ವಿಶ್ವ ಬಾನುಲಿ ದಿನದ ಅಂಗವಾಗಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್ಲರಿಗೂ ಶುಭಾಶಯ ಕೋರಿದ್ದಾರೆ. ಈ ತಿಂಗಳ 23ರಂದು ನಿಗದಿಯಾಗಿರುವ ಮಾಸಿಕ ಕಾರ್ಯಕ್ರಮ “ಮನ್ ಕಿ ಬಾತ್”ಗಾಗಿ ಜನರು ತಮ್ಮ ಆಲೋಚನೆಗಳು ಮತ್ತು ಸಲಹೆಗಳನ್ನು ಹಂಚಿಕೊಳ್ಳುವಂತೆ ಅವರು ಎಲ್ಲರಿಗೂ ಆಹ್ವಾನ ನೀಡಿದ್ದಾರೆ. ಶ್ರೀ ಮೋದಿ ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ: “ವಿಶ್ವ ಬಾನುಲಿ ದಿನದ ಶುಭಾಶಯಗಳು! ಮಾಹಿತಿ ಒದಗಿಸುತ್ತಾ, ಸ್ಫೂರ್ತಿಯ ಸೆಲೆಯಾಗಿ ಮತ್ತು ಜನರನ್ನು …
Read More »ಉತ್ತಮ ಕೌಶಲ್ಯ ಅಭಿವೃದ್ಧಿ ಪರಿಸರ ವ್ಯವಸ್ಥೆ ಭಾರತದ ಯುವಜನರನ್ನು ಉದಯೋನ್ಮುಖ ಉದ್ಯೋಗಾವಕಾಶಗಳಿಗೆ ಸಜ್ಜುಗೊಳಿಸುತ್ತದೆ – ಶ್ರೀ ಜಯಂತ್ ಚೌಧರಿ
ಕೌಶಲ್ಯ ಅಭಿವೃದ್ಧಿಗಾಗಿ ಸಮಗ್ರ ಮತ್ತು ಸುರಕ್ಷಿತ ಮೂಲಸೌಕರ್ಯವನ್ನು ಬೆಳೆಸುವ ಮಹತ್ವದ ಹೆಜ್ಜೆಯಾಗಿ, ಕೇಂದ್ರ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ರಾಜ್ಯ ಸಚಿವರಾದ (ಸ್ವತಂತ್ರ ನಿರ್ವಹಣೆ) ಶ್ರೀ ಜಯಂತ್ ಚೌಧರಿ ಅವರು ಇಂದು ಬೆಂಗಳೂರಿನ ರಾಷ್ಟ್ರೀಯ ಕೌಶಲ್ಯ ತರಬೇತಿ ಸಂಸ್ಥೆ (ಎನ್.ಎಸ್.ಟ.ಐ.) (ಸಾಮಾನ್ಯ) ಯಲ್ಲಿ ಹೊಸದಾಗಿ ನಿರ್ಮಿಸಲಾದ ವಸತಿಗೃಹವನ್ನು ಉದ್ಘಾಟಿಸಿದರು. ಈ ಸೌಲಭ್ಯವು ತರಬೇತಿ ಪಡೆಯುವವರಿಗೆ ಸುರಕ್ಷಿತ ಮತ್ತು ಆರಾಮದಾಯಕವಾದ ವಸತಿ ವಾತಾವರಣವನ್ನು ಒದಗಿಸುವ ಗುರಿಯನ್ನು ಹೊಂದಿದೆ ಮತ್ತು ಯುವಕರನ್ನು ಸಬಲೀಕರಣಗೊಳಿಸುವ …
Read More »ತಮಿಳು ನಾಡಿನ ಜನಪ್ರಿಯ ಥೈಪೂಸಂ ಹಬ್ಬದ ಪ್ರಯುಕ್ತ ಪ್ರಧಾನಮಂತ್ರಿ ಶುಭಾಶಯ
ಇಂದು ತಮಿಳು ನಾಡಿನಲ್ಲಿ ಹಿಂದೂಗಳು ಆಚರಿಸುವ ಸುಬ್ರಹ್ಮಣ್ಯ ಸ್ವಾಮಿ ಆರಾಧಿಸುವ ಥೈಪೂಸಂ ಹಬ್ಬದ ಪ್ರಯುಕ್ತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶುಭಾಶಯ ತಿಳಿಸಿದರು. “ಮುರುಗನ್ ದೇವರ ದೈವಿಕ ಅನುಗ್ರಹವು ನಮಗೆ ಶಕ್ತಿ, ಸಮೃದ್ಧಿ ಮತ್ತು ಬುದ್ಧಿವಂತಿಕೆಯೊಂದಿಗೆ ಮಾರ್ಗದರ್ಶನ ನೀಡಲಿ. ಈ ಪವಿತ್ರ ಸಂದರ್ಭದಲ್ಲಿ, ಎಲ್ಲರಿಗೂ ಸಂತೋಷ, ಉತ್ತಮ ಆರೋಗ್ಯ ಮತ್ತು ಯಶಸ್ಸನ್ನು ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದು ಶ್ರೀ ಮೋದಿ ಹೇಳಿದರು. ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಪ್ರಧಾನಮಂತ್ರಿಗಳು, …
Read More »ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಪುಣ್ಯ ತಿಥಿಯಂದು ಪ್ರಧಾನಮಂತ್ರಿಯವರಿಂದ ಗೌರವ ನಮನ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಪುಣ್ಯ ತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. “ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರು ದೂರದೃಷ್ಟಿಯ ಚಿಂತಕರಾಗಿದ್ದು, ಅವರು ಭಾರತದ ಸೇವೆಗೆ ತಮ್ಮನ್ನು ಸಮರ್ಪಿಸಿಕೊಂಡಿದ್ದರು. ಸಮಾಜದ ದೀನ ದಲಿತ ವ್ಯಕ್ತಿಯನ್ನು ಮೇಲಕ್ಕೆತ್ತುವ ಅವರ ಪ್ರಯತ್ನಗಳು ಬಲಿಷ್ಠ ರಾಷ್ಟ್ರದೆಡೆಗಿನ ನಮ್ಮ ಪ್ರಯಾಣಕ್ಕೆ ಸ್ಫೂರ್ತಿ ನೀಡುತ್ತವೆ” ಎಂದು ಶ್ರೀ ಮೋದಿಯವರು ಹೇಳಿದ್ದಾರೆ. ಪ್ರಧಾನಮಂತ್ರಿಯವರು Xನಲ್ಲಿ; “ಪಂಡಿತ್ ದೀನ್ ದಯಾಳ್ ಉಪಾಧ್ಯಾಯ …
Read More »ವೇವ್ಸ್ ಎಐ ಆರ್ಟ್ ಇನ್ಸ್ಟಾಲೇಶನ್ ಚಾಲೆಂಜ್
ಪರಿಚಯ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಸಹಭಾಗಿತ್ವದಲ್ಲಿ ಇಂಟರ್ನೆಟ್ ಮತ್ತು ಮೊಬೈಲ್ ಅಸೋಸಿಯೇಷನ್ ಆಫ್ ಇಂಡಿಯಾ ಆಯೋಜಿಸಿರುವ ಎಐ ಆರ್ಟ್ ಇನ್ಸ್ಟಾಲೇಶನ್ ಚಾಲೆಂಜ್, ಕೃತಕ ಬುದ್ಧಿಮತ್ತೆ ಮತ್ತು ಕಲಾತ್ಮಕ ಅಭಿವ್ಯಕ್ತಿಯ ಸಮ್ಮಿಳನವನ್ನು ಅನ್ವೇಷಿಸಲು ಕಲಾವಿದರು, ವಿನ್ಯಾಸಕರು ಮತ್ತು ಎಐ ಉತ್ಸಾಹಿಗಳನ್ನು ಒಟ್ಟುಗೂಡಿಸುವ ಪ್ರವರ್ತಕ ಸ್ಪರ್ಧೆಯಾಗಿದೆ. ಸೃಜನಶೀಲತೆ ಮತ್ತು ನಾವೀನ್ಯತೆಯ ಗಡಿಗಳನ್ನು ವಿಸ್ತರಿಸಿ, ಎಐ-ಚಾಲಿತ ಉಪಕರಣಗಳು ಮತ್ತು ತಂತ್ರಗಳನ್ನು ಬಳಸಿಕೊಂಡು ಆಳವಾದ ಮತ್ತು ಸಂವಾದಾತ್ಮಕ ಅನುಸ್ಥಾಪನೆಗಳನ್ನು