ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಗೆ 2021-22, 2022-23 ಮತ್ತು 2023-24ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್.ಎಚ್.ಎಂ.) ಅಡಿಯಲ್ಲಿ ಆಗಿರುವ ಪ್ರಗತಿಯ ಬಗ್ಗೆ ವಿವರಿಸಲಾಯಿತು. ತಾಯಂದಿರ ಮರಣ ಪ್ರಮಾಣ, ಶಿಶು ಮರಣ ಪ್ರಮಾಣ, 5 ವರ್ಷದೊಳಗಿನ ಮಕ್ಕಳ ಮರಣ ಪ್ರಮಾಣದಲ್ಲಾಗಿರುವ ತ್ವರಿತ ಇಳಿಕೆ ಮತ್ತು ಒಟ್ಟು ಫಲವತ್ತತೆ ದರ ಮತ್ತು ಟಿಬಿ, ಮಲೇರಿಯಾ, ಕಾಲಾ-ಅಜರ್, ಡೆಂಗ್ಯೂ, ಕ್ಷಯ, ಕುಷ್ಠರೋಗ, ವೈರಲ್ ಹೆಪಟೈಟಿಸ್ ಮುಂತಾದ ವಿವಿಧ ರೋಗಗಳ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಆಗಿರುವ ಪ್ರಗತಿ ಹಾಗು ರಾಷ್ಟ್ರೀಯ ಕುಡಗೋಲು ಕೋಶ ರಕ್ತಹೀನತೆ ನಿರ್ಮೂಲನಾ ಮಿಷನ್ ನಂತಹ ಹೊಸ ಉಪಕ್ರಮಗಳಿಗೆ ಸಂಬಂಧಿಸಿದಂತೆ ಆಗಿರುವ ಪ್ರಗತಿಯ ಬಗ್ಗೆಯೂ ಸಂಪುಟಕ್ಕೆ ವಿವರಿಸಲಾಯಿತು. ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್ಎಚ್ಎಂ) ಮಾನವ ಸಂಪನ್ಮೂಲವನ್ನು ವಿಸ್ತರಿಸುವಲ್ಲಿ, ನಿರ್ಣಾಯಕ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಮತ್ತು ಆರೋಗ್ಯ ತುರ್ತುಸ್ಥಿತಿಗಳಿಗೆ ಸಮಗ್ರ ಪ್ರತಿಕ್ರಿಯೆಯನ್ನು ಬೆಳೆಸುವಲ್ಲಿ, ನಿರಂತರ ಪ್ರಯತ್ನಗಳ ಮೂಲಕ ಭಾರತದ ಸಾರ್ವಜನಿಕ ಆರೋಗ್ಯ ಫಲಿತಾಂಶಗಳನ್ನು ಸುಧಾರಿಸಲು ಗಮನಾರ್ಹವಾಗಿ ಕೊಡುಗೆ ನೀಡಿದೆ. ಕಳೆದ ಮೂರು ವರ್ಷಗಳಲ್ಲಿ, ಎನ್ಎಚ್ಎಂ ತಾಯಿ ಮತ್ತು ಮಕ್ಕಳ ಆರೋಗ್ಯ , ರೋಗ ನಿರ್ಮೂಲನೆ ಮತ್ತು ಆರೋಗ್ಯ ಮೂಲಸೌಕರ್ಯ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಗಣನೀಯ ಪ್ರಗತಿಯನ್ನು ಸಾಧಿಸಿದೆ. ಮಿಷನ್ನಿನ ಪ್ರಯತ್ನಗಳು ಭಾರತದ ಆರೋಗ್ಯ ಸುಧಾರಣೆಗಳಿಗೆ, ವಿಶೇಷವಾಗಿ ಕೋವಿಡ್ -19 ಜಾಗತಿಕ ಸಾಂಕ್ರಾಮಿಕ ಸಮಯದಲ್ಲಿ ವಿಶೇಷ ಕೊಡುಗೆ ನೀಡಿವೆ ಮತ್ತು ದೇಶಾದ್ಯಂತ ಹೆಚ್ಚು ಪ್ರವೇಶಿಸಬಹುದಾದ (ಎಲ್ಲರಿಗೂ ಲಭ್ಯವಾಗಬಹುದಾದ) ಮತ್ತು ಗುಣಮಟ್ಟದ ಆರೋಗ್ಯ ಸೇವೆಗಳನ್ನು ಖಚಿತಪಡಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿವೆ. ಆರೋಗ್ಯ ಕ್ಷೇತ್ರದಲ್ಲಿ ಮಾನವ ಸಂಪನ್ಮೂಲದಲ್ಲಿ ಆಗಿರುವ ಗಮನಾರ್ಹ ಹೆಚ್ಚಳವು ಎನ್ಎಚ್ಎಂನ ಪ್ರಮುಖ ಸಾಧನೆಯಾಗಿದೆ. 