಂನ ನಮ್ರೂಪ್ನ ಬ್ರಹ್ಮಪುತ್ರ ವ್ಯಾಲಿ ಫರ್ಟಿಲೈಸರ್ ಕಾರ್ಪೊರೇಷನ್ ಲಿಮಿಟೆಡ್ (ಬಿವಿಎಫ್ಸಿಎಲ್) ನ ಹಾಲಿ ಆವರಣದಲ್ಲಿ ಯೂರಿಯಾ ಉತ್ಪಾದನೆಯ ವಾರ್ಷಿಕ 12.7 ಲಕ್ಷ ಮೆಟ್ರಿಕ್ ಟನ್ (ಎಲ್ಎಂಟಿ) ಸಾಮರ್ಥ್ಯದ ಹೊಸ ಬ್ರೌನ್ ಫೀಲ್ಡ್ ಅಮೋನಿಯಾ-ಯೂರಿಯಾ ಸಂಕೀರ್ಣವನ್ನು ಅಂದಾಜು ಒಟ್ಟು ಯೋಜನಾ ವೆಚ್ಚ 10,601.40 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಸ್ಥಾಪಿಸುವ ಪ್ರಸ್ತಾಪಕ್ಕೆ ತನ್ನ ಅನುಮೋದನೆ ನೀಡಿದೆ. ಜಂಟಿ …
Read More »
Matribhumi Samachar Kannad