Friday, December 12 2025 | 12:17:20 AM
Breaking News

Miscellaneous

ಎಲ್ಲರಿಗೂ ವಸಂತ ಪಂಚಮಿ ಮತ್ತು ಸರಸ್ವತಿ ಪೂಜೆಯ ಶುಭಾಶಯ ಕೋರಿದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಸಂತ ಪಂಚಮಿ ಮತ್ತು ಸರಸ್ವತಿ ಪೂಜೆಯ ಅಂಗವಾಗಿ ಎಲ್ಲರಿಗೂ ಶುಭ ಕೋರಿದ್ದಾರೆ. ಈ ಸಂಬಂಧ ಎಕ್ಸ್ ಖಾತೆಯಲ್ಲಿ ಅವರು ಹೀಗೆ ಬರೆದಿದ್ದಾರೆ: “ವಸಂತ ಪಂಚಮಿ ಮತ್ತು ಸರಸ್ವತಿ ಪೂಜೆಯ ಸಂದರ್ಭದಲ್ಲಿ ಎಲ್ಲಾ ದೇಶವಾಸಿಗಳಿಗೆ ಹೃತ್ಪೂರ್ವಕ ಶುಭಾಶಯಗಳು. ವಸಂತ ಪಂಚಮಿ ಮತ್ತು ಸರಸ್ವತಿ ಪೂಜೆಯ ಶುಭ ಸಂದರ್ಭಗಳಲ್ಲಿ ಶುಭಾಶಯಗಳು.”   भारत : 1885 से 1950 (इतिहास पर एक दृष्टि) …

Read More »

ಸಂಸ್ಥಾಪನಾ ದಿನದಂದು ಭಾರತೀಯ ಕರಾವಳಿ ರಕ್ಷಣಾ ಪಡೆಗಳನ್ನು ಶ್ಲಾಘಿಸಿದ ಪ್ರಧಾನಮಂತ್ರಿ

ಭಾರತೀಯ ಕರಾವಳಿ ರಕ್ಷಣಾ ಪಡೆಗಳ ಸ್ಥಾಪನಾ ದಿನದಂದು, ನಮ್ಮ ವಿಶಾಲ ಕರಾವಳಿಯನ್ನು ರಕ್ಷಿಸುವಲ್ಲಿನ ಶೌರ್ಯ, ಸಮರ್ಪಣೆ ಮತ್ತು ನಿರಂತರ ಜಾಗರೂಕತೆಗಾಗಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತೀಯ ಕರಾವಳಿ ರಕ್ಷಣಾ ಪಡೆಯನ್ನು ಶ್ಲಾಘಿಸಿದ್ದಾರೆ. ಸಮುದ್ರ ಭದ್ರತೆಯಿಂದ ವಿಪತ್ತು ಪ್ರತಿಕ್ರಿಯೆಯವರೆಗೆ, ಕಳ್ಳಸಾಗಣೆ ವಿರೋಧಿ ಕಾರ್ಯಾಚರಣೆಗಳಿಂದ ಪರಿಸರ ರಕ್ಷಣೆಯವರೆಗೆ, ಭಾರತೀಯ ಕರಾವಳಿ ರಕ್ಷಣಾ ಪಡೆ ನಮ್ಮ ಸಮುದ್ರಗಳ ಅಸಾಧಾರಣ ಹಾಗೂ ವಿಶೇಷ ರಕ್ಷಕರಾಗಿದ್ದು, ನಮ್ಮ ನೀರು ಮತ್ತು ಜನರ ಸುರಕ್ಷತೆಯನ್ನು …

Read More »