2021-22ರ ಹಣಕಾಸು ವರ್ಷದಲ್ಲಿ, ಸಾಮಾನ್ಯ ಕರ್ತವ್ಯ ವೈದ್ಯಕೀಯ ಅಧಿಕಾರಿಗಳು (ಜಿಡಿಎಂಒಗಳು), ತಜ್ಞರು, ಸ್ಟಾಫ್ ನರ್ಸ್ಗಳು, …
Read More »ಬೇಟಿ ಬಚಾವೋ ಬೇಟಿ ಪಡಾವೋ ಉಪಕ್ರಮವು ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡಿದೆ ಮತ್ತು ಭಾರತದ ಪ್ರಗತಿಯಲ್ಲಿ ಮಹಿಳೆಯರನ್ನು ಮುಂಚೂಣಿಯಲ್ಲಿರಿಸಿದೆ: ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೇಟಿ ಬಚಾವೋ ಬೇಟಿ ಪಡಾವೋ ಉಪಕ್ರಮವು ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡಿದೆ ಮತ್ತು ಭಾರತದ ಪ್ರಗತಿಯಲ್ಲಿ ಮಹಿಳೆಯರನ್ನು ಮುಂಚೂಣಿಯಲ್ಲಿರಿಸಿದೆ ಎಂದು ಹೇಳಿದ್ದಾರೆ. ಅವರು ಕೇಂದ್ರ ಸಚಿವೆ ಶ್ರೀಮತಿ ಅನ್ನಪೂರ್ಣ ದೇವಿ ಅವರ ಲೇಖನವು ಭಾರತದ ಹೆಣ್ಣುಮಕ್ಕಳು ಹೇಗೆ ಬದಲಾವಣೆ ತರುತ್ತಿದ್ದಾರೆ, ಉದ್ಯಮಿಗಳು ಮತ್ತು ನಾಯಕಿಯರಾಗಿ ಹೊರಹೊಮ್ಮುತ್ತಿದ್ದಾರೆಂಬುದನ್ನು ಎತ್ತಿ ತೋರಿಸುತ್ತದೆ ಎಂದು ಅವರು ತಿಳಿಸಿದ್ದಾರೆ. ಪ್ರಧಾನಮಂತ್ರಿ ಅವರು ಕೇಂದ್ರ ಸಚಿವೆ ಶ್ರೀಮತಿ ಅನ್ನಪೂರ್ಣ …
Read More »ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 19.01.2025 ರಂದು ಮಾಡಿದ ‘ಮನ್ ಕಿ ಬಾತ್’ – 118ನೇ ಭಾಷಣದ ಕನ್ನಡ ಅವತರಣಿಕೆ
ನನ್ನ ಪ್ರಿಯ ದೇಶವಾಸಿಗಳಿಗೆ ನಮಸ್ಕಾರ. ಇಂದು 2025ರ ಮೊದಲ ‘ಮನದ ಮಾತು’ ಮಾತನಾಡಲಾಗುತ್ತಿದೆ. ನೀವು ಖಂಡಿತ ಈ ವಿಷಯವನ್ನು ಗಮನಿಸಿರಬಹುದು. ಪ್ರತಿ ಬಾರಿ ತಿಂಗಳ ಕೊನೆಯ ಭಾನುವಾರದಂದು ‘ಮನದ ಮಾತು’ ಪ್ರಸಾರವಾಗುತ್ತದೆ, ಆದರೆ ಈ ಬಾರಿ ನಾವು ನಾಲ್ಕನೇ ಭಾನುವಾರದ ಬದಲು ಮೂರನೇ ಭಾನುವಾರದಂದು ಒಂದು ವಾರ ಮುಂಚಿತವಾಗಿ ಭೇಟಿಯಾಗುತ್ತಿದ್ದೇವೆ. ಏಕೆಂದರೆ ಮುಂದಿನ ಭಾನುವಾರದಂದೇ ಗಣರಾಜ್ಯೋತ್ಸವವಿದೆ. ಮುಂಚಿತವಾಗಿಯೇ ಎಲ್ಲಾ ದೇಶವಾಸಿಗಳಿಗೆ ನಾನು ಣರಾಜ್ಯೋತ್ಸವದ ಶುಭಾಶಯಗಳನ್ನು ಕೋರುತ್ತೇನೆ. ಸ್ನೇಹಿತರೇ, ಈ ಬಾರಿಯ …
