Friday, July 24 2026 | 11:36:56 AM
Breaking News

Miscellaneous

‘ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಮಾದಕವಸ್ತು ಮುಕ್ತ ಯುವಕರು’ ಎಂಬ ಧ್ಯೇಯವಾಕ್ಯದೊಂದಿಗೆ ವಾರಣಾಸಿಯ ರುದ್ರಾಕ್ಷಿ ಕನ್ವೆನ್ಷನ್ ಸೆಂಟರ್ನಲ್ಲಿ ‘ಯುವ ಆಧ್ಯಾತ್ಮಿಕ ಶೃಂಗಸಭೆ’ ಪ್ರಾರಂಭವಾಯಿತು; ಭಾರತದಾದ್ಯಂತ ಸುಮಾರು 122 ಆಧ್ಯಾತ್ಮಿಕ ಮತ್ತು ಸಾಮಾಜಿಕ-ಸಾಂಸ್ಕೃತಿಕ ಸಂಸ್ಥೆಗಳಿಂದ 600 ಕ್ಕೂ ಹೆಚ್ಚು ಯುವಕರು ಪಾಲ್ಗೊಂಡರು

ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವು ಉತ್ತರ ಪ್ರದೇಶದ ವಾರಣಾಸಿಯಲ್ಲಿ ‘ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಮಾದಕವಸ್ತು ಮುಕ್ತ ಯುವಕರು’ ಎಂಬ ಧ್ಯೇಯವಾಕ್ಯದೊಂದಿಗೆ ‘ಯುವ ಆಧ್ಯಾತ್ಮಿಕ ಶೃಂಗಸಭೆ’ಯನ್ನು ಪ್ರಾರಂಭಿಸಿದೆ. ಈ ಶೃಂಗಸಭೆಯಲ್ಲಿ ದೇಶಾದ್ಯಂತದ 122 ಆಧ್ಯಾತ್ಮಿಕ ಮತ್ತು ಸಾಮಾಜಿಕ-ಸಾಂಸ್ಕೃತಿಕ ಸಂಸ್ಥೆಗಳನ್ನು ಪ್ರತಿನಿಧಿಸುವ 600ಕ್ಕೂ ಹೆಚ್ಚು ಯುವ ಭಾಗಿದಾರರನ್ನು ಪಾಲ್ಗೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಯುವಜನ ವ್ಯವಹಾರಗಳು, ಕ್ರೀಡೆ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು, …

Read More »

ʻಸ್ವಚ್ಛ ಸರ್ವೇಕ್ಷಣಾ 2024-25ʼ ಪ್ರಶಸ್ತಿಗಳನ್ನು ಪ್ರದಾನ ಮಾಡಿದ ರಾಷ್ಟ್ರಪತಿ

ಫಲಿತಾಂಶ ಹೊರಬಿದ್ದಿದೆ! ಭಾರತದ ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ನವದೆಹಲಿಯ ವಿಜ್ಞಾನ ಭವನದಲ್ಲಿ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ (ಎಂಒಎಚ್ಯುಎ) ಆಯೋಜಿಸಿದ್ದ ʻಸ್ವಚ್ಛ ಸರ್ವೇಕ್ಷಣಾ 2024-25ʼ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಕೇಂದ್ರ ಸಚಿವರಾದ ಶ್ರೀ ಮನೋಹರ್ ಲಾಲ್ ಮತ್ತು ಸಹಾಯಕ ಸಚಿವರಾದ ಶ್ರೀ ತೋಖಾನ್ ಸಾಹು ಅವರ ಉಪಸ್ಥಿತಿಯಲ್ಲಿ 23 ʻಸೂಪರ್ ಸ್ವಚ್ಛ ಲೀಗ್ ನಗರʼಗಳು ಪ್ರಶಸ್ತಿ ಸ್ವೀಕರಿಸಿದವು. ಭಾರತದಲ್ಲಿ ಹೊಸ ತಲೆಮಾರಿನ ಸ್ವಚ್ಛ ನಗರಗಳು ಉದಯಿಸಿದ್ದು …

Read More »

ಮಕ್ಕಳ ಅಸಾಧಾರಣ ಸಾಧನೆಗಳನ್ನು ಆಚರಿಸಲು ನೀಡುವ ವಿಶಿಷ್ಟ ಮನ್ನಣೆಯಾದ ʻಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ-2025ʼ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನಾಂಕವಾಗಿದೆ

ʻಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ-2025ʼ(PMRBP) ಪ್ರಶಸ್ತಿಗಳಿಗೆ ನಾಮನಿರ್ದೇಶನಗಳಿಗಾಗಿ ಕರೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಪುನರುಚ್ಚರಿಸುತ್ತಿದೆ. ಪ್ರಶಸ್ತಿಗಾಗಿ ಅರ್ಜಿಗಳ ಪಡೆಯುವಿಕೆ ಏಪ್ರಿಲ್ 1, 2025 ರಂದು ಆರಂಭವಾಗಿದ್ದು,  ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 31, 2025ಕ್ಕೆ ನಿಗದಿಪಡಿಸಲಾಗಿದೆ. ʻಪಿಎಂಆರ್‌ಬಿಪಿʼ ಪ್ರಶಸ್ತಿಗೆ ಎಲ್ಲಾ ನಾಮನಿರ್ದೇಶನಗಳನ್ನು https://awards.gov.in ಆನ್‌ಲೈನ್ ಪೋರ್ಟಲ್ ಮೂಲಕ ಸಲ್ಲಿಸಬೇಕು. ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಯು ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ, ಪರಿಸರ, ಕಲೆ …

Read More »

2026ನೇ ಸಾಲಿನ ಪದ್ಮ ಪ್ರಶಸ್ತಿಗೆ ಜುಲೈ 31ರವರೆಗೆ ಅರ್ಜಿ ಸಲ್ಲಿಕೆ

2026ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುವ ಪದ್ಮ ಪ್ರಶಸ್ತಿಗಳು -2026 ಗಾಗಿ ನಾಮನಿರ್ದೇಶನಗಳು / ಶಿಫಾರಸುಗಳು 2025ರ ಮಾರ್ಚ್‌ 15 ರಂದು ಪ್ರಾರಂಭವಾಗಿವೆ. ಪದ್ಮ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲು 2025ರ ಜುಲೈ 31 ಕೊನೆಯ ದಿನಾಂಕವಾಗಿದೆ. ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳು / ಶಿಫಾರಸುಗಳನ್ನು ರಾಷ್ಟ್ರೀಯ ಪುರಸ್ಕಾರ ಪೋರ್ಟಲ್‌  (https://awards.gov.in)  ನಲ್ಲಿಆನ್‌ಲೈನ್‌ನಲ್ಲಿ ಮಾತ್ರ ಸ್ವೀಕರಿಸಲಾಗುತ್ತದೆ. ಪದ್ಮ ಪ್ರಶಸ್ತಿಗಳಾದ ಪದ್ಮ ವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿಒಂದಾಗಿದೆ. 1954 ರಲ್ಲಿಸ್ಥಾಪಿಸಲಾದ ಈ ಪ್ರಶಸ್ತಿಗಳನ್ನು ಪ್ರತಿವರ್ಷ ಗಣರಾಜ್ಯೋತ್ಸವದ …

Read More »

ಭಾರತದ ರಾಷ್ಟ್ರಪತಿ ಅವರಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಗಣ್ಯ ವ್ಯಕ್ತಿಗಳಿಗೆ ಪ್ರಧಾನಮಂತ್ರಿ ಅಭಿನಂದನೆ

ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತದ ರಾಷ್ಟ್ರಪತಿ ಅವರಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ನಾಲ್ವರು ಗಣ್ಯ ವ್ಯಕ್ತಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭ ಹಾರೈಕೆಗಳನ್ನು ಸಲ್ಲಿಸಿದ್ದಾರೆ. ಸಾಮಾಜಿಕ ಮಾಧ್ಯಮ ವೇದಿಕೆ ‘ಎಕ್ಸ್’ ನಲ್ಲಿ ಸರಣಿ ಪೋಸ್ಟ್ ಗಳಲ್ಲಿ, ಪ್ರಧಾನಮಂತ್ರಿ ಅವರು ಪ್ರತಿಯೊಬ್ಬ ನಾಮನಿರ್ದೇಶಿತರ ಕೊಡುಗೆಗಳನ್ನು ಬಿಂಬಿಸಿದ್ದಾರೆ. ಶ್ರೀ ಉಜ್ವಲ್ ನಿಕಮ್ ಅವರು ಕಾನೂನು ವೃತ್ತಿಗೆ ನೀಡಿದ ಅನುಕರಣೀಯ ಭಕ್ತಿ ಮತ್ತು ಸಾಂವಿಧಾನಿಕ ಮೌಲ್ಯಗಳಿಗೆ ಅಚಲ ಬದ್ಧತೆಯನ್ನು ಪ್ರಧಾನಿ ಶ್ಲಾಘಿಸಿದರು. …

Read More »

ಸಾಂಪ್ರದಾಯಿಕ ಔಷಧದಲ್ಲಿ ಕೃತಕ ಬುದ್ಧಿಮತ್ತೆ (ಎ.ಐ.) ಕುರಿತಾದ ʻವಿಶ್ವ ಆರೋಗ್ಯ ಸಂಸ್ಥೆʼಯ ಮಹತ್ವದ ಸಂಕ್ಷಿಪ್ತ ವರದಿಯಲ್ಲಿ ಭಾರತದ ʻಆಯುಷ್ʼ ಆವಿಷ್ಕಾರಗಳು ಪ್ರಸ್ತಾವಗೊಂಡಿವೆ

