Saturday, December 06 2025 | 06:40:34 AM
Breaking News

International

ಫಲಿತಾಂಶಗಳ ಪಟ್ಟಿ: ರಷ್ಯಾ ಒಕ್ಕೂಟದ ಅಧ್ಯಕ್ಷರ ಅಧಿಕೃತ ಭಾರತ ಭೇಟಿ

ತಿಳುವಳಿಕಾ ಒಡಂಬಡಿಕೆಗಳು ಮತ್ತು ಒಪ್ಪಂದಗಳು. ವಲಸೆ ಮತ್ತು ಚಲನಶೀಲತೆ: ಒಂದು ದೇಶದ ನಾಗರಿಕರು ಇನ್ನೊಂದು ದೇಶದ ಭೂಭಾಗದಲ್ಲಿ ಕೈಗೊಳ್ಳುವ  ತಾತ್ಕಾಲಿಕ ಕಾರ್ಮಿಕ ಚಟುವಟಿಕೆಯ ಕುರಿತು ಭಾರತ ಗಣರಾಜ್ಯ ಸರ್ಕಾರ ಮತ್ತು ರಷ್ಯನ್ ಒಕ್ಕೂಟ ಸರ್ಕಾರದ ನಡುವೆ ಒಪ್ಪಂದ ಅಕ್ರಮ ವಲಸೆಯನ್ನು ಎದುರಿಸುವಲ್ಲಿ/ತಡೆಯುವಲ್ಲಿ  ಸಹಕಾರದ ಕುರಿತು ಭಾರತ ಗಣರಾಜ್ಯ ಸರ್ಕಾರ ಮತ್ತು ರಷ್ಯನ್ ಒಕ್ಕೂಟ ಸರ್ಕಾರದ ನಡುವೆ ಒಪ್ಪಂದ. ಆರೋಗ್ಯ ಮತ್ತು ಆಹಾರ ಸುರಕ್ಷತೆ: ಆರೋಗ್ಯ ರಕ್ಷಣೆ, ವೈದ್ಯಕೀಯ ಶಿಕ್ಷಣ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಸಹಕಾರದ ಕುರಿತು ಭಾರತ ಗಣರಾಜ್ಯದ ಆರೋಗ್ಯ ಮತ್ತು ಕುಟುಂಬ …

Read More »

ರಷ್ಯಾ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

ಗೌರವಾನ್ವಿತ, ನನ್ನ ಸ್ನೇಹಿತ, ಅಧ್ಯಕ್ಷ ಪುಟಿನ್, ಎರಡೂ ದೇಶಗಳ ಪ್ರತಿನಿಧಿಗಳೇ ಮಾಧ್ಯಮದ ಸ್ನೇಹಿತರೇ, ನಮಸ್ಕಾರ! ಡೋಬ್ರಿ ಡೆನ್! (ರಶ್ಯನ್ ಭಾಷೆಯಲ್ಲಿ ಶುಭ ಮಧ್ಯಾಹ್ನ) ಇಂದು 23 ನೇ ಭಾರತ-ರಷ್ಯಾ ಶೃಂಗಸಭೆಗೆ ಅಧ್ಯಕ್ಷ ಪುಟಿನ್ ಅವರನ್ನು ಸ್ವಾಗತಿಸಲು ನನಗೆ ಸಂತೋಷವಾಗಿದೆ. ನಮ್ಮ ದ್ವಿಪಕ್ಷೀಯ ಸಂಬಂಧವು ಹಲವಾರು ಐತಿಹಾಸಿಕ ಮೈಲಿಗಲ್ಲುಗಳ ಮೂಲಕ ಸಾಗುತ್ತಿರುವ ಸಮಯದಲ್ಲಿ ಅವರ ಭೇಟಿ ಬಂದಿದೆ. ನಿಖರವಾಗಿ 25 ವರ್ಷಗಳ ಹಿಂದೆ, ಅಧ್ಯಕ್ಷ ಪುಟಿನ್ ನಮ್ಮ ಕಾರ್ಯತಂತ್ರದ ಪಾಲುದಾರಿಕೆಗೆ ಅಡಿಪಾಯ ಹಾಕಿದರು. ಹದಿನೈದು ವರ್ಷಗಳ ಹಿಂದೆ, 2010 ರಲ್ಲಿ, …