Read More »ಸೂಕ್ತ ಸಮಯದಲ್ಲಿ ರೈತರ ಸಮಸ್ಯೆಗಳಿಗೆ ಅಗತ್ಯವಾಗಿ ಪರಿಹಾರ ಕಂಡುಕೊಳ್ಳಬೇಕಾಗಿದ್ದು, ರೈತರ ಕಾಳಜಿಯನ್ನು ಹಿಂದೆ ಸರಿಸಲು ಸಾಧ್ಯವಿಲ್ಲ – ಉಪರಾಷ್ಟ್ರಪತಿ
ರೈತರ ಸಮಸ್ಯೆಗಳಿಗೆ ಸಮಯೋಚಿತ ಪರಿಹಾರದ ಅಗತ್ಯವಿದ್ದು, ರೈತರ ಕಾಳಜಿಯನ್ನು ಹಿಂದೆ ಸರಿಸಲು ಸಾಧ್ಯವಿಲ್ಲ ಎಂದು ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಒತ್ತಿ ಹೇಳಿದ್ದಾರೆ ಧಾರವಾಡದಲ್ಲಿಂದು ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಕೃಷಿ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಭೆ ಹಾಗೂ ಅಮೃತ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ಜಗದೀಪ್ ಧನ್ ಕರ್ ಅವರು. ರೈತರ ಸಂಕಷ್ಟಗಳು ತುರ್ತಾಗಿ ದೇಶದ ಗಮನಕ್ಕೆ ಬರಬೇಕು. ರೈತರಿಗೆ ಆರ್ಥಿಕ ಭದ್ರತೆ ಅಗತ್ಯವಾಗಿದೆ. ಸಮಸ್ಯೆಗಳು ಏರುತ್ತಿದೆ ಮತ್ತು ಏರಿಕೆಯನ್ನು ತಡೆಯಲಾಗದು …
Read More »ಮುಂಬೈ, ಚೆನ್ನೈ, ಕೋಲ್ಕತ್ತಾ, ಬೆಂಗಳೂರು, ಹೈದರಾಬಾದ್, ಕೊಚ್ಚಿನ್ ಮತ್ತು ಅಹಮದಾಬಾದ್ ವಿಮಾನ ನಿಲ್ದಾಣಗಳಲ್ಲಿ ‘ಫಾಸ್ಟ್ ಟ್ರ್ಯಾಕ್ ಇಮಿಗ್ರೇಷನ್-ಟ್ರಸ್ಟೆಡ್ ಟ್ರಾವೆಲರ್ ಪ್ರೋಗ್ರಾಂ’ (ಎಫ್ ಟಿ ಐ-ಟಿಟಿಪಿ) ಅನ್ನು ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ನಾಳೆ ಅಹಮದಾಬಾದ್ ನಲ್ಲಿ ಉದ್ಘಾಟಿಸಲಿದ್ದಾರೆ
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಮುಂಬೈ, ಚೆನ್ನೈ, ಕೋಲ್ಕತ್ತಾ, ಬೆಂಗಳೂರು, ಹೈದರಾಬಾದ್, ಕೊಚ್ಚಿನ್ ಮತ್ತು ಅಹಮದಾಬಾದ್ ವಿಮಾನ ನಿಲ್ದಾಣಗಳಲ್ಲಿ ‘ಫಾಸ್ಟ್ ಟ್ರ್ಯಾಕ್ ಇಮಿಗ್ರೇಷನ್ – ಟ್ರಸ್ಟೆಡ್ ಟ್ರಾವೆಲರ್ ಪ್ರೋಗ್ರಾಂʼ (ಎಫ್ ಟಿ ಐ-ಟಿ ಟಿ ಪಿ) ಅನ್ನು 16 ಜನವರಿ 2025 ರಂದು ಅಹಮದಾಬಾದ್ ನಿಂದ ಉದ್ಘಾಟಿಸಲಿದ್ದಾರೆ. ಗೃಹ ಸಚಿವರು ಈ ಹಿಂದೆ ಜೂನ್ 22, 2024 ರಂದು ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ …
Read More »ಮುಂಚೂಣಿ ಯುದ್ಧ ನೌಕೆಗಳಾದ ಐ ಎನ್ ಎಸ್ ಸೂರತ್, ಐ ಎನ್ ಎಸ್ ನೀಲಗಿರಿ ಮತ್ತು ಐ ಎನ್ ಎಸ್ ವಘ್ ಶೀರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಬೈಯ ನೌಕಾ ಹಡಗುಕಟ್ಟೆಯಲ್ಲಿ ಮೂರು ಮುಂಚೂಣಿ ನೌಕಾ ಯುದ್ಧ ನೌಕೆಗಳಾದ ಐಎನ್ಎಸ್ ಸೂರತ್, ಐಎನ್ಎಸ್ ನೀಲಗಿರಿ ಮತ್ತು ಐಎನ್ಎಸ್ ವಘ್ ಶೀರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಬಳಿಕ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಜನವರಿ 15 ಅನ್ನು ಸೇನಾ ದಿನವಾಗಿ ಆಚರಿಸಲಾಗುತ್ತದೆ ಮತ್ತು ರಾಷ್ಟ್ರದ ಸುರಕ್ಷತೆ ಹಾಗು ಭದ್ರತೆಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡುವ ಪ್ರತಿಯೊಬ್ಬ ಧೈರ್ಯಶಾಲಿ ಯೋಧನಿಗೆ ನಮಸ್ಕರಿಸುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅವರು ಎಲ್ಲ ವೀರ ಯೋಧರನ್ನು ಅಭಿನಂದಿಸಿದರು. ಇಂದು ಭಾರತದ ಕಡಲ ಪರಂಪರೆ, ನೌಕಾಪಡೆಯ ಭವ್ಯ ಇತಿಹಾಸ ಮತ್ತು ಆತ್ಮನಿರ್ಭರ ಭಾರತ ಅಭಿಯಾನಕ್ಕೆ ದೊಡ್ಡ ದಿನವಾಗಿದೆ ಎಂದು ಹೇಳಿದ ಪ್ರಧಾನಮಂತ್ರಿ, ಛತ್ರಪತಿ ಶಿವಾಜಿ ಮಹಾರಾಜ್ ಅವರು ಭಾರತದ ನೌಕಾಪಡೆಗೆ ಹೊಸ ಶಕ್ತಿ ಮತ್ತು ದೂರದೃಷ್ಟಿಯನ್ನು ನೀಡಿದರು ಎಂದರು. ಶಿವಾಜಿ ಮಹಾರಾಜರ ಭೂಮಿಯಲ್ಲಿ 21ನೇ ಶತಮಾನದ ಭಾರತದ ನೌಕಾಪಡೆಯನ್ನು ಸಶಕ್ತಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಇಂದು ಪ್ರಮುಖ ಹೆಜ್ಜೆ ಇಟ್ಟಿದೆ ಎಂದರು. “ಇದೇ ಮೊದಲ ಬಾರಿಗೆ ವಿಧ್ವಂಸಕ ನೌಕೆ, ಯುದ್ಧನೌಕೆ ಮತ್ತು ಜಲಾಂತರ್ಗಾಮಿ ನೌಕೆಯ ತ್ರಿ-ಕಾರ್ಯಾರಂಭ ಮಾಡಲಾಗುತ್ತಿದೆ” ಎಂದು ಪ್ರಧಾನಿ ಒತ್ತಿ ಹೇಳಿದರು. ಎಲ್ಲಾ ಮೂರು ಮುಂಚೂಣಿ ನೌಕೆಗಳನ್ನು ಭಾರತದಲ್ಲಿ ತಯಾರಿಸಲಾಗಿದೆ ಎಂಬುದು ಹೆಮ್ಮೆಯ ವಿಷಯವಾಗಿದೆ ಎಂದು ಅವರು ಒತ್ತಿ ಹೇಳಿದರು. ಈ ಸಾಧನೆಗಾಗಿ ಅವರು ಭಾರತೀಯ ನೌಕಾಪಡೆ, ನಿರ್ಮಾಣ ಕಾರ್ಯದಲ್ಲಿ ಭಾಗಿಯಾಗಿರುವ ಎಲ್ಲಾ ಪಾಲುದಾರರು ಮತ್ತು ಭಾರತದ ನಾಗರಿಕರನ್ನು ಅಭಿನಂದಿಸಿದರು. “ಇಂದಿನ ಕಾರ್ಯಕ್ರಮವು ನಮ್ಮ ಭವ್ಯ ಪರಂಪರೆಯನ್ನು ನಮ್ಮ ಭವಿಷ್ಯದ ಆಕಾಂಕ್ಷೆಗಳೊಂದಿಗೆ ಸಂಪರ್ಕಿಸುತ್ತದೆ” ಎಂದು ಶ್ರೀ ಮೋದಿ ಉದ್ಗರಿಸಿದರು. ಭಾರತವು ದೀರ್ಘ ಸಮುದ್ರಯಾನ, ವಾಣಿಜ್ಯ, ನೌಕಾ ರಕ್ಷಣೆ ಮತ್ತು ಹಡಗು ಉದ್ಯಮಕ್ಕೆ ಸಂಬಂಧಿಸಿದ ಶ್ರೀಮಂತ ಇತಿಹಾಸವನ್ನು ಹೊಂದಿದೆ ಎಂದು ಅವರು ಹೇಳಿದರು. ಈ ಶ್ರೀಮಂತ ಇತಿಹಾಸವನ್ನು ಉಲ್ಲೇಖಿಸಿದ ಅವರು, ಇಂದಿನ ಭಾರತವು ವಿಶ್ವದ ಪ್ರಮುಖ ಕಡಲ ಶಕ್ತಿಯಾಗಿ ಹೊರಹೊಮ್ಮುತ್ತಿದೆ ಎಂದರು. ಇಂದು ಕಾರ್ಯಾರಂಭ ಮಾಡಲಾದ ನೌಕೆಗಳು ಅದರ ಒಂದು ನೋಟವನ್ನು ಪ್ರದರ್ಶಿಸಿವೆ ಎಂದೂ ಅವರು ಹೇಳಿದರು. ಚೋಳ ರಾಜವಂಶದ ಕಡಲ ಪರಾಕ್ರಮಕ್ಕೆ ಸಮರ್ಪಿತವಾದ ಐಎನ್ ಎಸ್ ನೀಲಗಿರಿ ಮತ್ತು ಸೂರತ್ ಯುದ್ಧನೌಕೆ ಸೇರಿದಂತೆ ಹೊಸ ನೌಕೆಗಳ ಆರಂಭವನ್ನು ಪ್ರಧಾನಿ ಉಲ್ಲೇಖಿಸಿದರು, ಇದು ಗುಜರಾತ್ ನ ಬಂದರುಗಳು ಭಾರತವನ್ನು ಪಶ್ಚಿಮ ಏಷ್ಯಾದೊಂದಿಗೆ ಸಂಪರ್ಕಿಸಿದ ಯುಗವನ್ನು ನೆನಪಿಸುತ್ತದೆ. ಕೆಲವು ವರ್ಷಗಳ ಹಿಂದೆ ಮೊದಲ ಜಲಾಂತರ್ಗಾಮಿ ನೌಕೆ ಕಲ್ವರಿಯನ್ನು ನಿಯೋಜಿಸಿದ ನಂತರ ಪಿ 75 ವರ್ಗದಲ್ಲಿ ಆರನೇ ವಗ್ಶೀರ್ ಜಲಾಂತರ್ಗಾಮಿ ನೌಕೆಯನ್ನು ನಿಯೋಜಿಸಿದ್ದನ್ನು ಅವರು ಉಲ್ಲೇಖಿಸಿದರು. ಈ ಹೊಸ ಗಡಿನಾಡಿನ ರಕ್ಷಣಾ ವೇದಿಕೆಗಳು ಭಾರತದ ಭದ್ರತೆ ಮತ್ತು ಪ್ರಗತಿ ಎರಡನ್ನೂ ಹೆಚ್ಚಿಸುತ್ತವೆ ಎಂದು ಪ್ರಧಾನಿ ವಿವರಿಸಿದರು. “ಭಾರತವು ಇಂದು ಜಾಗತಿಕವಾಗಿ, ವಿಶೇಷವಾಗಿ ಜಾಗತಿಕ ದಕ್ಷಿಣದಲ್ಲಿ ವಿಶ್ವಾಸಾರ್ಹ ಮತ್ತು ಜವಾಬ್ದಾರಿಯುತ ಪಾಲುದಾರನಾಗಿ ಗುರುತಿಸಲ್ಪಟ್ಟಿದೆ” ಎಂದು ಪ್ರಧಾನಿ ಉದ್ಗರಿಸಿದರು. ಭಾರತವು ಅಭಿವೃದ್ಧಿಯ ಮನೋಭಾವದಿಂದ ಕಾರ್ಯನಿರ್ವಹಿಸುತ್ತದೆಯೇ ಹೊರತು ವಿಸ್ತರಣಾವಾದದಿಂದಲ್ಲ ಎಂದು ಅವರು ಒತ್ತಿ ಹೇಳಿದರು. ಮುಕ್ತ, ಸುರಕ್ಷಿತ, ಅಂತರ್ಗತ ಮತ್ತು ಸಮೃದ್ಧ ಇಂಡೋ-ಪೆಸಿಫಿಕ್ ಪ್ರದೇಶವನ್ನು ಭಾರತ ಸದಾ ಬೆಂಬಲಿಸುತ್ತದೆ ಎಂದು ಅವರು ಹೇಳಿದರು. ಕರಾವಳಿ ರಾಷ್ಟ್ರಗಳ ಅಭಿವೃದ್ಧಿಯ ವಿಷಯಕ್ಕೆ ಬಂದಾಗ, ಭಾರತವು ಸಾಗರ್ (ಈ ಪ್ರದೇಶದ ಎಲ್ಲರಿಗೂ ಭದ್ರತೆ ಮತ್ತು ಬೆಳವಣಿಗೆ) ಮಂತ್ರವನ್ನು ಪರಿಚಯಿಸಿತು ಮತ್ತು ಈ ದೃಷ್ಟಿಕೋನದೊಂದಿಗೆ ಮುಂದುವರಿಯಿತು ಎಂಬುದರತ್ತ ಅವರು ಬೆಟ್ಟು ಮಾಡಿದರು. “ಒಂದು ಭೂಮಿ, …
