Thursday, January 29 2026 | 01:48:22 PM
Breaking News

Business

ಎಸ್ ಪಿ ಎಂ ಇ ಪಿ ಸಿ ಐ ಅಡಿಯಲ್ಲಿ ಪೋರ್ಟಲ್ ಪ್ರಾರಂಭಿಸುವ ಮೂಲಕ ಭಾರತ ಜಾಗತಿಕ ಇವಿ ದಿಗ್ಗಜರಿಗೆ ಬಾಗಿಲು ತೆರೆದಿದೆ

ಭಾರತದಲ್ಲಿ ವಿದ್ಯುತ್ ಚಾಲಿತ ಪ್ರಯಾಣಿಕ ಕಾರುಗಳ ತಯಾರಿಕೆ ಉತ್ತೇಜನಾ ಯೋಜನೆ (ಎಸ್ ಪಿ ಎಂ ಇ ಪಿ ಸಿ ಐ) ಅಡಿಯಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಗಾಗಿ ಪೋರ್ಟಲ್ ಪ್ರಾರಂಭಿಸುತ್ತಿರುವುದನ್ನು ಘೋಷಿಸಲು ಬೃಹತ್ ಕೈಗಾರಿಕಾ ಸಚಿವಾಲಯ ಹರ್ಷಪಡುತ್ತದೆ. ಈ ಯೋಜನೆಯನ್ನು ಮಾರ್ಚ್ 15, 2024ರಂದು ಅಧಿಸೂಚಿಸಲಾಗಿತ್ತು ಮತ್ತು ನಂತರ 02.06.2025ರ ಅಧಿಸೂಚನೆ ಸಂಖ್ಯೆ S.O. 2450(E) ಮೂಲಕ ವಿವರವಾದ ಯೋಜನಾ ಮಾರ್ಗಸೂಚಿಗಳನ್ನು ಹೊರಡಿಸಲಾಯಿತು. ಅಧಿಸೂಚನೆ ಮತ್ತು ಮಾರ್ಗಸೂಚಿಗಳು ಸಚಿವಾಲಯದ ಅಧಿಕೃತ ಜಾಲತಾಣದಲ್ಲಿ …

Read More »

11 ವರ್ಷಗಳ ಗಣಿ ಕ್ಷೇತ್ರದ ಪರಿವರ್ತನಾ ಸುಧಾರಣೆಗಳ ಕುರಿತು ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ಕಳೆದ 11 ವರ್ಷಗಳಿಂದ ಆದ ಮಹತ್ವದ ಸುಧಾರಣೆ ಹೇಗೆ ಭಾರತದ ಗಣಿ ಕ್ಷೇತ್ರವನ್ನು ಸಹಕಾರ ಸಂಯುಕ್ತ ವ್ಯವಸ್ಥೆ ಹಾಗೂ ಪಾರದರ್ಶಕ ಆಡಳಿತಕ್ಕೆ ದಾರಿದೀಪವಾಗಿದೆ ಎಂಬುದರ ಕುರಿತು ಲೇಖನವೊಂದನ್ನು ಹಂಚಿಕೊಂಡಿದ್ದಾರೆ. ಕೇಂದ್ರ ಸಚಿವರಾದ ಶ್ರೀ ಜಿ. ಕಿಶನ್ ರೆಡ್ಡಿ ಅವರ ಎಕ್ಸ್ ಪೋಸ್ಟ್ ಗೆ ಪ್ರತಿಕ್ರಿಯೆ ನೀಡಿದ ಪ್ರಧಾನಮಂತ್ರಿಗಳು ಹೀಗೆ ಹೇಳಿದ್ದಾರೆ: “ಕೇಂದ್ರ ಸಚಿವರಾದ ಶ್ರೀ @kishanreddybjp ಕಳೆದ 11 ವರ್ಷಗಳ ಸುಧಾರಣೆಗಳು ಹೇಗೆ …

Read More »

