Thursday, December 11 2025 | 11:05:23 AM
Breaking News

National

2025ನೇ ಸಾಲಿನ ಪದ್ಮ ಪ್ರಶಸ್ತಿಗಳು ಪ್ರಕಟ

ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಗಳನ್ನು ಅಂದರೆ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀಗಳನ್ನು ಮೂರು ವರ್ಗಗಳಲ್ಲಿ ಪ್ರದಾನ ಮಾಡಲಾಗುವುದು. ಈ ಪ್ರಶಸ್ತಿಗಳನ್ನು ವಿವಿಧ ವಿಭಾಗಗಳು/ ಕ್ಷೇತ್ರಗಳಲ್ಲಿ ಚಟುವಟಿಕೆಗಳನ್ನು ಅಂದರೆ ಕಲೆ, ಸಾಮಾಜಿಕ ಸೇವೆ, ಸಾರ್ವಜನಿಕ ವ್ಯವಹಾರ, ವಿಜ್ಞಾನ ಮತ್ತು ಇಂಜಿನಿಯರಿಂಗ್, ವ್ಯಾಪಾರ ಮತ್ತು ಉದ್ಯಮ, ವೈದ್ಯಕೀಯ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ನಾಗರಿಕ ಸೇವೆ ಇತ್ಯಾದಿಗಳಲ್ಲಿ ನೀಡಲಾಗುವುದು. ‘ಪದ್ಮವಿಭೂಷಣ’ ಪ್ರಶಸ್ತಿಯನ್ನು ಅಸಾಧಾರಣ ಮತ್ತು ಅತ್ಯುನ್ನತ ಸೇವೆಗಾಗಿ ನೀಡಲಾಗುವುದು …

Read More »

ಪ್ರಧಾನಮಂತ್ರಿ ಗತಿಶಕ್ತಿ ನೇತೃತ್ವದ ನೆಟ್ ವರ್ಕ್ ಯೋಜನಾ ಗುಂಪಿನ 86ನೇ ಸಭೆ ಬಹು ಮಾದರಿ ಸಂಪರ್ಕಕ್ಕಾಗಿ ನಾಲ್ಕು ರೈಲು ಮತ್ತು ರಸ್ತೆ ಯೋಜನೆಗಳನ್ನು ಮೌಲ್ಯಮಾಪನ ಮಾಡಿತು

ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆಯ (ಡಿಪಿಐಐಟಿ) ಜಂಟಿ ಕಾರ್ಯದರ್ಶಿ ಶ್ರೀ ಇ. ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ನೆಟ್ ವರ್ಕ್ ಯೋಜನಾ ಗುಂಪಿನ (ಎನ್ ಪಿ ಜಿ) 86ನೇ ಸಭೆ, ಪಿಎಂ ಗತಿಶಕ್ತಿಯ ತತ್ವಗಳಿಗೆ ಅನುಗುಣವಾಗಿ ನಾಲ್ಕು ಯೋಜನೆಗಳನ್ನು (2 ರೈಲ್ವೆ ಮತ್ತು 2 ಹೆದ್ದಾರಿ ಅಭಿವೃದ್ಧಿ ಯೋಜನೆಗಳು) ಮೌಲ್ಯಮಾಪನ ಮಾಡಿತು. ರಸ್ತೆ ಮತ್ತು ರೈಲು ವಲಯಗಳಲ್ಲಿನ ಮೂಲಸೌಕರ್ಯ ಯೋಜನೆಗಳನ್ನು ಮೌಲ್ಯಮಾಪನ ಮಾಡಲು 2025ರ ಜನವರಿ 24 …

Read More »