Read More »ಭಾರತದ ನವೀಕರಿಸಬಹುದಾದ ಇಂಧನ ಸಾಮರ್ಥ್ಯವು ವರ್ಷದಿಂದ ವರ್ಷಕ್ಕೆ 15.84% ಬೆಳವಣಿಗೆಯನ್ನು ದಾಖಲಿಸಿದೆ
ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯವು (ಎಂ.ಎನ್.ಆರ್.ಇ.) ಭಾರತದ ನವೀಕರಿಸಬಹುದಾದ ಇಂಧನ ವಲಯದಲ್ಲಿ ಗಮನಾರ್ಹ ಪ್ರಗತಿಯನ್ನು ವರದಿ ಮಾಡಿದೆ. ಇದು ಡಿಸೆಂಬರ್ 2023 ಮತ್ತು ಡಿಸೆಂಬರ್ 2024ರ ನಡುವಿನ ಗಮನಾರ್ಹ ಸಾಧನೆಗಳನ್ನು ಎತ್ತಿ ತೋರಿಸುತ್ತದೆ. ಈ ಬೆಳವಣಿಗೆಯು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಘೋಷಿಸಿದ ‘ಪಂಚಾಮೃತ’ ಯೋಜನೆಯ ಗುರಿಗಳ ದೃಷ್ಟಿಕೋನದ ಅಡಿಯಲ್ಲಿ ತನ್ನ ಶುದ್ಧ ಇಂಧನ ಗುರಿಗಳನ್ನು ಸಾಧಿಸುವ ಭಾರತದ ದೃಢ ಬದ್ಧತೆ ಮತ್ತು ಅದರ ವಿಶಾಲ …
Read More »ಭುವನೇಶ್ವರದ ಜನತಾ ಮೈದಾನದಲ್ಲಿ ನಡೆಯುತ್ತಿರುವ 18ನೇ ಪ್ರವಾಸಿ ಭಾರತೀಯ ದಿನ ಸಮಾವೇಶದಲ್ಲಿ 09.01.2025ರಂದು ಕೇಂದ್ರ ಸಣ್ಣ, ಅತಿಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ (ಎಂಎಸ್ ಎಂಇ) ರಾಜ್ಯ ಸಚಿವರಾದ ಸುಶ್ರೀ ಶೋಭಾ ಕರಂದ್ಲಾಜೆ ಭಾಗಿ
ಒಡಿಶಾದ ಭುವನೇಶ್ವರದ ಜನತಾ ಮೈದಾನದಲ್ಲಿ ನಡೆಯುತ್ತಿರುವ 18ನೇ ಪ್ರವಾಸಿ ಭಾರತೀಯ ದಿನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಜನವರಿ 9ರಂದು ಉದ್ಘಾಟಿಸಿದರು. “ವಿಕಸಿತ ಭಾರತಕ್ಕೆ ಅನಿವಾಸಿ ಭಾರತೀಯರ ಕೊಡುಗೆ” ಎಂಬ ಧ್ಯೇಯ ವಾಕ್ಯದೊಂದಿಗೆ ನಡೆಯುತ್ತಿರುವ ಈ ಕಾರ್ಯಕ್ರಮವು ರಾಷ್ಟ್ರ ನಿರ್ಮಾಣದಲ್ಲಿ ಭಾರತದ ವಲಸಿಗರ ಪ್ರಮುಖ ಪಾತ್ರವನ್ನು ಪ್ರಮುಖವಾಗಿ ಎತ್ತಿ ತೋರಿಸುತ್ತಿದೆ.