ರಚಿಸಲು ಸ್ಪರ್ಧಿಗಳನ್ನು ಆಹ್ವಾನಿಸಲಾಗಿದೆ. ಹೂಡಿಕೆದಾರರು, ಸಹಯೋಗಿಗಳು ಮತ್ತು ಉದ್ಯಮದ ನಾಯಕರೊಂದಿಗೆ ತೊಡಗಿಸಿಕೊಳ್ಳುವಿಕೆಯನ್ನು ಬೆಳೆಸುವಾಗ ಕಲೆಗಳಲ್ಲಿ ಎಐನ ಪರಿವರ್ತಕ ಸಾಮರ್ಥ್ಯವನ್ನು ಎತ್ತಿ ತೋರಿಸುವ ಗುರಿಯನ್ನು ಈ ಚಾಲೆಂಜ್ ಹೊಂದಿದೆ. ಕಲೆ ಮತ್ತು ತಂತ್ರಜ್ಞಾನವನ್ನು ಬೆಸೆಯುವ ಮೂಲಕ, ಇದು ಎಐ-ಚಾಲಿತ ಸೃಜನಶೀಲ ಅಭಿವ್ಯಕ್ತಿಯಲ್ಲಿ ಭಾರತವನ್ನು ಮುಂಚೂಣಿಯಲ್ಲಿರಿಸಲಿದೆ. ಈ ಚಾಲೆಂಜ್ (ಸವಾಲು) ವಿಶ್ವ ಆಡಿಯೊ ವಿಷುಯಲ್ ಮತ್ತು ಎಂಟರ್ಟೈನ್ಮೆಂಟ್ ಶೃಂಗಸಭೆ (ವೇವ್ಸ್) ಅಡಿಯಲ್ಲಿ ಪ್ರಮುಖ ಉಪಕ್ರಮವಾದ ಕ್ರಿಯೇಟ್ ಇನ್ ಇಂಡಿಯಾ ಚಾಲೆಂಜಿನ ಭಾಗವಾಗಿದೆ, ಇದು ಮಾಧ್ಯಮ ಮತ್ತು ಮನರಂಜನೆ (ಎಂ & ಇ) ಉದ್ಯಮದಲ್ಲಿ ನಾವೀನ್ಯತೆಗೆ ಜಾಗತಿಕ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ನೇತೃತ್ವದಲ್ಲಿ ಇದು 70,000 ಕ್ಕೂ ಹೆಚ್ಚು ನೋಂದಣಿಗಳನ್ನು ಆಕರ್ಷಿಸಿದೆ. 31 ಸ್ಪರ್ಧೆಗಳನ್ನು ಪ್ರಾರಂಭಿಸುವುದರೊಂದಿಗೆ, ಇದು ಸೃಜನಶೀಲತೆ ಮತ್ತು ಜಾಗತಿಕ ಭಾಗವಹಿಸುವಿಕೆಯನ್ನು ಉತ್ತೇಜಿಸುತ್ತಿದೆ. ಪ್ರಮುಖ ಉದ್ಯಮ ವೇದಿಕೆಯಾಗಿ, ಇದು ಸಹಯೋಗ, ವ್ಯಾಪಾರ ಅವಕಾಶಗಳು ಮತ್ತು ಜಾಗತಿಕ ಸೃಜನಶೀಲ ಕೇಂದ್ರವಾಗಿ ಭಾರತದ ಹೊರಹೊಮ್ಮುವಿಕೆಯನ್ನು ಪ್ರೇರೇಪಿಸುತ್ತದೆ. 2025 ರ ಮೇ 1 ರಿಂದ 4 ರವರೆಗೆ ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ ಮತ್ತು ಜಿಯೋ ವರ್ಲ್ಡ್ ಗಾರ್ಡನ್ಸ್ನಲ್ಲಿ ನಡೆಯಲಿರುವ ಈ ಶೃಂಗಸಭೆಯು ದೂರದೃಷ್ಟಿಯ ಆಲೋಚನೆಗಳು/ನವೀನ ಚಿಂತನೆಗಳು ಮತ್ತು ಉದಯೋನ್ಮುಖ ಪ್ರತಿಭೆಗಳಿಗೆ ವೇದಿಕೆಯನ್ನು (ಲಾಂಚ್ ಪ್ಯಾಡ್) ಒದಗಿಸುತ್ತದೆ. ಅರ್ಹತಾ ಮಾರ್ಗಸೂಚಿಗಳುibility ಸಲ್ಲಿಕೆ ಸಂದರ್ಭದ ಆವಶ್ಯಕತೆಗಳು v. ಅನುಸ್ಥಾಪನೆಯ ಕಾರ್ಯಸಾಧ್ಯತೆ ಮತ್ತು ಪರಸ್ಪರ ಕ್ರಿಯೆಯನ್ನು ಪ್ರದರ್ಶಿಸುವ ಮೂಲಮಾದರಿ ಅಥವಾ ಮಾಕ್ಅಪ್ ಅನ್ನು ಸಲ್ಲಿಸಿ. v. ಬಳಸಿದ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ …
Read More »ಮಾಜಿ ರಾಷ್ಟ್ರಪತಿ ಡಾ. ಜಾಕೀರ್ ಹುಸೇನ್ ಅವರ ಜನ್ಮ ದಿನಾಚರಣೆಯಂದು ಪುಷ್ಪ ನಮನ ಸಲ್ಲಿಸಿದ ರಾಷ್ಟ್ರಪತಿಯವರು
ಭಾರತದ ರಾಷ್ಟ್ರಪತಿಯವರಾದ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (ಫೆಬ್ರವರಿ 8, 2025ರಂದು) ರಾಷ್ಟ್ರಪತಿ ಭವನದಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಡಾ. ಜಾಕಿರ್ ಹುಸೇನ್ ಅವರ ಜನ್ಮ ದಿನಾಚರಣೆಯಂದು ಪುಷ್ಪ ನಮನ ಸಲ್ಲಿಸಿದರು. भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के …
Read More »ಶ್ರೀ ಕಾಮೇಶ್ವರ್ ಚೌಪಾಲ್ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಕಾಮೇಶ್ವರ್ ಚೌಪಾಲ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದಲ್ಲಿ ಅಮೂಲ್ಯ ಕೊಡುಗೆ ನೀಡಿದ ಬದ್ಧತೆಯುಳ್ಳ ರಾಮಭಕ್ತ ಅವರಾಗಿದ್ದಾರು ಎಂದು ಪ್ರಧಾನಿ ಅವರನ್ನು ಶ್ಲಾಘಿಸಿದ್ದಾರೆ. ಅವರು ತಮ್ಮ ಸಾಮಾಜಿಕ ಮಾಧ್ಯಮ X ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ. “ಬಿಜೆಪಿಯ ಹಿರಿಯ ನಾಯಕ ಮತ್ತು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಟ್ರಸ್ಟಿ ಕಾಮೇಶ್ವರ ಚೌಪಾಲ್ ಜಿ ಅವರ ನಿಧನದಿಂದ ತೀವ್ರ …
Read More »ಭಾರತ ಮತ್ತು ಇತರ 20 ದೇಶಗಳ ಭಾಗವಹಿಸುವಿಕೆಯೊಂದಿಗೆ ವೇವ್ಸ್ 2025 “ರೀಲ್ ಮೇಕಿಂಗ್”ಸವಾಲಿಗಾಗಿ 3,300ಕ್ಕೂ ಹೆಚ್ಚು ನಮೂದುಗಳನ್ನು ಸ್ವೀಕರಿಸಲಾಗಿದೆ
ವರ್ಲ್ಡ್ ಆಡಿಯೋ ವಿಷುಯಲ್ & ಎಂಟರ್ಟೈನ್ಮೆಂಟ್ ಶೃಂಗಸಭೆ (ವೇವ್ಸ್) 2025ರಲ್ಲಿ “ರೀಲ್ ಮೇಕಿಂಗ್” ಚಾಲೆಂಜ್ ಭಾರತ ಮತ್ತು 20 ದೇಶಗಳಿಂದ 3,379 ನೋಂದಣಿಗಳೊಂದಿಗೆ ಅಗಾಧ ಪ್ರತಿಕ್ರಿಯೆಯನ್ನು ಪಡೆದುಕೊಂಡಿದೆ. ಕ್ರಿಯೇಟ್ ಇನ್ ಇಂಡಿಯಾ ವೇವ್ಸ್ 2025ರ ಅಡಿಯಲ್ಲಿ ಪ್ರಮುಖ ಉಪಕ್ರಮವಾಗಿ ಪ್ರಾರಂಭಿಸಲಾದ ಸ್ಪರ್ಧೆಯು ಮಾಧ್ಯಮ ಮತ್ತು