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎನ್ ಸಿ ಸಿ ಕೆಡೆಟ್ ಗಳು, ಎನ್ ಎಸ್ ಎಸ್ ಸ್ವಯಂಸೇವಕರು, ಬುಡಕಟ್ಟು ಅತಿಥಿಗಳು ಮತ್ತು ಸ್ತಬ್ಧಚಿತ್ರ ಕಲಾವಿದರೊಂದಿಗೆ ಸಂವಾದ ನಡೆಸಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿನ್ನೆ (2025ರ ಜನವರಿ 24) ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಮುಂಬರುವ ಗಣರಾಜ್ಯೋತ್ಸವದ ಮೆರವಣಿಗೆಯ ಭಾಗವಾಗಲಿರುವ ಎನ್ ಸಿ ಸಿ ಕೆಡೆಟ್ ಗಳು, ಎನ್ ಎಸ್ ಎಸ್ ಸ್ವಯಂಸೇವಕರು, ಬುಡಕಟ್ಟು ಅತಿಥಿಗಳು ಮತ್ತು ಸ್ತಬ್ಧಚಿತ್ರ ಕಲಾವಿದರೊಂದಿಗೆ ಸಂವಾದ ನಡೆಸಿದರು. ಸಂವಾದದ ಸಮಯದಲ್ಲಿ, ಅನೇಕ ಭಾಗವಹಿಸುವವರು ಪ್ರಧಾನಿಯನ್ನು ವೈಯಕ್ತಿಕವಾಗಿ ಭೇಟಿಯಾದ ಸಂತಸವನ್ನು ವ್ಯಕ್ತಪಡಿಸಿದರು. ಇದಕ್ಕೆ ಪ್ರಧಾನಮಂತ್ರಿ “ಇದು ಭಾರತೀಯ ಪ್ರಜಾಪ್ರಭುತ್ವದ ಶಕ್ತಿಯನ್ನು ಪ್ರದರ್ಶಿಸುತ್ತದೆ” …

Read More »