ಕರ್ನಾಟಕದಿಂದ ಯುಕೆಗೆ ಜಾಮೂನು ಹಣ್ಣಿನ ಮೊದಲ ರಫ್ತು ರವಾನೆಗೆ ಎಪಿಇಡಿಎ ಹಸಿರು ನಿಶಾನೆ

ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರ (ಎಪಿಇಡಿಎ) 2025ರ ಜೂನ್ 19 ರಂದು ಕರ್ನಾಟಕದಿಂದ ಯುನೈಟೆಡ್ ಕಿಂಗ್ ಡಮ್ ಗೆ  ಜಾಮೂನು ಹಣ್ಣು (ಕುಂದಾನಾ ಪ್ರಭೇದ) ಮೊದಲ ರಫ್ತು ರವಾನೆಗಾಗಿ ವರ್ಚುವಲ್ ಫ್ಲ್ಯಾಗ್ಆಫ್ (ಹಸಿರು ನಿಶಾನೆ) ಆಯೋಜಿಸಿತ್ತು. ಈ ಹೆಗ್ಗುರುತು ರಫ್ತು ಜಾಗತಿಕ ಮಾರುಕಟ್ಟೆಗಳಲ್ಲಿ ವಿವಿಧ ಪ್ರದೇಶಗಳಿಂದ ಭಾರತದ ಸಾಂಪ್ರದಾಯಿಕ ಹಣ್ಣುಗಳನ್ನು ಉತ್ತೇಜಿಸುವಲ್ಲಿ ಮಹತ್ವದ ಹೆಜ್ಜೆಯಾಗಿದೆ. ಗಮನಾರ್ಹವಾಗಿ, ಜಾಮೂನು ಹಣ್ಣುಗಳನ್ನು ನೇರವಾಗಿ ರೈತ ಉತ್ಪಾದಕ ಸಂಸ್ಥೆಯಿಂದ (ಎಫ್ …

Read More »

ಪ್ರಧಾನಮಂತ್ರಿ ಮತ್ತು ಸೈಪ್ರಸ್ ನ ಅಧ್ಯಕ್ಷರು, ಭಾರತ ಮತ್ತು ಸೈಪ್ರಸ್ ವಾಣಿಜ್ಯ ನಾಯಕರೊಂದಿಗೆ ಸಂವಾದ ನಡೆಸಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೈಪ್ರಸ್ ಅಧ್ಯಕ್ಷ ಘನತೆವೆತ್ತ ನಿಕೋಸ್ ಕ್ರಿಸ್ಟೋಡೌಲಿಡೆಸ್ ಅವರೊಂದಿಗೆ ಇಂದು ಲಿಮಾಸೋಲ್ ನಲ್ಲಿ ಸೈಪ್ರಸ್ ಮತ್ತು ಭಾರತದ ವಾಣಿಜ್ಯ ನಾಯಕರೊಂದಿಗೆ ದುಂಡುಮೇಜಿನ ಸಂವಾದ ನಡೆಸಿದರು. ಬ್ಯಾಂಕಿಂಗ್, ಹಣಕಾಸು ಸಂಸ್ಥೆಗಳು, ಉತ್ಪಾದನೆ, ರಕ್ಷಣೆ, ಲಾಜಿಸ್ಟಿಕ್ಸ್, ಕಡಲ, ಹಡಗು, ತಂತ್ರಜ್ಞಾನ, ನಾವೀನ್ಯತೆ, ಡಿಜಿಟಲ್ ತಂತ್ರಜ್ಞಾನಗಳು, ಎಐ, ಐಟಿ ಸೇವೆಗಳು, ಪ್ರವಾಸೋದ್ಯಮ ಮತ್ತು ಚಲನಶೀಲತೆಯಂತಹ ವೈವಿಧ್ಯಮಯ ಕ್ಷೇತ್ರಗಳನ್ನು  ಪ್ರತಿನಿಧಿಸುವವರು ಭಾಗವಹಿಸಿದರು. ಕಳೆದ 11 ವರ್ಷಗಳಲ್ಲಿ ಭಾರತದ ತ್ವರಿತ ಆರ್ಥಿಕ …

Read More »

ಪವನ ಶಕ್ತಿಯು ಭಾರತದ ನವೀಕರಿಸಬಹುದಾದ ಇಂಧನ ವಲಯದ ಕಾರ್ಯತಂತ್ರದ ಕೇಂದ್ರಬಿಂದು: ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ

ವಿಶ್ವ ಪವನ ದಿನ 2025″ ರ ಅಂಗವಾಗಿ ಇಂದು ಬೆಂಗಳೂರಿನಲ್ಲಿ ನಡೆದ ಪಾಲುದಾರರ ಸಮ್ಮೇಳನವನ್ನುದ್ದೇಶಿಸಿ ಮಾತನಾಡಿದ ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಅವರು, “ನವೀಕರಿಸಬಹುದಾದ ಇಂಧನ ವಲಯದಲ್ಲಿ ಭಾರತದ ಕಾರ್ಯತಂತ್ರದಲ್ಲಿ ಪವನ ಶಕ್ತಿಯು ಕೇಂದ್ರ ಸ್ಥಾನದಲ್ಲಿದೆ” ಎಂದು ಹೇಳಿದರು. ಈ ಸಂದರ್ಭದಲ್ಲಿ ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ರಾಜ್ಯ ಸಚಿವರಾದ ಶ್ರೀ ಶ್ರೀಪಾದ್ ಯೆಸ್ಸೊ ನಾಯಕ್ ಮತ್ತು ಕರ್ನಾಟಕ ಸರ್ಕಾರದ ಇಂಧನ …

Read More »

ದಕ್ಷಿಣ ರಾಜ್ಯಗಳಲ್ಲಿ ಗ್ರಾಹಕ ನ್ಯಾಯ ಬಲಪಡಿಸಲು ಭಾರತ ಸರ್ಕಾರದ ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಚೆನ್ನೈನಲ್ಲಿ ಪ್ರಾದೇಶಿಕ ಕಾರ್ಯಾಗಾರ

ಗ್ರಾಹಕರ ಕುಂದುಕೊರತೆ ಪರಿಹಾರ ಕಾರ್ಯವಿಧಾನಗಳನ್ನು ಬಲಪಡಿಸಲು ಮತ್ತು ಸಾಂಸ್ಥಿಕ ದಕ್ಷತೆ ಉತ್ತೇಜಿಸುವ ತನ್ನ ಬದ್ಧತೆಯನ್ನು ಪುನರುಚ್ಚರಿಸಲು ಭಾರತ ಸರ್ಕಾರದ ಗ್ರಾಹಕ ವ್ಯವಹಾರಗಳ ಇಲಾಖೆಯು, 2025 ಜೂನ್ 13ರಂದು ಚೆನ್ನೈನಲ್ಲಿ “ದಕ್ಷಿಣ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಗ್ರಾಹಕ ರಕ್ಷಣೆ” ಕುರಿತು ಪ್ರಾದೇಶಿಕ ಕಾರ್ಯಾಗಾರ ಆಯೋಜಿಸಿತ್ತು. ಭಾರತ ಸರ್ಕಾರದ ಗ್ರಾಹಕ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿ ಶ್ರೀಮತಿ ನಿಧಿ ಖರೆ ತಮ್ಮ ಮುಖ್ಯ ಭಾಷಣದಲ್ಲಿ, ಡಿಜಿಟಲ್ ಯುಗಕ್ಕೆ ಹೊಂದಾಣಿಕೆಯ ಕಾನೂನು ಮತ್ತು ಡಿಜಿಟಲ್ ಕಾರ್ಯವಿಧಾನಗಳು …

Read More »

ಅಹಮದಾಬಾದ್ ದುರಂತದ ಬಗ್ಗೆ ಪ್ರಧಾನಮಂತ್ರಿ ದುಃಖ ವ್ಯಕ್ತಪಡಿಸಿದ್ದಾರೆ, ತ್ವರಿತ ಮತ್ತು ಪರಿಣಾಮಕಾರಿ ನೆರವಿನ ಭರವಸೆ ನೀಡಿದ್ದಾರೆ