ಮನರಂಜನೆಗಾಗಿ ಜಾಗತಿಕ ಕೇಂದ್ರವಾಗಿ ಭಾರತದ ಬೆಳೆಯುತ್ತಿರುವ ಪ್ರಭಾವವನ್ನು ಎತ್ತಿ ತೋರಿಸುತ್ತದೆ ಮತ್ತು ದೇಶದ ವೇಗವಾಗಿ ವಿಸ್ತರಿಸುತ್ತಿರುವ ಡಿಜಿಟಲ್ ಕ್ರಿಯೇಟರ್ ಆರ್ಥಿಕತೆಯನ್ನು ಪ್ರತಿಬಿಂಬಿಸುತ್ತದೆ. ಇದು ಭಾರತ ಸರ್ಕಾರದ “ಕ್ರಿಯೇಟ್ ಇನ್ ಇಂಡಿಯಾ” …
Read More »ದೊರೆ ನಾಲ್ಕನೇ ಕರೀಮ್ ಆಗಾ ಖಾನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
ದೊರೆ ನಾಲ್ಕನೇ ಕರೀಂ ಆಗಾ ಖಾನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ. ಸೇವೆ ಮತ್ತು ಆಧ್ಯಾತ್ಮಿಕತೆಗೆ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದ ಅವರು ದೂರದೃಷ್ಟಿಯುಳ್ಳವರಾಗಿದ್ದರು ಎಂದು ಪ್ರಧಾನಮಂತ್ರಿ ಶ್ಲಾಘಿಸಿದ್ದಾರೆ. ಆರೋಗ್ಯ, ಶಿಕ್ಷಣ, ಗ್ರಾಮೀಣಾಭಿವೃದ್ಧಿ ಮತ್ತು ಮಹಿಳಾ ಸಬಲೀಕರಣದಂತಹ ಕ್ಷೇತ್ರಗಳಲ್ಲಿ ಅವರ ಕೊಡುಗೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರಧಾನಮಂತ್ರಿರವರ ಎಕ್ಸ್ ಪೋಸ್ಟ್ ಹೀಗಿದೆ: “ದೊರೆ ನಾಲ್ಕನೇ ಕರೀಮ್ ಅಗಾ ಖಾನ್ ಅವರ ನಿಧನದಿಂದ ತೀವ್ರ …
Read More »ನೇರ ಪ್ರಸಾರಗಳಲ್ಲಿನ ತಪ್ಪು ಮಾಹಿತಿಯನ್ನು ನಿಭಾಯಿಸಲು ಎಐ-ಚಾಲಿತ ಪರಿಹಾರಗಳನ್ನು ಅನಾವರಣಗೊಳಿಸಲಿರುವ ವೇವ್ಸ್- 2025
ವಾರ್ತಾ ಮತ್ತು ಪ್ರಸಾರ ಸಚಿವಾಲಯವು ಇಂಡಿಯಾ ಸೆಲ್ಯುಲರ್ ಮತ್ತು ಎಲೆಕ್ಟ್ರಾನಿಕ್ಸ್ ಅಸೋಸಿಯೇಷನ್ (ಐಸಿಇಎ) ಸಹಯೋಗದೊಂದಿಗೆ ಟ್ರೂತ್ ಟೆಲ್ ಹ್ಯಾಕಥಾನ್ ಚಾಲೆಂಜ್ ಅನ್ನು ಘೋಷಿಸಿದೆ. ಈ ಹ್ಯಾಕಥಾನ್ ಮೊದಲ ವರ್ಲ್ಡ್ ಆಡಿಯೋ ವಿಷುಯಲ್ ಮತ್ತು ಎಂಟರ್ಟೈನ್ಮೆಂಟ್ ಶೃಂಗಸಭೆ (WAVES) 2025 ರ ಕ್ರಿಯೇಟ್ ಇನ್ ಇಂಡಿಯಾ ಚಾಲೆಂಜ್ (ಸಿಐಸಿ) ಸೀಸನ್ 1 ರ ಭಾಗವಾಗಿದೆ. ಈ ಸವಾಲು ನೇರ ಪ್ರಸಾರದಲ್ಲಿನ ತಪ್ಪು ಮಾಹಿತಿಯನ್ನು ನಿಭಾಯಿಸಲು ಎಐ- ಚಾಲಿತ ಪರಿಹಾರಗಳನ್ನು ಅಭಿವೃದ್ಧಿಪಡಿಸುವ ಗುರಿಯನ್ನು …
Read More »
Matribhumi Samachar Kannad