ಪಂಜಾಬ್ ಕೇಸರಿ ಲಾಲಾ ಲಜಪತ್ ರಾಯ್ ಅವರ ಜಯಂತಿ ಹಿನ್ನೆಲೆಯಲ್ಲಿ ಗೌರವ ಸಮರ್ಪಿಸಿದ ಪ್ರಧಾನಮಂತ್ರಿ

ಪಂಜಾಬ್ ಕೇಸರಿ ಲಾಲಾ ಲಜಪತ್ ರಾಯ್ ಅವರ ಜಯಂತಿ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಮರ್ಪಣೆ ಮಾಡಿದರು. ಈ ಸಂಬಂಧ ಪ್ರಧಾನಮಂತ್ರಿಗಳು ಎಕ್ಸ್‌ನಲ್ಲಿ ಸಂದೇಶ ಹಂಚಿಕೊಂಡಿದ್ದು: “ಭಾರತ ಮಾತೆಯ ಶ್ರಮಜೀವಿ ಸುಪುತ್ರ ಪಂಜಾಬ್ ಕೇಸರಿ ಲಾಲಾ ಲಜಪತ್ ರಾಯ್ ಅವರ ಜಯಂತಿ ಸಂದರ್ಭದಲ್ಲಿ ದೇಶದ ಕೋಟಿ ಕೋಟಿ ಜನರ ಪರವಾಗಿ ಹೃತ್ಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ. ಸ್ವಾತಂತ್ರ್ಯ ಚಳವಳಿಯಲ್ಲಿ ಸಂಪೂರ್ಣ ತೊಡಗಿಸಿಕೊಂಡಿದ್ದ ಈ ಮಹಾನ್ ನಾಯಕ ವಿದೇಶಿ …

Read More »

ಭಾರತ ಸರ್ಕಾರದ ಗ್ರಾಹಕ ವ್ಯವಹಾರಗಳ ಇಲಾಖೆಯು ಭಾರತದಾದ್ಯಂತ ಸಮಯವನ್ನು ಸಮನ್ವಯ (ಸಿಂಕ್ರೊನೈಸ್) ಮಾಡಲು ಕಾನೂನು ಮಾಪನಶಾಸ್ತ್ರ (ಭಾರತೀಯ ಪ್ರಮಾಣಿತ ಸಮಯ) ನಿಯಮಗಳು, 2025ರ ಕರಡನ್ನು ಅಧಿಸೂಚಿಸಿದೆ