ಅಹಮದಾಬಾದ್ ನಲ್ಲಿ ಇಂದು ಸಂಭವಿಸಿದ ದುರಂತದ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ಮತ್ತು ಆಘಾತ ವ್ಯಕ್ತಪಡಿಸಿದ್ದಾರೆ. ಈ ದುರಂತವು ಇಡೀ ರಾಷ್ಟ್ರವನ್ನು ದಿಗ್ಭ್ರಮೆಗೊಳಿಸಿದೆ ಮತ್ತು ದುಃಖಕ್ಕೆ ತಳ್ಳಿದೆ ಮತ್ತು ಇದು ಪದಗಳಲ್ಲಿ ಹೇಳಲಾಗದಷ್ಟು ಹೃದಯವಿದ್ರಾವಕವಾಗಿದೆ ಎಂದು ಅವರು ಹೇಳಿದ್ದಾರೆ. ಸಂತ್ರಸ್ತರಿಗೆ ತ್ವರಿತ ಮತ್ತು ಪರಿಣಾಮಕಾರಿ ಸಹಾಯವನ್ನು ಖಚಿತಪಡಿಸಿಕೊಳ್ಳಲು ಸಚಿವರು ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಶ್ರೀ ಮೋದಿ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ …

Read More »

ಇಲೇಕ್ಟ್ರಿಸಿಟೀ ಡೇರಿವೇಟಿವ್ಝ ಪ್ರಾರಂಭಿಸಲು ಎಂಸಿಎಕ್ಸ್ ಗೆ ಸೆಬಿ ಅನುಮೋದನೆ

ಭಾರತದ ಇಂಧನ ಮಾರುಕಟ್ಟೆಯ ವಿಕಾಸದಲ್ಲಿ ಒಂದು ಪ್ರಮುಖ ಮೈಲಿಗಲ್ಲು ಮುಂಬೈ: ಭಾರತದ ಪ್ರಮುಖ ಸರಕು ಉತ್ಪನ್ನಗಳ ವಿನಿಮಯ ಕೇಂದ್ರವಾದ ಮಲ್ಟಿ ಕಮಾಡಿಟಿ ಎಕ್ಸ್ಚೇಂಜ್ ಆಫ್ ಇಂಡಿಯಾ ಲಿಮಿಟೆಡ್ (ಎಂಸಿಎಕ್ಸ್), ಭಾರತದ ಇಂಧನ ವ್ಯಾಪಾರ ಕ್ಷೇತ್ರದ ವಿಕಾಸದಲ್ಲಿ ಒಂದು ಪ್ರಮುಖ ಮೈಲಿಗಲ್ಲನ್ನು ಗುರುತಿಸುವ ಇಲೇಕ್ಟ್ರಿಸಿಟೀ ಡೇರಿವೇಟಿವ್ಝ ಪ್ರಾರಂಭಿಸಲು ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ನಿಂದ ಅನುಮೋದನೆ ಪಡೆದಿದೆ. ಈ ಬೆಳವಣಿಗೆಯು ನಿಯಂತ್ರಕರಾದ ಸೆಬಿ ಮತ್ತು ಕೇಂದ್ರ ವಿದ್ಯುತ್ …

Read More »

ಭಾರತವು ವಿಶ್ವದ ಆಹಾರ ಬುಟ್ಟಿಯಾಗಲಿದೆ: ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್

ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಭಾರತವನ್ನು ವಿಶ್ವದ ಆಹಾರ ಬುಟ್ಟಿಯಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಘೋಷಿಸಿದ್ದಾರೆ. ದೇಶದ 145 ಕೋಟಿ ನಾಗರಿಕರಿಗೆ ಆಹಾರವನ್ನು ನೀಡುವುದರ ಜೊತೆಗೆ, ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳು, ಕೃಷಿ ವಿಶ್ವವಿದ್ಯಾಲಯಗಳು, ಕೃಷಿ ವಿಜ್ಞಾನ ಕೇಂದ್ರಗಳು (ಕೆವಿಕೆಗಳು), ರೈತರು ಮತ್ತು ವಿಜ್ಞಾನಿಗಳೊಂದಿಗೆ ಸಹಯೋಗದೊಂದಿಗೆ ಈ ಗುರಿಯನ್ನು ಸಾಧಿಸಲು ಸಮಗ್ರ ಮಾರ್ಗಸೂಚಿಯನ್ನು ರೂಪಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಬೆಂಗಳೂರಿನ ಐಸಿಎಆರ್-ಐಐಎಚ್‌ಆರ್ ಆವರಣದಲ್ಲಿ ಇಂದು ರೈತರನ್ನು ಉದ್ದೇಶಿಸಿ ಮಾತನಾಡಿದ ಸಚಿವರು, 2047ರ ವೇಳೆಗೆ ವಿಕಸಿತ ಭಾರತ (ಅಭಿವೃದ್ಧಿ ಹೊಂದಿದ ಭಾರತ) ಎಂಬ ಪ್ರಧಾನಮಂತ್ರಿಯವರ ದೃಷ್ಟಿಕೋನಕ್ಕೆ ಅನುಗುಣವಾಗಿ ಈ ಉಪಕ್ರಮವನ್ನು ರೂಪಿಸಲಾಗಿದೆ ಎಂದು ಸ್ಪಷ್ಟಪಡಿಸಿದರು. ಈ ಅಭಿಯಾನದ ಧ್ಯೇಯವಾಕ್ಯ “ವಿಕಸಿತ ಕೃಷಿ ಭಾರತ”. ಈ ಕಾರ್ಯಕ್ರಮದ ಭಾಗವಾಗಿ, “ಪ್ರಯೋಗಾಲಯದಿಂದ ಭೂಮಿಗೆ” ಉಪಕ್ರಮವನ್ನು ಪ್ರಾರಂಭಿಸಲಾಗಿದ್ದು, ವೈಜ್ಞಾನಿಕ ಜ್ಞಾನ ಮತ್ತು ಬೆಂಬಲವನ್ನು ಒದಗಿಸಲು ದೇಶಾದ್ಯಂತ 16,000 ಕ್ಕೂ ಹೆಚ್ಚು ವಿಜ್ಞಾನಿಗಳು ರೈತರೊಂದಿಗೆ  ತೊಡಗಿಸಿಕೊಂಡಿದ್ದಾರೆ. ಕಳೆದ ಹತ್ತು ದಿನಗಳಲ್ಲಿ, 1,896 ತಂಡಗಳು 8,188 ಹಳ್ಳಿಗಳಲ್ಲಿ ಸುಮಾರು 9 ಲಕ್ಷ ರೈತರೊಂದಿಗೆ ಸಂವಾದ ನಡೆಸಿವೆ. ಕರ್ನಾಟಕದಲ್ಲಿಯೇ, ಕೃಷಿ ಮತ್ತು ಸಂಬಂಧಿತ ಇಲಾಖೆಗಳ ವಿಜ್ಞಾನಿಗಳು ಮತ್ತು ಅಧಿಕಾರಿಗಳನ್ನು ಒಳಗೊಂಡ 70ಕ್ಕೂ ಹೆಚ್ಚು ಅಂತರಶಿಸ್ತೀಯ ತಂಡಗಳು ಪ್ರತಿದಿನ ತೋಟಗಳಿಗೆ ಭೇಟಿ ನೀಡುತ್ತಿವೆ. ಅವಶ್ಯಕತೆ ಆಧಾರಿತ, ಸಮಸ್ಯೆ ಆಧಾರಿತ ಕೃಷಿ ಸಂಶೋಧನಾ ಕಾರ್ಯಕ್ರಮಗಳನ್ನು ರೂಪಿಸಲು ಈ ತಂಡಗಳು ರೈತರಿಂದ ನೇರವಾಗಿ ಹಿಮ್ಮಾಹಿತಿಯನ್ನು ಪಡೆದುಕೊಂಡು ದಾಖಲಿಸುತ್ತಿವೆ. ಇಲ್ಲಿಯವರೆಗೆ, 639 ತಂಡಗಳು 2,495 ಹಳ್ಳಿಗಳಿಗೆ ಭೇಟಿ ನೀಡಿ, 2,77,264 ರೈತರೊಂದಿಗೆ ತೊಡಗಿಸಿಕೊಂಡಿವೆ. “ಒಂದು ರಾಷ್ಟ್ರ, ಒಂದು ಕೃಷಿ, ಒಂದು ತಂಡ” ಎಂಬ ಪರಿಕಲ್ಪನೆಯನ್ನು ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಹೊಂದಿದೆ ಎಂದು ಶ್ರೀ ಚೌಹಾಣ್ ಹೇಳಿದರು. ರೈತರು ತಮ್ಮ ಉತ್ಪನ್ನಗಳಿಗೆ ನ್ಯಾಯಯುತ ಬೆಲೆಯನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು, ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ (ಎಂ.ಐ.ಎಸ್.) ಅಡಿಯಲ್ಲಿ ಕೇಂದ್ರ ಸರ್ಕಾರವು ಸಾರಿಗೆ ವೆಚ್ಚವನ್ನು ಭರಿಸುತ್ತದೆ ಮತ್ತು ಆ ಮೂಲಕ ಮಾರುಕಟ್ಟೆಗಳಿಗೆ ಪ್ರವೇಶವನ್ನು ಬೆಂಬಲಿಸುತ್ತದೆ. …