ʻವಿಶ್ವ ಆರೋಗ್ಯ ಸಂಸ್ಥೆʼಯು(ಡಬ್ಲ್ಯು.ಎಚ್.ಒ) “ಸಾಂಪ್ರದಾಯಿಕ ಔಷಧದಲ್ಲಿ ಕೃತಕ ಬುದ್ಧಿಮತ್ತೆಯ ಅನ್ವಯವನ್ನು ಗುರುತಿಸುವುದು” ಎಂಬ ತಾಂತ್ರಿಕ ವರದಿಯನ್ನು ಬಿಡುಗಡೆ ಮಾಡಿದ್ದು, ಕೃತಕ ಬುದ್ಧಿಮತ್ತೆಯನ್ನು (ಎ.ಐ.) ಸಾಂಪ್ರದಾಯಿಕ ಔಷಧ ವ್ಯವಸ್ಥೆಗಳೊಂದಿಗೆ, ವಿಶೇಷವಾಗಿ ʻಆಯುಷ್ʼ ವ್ಯವಸ್ಥೆಗಳೊಂದಿಗೆ ಸಂಯೋಜಿಸುವಲ್ಲಿ ಭಾರತದ ಪ್ರವರ್ತಕ ಪ್ರಯತ್ನಗಳನ್ನು ಗುರುತಿಸಿದೆ. ಇದು ಜಾಗತಿಕ ಆರೋಗ್ಯ ಆವಿಷ್ಕಾರದ ವಿಚಾರದಲ್ಲಿ ಮಹತ್ವದ ಮೈಲಿಗಲ್ಲು ಎನಿಸಿಕೊಂಡಿದೆ. ಈ ವಿಷಯದ ಬಗ್ಗೆ ಭಾರತದ ಪ್ರಸ್ತಾಪವನ್ನು ʻಡಬ್ಲ್ಯೂ.ಎಚ್.ಒʼ ಅನುಸರಿಸಿದ್ದು, ಇದು ಸಾಂಪ್ರದಾಯಿಕ ಔಷಧದಲ್ಲಿ ಕೃತಕ ಬುದ್ಧಿಮತ್ತೆ ಅನ್ವಯಿಕೆ ಕುರಿತಾದ …

Read More »

ಡಿಜಿಟಲ್ ಉಪಕರಣಗಳ ಮೂಲಕ ಅಂಚೆ ಕಚೇರಿಗಳ ಆಧುನೀಕರಣ: ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ

ಕೇಂದ್ರ ಸಂಪರ್ಕ ಹಾಗೂ ಈಶಾನ್ಯ ಪ್ರದೇಶಾಭಿವೃದ್ಧಿ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಅವರು ಇಂದು ಬೆಂಗಳೂರಿನಲ್ಲಿ ಗ್ರಾಮೀಣ ಅಂಚೆ ಸೇವಕರೊಂದಿಗೆ ಸಂವಾದ ನಡೆಸಿದರು ಹಾಗೂ 2024-25ನೇ ಸಾಲಿನಲ್ಲಿನ ಉತ್ತಮ ಕಾರ್ಯನಿರ್ವಹಣೆಗಾಗಿ 15 ಗ್ರಾಮೀಣ ಅಂಚೆ ಸೇವಕರನ್ನು ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಸಚಿವರು, ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ 1.64 ಲಕ್ಷ ಅಂಚೆ ಕಚೇರಿಗಳಿವೆ. ಸೇವೆ ನೀಡುವ ಸಂಸ್ಥೆಗಳಲ್ಲಿ ಅಂಚೆ ಇಲಾಖೆಯು ಶೀಘ್ರ ವಿಶ್ವದಲ್ಲೇ ಮೊದಲ ಸ್ಥಾನ ಪಡೆಯುವ ನಿರೀಕ್ಷೆಯಿದೆ. ಅಂಚೆ ಇಲಾಖೆಯ …

Read More »