15ನೇ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಪಾಲ್ಗೊಂಡ ರಾಷ್ಟ್ರಪತಿ

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (ಜನವರಿ 25, 2025) ಹೊಸದಿಲ್ಲಿಯಲ್ಲಿ ನಡೆದ 15 ನೇ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಪಾಲ್ಗೊಂಡು ಭಾಷಣ ಮಾಡಿದರು. ಈ ಸಂದರ್ಭದಲ್ಲಿ ರಾಷ್ಟ್ರಪತಿಗಳು ಚುನಾವಣೆಗಳನ್ನು ಸುಗಮವಾಗಿ ನಡೆಸುವಲ್ಲಿ ಅನುಕರಣೀಯ ಕಾರ್ಯಕ್ಷಮತೆಯನ್ನು ಪ್ರದರ್ಶಿಸಿದ ರಾಜ್ಯ ಮತ್ತು ಜಿಲ್ಲಾ ಅಧಿಕಾರಿಗಳಿಗೆ ಅತ್ಯುತ್ತಮ ಚುನಾವಣಾ ಅಭ್ಯಾಸ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಮುಖ್ಯ ಚುನಾವಣಾ ಆಯುಕ್ತ ಶ್ರೀ ರಾಜೀವ್ ಕುಮಾರ್ ಅವರಿಂದ “ಇಂಡಿಯಾ ವೋಟ್ಸ್ 2024: ಎ ಸಾಗಾ ಆಫ್ ಡೆಮಾಕ್ರಸಿ” ಪುಸ್ತಕದ ಮೊದಲ ಪ್ರತಿಯನ್ನು ಅವರು ಸ್ವೀಕರಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರಪತಿಗಳು, ನಮ್ಮ ಪ್ರಜಾಪ್ರಭುತ್ವವು ವಿಶ್ವದ ಅತ್ಯಂತ ಹಳೆಯ ಪ್ರಜಾಪ್ರಭುತ್ವ ಮಾತ್ರವಲ್ಲ, ವಿಶ್ವದ ಅತಿದೊಡ್ಡ, ವೈವಿಧ್ಯಮಯ, ಯುವ, ಅಂತರ್ಗತ ಮತ್ತು ಸೂಕ್ಷ್ಮ ಪ್ರಜಾಪ್ರಭುತ್ವವಾಗಿದೆ ಎಂಬುದು ನಮಗೆಲ್ಲರಿಗೂ ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು. ಭಾರತದ ಪ್ರಜಾಪ್ರಭುತ್ವವು ಆಧುನಿಕ ಜಗತ್ತಿಗೆ ವಿಶಿಷ್ಟ ಉದಾಹರಣೆಯಾಗಿದೆ. ವಿಶ್ವದ ಅನೇಕ ದೇಶಗಳು ನಮ್ಮ ಚುನಾವಣಾ ವ್ಯವಸ್ಥೆ ಮತ್ತು ನಿರ್ವಹಣೆಯಿಂದ   ಕಲಿಯುತ್ತಿವೆ ಎಂದು ಅವರು ಹೇಳಿದರು. ನಮ್ಮ ಅಂತರ್ಗತ ಪ್ರಜಾಪ್ರಭುತ್ವದ ಪ್ರಭಾವಶಾಲಿ ನೋಟವು ಚುನಾವಣೆಗಳಲ್ಲಿ ಗೋಚರಿಸುತ್ತದೆ ಎಂದು ರಾಷ್ಟ್ರಪತಿ ಹೇಳಿದರು. ಚುನಾವಣೆಗಳಲ್ಲಿ ಹೆಚ್ಚುತ್ತಿರುವ ಮಹಿಳೆಯರ ಭಾಗವಹಿಸುವಿಕೆಯು ನಮ್ಮ ಸಮಾಜ ಮತ್ತು ದೇಶದ ಒಟ್ಟಾರೆ ಅಭಿವೃದ್ಧಿಯ ಪ್ರಮುಖ ಸಂಕೇತವಾಗಿದೆ. 85 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ಮತದಾರರು, ವಿಕಲಚೇತನ ಮತದಾರರು ಮತ್ತು ದೂರದ ಪ್ರದೇಶಗಳಲ್ಲಿ ವಾಸಿಸುವ ಬುಡಕಟ್ಟು ಮತದಾರರಿಗೆ ಮತದಾನ ಪ್ರಕ್ರಿಯೆಯನ್ನು ಸುಗಮಗೊಳಿಸಲು ಚುನಾವಣಾ ಆಯೋಗ ವಿಶೇಷ ಪ್ರಯತ್ನಗಳನ್ನು ಮಾಡಿದೆ ಎಂಬುದರತ್ತ  ಅವರು ಗಮನ ಸೆಳೆದರು. ಈ ರೀತಿಯಾಗಿ, ಚುನಾವಣಾ ಆಯೋಗವು ಅಂತರ್ಗತ ಮತ್ತು ಸೂಕ್ಷ್ಮ ಚುನಾವಣಾ ನಿರ್ವಹಣೆಗೆ ಉತ್ತಮ ಉದಾಹರಣೆಯನ್ನು ನೀಡಿದೆ ಎಂದೂ ಅವರು ಹೇಳಿದರು. ಮತದಾನಕ್ಕೆ ಸಂಬಂಧಿಸಿದ ಆದರ್ಶಗಳು ಮತ್ತು ಜವಾಬ್ದಾರಿಗಳು ನಮ್ಮ ಪ್ರಜಾಪ್ರಭುತ್ವದ ಪ್ರಮುಖ ಆಯಾಮಗಳಾಗಿವೆ ಎಂದು ರಾಷ್ಟ್ರಪತಿ ಹೇಳಿದರು. ಚುನಾವಣಾ ಆಯೋಗ ಹೊರಡಿಸಿದ ಮತದಾರರ ಪ್ರತಿಜ್ಞೆ ಎಲ್ಲಾ ನಾಗರಿಕರಿಗೆ ಮಾರ್ಗದರ್ಶನ ನೀಡುತ್ತದೆ. ಪ್ರಜಾಪ್ರಭುತ್ವದಲ್ಲಿ ಸಂಪೂರ್ಣ ನಂಬಿಕೆಯ ಜೊತೆಗೆ, ಮತದಾರರು ಎಲ್ಲಾ ರೀತಿಯ ಸಂಕುಚಿತ ಮನೋಭಾವ, ತಾರತಮ್ಯ ಮತ್ತು ಪ್ರಲೋಭನೆಗಳನ್ನು ಮೀರಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸುವ ದೃಢ ಸಂಕಲ್ಪವನ್ನು ಹೊಂದಿರಬೇಕು ಎಂದು ಅವರು ಹೇಳಿದರು. ಪ್ರಬುದ್ಧ ಮತದಾರರು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತಾರೆ ಎಂದು ಅವರು ನುಡಿದರು. 2011 ರಿಂದ, ಭಾರತದ ಚುನಾವಣಾ ಆಯೋಗದ ಸಂಸ್ಥಾಪನಾ ದಿನದ ನೆನಪಿಗಾಗಿ ಪ್ರತಿವರ್ಷ ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ. ಈ ಕಾರ್ಯಕ್ರಮವು ಮತದಾರರ ಕೇಂದ್ರೀಕರಣವನ್ನು ಒತ್ತಿಹೇಳುವುದು, ನಾಗರಿಕರಲ್ಲಿ ಚುನಾವಣಾ ಜಾಗೃತಿಯನ್ನು ಹೆಚ್ಚಿಸುವುದು ಮತ್ತು ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಅವರ ಸಕ್ರಿಯ ಭಾಗವಹಿಸುವಿಕೆಯನ್ನು ಪ್ರೇರೇಪಿಸುವ ಗುರಿಯನ್ನು ಹೊಂದಿದೆ.