ಈ ಕಾರ್ಯಕ್ರಮದಲ್ಲಿ ನಾನಾ ಸಚಿವರು, ಅಧಿಕಾರಿಗಳು ಮತ್ತು ಗಮನಾರ್ಹ ಸಂಖ್ಯೆಯ ಪ್ರವಾಸಿ ಭಾರತೀಯರು ಭಾಗವಹಿಸಿದ್ದಾರೆ. ಕೇಂದ್ರ ಎಂಎಸ್ಎಂಇ ಮತ್ತು ಕಾರ್ಮಿಕ ಹಾಗೂ ಉದ್ಯೋಗ ಖಾತೆ ರಾಜ್ಯ ಸಚಿವರಾದ ಸುಶ್ರೀ ಶೋಭಾ ಕರಂದ್ಲಾಜೆ, ಎಂಎಸ್ ಎಂಇ ಮತ್ತು ಅದರ ಸಂಸ್ಥೆಗಳು ತೆರೆದಿರುವ ಥೀಮ್ ಪೆವಿಲಿಯನ್ ಗೆ ಭೇಟಿ ನೀಡಿದ್ದರು. ಭುವನೇಶ್ವರದ ಕೇಂದ್ರೀಯ ಯಂತ್ರಾಗಾರ ಮತ್ತು ತರಬೇತಿ ಕೇಂದ್ರ (ಸಿಟಿಟಿಸಿ) ಅಭಿವೃದ್ಧಿಪಡಿಸಿರುವ ಚಂದ್ರಯಾನ-3 ಮಾದರಿಯನ್ನು ಪ್ರದರ್ಶಿಸಲಾಯಿತು. ಈ ಕೇಂದ್ರವು ಉತ್ತಮ ಗುಣಮಟ್ಟದ ನಿರ್ಣಾಯಕ ಘಟಕಗಳ ತಯಾರಿಕೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಇದು ಚಂದ್ರಯಾನ -3 ಮಿಷನ್ ಮತ್ತು “ಮೇಕ್ ಇನ್ ಇಂಡಿಯಾ” ಉಪಕ್ರಮದ ಯಶಸ್ಸಿಗೆ ಗಮನಾರ್ಹ ಕೊಡುಗೆ ನೀಡಿದೆ. ಅಲ್ಲದೆ, ಸಚಿವರು ಎಆರ್-ವಿಆರ್ ಅನುಭವ ಕೇಂದ್ರಗಳು, ಡ್ರೋಣ್ ತಂತ್ರಜ್ಞಾನಗಳು ಮತ್ತು ಸೌರ ಫಲಕ ಉತ್ಪಾದನಾ ಘಟಕಗಳು ಸೇರಿದಂತೆ ಹೊಸ ತಂತ್ರಜ್ಞಾನ ಪ್ರದರ್ಶನ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಅವರು ಖಾದಿ ಚರಕಗಳು, ಕೈ ಮಗ್ಗಗಳು ಮತ್ತು ಪೇಪರ್ ಮ್ಯಾಚೆಯಂತಹ ಸಾಂಪ್ರದಾಯಿಕ ಕರಕುಶಲ ವಸ್ತುಗಳನ್ನು ಪ್ರದರ್ಶಿಸುವ ಖಾದಿ ಮತ್ತು ಗ್ರಾಮೋದ್ಯೋಗ ಕುಶಲಕರ್ಮಿಗಳೊಂದಿಗೆ ಸಮಾಲೋಚಿಸಿದರು. ಅವರು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಭಾರತದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಸೆಪ್ಟೆಂಬರ್ 17ರಂದು ಉದ್ಘಾಟಿಸಿದ ಈ ಯೋಜನೆಯು, 18 ವ್ಯಾಪಾರಗಳಲ್ಲಿ ತೊಡಗಿರುವ ಕುಶಲಕರ್ಮಿಗಳು ಮತ್ತು ಕಸುಬುದಾರರಿಗೆ ಸಂಪೂರ್ಣ ಆರ್ಥಿಕ ನೆರವನ್ನು ಒದಗಿಸುವ ಎಂಎಸ್ ಎಂಇ ಸಚಿವಾಲಯದ ಪ್ರಮುಖ ಯೋಜನೆಯಾಗಿದೆ. ವೈದ್ಯಕೀಯ ಸಾಧನಗಳು, ಏರೋ ಎಂಜಿನಿಯರಿಂಗ್, ನೀರು ಶುದ್ಧೀಕರಣ ತಂತ್ರಜ್ಞಾನಗಳು ಮತ್ತು ರೇಷ್ಮೆ ಮತ್ತು ತೆಂಗಿನ ನಾರಿನ ಉತ್ಪನ್ನಗಳಂತಹ ಸ್ಥಳೀಯ ಕರಕುಶಲ ವಸ್ತುಗಳಲ್ಲಿ ಭಾರತದ ಪ್ರಗತಿಯನ್ನು ಪ್ರಮುಖವಾಗಿ ಪ್ರಸ್ತಾಪಿಸಿದ ಸುಶ್ರೀ ಶೋಭಾ ಕರಂದ್ಲಾಜೆ ಅವರು “ಚರಕದಿಂದ ಚಂದ್ರಯಾನಕ್ಕೆ” ಎಂಬ ಸೂಕ್ತ ಶೀರ್ಷಿಕೆಯ ಎಂಎಸ್ಎಂಇ ವಲಯದ ಥೀಮ್ ಮಳಿಗೆಯನ್ನು ಶ್ಲಾಘಿಸಿದರು. ಅವರು ದುಬೈನ ಅನಿವಾಸಿ ಭಾರತೀಯರೊಂದಿಗೆ ಸಂವಾದ ನಡೆಸಿದರು. ಜಾಗತಿಕವಾಗಿ ಭಾರತೀಯ ಸಂಸ್ಕೃತಿ ಮತ್ತು ಕರಕುಶಲತೆಯನ್ನು ಉತ್ತೇಜಿಸುವಲ್ಲಿ ಅವರ ಪಾತ್ರವನ್ನು ಒತ್ತಿ ಹೇಳಿದರು. 