‘ಒಂದು ರಾಷ್ಟ್ರ, ಒಂದು ಸಮಯ’ ಮತ್ತು ಭಾರತೀಯ ಪ್ರಮಾಣಿತ ಸಮಯ (ಐ ಎಸ್ ಟಿ) ಯಲ್ಲಿ ನಿಖರತೆಯನ್ನು ಸಾಧಿಸುವ ಗುರಿಯೊಂದಿಗೆ, ಭಾರತ ಸರ್ಕಾರದ ಗ್ರಾಹಕ ವ್ಯವಹಾರಗಳ ಇಲಾಖೆ ರಾಷ್ಟ್ರೀಯ ಭೌತಿಕ ಪ್ರಯೋಗಾಲಯ (ಎನ್ ಪಿ ಎಲ್) ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸಹಯೋಗದೊಂದಿಗೆ ಐ ಎಸ್ ಟಿಯನ್ನು ಮಿಲಿಸೆಕೆಂಡ್ನಿಂದ ಮೈಕ್ರೋಸೆಕೆಂಡ್ ನಿಖರತೆಯೊಂದಿಗೆ ಪ್ರಸಾರ ಮಾಡುವ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಈ ಯೋಜನೆಯು ಭಾರತದಾದ್ಯಂತ ಐದು ಕಾನೂನು ಮಾಪನಶಾಸ್ತ್ರ ಪ್ರಯೋಗಾಲಯಗಳಿಂದ ಐಎಸ್ ಟಿಯನ್ನು ಪ್ರಸಾರ ಮಾಡಲು ತಂತ್ರಜ್ಞಾನ ಮತ್ತು ಮೂಲಸೌಕರ್ಯಗಳನ್ನು ನಿರ್ಮಿಸುವ  ಗುರಿಯನ್ನು ಹೊಂದಿದೆ. ನ್ಯಾವಿಗೇಷನ್, ದೂರಸಂಪರ್ಕ, ಪವರ್ ಗ್ರಿಡ್ ಸಿಂಕ್ರೊನೈಸೇಶನ್, ಬ್ಯಾಂಕಿಂಗ್, ಡಿಜಿಟಲ್ ಆಡಳಿತ ಮತ್ತು ಆಳವಾದ ಬಾಹ್ಯಾಕಾಶ ಸಂಚರಣೆ ಮತ್ತು ಗುರುತ್ವಾಕರ್ಷಣೆ ತರಂಗ ಪತ್ತೆ ಸೇರಿದಂತೆ ಅತ್ಯಾಧುನಿಕ ವೈಜ್ಞಾನಿಕ ಸಂಶೋಧನೆಯಂತಹ ಕ್ಷೇತ್ರಗಳಿಗೆ ಈ ನಿಖರತೆ ಅತ್ಯಗತ್ಯ. ಆದಾಗ್ಯೂ ಈ  ಪ್ರಾಮುಖ್ಯತೆಯ ಹೊರತಾಗಿಯೂ, ಐಎಸ್ಟಿಯನ್ನು ಎಲ್ಲಾ ಟೆಲಿಕಾಂ ಸೇವಾ ಪೂರೈಕೆದಾರರು (ಟಿ ಎಸ್ ಪಿಗಳು) ಮತ್ತು ಇಂಟರ್ನೆಟ್ ಸೇವಾ ಪೂರೈಕೆದಾರರು (ಐ ಎಸ್ ಪಿಗಳು) ಕಡ್ಡಾಯವಾಗಿ ಅಳವಡಿಸಿಕೊಳ್ಳುವುದಿಲ್ಲ, ಅವರಲ್ಲಿ ಅನೇಕರು ಜಿಪಿಎಸ್ನಂತಹ ವಿದೇಶಿ ಸಮಯದ ಮೂಲಗಳನ್ನು ಅವಲಂಬಿಸಿದ್ದಾರೆ. ರಾಷ್ಟ್ರೀಯ ಭದ್ರತೆ, ನೈಜ-ಸಮಯದ ಅನ್ವಯಿಕೆಗಳು ಮತ್ತು ನಿರ್ಣಾಯಕ ಮೂಲಸೌಕರ್ಯಗಳ ಸುಗಮ ಕಾರ್ಯಾಚರಣೆಗೆ ಎಲ್ಲಾ ನೆಟ್ವರ್ಕ್ಗಳು ಮತ್ತು ವ್ಯವಸ್ಥೆಗಳನ್ನು ಐಎಸ್ಟಿಗೆ ಸಿಂಕ್ರೊನೈಸ್ ಮಾಡುವುದು ಅತ್ಯಗತ್ಯ. ಈ ಸವಾಲುಗಳನ್ನು ನಿಭಾಯಿಸಲು, ಕಾನೂನು ಮಾಪನಶಾಸ್ತ್ರ ಕಾಯ್ದೆ, 2009 ರ ಅಡಿಯಲ್ಲಿ ಐಎಸ್ಟಿ ಅಳವಡಿಸಿಕೊಳ್ಳಲು ನೀತಿ ಚೌಕಟ್ಟು, ನಿಯಂತ್ರಣ ಮತ್ತು ಶಾಸನವನ್ನು ಅಭಿವೃದ್ಧಿಪಡಿಸಲು ಉನ್ನತ ಅಧಿಕಾರದ ಅಂತರ ಸಚಿವಾಲಯ ಸಮಿತಿಯನ್ನು ರಚಿಸಲಾಗಿತ್ತು. ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ಅಧ್ಯಕ್ಷತೆಯ ಸಮಿತಿಯು ಎನ್ಪಿಎಲ್, ಇಸ್ರೋ, ಐಐಟಿ ಕಾನ್ಪುರ, ಎನ್ಐಸಿ, ಸಿಇಆರ್ಟಿ-ಇನ್, ಸೆಬಿ ಮತ್ತು ರೈಲ್ವೆ, ಟೆಲಿಕಾಂ ಮತ್ತು ಹಣಕಾಸು ಸೇವೆಗಳಂತಹ ಪ್ರಮುಖ ಸರ್ಕಾರಿ ಇಲಾಖೆಗಳ ಪ್ರತಿನಿಧಿಗಳನ್ನು ಒಳಗೊಂಡಿದೆ. ಐಎಸ್ಟಿ ಅಳವಡಿಕೆಯನ್ನು ಕಡ್ಡಾಯಗೊಳಿಸಲು ನಿಯಮಗಳನ್ನು ರೂಪಿಸಲು, ನೆಟ್ವರ್ಕ್ ಗಳಿಗೆ ಸಿಂಕ್ರೊನೈಸೇಶನ್ ಮಾರ್ಗಸೂಚಿಗಳನ್ನು ರೂಪಿಸಲು, ಸಮಯ-ಸ್ಟಾಂಪಿಂಗ್ ಮತ್ತು ಸೈಬರ್ ಭದ್ರತೆಗಾಗಿ ನಿಯಂತ್ರಕ ಚೌಕಟ್ಟುಗಳನ್ನು ಸಿದ್ಧಪಡಿಸಲು ಮತ್ತು ಸುಧಾರಿತ ತಂತ್ರಜ್ಞಾನಗಳು ಮತ್ತು ಮೂಲಸೌಕರ್ಯಗಳ ಮೂಲಕ ಐಎಸ್ಟಿ ಪ್ರಸರಣ ಯೋಜನೆಯ ಪ್ರಗತಿಯನ್ನು ಮೇಲ್ವಿಚಾರಣೆ ಮಾಡಲು ಸಮಿತಿಯ ವಿವಿಧ ಸಭೆಗಳನ್ನು ನಡೆಸಲಾಯಿತು. …