Read More »

2025ರ ಗಣರಾಜ್ಯೋತ್ಸವದ ಮುನ್ನಾದಿನದಂದು ರಾಷ್ಟ್ರವನ್ನುದ್ದೇಶಿಸಿ ಭಾರತದ ಘನತೆವೆತ್ತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರ ಭಾಷಣ

ನನ್ನ ಪ್ರೀತಿಯ ದೇಶವಾಸಿಗಳೇ, ನಮಸ್ಕಾರ! ಈ ಐತಿಹಾಸಿಕ ಸಂದರ್ಭದಲ್ಲಿ ನಿಮ್ಮನ್ನು ಉದ್ದೇಶಿಸಿ ಮಾತನಾಡಲು ನನಗೆ ಸಂತೋಷವಾಗಿದೆ. ಗಣರಾಜ್ಯೋತ್ಸವದ ಮುನ್ನಾದಿನದಂದು, ನಾನು ನಿಮಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ! 75 ವರ್ಷಗಳ ಹಿಂದೆ ಇದೇ ಜನವರಿ 26ರಂದು ನಮ್ಮ ಸಂಸ್ಥಾಪಕ ದಾಖಲೆಯಾದ ಭಾರತದ ಸಂವಿಧಾನ ಜಾರಿಗೆ ಬಂದಿತು. ಸಂವಿಧಾನ ರಚನಾ ಸಭೆಯು ಸುಮಾರು ಮೂರು ವರ್ಷಗಳ ಚರ್ಚೆಯ ನಂತರ, 1949ರ ನವೆಂಬರ್ 26ರಂದು ಸಂವಿಧಾನವನ್ನು ಅಂಗೀಕರಿಸಿತು. ಆ ದಿನವನ್ನು, ಅಂದರೆ, ನವೆಂಬರ್ …

Read More »