Read More »

ಕೃಷಿ ಕ್ಷೇತ್ರದಲ್ಲಿ ಭಾರತ-ರಷ್ಯಾ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಕೇಂದ್ರ ಕೃಷಿ ಸಚಿವರು ರಷ್ಯಾದ ತಮ್ಮ ಸಹವರ್ತಿಯೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು

ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು, ರಷ್ಯಾ ಒಕ್ಕೂಟದ ಕೃಷಿ ಸಚಿವರಾದ ಗೌರವಾನ್ವಿತ ಶ್ರೀಮತಿ ಒಕ್ಸಾನಾ ಲುಟ್ ಅವರೊಂದಿಗೆ 2025ರ ಡಿಸೆಂಬರ್ 4 ರಂದು ಕೃಷಿ ಭವನದಲ್ಲಿ ದ್ವಿಪಕ್ಷೀಯ ಸಭೆ ನಡೆಸಿದರು. ಈ ಸಭೆಯಲ್ಲಿ ಉಭಯ ನಾಯಕರು ಪ್ರಸ್ತುತ ನಡೆಯುತ್ತಿರುವ ಸಹಕಾರದ ಕುರಿತು ಚರ್ಚಿಸಿದರು ಮತ್ತು ಭವಿಷ್ಯದ ಸಹಯೋಗದ ಕ್ಷೇತ್ರಗಳನ್ನು ಗುರುತಿಸಿದರು. ಭಾರತ ಮತ್ತು ರಷ್ಯಾ ಸಂಬಂಧಗಳು ವಿಶ್ವಾಸ, ಸ್ನೇಹ ಮತ್ತು …

Read More »

ನಾಗರಿಕರ ಅನುಕೂಲ ಮತ್ತು ಸುರಕ್ಷತೆಗಾಗಿ ಡಿಜಿಲಾಕರ್ ನಲ್ಲಿ ಈಗ ‘ಪಾಸ್ ಪೋರ್ಟ್ ಪರಿಶೀಲನಾ ದಾಖಲೆ’ ಲಭ್ಯ

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿರುವ ‘ರಾಷ್ಟ್ರೀಯ ಇ-ಆಡಳಿತ ವಿಭಾಗ’ವು, ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಸಹಯೋಗದೊಂದಿಗೆ ಡಿಜಿಲಾಕರ್ ಪ್ಲಾಟ್ ಫಾರ್ಮ್ ನಲ್ಲಿ ‘ಪಾಸ್ ಪೋರ್ಟ್ ಪರಿಶೀಲನಾ ದಾಖಲೆ’ (PVR) ಸೌಲಭ್ಯವನ್ನು ಒದಗಿಸುವ ಮೂಲಕ ನಾಗರಿಕ ಸೇವೆಗಳಲ್ಲಿ ಮಹತ್ವದ ಸುಧಾರಣೆಯನ್ನು ಘೋಷಿಸಿದೆ. ಡಿಜಿಲಾಕರ್ ಎನ್ನುವುದು ಡಿಜಿಟಲ್ ಇಂಡಿಯಾ ಕಾರ್ಯಕ್ರಮದಡಿಯಲ್ಲಿರುವ ಒಂದು ಸುರಕ್ಷಿತ ಹಾಗೂ ಕ್ಲೌಡ್ ಆಧಾರಿತ ವೇದಿಕೆಯಾಗಿದೆ. ಇದು ಡಿಜಿಟಲ್ ದಾಖಲೆಗಳು ಮತ್ತು ಪ್ರಮಾಣಪತ್ರಗಳ ವಿತರಣೆ, ಸಂಗ್ರಹಣೆ, ಹಂಚಿಕೆ ಮತ್ತು ಪರಿಶೀಲನೆಗೆ ಅನುವು ಮಾಡಿಕೊಡುತ್ತದೆ. ನಾಗರಿಕರ …