ಗೃಹಬಳಕೆ ವೆಚ್ಚ ಸಮೀಕ್ಷೆ: 2022-23 ಮತ್ತು 2023-24

ಪರಿಚಯ ಆಗಸ್ಟ್ 2022 – ಜುಲೈ 2023 ಮತ್ತು ಆಗಸ್ಟ್ 2023 – ಜುಲೈ 2024ರ ಅವಧಿಯಲ್ಲಿ ನಡೆಸಿದ ಸತತ ಗೃಹಬಳಕೆಯ ಬಳಕೆ ವೆಚ್ಚ ಸಮೀಕ್ಷೆಗಳು (HCES) ನಿರ್ದಿಷ್ಟ ಉಲ್ಲೇಖ ಅವಧಿಗಳಲ್ಲಿ ಕುಟುಂಬ ಸದಸ್ಯರ ಆಹಾರ ಪದಾರ್ಥಗಳ ಸೇವನೆಯ ಮಾಹಿತಿಯನ್ನು ಸಂಗ್ರಹಿಸಿವೆ. ಆಹಾರ ಸೇವನೆಯ ದತ್ತಾಂಶ ಮತ್ತು ವಿವಿಧ ಆಹಾರ ಪದಾರ್ಥಗಳ ಪೌಷ್ಟಿಕಾಂಶದ ಮೌಲ್ಯಗಳನ್ನು ಆಧರಿಸಿ, ರಾಜ್ಯ, ವಲಯ, ಮಾಸಿಕ ತಲಾವಾರು ಬಳಕೆಯ ವೆಚ್ಚದ ಫ್ರಾಕ್ಟೈಲ್ ವರ್ಗ (ಎಂಪಿಸಿಇ) ಮುಂತಾದ …

Read More »

ಕಾರ್ಯತಂತ್ರದ ಮತ್ತು ಉದಯೋನ್ಮುಖ ಕ್ಷೇತ್ರಗಳಲ್ಲಿ ಸಂಶೋಧನೆ, ಅಭಿವೃದ್ಧಿ ಮತ್ತು ನಾವೀನ್ಯತೆಯನ್ನು ಹೆಚ್ಚಿಸಲು ಸಂಶೋಧನೆ ಅಭಿವೃದ್ಧಿ ಮತ್ತು ನಾವೀನ್ಯತೆ (RDI) ಯೋಜನೆಗೆ ಸಚಿವ ಸಂಪುಟದ ಅನುಮೋದನೆ

ಭಾರತದ ಸಂಶೋಧನೆ ಮತ್ತು ನಾವೀನ್ಯತೆ ಪರಿಸರ ವ್ಯವಸ್ಥೆಗೆ ಹೊಸ ಚೈತನ್ಯ ನೀಡುವ ಮಹತ್ವದ ಕ್ರಮವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಇಂದು ₹1 ಲಕ್ಷ ಕೋಟಿಗಳ ಬೃಹತ್ ನಿಧಿಯೊಂದಿಗೆ ‘ಸಂಶೋಧನೆ, ಅಭಿವೃದ್ಧಿ ಮತ್ತು ನಾವೀನ್ಯತೆ (RDI)’ ಯೋಜನೆಗೆ ತನ್ನ ಅನುಮೋದನೆ ನೀಡಿದೆ. ನಾವೀನ್ಯತೆಯನ್ನು ಮುನ್ನಡೆಸುವಲ್ಲಿ ಮತ್ತು ಸಂಶೋಧನೆಗಳಿಗೆ ವಾಣಿಜ್ಯ ಸ್ವರೂಪ ನೀಡುವಲ್ಲಿ ಖಾಸಗಿ ವಲಯದ ಮಹತ್ವದ ಪಾತ್ರವನ್ನು ಮನಗಂಡು ಈ ಯೋಜನೆಯನ್ನು ರೂಪಿಸಲಾಗಿದೆ. …

Read More »

ಮಾಜಿ ಪ್ರಧಾನಮಂತ್ರಿ ಶ್ರೀ ಪಿ.ವಿ.ನರಸಿಂಹ ರಾವ್ ಅವರ ಜನ್ಮ ಜಯಂತಿಯಂದು ಪ್ರಧಾನಮಂತ್ರಿ ಗೌರವ ನಮನ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಜಿ ಪ್ರಧಾನಮಂತ್ರಿ ಶ್ರೀ ಪಿ.ವಿ.ನರಸಿಂಹ ರಾವ್ ಅವರಿಗೆ ಅವರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಗೌರವ ನಮನ ಸಲ್ಲಿಸಿದರು. ರಾಷ್ಟ್ರದ ಆರ್ಥಿಕ ಮತ್ತು ರಾಜಕೀಯ ಪರಿವರ್ತನೆಯ ನಿರ್ಣಾಯಕ ಹಂತದಲ್ಲಿ ಭಾರತದ ಅಭಿವೃದ್ಧಿ ಪಥವನ್ನು ರೂಪಿಸುವಲ್ಲಿ ಅವರು ವಹಿಸಿದ ಪ್ರಮುಖ ಪಾತ್ರವನ್ನು ಸ್ಮರಿಸಿದರು. ಈ ಸಂಬಂಧ ಎಕ್ಸ್ ಖಾತೆಯ ಪೋಸ್ಟ್ ನಲ್ಲಿ, ಅವರು ಹೀಗೆ ಬರೆದಿದ್ದಾರೆ: “ಶ್ರೀ ಪಿ.ವಿ.ನರಸಿಂಹ ರಾವ್ ಅವರನ್ನು ಅವರ ಜನ್ಮದಿನದಂದು …

Read More »