ಸೈಬರ್ ಭದ್ರತೆ ಸಹಕಾರದ ಕುರಿತು ಬಿಮ್‌ ಸ್ಟೆಕ್ ತಜ್ಞರ ಗುಂಪಿನ ಎರಡನೇ ಸಭೆ

ಭಾರತ ಸರ್ಕಾರದ ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ನವದೆಹಲಿಯಲ್ಲಿ 2025ರ ಜನವರಿ 21ರಂದು ಸೈಬರ್ ಭದ್ರತೆ ಸಹಕಾರದ ಕುರಿತು ಬಿಮ್ ಸ್ಟೆಕ್ ತಜ್ಞರ ಗುಂಪಿನ ಎರಡನೇ ಸಭೆಯನ್ನು ಆಯೋಜಿಸಿತ್ತು. ಭಾರತ ಸೈಬರ್ ಭದ್ರತೆ ಕುರಿತ ಬಿಮ್‌ ಸ್ಟೆಕ್ ಗುಂಪಿನ ಮೊದಲ ತಜ್ಞರ ಸಮಿತಿ ಸಭೆಯನ್ನು ನವದೆಹಲಿಯಲ್ಲಿ 2022ರಲ್ಲಿ ಆಯೋಜಿಸಿತ್ತು. ಈ ಬಿಮ್ ಸ್ಟೆಕ್ ತಜ್ಞರ ಗುಂಪಿನ ಸಭೆಯ ಪ್ರಮುಖ ಉದ್ದೇಶವೆಂದರೆ, ಐಸಿಟಿ ಗಳ ಬಳಕೆಯಲ್ಲಿ ಸೈಬರ್ ಭದ್ರತೆಯನ್ನು ಬಲಪಡಿಸಲು ಬಿಮ್ …

Read More »

ದೇಶದಲ್ಲಿ ಪ್ರಸಾರ ಮೂಲಸೌಕರ್ಯಗಳ ಉನ್ನತೀಕರಣಕ್ಕೆ ಭಾರತ ಸರ್ಕಾರ ಬದ್ಧವಾಗಿದೆ: ವಾರ್ತಾ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವರಾದ ಡಾ. ಎಲ್ ಮುರುಗನ್

ಶಿವಮೊಗ್ಗ ದೂರದರ್ಶನ ಕೇಂದ್ರದ ಆವರಣದಲ್ಲಿಂದು ನಡೆದ ಭದ್ರಾವತಿ ಆಕಾಶವಾಣಿ ಕೇಂದ್ರದ ಉನ್ನತೀಕರಿಸಿದ 10 KW ಟ್ರಾನ್ಸ್‌ಮಿಟರ್ ಮತ್ತು ಇತರ ಸಲಕರಣೆಗಳ ಪೂಜಾ ಕಾರ್ಯಕ್ರಮದಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಮತ್ತು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾದ ಡಾ.ಎಲ್.ಮುರುಗನ್ ಅವರು ಭಾಗವಹಿಸಿದ್ದರು. ಪೂಜಾ ಕಾರ್ಯಕ್ರಮದ ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಡಾ.ಎಲ್. ಮುರುಗನ್ ಅವರು, “ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ದೇಶದಲ್ಲಿ ಪ್ರಸಾರ ಮೂಲಸೌಕರ್ಯಗಳನ್ನು …

Read More »

“ಪರಾಕ್ರಮ್ ದಿವಸ್‌” ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿಯ ಅಂಗವಾಗಿ ಆಚರಿಸಿರುವ “ಪರಾಕ್ರಮ್ ದಿವಸ್” ಸಂದರ್ಭದಲ್ಲಿ ಇಂದು ಭಾಷಣವನ್ನು ಮಾಡಿದರು. ವೀಡಿಯೋ ಸಂದೇಶ ನೀಡಿದ ಪ್ರಧಾನಮಂತ್ರಿಗಳು ಜನತೆಗೆ ಶುಭಾಶಯ ಕೋರಿದರು. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವಾದ ಇಂದು ಇಡೀ ರಾಷ್ಟ್ರವು ಅವರನ್ನು ಗೌರವಪೂರ್ವಕವಾಗಿ ಸ್ಮರಿಸುತ್ತಿದೆ. ನೇತಾಜಿ ಸುಭಾಸ್ ಬೋಸ್ ಅವರಿಗೆ ಗೌರವ ಸಲ್ಲಿಸಿದ ಶ್ರೀ ಮೋದಿ, ಈ ವರ್ಷದ ಪರಾಕ್ರಮ್ ದಿವಸ್‌ನ ಭವ್ಯವಾದ ಆಚರಣೆಯನ್ನು …