Read More »

ಜಿ-20 ಶೃಂಗಸಭೆ ವೇಳೆ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ: ಅಧಿವೇಶನ -3

ಗೌರವಾನ್ವಿತರೇ, ತಂತ್ರಜ್ಞಾನ ಮುಂದುವರಿದಂತೆ, ಅವಕಾಶಗಳು ಮತ್ತು ಸಂಪನ್ಮೂಲಗಳು ಎರಡೂ ಕೆಲವೇ ಜನರ ಕೈಗಳಲ್ಲಿ ಕೇಂದ್ರೀಕೃತವಾಗುತ್ತಿವೆ. ವಿಶ್ವದಾದ್ಯಂತ ನಿರ್ಣಾಯಕ ತಂತ್ರಜ್ಞಾನಗಳ ಮೇಲಿನ ಸ್ಪರ್ಧೆ ತೀವ್ರಗೊಳ್ಳುತ್ತಿದೆ. ಇದು ಮನುಕುಲಕ್ಕೆ ಕಳವಳಕಾರಿ ವಿಷಯವಾಗಿದೆ ಮತ್ತು ಇದು ನಾವೀನ್ಯತೆಗೆ ದೊಡ್ಡ ಅಡ್ಡಿಯಾಗಿದೆ. ಇದನ್ನು ಪರಿಹರಿಸಲು ನಾವು ನಮ್ಮ ಕಾರ್ಯ ವಿಧಾನದಲ್ಲಿ ಮೂಲಭೂತ ಬದಲಾವಣೆಯನ್ನು ತಂದುಕೊಳ್ಳಬೇಕಾಗಿದೆ. ’ಹಣಕಾಸು ಕೇಂದ್ರಿತ’ ಬದಲು ‘ಮಾನವ ಕೇಂದ್ರಿತ’, ಕೇವಲ ‘ರಾಷ್ಟ್ರೀಯ’ ಬದಲು ‘ಜಾಗತಿಕ’ ಮತ್ತು ‘ವಿಶೇಷ’ ಬದಲು ‘ಓಪನ್ ಸೋರ್ಸ್’ ಮಾದರಿಗಳನ್ನು …

Read More »

ಐ.ಬಿ.ಎಸ್.ಎ ನಾಯಕರ ಸಭೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ

ಗೌರವಾನ್ವಿತ ಅಧ್ಯಕ್ಷ ರಾಮಫೋಸಾ, ಗೌರವಾನ್ವಿತ ಅಧ್ಯಕ್ಷ ಲೂಲಾ, ಸ್ನೇಹಿತರೇ, ನಮಸ್ಕಾರ! ಜೋಹಾನ್ಸ್‌ಬರ್ಗ್‌ನ ರೋಮಾಂಚಕ ಮತ್ತು ಸುಂದರ ನಗರದಲ್ಲಿ ನಡೆಯುತ್ತಿರುವ ಐಬಿಎಸ್‌ಎ ನಾಯಕರ ಸಭೆಯಲ್ಲಿ ಭಾಗವಹಿಸಲು ನನಗೆ ತುಂಬಾ ಸಂತೋಷವಾಗಿದೆ. ಈ ಉಪಕ್ರಮಕ್ಕಾಗಿ ಐಬಿಎಸ್‌ಎ ಅಧ್ಯಕ್ಷ ಲೂಲಾ ಮತ್ತು ಅವರ ಆತ್ಮೀಯ ಆತಿಥ್ಯಕ್ಕಾಗಿ ಅಧ್ಯಕ್ಷ ರಾಮಫೋಸಾ ಅವರಿಗೆ ನನ್ನ ಪ್ರಾಮಾಣಿಕ ಕೃತಜ್ಞತೆಗಳನ್ನು ಅರ್ಪಿಸುತ್ತೇನೆ. ಐಬಿಎಸ್‌ಎ ಕೇವಲ ಮೂರು ದೇಶಗಳ ವೇದಿಕೆಯಲ್ಲ; ಇದು ಮೂರು ಖಂಡಗಳು, ಮೂರು ಪ್ರಮುಖ ಪ್ರಜಾಪ್ರಭುತ್ವ ಶಕ್ತಿಗಳು ಮತ್ತು …