Read More »

ಬಲವಾದ ಮತ್ತು ಸ್ಪಂದನಶೀಲ ʻಡಿಆರ್‌ಆರ್‌ʼ ಹಣಕಾಸು ವ್ಯವಸ್ಥೆಯು ಸದೃಢತೆಯ ಮೂಲಾಧಾರವೆಂದು ಭಾರತ ನಂಬಿದೆ: ಡಾ. ಪಿ.ಕೆ.ಮಿಶ್ರಾ

ಪ್ರಧಾನಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಡಾ. ಪಿ.ಕೆ. ಮಿಶ್ರಾ ಅವರು 2025ರ ಜೂನ್ 4ರಂದು ಜಿನೀವಾದಲ್ಲಿ ನಡೆದ ʻವಿಪತ್ತು ಅಪಾಯ ತಗ್ಗಿಸಲು (ಡಿಆರ್‌ಆರ್) ಹಣಕಾಸು ನೆರವು ಕುರಿತ ಸಚಿವರ ದುಂಡುಮೇಜಿನ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ನಿರ್ಣಾಯಕ ಸಭೆಯನ್ನು ಆಯೋಜಿಸಿದ್ದಕ್ಕಾಗಿ ಅವರು ʻವಿಪತ್ತು ಅಪಾಯ ತಗ್ಗಿಸುವ ಕುರಿತಾದ ವಿಶ್ವಸಂಸ್ಥೆಯ ಕಚೇರಿʼ(ಯುಎನ್‌ಡಿಆರ್‌ಆರ್) ಮತ್ತು ಅದರ ಪಾಲುದಾರರನ್ನು ಶ್ಲಾಘಿಸಿದರು. ಜಿ20 ಅಧ್ಯಕ್ಷತೆ ಮೂಲಕ ಜಾಗತಿಕ ಸಂವಾದವನ್ನು ಮುಂದುವರಿಸುವಲ್ಲಿ ಬ್ರೆಜಿಲ್ ಮತ್ತು ದಕ್ಷಿಣ ಆಫ್ರಿಕಾದ ಕೊಡುಗೆಗಳನ್ನು ಸಹ ಭಾರತ ಗುರುತಿಸಿತು. ʻವಿಪತ್ತು ಅಪಾಯ ತಗ್ಗಿಸಲು ಹಣಕಾಸು ನೆರವುʼ ಎಂಬುದು ಬಾಹ್ಯ ವಿಷಯವಲ್ಲ. ಬದಲಿಗೆ, ಅದು ರಾಷ್ಟ್ರೀಯ ವಿಪತ್ತು ನಿರ್ವಹಣಾ ವ್ಯವಸ್ಥೆಗಳ ಪರಿಣಾಮಕಾರಿ ಕಾರ್ಯನಿರ್ವಹಣೆಯಾಗಿದೆ.  ಜೊತೆಗೆ ಹೆಚ್ಚುತ್ತಿರುವ ಹವಾಮಾನ ಮತ್ತು ವಿಪತ್ತು ಅಪಾಯಗಳ ಹಿನ್ನೆಲೆಯಲ್ಲಿ ಅಭಿವೃದ್ಧಿ ಲಾಭಗಳನ್ನು ರಕ್ಷಿಸಲು ಇದು ಅತ್ಯಂತ ಮುಖ್ಯವಾಗಿದೆ ಎಂದು ಡಾ. ಮಿಶ್ರಾ ಒತ್ತಿಹೇಳಿದರು. ಬಲವಾದ ಮತ್ತು ಸ್ಪಂದನಶೀಲವಾದ ʻವಿಪತ್ತು ಅಪಾಯ ತಗ್ಗಿಸಲು ಹಣಕಾಸು