Read More »

ಭಾರತದ ನವೀಕರಿಸಬಹುದಾದ ಇಂಧನ ಕ್ರಾಂತಿ

ಭಾರತವು ಸುಸ್ಥಿರ ಭವಿಷ್ಯದತ್ತ ತನ್ನ ಪರಿವರ್ತನೆಯನ್ನು ವೇಗಗೊಳಿಸುತ್ತಿರುವುದರಿಂದ, ಅದರ ನವೀಕರಿಸಬಹುದಾದ ಇಂಧನ (ಆರ್‌ ಇ) ವಲಯವು ಅಭೂತಪೂರ್ವ ಬೆಳವಣಿಗೆಯನ್ನು ಕಂಡಿದೆ. 2024ರಲ್ಲಿ, ಸೌರ ಮತ್ತು ಪವನ ಶಕ್ತಿ ಸ್ಥಾಪನೆಗಳು, ನೀತಿ ಪ್ರಗತಿಗಳು ಮತ್ತು ಮೂಲಸೌಕರ್ಯ ಸುಧಾರಣೆಗಳಲ್ಲಿ ದೇಶವು ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ, 2025ರಲ್ಲಿ ಮಹತ್ವಾಕಾಂಕ್ಷೆಯ ಗುರಿಗಳಿಗೆ ವೇದಿಕೆಯನ್ನು ಸ್ಥಾಪಿಸಿದೆ. 2030ರ ವೇಳೆಗೆ 500 ಗಿಗಾವ್ಯಾಟ್ ಪಳೆಯುಳಿಕೆಯೇತರ ಇಂಧನ ಆಧಾರಿತ ಇಂಧನ ಸಾಮರ್ಥ್ಯವನ್ನು ಸಾಧಿಸುವ ಬದ್ಧತೆಯೊಂದಿಗೆ, ಭಾರತವು ಶುದ್ಧ ಇಂಧನದಲ್ಲಿ ಜಾಗತಿಕ …

Read More »

2025-26 ಹಂಗಾಮಿಗಾಗಿ ಕಚ್ಚಾ ಸೆಣಬಿಗೆ ಕನಿಷ್ಠ ಬೆಂಬಲ ಬೆಲೆ (ಎಂ ಎಸ್ ಪಿ) ಸಂಪುಟದ ಅನುಮೋದನೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕುರಿತ ಸಚಿವ ಸಂಪುಟ ಸಮಿತಿ (ಸಿಸಿಇಎ) ಸಭೆ 2025-26ನೇ ಸಾಲಿನ ಮಾರುಕಟ್ಟೆ ಹಂಗಾಮಿಗಾಗಿ ಕಚ್ಚಾ ಸೆಣಬಿಗೆ ಕನಿಷ್ಠ ಬೆಂಬಲ ಬೆಲೆ (ಎಂ ಎಸ್ ಪಿ)ಯನ್ನು ಅನುಮೋದಿಸಿದೆ. 2025-26ನೇ ಸಾಲಿಗೆ ಕಚ್ಚಾ ಸೆಣಬಿನ (ಟಿಡಿ-3 ದರ್ಜೆ) ಎಂಎಸ್‌ಪಿಯನ್ನು ಕ್ವಿಂಟಾಲ್‌ಗೆ 5,650/- ರೂ. ನಿಗದಿಪಡಿಸಲಾಗಿದೆ. ಇದು ಅಖಿಲ ಭಾರತ ತೂಕದ ಸರಾಸರಿ ಉತ್ಪಾದನಾ ವೆಚ್ಚಕ್ಕಿಂತ ಶೇ. 66.8 ರಷ್ಟು ಹೆಚ್ಚಿನ ಆದಾಯವನ್ನು …

Read More »