Read More »

ಯು.ಎನ್.ಎಫ್.ಸಿ.ಸಿ.ಸಿ. ಸಿಒಪಿ 30ರಲ್ಲಿ ಪ್ರಮುಖ ಫಲಿತಾಂಶಗಳನ್ನು ಸ್ವಾಗತಿಸಿದ ಭಾರತ; ಸಮಾನತೆ, ಹವಾಮಾನ ನ್ಯಾಯ ಮತ್ತು ಜಾಗತಿಕ ಒಗ್ಗಟ್ಟಿನ ಬದ್ಧತೆ ಕುರಿತು ಪುನರುಚ್ಚಾರ

ಸಿಒಪಿ 30 ಅಧ್ಯಕ್ಷತೆಯ ಅಂತರ್ಗತ ನಾಯಕತ್ವಕ್ಕೆ ಭಾರತವು ಬಲವಾದ ಬೆಂಬಲವನ್ನು ವ್ಯಕ್ತಪಡಿಸಿತು ಮತ್ತು 22.11.2025 ರಂದು ಬ್ರೆಜಿಲ್ ನ ಬೆಲೆಮ್ ನಲ್ಲಿ ನಡೆದ ಯು.ಎನ್.ಎಫ್.ಸಿ.ಸಿ.ಸಿ. ಸಿಒಪಿ 30ರ ಸಮಾರೋಪ ಸಮಾರಂಭದಲ್ಲಿ ಉನ್ನತ ಮಟ್ಟದ ಹೇಳಿಕೆಯಲ್ಲಿ ಸಮ್ಮೇಳನದಲ್ಲಿ ಅಳವಡಿಸಿಕೊಂಡ ಹಲವಾರು ಮಹತ್ವದ ನಿರ್ಧಾರಗಳನ್ನು ಸ್ವಾಗತಿಸಿತು. ಈ ಹೇಳಿಕೆಯು ಸಿಒಪಿ ಅಧ್ಯಕ್ಷರ ನಾಯಕತ್ವಕ್ಕಾಗಿ ಭಾರತದ ಕೃತಜ್ಞತೆಯನ್ನು ತಿಳಿಸಿತು. ಇದು ಸೇರ್ಪಡೆ, ಸಮತೋಲನ ಮತ್ತು ಮುಟಿರಾವೊದ ಬ್ರೆಜಿಲಿಯನ್ ಮನೋಭಾವದಲ್ಲಿ ಬೇರೂರಿದೆ ಮತ್ತು ಸಿಒಪಿ 30 ಅನ್ನು ಸಮಗ್ರತೆಯಿಂದ ಮಾರ್ಗದರ್ಶನ ಮಾಡಿದೆ. …

Read More »

ಜಿ20 ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ: ಅಧಿವೇಶನ 2

ಘನತೆವೆತ್ತರೇ, ನೈಸರ್ಗಿಕ ವಿಕೋಪಗಳು ಮಾನವೀಯತೆಗೆ ಪ್ರಮುಖ ಸವಾಲನ್ನು ಒಡ್ಡುತ್ತಲೇ ಇವೆ. ಈ ವರ್ಷವೂ ಅವು ಜಾಗತಿಕ ಜನಸಂಖ್ಯೆಯ ಹೆಚ್ಚಿನ ಭಾಗದ ಮೇಲೆ ಪರಿಣಾಮ ಬೀರಿವೆ. ಪರಿಣಾಮಕಾರಿ ವಿಪತ್ತು ಸಿದ್ಧತೆ ಮತ್ತು ಪ್ರತಿಕ್ರಿಯೆಗಾಗಿ ಅಂತಾರಾಷ್ಟ್ರೀಯ ಸಹಕಾರವನ್ನು ಬಲಪಡಿಸುವ ಅಗತ್ಯವನ್ನು ಈ ಘಟನೆಗಳು ಸ್ಪಷ್ಟವಾಗಿ ಉಲ್ಲೇಖಿಸುತ್ತವೆ. ಈ ಚಿಂತನೆಯನ್ನು ಬೆಂಬಲಿಸಲು, ಭಾರತವು ತನ್ನ ಜಿ20 ಅಧ್ಯಕ್ಷತೆಯಲ್ಲಿ ವಿಪತ್ತು ಅಪಾಯ ಕಡಿತ ಕಾರ್ಯ ಗುಂಪನ್ನು ರಚಿಸಿತು. ಈ ಪ್ರಮುಖ ಕಾರ್ಯಸೂಚಿಗೆ ಆದ್ಯತೆ ನೀಡಿದ್ದಕ್ಕಾಗಿ ದಕ್ಷಿಣ …