ನೆರವುʼ ವ್ಯವಸ್ಥೆಯು ದೇಶವೊಂದರ ಸದೃಢತೆಗೆ ಮೂಲಾಧಾರವಾಗಿದೆ ಎಂಬ ಭಾರತದ ನಂಬಿಕೆಯನ್ನು ಅವರು ಪುನರುಚ್ಚರಿಸಿದರು. ʻವಿಪತ್ತು ಅಪಾಯ ತಗ್ಗಿಸುವಿಕೆಗಾಗಿ ಹಣಕಾಸು ನೆರವುʼ ಕ್ಷೇತ್ರದಲ್ಲಿ ಭಾರತದ ಪ್ರಯಾಣವನ್ನು ಎತ್ತಿ ತೋರಿದ ಅವರು, ಈ ಮೊದಲಿನ ಹಣಕಾಸು ಆಯೋಗಗಳು ಈ ನಿಟ್ಟಿನಲ್ಲಿ 60 ದಶಲಕ್ಷ ರೂಪಾಯಿಗಳ (ಸುಮಾರು 0.7 ದಶಲಕ್ಷ ಅಮೆರಿಕನ್‌ ಡಾಲರ್‌) ಆರಂಭಿಕ ನಿಧಿ ಹಂಚಿಕೆ ಮಾಡಿವೆ ಎಂದು ಮಾಹಿತಿ ನೀಡಿದರು. ಇಂದು, 15ನೇ ಹಣಕಾಸು ಆಯೋಗದ ಅಡಿಯಲ್ಲಿ ಈ ನಿಟ್ಟಿನಲ್ಲಿ ಒಟ್ಟು ವೆಚ್ಚವು 2.32 ಲಕ್ಷ ಕೋಟಿ ರೂಪಾಯಿಗಳನ್ನು (ಸುಮಾರು 28 ಶತಕೋಟಿ ಅಮೆರಿಕನ್‌ ಡಾಲರ್‌) ಮೀರಿದೆ ಎಂದು ಹೇಳಿದರು. ʻವಿಪತ್ತು ನಿರ್ವಹಣಾ ಕಾಯ್ದೆ-2005ʼರ ಬೆಂಬಲದೊಂದಿಗೆ ರಾಷ್ಟ್ರೀಯ ಮಟ್ಟದಿಂದ ರಾಜ್ಯ ಮತ್ತು ಜಿಲ್ಲಾ ಮಟ್ಟಗಳಿಗೆ ಪೂರ್ವನಿರ್ಧರಿತ, ನಿಯಮ ಆಧಾರಿತ ಹಂಚಿಕೆಗಳ ಮಹತ್ವವನ್ನು ಮಿಶ್ರಾ ಅವರು ಒತ್ತಿ ಹೇಳಿದರು. ಈ ರೂಪಾಂತರವು ವಿಪತ್ತು ಹಣಕಾಸು ಪ್ರತಿಕ್ರಿಯಾತ್ಮಕವಾಗಿರುವುದರ ಬದಲು, ರಚನಾತ್ಮಕ ಮತ್ತು ನಿರೀಕ್ಷಿತವಾಗಿರುವಂತೆ ಖಾತ್ರಿಪಡಿಸಿದೆ ಎಂದು ಅವರು ಹೇಳಿದರು. ನಾಲ್ಕು ಪ್ರಮುಖ ತತ್ವಗಳ ಮೇಲೆ ನಿರ್ಮಿಸಲಾದ ಭಾರತದ ʻವಿಪತ್ತು ಅಪಾಯ ತಗ್ಗಿಸುವಿಕೆಗಾಗಿ ಹಣಕಾಸು ನೆರವುʼ ಕಾರ್ಯವಿಧಾನವನ್ನು ಅವರು ಶ್ರೀ ಮಿಶ್ರಾ ವಿವರಿಸಿದರು. ಮೊದಲನೆಯ ತತ್ವವೆಂದರೆ ಸನ್ನದ್ಧತೆ, ಅಪಾಯ ತಗ್ಗಿಸುವಿಕೆ, …

Read More »