Read More »

2025ರ ಗಣರಾಜ್ಯೋತ್ಸವ ಪರೇಡ್ ನಲ್ಲಿ ಎಂ.ಎನ್.ಆರ್.ಇ. ‘ಹೊಸ ಭಾರತದ ಸೂರ್ಯೋದಯ’ ಸ್ತಬ್ಧಚಿತ್ರವನ್ನು ಪ್ರದರ್ಶಿಸಲಿದೆ

ನವದೆಹಲಿಯ ಕರ್ತವ್ಯ ಪಥದಲ್ಲಿ ನಡೆಯುವ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ (ಎಂ.ಎನ್.ಆರ್.ಇ.) ಆಕರ್ಷಕ ಸ್ತಬ್ಧಚಿತ್ರವನ್ನು ಅನಾವರಣಗೊಳಿಸಲಿದೆ. ಈ ವೈವಿದ್ಯಮಯ ಪ್ರದರ್ಶನವು ಭಾರತದ ವಿಕಸನಗೊಳ್ಳುತ್ತಿರುವ ಇಂಧನ ಕ್ಷೇತ್ರದ ಒಂದು ನೋಟವನ್ನು ನೀಡುತ್ತದೆ. ರಾಷ್ಟ್ರದ ಆಳವಾದ ಸಾಂಸ್ಕೃತಿಕ ಪರಂಪರೆಯನ್ನು ಆಚರಿಸುವಾಗ ನವೀಕರಿಸಬಹುದಾದ ಇಂಧನದಲ್ಲಿ ಅದರ ಅದ್ಭುತ ಪ್ರಗತಿಯನ್ನು ಎತ್ತಿ ತೋರಿಸುತ್ತದೆ. ವಿಶ್ವದ ಅತಿದೊಡ್ಡ ವಸತಿ ಮೇಲ್ಛಾವಣಿ ಸೌರ ಉಪಕ್ರಮವು ಮಹತ್ವಾಕಾಂಕ್ಷೆಯ ಪ್ರಧಾನಮಂತ್ರಿ ಸೂರ್ಯಘರ್ ಮುಫ್ತ್ ಬಿಜ್ಲಿ ಯೋಜನೆ, …

Read More »

ಭಾರತ ರತ್ನ ಕರ್ಪುರಿ ಠಾಕೂರ್ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಬಿಹಾರದ ಮಾಜಿ ಮುಖ್ಯಮಂತ್ರಿಯವರಾದ, ಭಾರತ ರತ್ನ ಕರ್ಪುರಿ ಠಾಕೂರ್ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಶ್ರೀ ಮೋದಿಯವರು Xನಲ್ಲಿ ಪೋಸ್ಟ್ ಮಾಡಿ: “ಬಿಹಾರದ ಮಾಜಿ ಮುಖ್ಯಮಂತ್ರಿ ಭಾರತ ರತ್ನ ಕರ್ಪೂರಿ ಠಾಕೂರ್ ಅವರಿಗೆ ಜನ್ಮ ದಿನಾಚರಣೆಯಂದು ಗೌರವ ನಮನಗಳು. ಜನನಾಯಕರಾದ ಅವರು ತಮ್ಮ ಇಡೀ ಜೀವನವನ್ನು ಸಾಮಾಜಿಕ ನ್ಯಾಯಕ್ಕಾಗಿ ಮುಡಿಪಾಗಿಟ್ಟು, ಆ ನಿಟ್ಟಿನಲ್ಲಿ ಅನೇಕ ಕಾರ್ಯಗಳನ್ನು ಮಾಡಿದ ಧೀಮಂತರು. ಅವರ ಜೀವನ …

Read More »

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವಾದ ಇಂದು, ಹೆಣ್ಣು ಮಗುವನ್ನು ಸಬಲೀಕರಣಗೊಳಿಸಿ, ಆಕೆಗೆ ವ್ಯಾಪಕವಾದ ಅವಕಾಶಗಳನ್ನು ನೀಡುವ ನಮ್ಮ ಬದ್ಧತೆಯನ್ನು ನಾವು ಪುನರುಚ್ಚರಿಸುತ್ತೇವೆ: ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವಾದ ಇಂದು, ಹೆಣ್ಣು ಮಗುವನ್ನು ಸಬಲೀಕರಣಗೊಳಿಸಿ, ಆಕೆಗೆ ವಿಸ್ತೃತ ಶ್ರೇಣಿಯ ಅವಕಾಶಗಳನ್ನು ನೀಡುವ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ. Xನ ಒಂದು ಥ್ರೆಡ್ ಪೋಸ್ಟ್ ನಲ್ಲಿ ಶ್ರೀ ಮೋದಿಯವರು: “ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವಾದ ಇಂದು, ಹೆಣ್ಣು ಮಗುವನ್ನು ಸಬಲೀಕರಣಗೊಳಿಸಿ, ಆಕೆಗೆ ವ್ಯಾಪಕವಾದ ಅವಕಾಶಗಳನ್ನು ನೀಡುವ ನಮ್ಮ ಬದ್ಧತೆಯನ್ನು ನಾವು ಪುನರುಚ್ಚರಿಸುತ್ತೇವೆ. ಎಲ್ಲಾ ಕ್ಷೇತ್ರಗಳಲ್ಲಿ ಹೆಣ್ಣು ಮಕ್ಕಳ ಸಾಧನೆಗಳ ಬಗ್ಗೆ ಭಾರತ …

Read More »

2025ರ ಗಣರಾಜ್ಯೋತ್ಸವ ಪರೇಡ್‌ಗೆ ಸಾಕ್ಷಿಯಾಗಲು 800 ವಿಶೇಷ ಅತಿಥಿಗಳಿಗೆ ಆಹ್ವಾನ ನೀಡಿದ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ

ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ(ಎಂ ಎನ್ ಆರ್ ಇ)ವು ನವದೆಹಲಿಯಲ್ಲಿ ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನ(ಪರೇಡ್) ವೀಕ್ಷಿಸಲು ದೇಶಾದ್ಯಂತ 800 ವಿಶೇಷ ಅತಿಥಿಗಳಿಗೆ ಆತಿಥ್ಯ ವಹಿಸಲಿದೆ. ಎಂ ಎನ್ ಆರ್ ಇ ಸಚಿವಾಲಯದ ಪ್ರಮುಖ ನವೀಕರಿಸಬಹುದಾದ ಇಂಧನ ಯೋಜನೆಗಳೊಂದಿಗೆ ಸಂಬಂಧ ಹೊಂದಿರುವ ಗಣ್ಯರು ಮತ್ತು ಗುಂಪುಗಳ ಸಾಧನೆಗಳನ್ನು ಮತ್ತು ಭಾರತದ ಸುಸ್ಥಿರ ಇಂಧನ ಪರಿವರ್ತನೆಗೆ ಅವರ ಕೊಡುಗೆಗಳನ್ನು ಆಚರಿಸಲು ಈ ಉಪಕ್ರಮ ಕೈಗೊಳ್ಳಲಾಗಿದೆ. ಆಹ್ವಾನಿತರಲ್ಲಿ ಪ್ರಧಾನ …

Read More »

ವೇವ್ಸ್ ವೇಳಾಪಟ್ಟಿ ಬದಲಾವಣೆ

ಹೊಸದಿಲ್ಲಿಯ ಭಾರತ್ ಮಂಟಪದಲ್ಲಿ 2025ರ ಫೆಬ್ರವರಿ 5 ರಿಂದ 9 ರವರೆಗೆ ನಿಗದಿಯಾಗಿದ್ದ ವಿಶ್ವ ಶ್ರಾವ್ಯ ದೃಶ್ಯ ಮತ್ತು ಮನರಂಜನಾ ಶೃಂಗಸಭೆ (ವೇವ್ಸ್) ವೇಳಾಪಟ್ಟಿ ಬದಲಾವಣೆಯಾಗಿದೆ. ಇತ್ತೀಚಿನ ಮಾಹಿತಿಗಳ ಪ್ರಕಾರ ಕಾರ್ಯಕ್ರಮವನ್ನು ಮುಂಬೈಗೆ ಸ್ಥಳಾಂತರಿಸಲಾಗುವುದು ಮತ್ತು 2025 ರ ಏಪ್ರಿಲ್ ಅಂತ್ಯ ಅಥವಾ ಮೇ ಆರಂಭದಲ್ಲಿ ನಡೆಸುವುದೆಂದು ತಾತ್ಕಾಲಿಕವಾಗಿ ವೇಳಾಪಟ್ಟಿಯನ್ನು ಮರು ನಿಗದಿಪಡಿಸಲಾಗುವುದು ಎಂದು ನಿರೀಕ್ಷಿಸಲಾಗಿದೆ. ವೇವ್ಸ್ ನ ಪರಿಷ್ಕೃತ ದಿನಾಂಕಗಳು ಮತ್ತು ಸ್ಥಳದ ಬಗ್ಗೆ ಭಾರತ ಸರ್ಕಾರದ ವಾರ್ತಾ ಮತ್ತು ಪ್ರಸಾರ …

Read More »

ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ಬಸ್‌ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಅವರು ಪಿ ಎಂ ಎನ್ ಆರ್ ಎಫ್ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರವನ್ನು ಘೋಷಿಸಿದ್ದಾರೆ. ಪ್ರಧಾನಮಂತ್ರಿಗಳ ಕಾರ್ಯಾಲಯ ತನ್ನ  X  ಪೋಸ್ಟ್ ನಲ್ಲಿ ಹೀಗೆ ಹೇಳಿದೆ. “ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ಅಪಘಾತದಲ್ಲಿ …

Read More »