Read More »

ಜಿ20 ಶೃಂಗಸಭೆಯ ಮೊದಲ ಅಧಿವೇಶನ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ

ಗೌರವಾನ್ವಿತರೇ, ನಮಸ್ಕಾರ! ಮೊದಲನೆಯದಾಗಿ, ಜಿ20 ಶೃಂಗಸಭೆಯ ಅತ್ಯುತ್ತಮ ಆತಿಥ್ಯ ಮತ್ತು ಯಶಸ್ವಿ ಅಧ್ಯಕ್ಷತೆಗಾಗಿ ಅಧ್ಯಕ್ಷ ರಾಮಫೋಸಾ ಅವರನ್ನು ನಾನು ಅಭಿನಂದಿಸುತ್ತೇನೆ. ದಕ್ಷಿಣ ಆಫ್ರಿಕಾದ ಅಧ್ಯಕ್ಷತೆಯಲ್ಲಿ, ಕೌಶಲ್ಯದ ವಲಸೆ, ಪ್ರವಾಸೋದ್ಯಮ, ಆಹಾರ ಭದ್ರತೆ, ಕೃತಕ ಬುದ್ಧಿಮತ್ತೆ, ಡಿಜಿಟಲ್ ಆರ್ಥಿಕತೆ, ನಾವೀನ್ಯತೆ ಮತ್ತು ಮಹಿಳಾ ಸಬಲೀಕರಣದಂತಹ ಪ್ರಮುಖ ಕ್ಷೇತ್ರಗಳಲ್ಲಿ ಗಮನಾರ್ಹ ಪ್ರಗತಿ ಸಾಧಿಸಲಾಗಿದೆ. ನವದೆಹಲಿಯ ಜಿ20 ಶೃಂಗಸಭೆಯಲ್ಲಿ ಪ್ರಾರಂಭಿಸಲಾದ ಐತಿಹಾಸಿಕ ಉಪಕ್ರಮಗಳನ್ನು ಇಲ್ಲಿಯೂ ಮುಂದುವರಿಸಲಾಗಿದೆ. ಸ್ನೇಹಿತರೇ, ಕಳೆದ ಹಲವಾರು ದಶಕಗಳಲ್ಲಿ, ಜಿ20 ಜಾಗತಿಕ …

Read More »

ಮದೀನಾದಲ್ಲಿ ಭಾರತೀಯ ಪ್ರಜೆಗಳು ಭಾಗಿಯಾಗಿದ್ದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೌದಿ ಅರೇಬಿಯಾದ ಮದೀನಾದಲ್ಲಿ ಭಾರತೀಯ ಪ್ರಜೆಗಳನ್ನು ಒಳಗೊಂಡ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಅವರು ಹೃದಯಾಂತರಾಳದ ಸಂತಾಪ ಸೂಚಿಸಿದರು ಮತ್ತು ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು. ರಿಯಾದ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮತ್ತು ಜೆಡ್ಡಾದಲ್ಲಿನ ರಾಯಭಾರ ಕಚೇರಿ ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಅಗತ್ಯ ಬೆಂಬಲ …

Read More »