2047ರ ವೇಳೆಗೆ “ವಿಕಸಿತ ಭಾರತ” ಗುರಿ ಸಾಧಿಸುವ ಗೌರವಾನ್ವಿತ ಪ್ರಧಾನ ಮಂತ್ರಿಯವರ ದೂರದೃಷ್ಟಿಯ ಸಾಕಾರದಲ್ಲಿ ಅನಿವಾಸಿ ಭಾರತೀಯರ ಪಾತ್ರ ನಿರ್ಣಾಯಕವಾಗಿದೆ ಎಂದು ಅವರು ಹೇಳಿದರು. ಪ್ರವಾಸಿ ಭಾರತೀಯರು ತಮ್ಮ ಬೇರುಗಳೊಂದಿಗೆ ಮತ್ತೆ ಸಂಪರ್ಕ ಸಾಧಿಸುವಂತೆ ಮತ್ತು ಭಾರತದ ಪ್ರಗತಿಗಾಥೆಗೆ ಸಕ್ರಿಯ ಕೊಡುಗೆ ನೀಡುವಂತೆ ಸಚಿವರು ಪ್ರೋತ್ಸಾಹಿಸಿದರು.
Read More »ಒಡಿಶಾದಲ್ಲಿ 18ನೇ ಪ್ರವಾಸಿ ಭಾರತೀಯ ದಿನ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಭುವನೇಶ್ವರದಲ್ಲಿ ಇಂದು 18ನೇ ಪ್ರವಾಸಿ ಭಾರತೀಯ ದಿನವನ್ನು ಉದ್ಘಾಟಿಸಿದರು. ಜಗತ್ತಿನ ನಾನಾ ಮೂಲೆಗಳಿಂದ ಆಗಮಿಸಿರುವ ಪ್ರತಿನಿಧಿಗಳು ಹಾಗೂ ಅನಿವಾಸಿ ಭಾರತೀಯರನ್ನು ಸ್ವಾಗತಿಸಿದ ಶ್ರೀ ನರೇಂದ್ರ ಮೋದಿ ಅವರು ಭವಿಷ್ಯದಲ್ಲಿ ಜಗತ್ತಿನಾದ್ಯಂತದ ವಿವಿಧ ಭಾರತೀಯ ಅನಿವಾಸಿ ಕಾರ್ಯಕ್ರಮಗಳಲ್ಲಿ ಉದ್ಘಾಟನಾ ಗೀತೆಯನ್ನು ನುಡಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು. ಭಾರತೀಯ ವಲಸಿಗರ ಭಾವನೆಗಳು ಮತ್ತು ಅನುಭವಗಳನ್ನು ಸೆರೆಹಿಡಿದ ಅದ್ಭುತ ಗಾಯನಕ್ಕಾಗಿ ಅವರು ಗ್ರ್ಯಾಮಿ ಪ್ರಶಸ್ತಿ ವಿಜೇತ …
Read More »ಎಚ್ ಎಂ ಪಿ ವಿ ಕುರಿತು ಇತ್ತೀಚಿನ ಮಾಹಿತಿ
ಭಾರತದಲ್ಲಿನ ಉಸಿರಾಟದ ಕಾಯಿಲೆಗಳ ಪ್ರಸ್ತುತ ಪರಿಸ್ಥಿತಿ ಮತ್ತು ಚೀನಾದಲ್ಲಿ ಎಚ್ಎಂಪಿವಿ ಪ್ರಕರಣಗಳ ಮಾಧ್ಯಮ ವರದಿಗಳ ನಂತರ ದೇಶದಲ್ಲಿನ ಎಚ್ಎಂಪಿವಿ ಪ್ರಕರಣಗಳ ಸ್ಥಿತಿಗತಿ ಹಾಗೂ ಅವುಗಳ ನಿರ್ವಹಣೆಗಾಗಿ ಕೈಗೊಂಡಿರುವ ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ಪರಿಶೀಲಿಸಲು ಕೇಂದ್ರ ಆರೋಗ್ಯ ಕಾರ್ಯದರ್ಶಿ ಶ್ರೀಮತಿ ಪುಣ್ಯ ಸಲೀಲಾ ಶ್ರೀವಾಸ್ತವ ಅವರು ನಿನ್ನೆ ವರ್ಚುವಲ್ ಮಾದರಿಯಲ್ಲಿ ರಾಜ್ಯಗಳು/ಕೇಂದ್ರಾಳಿತ ಪ್ರದೇಶಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಕಾರ್ಯದರ್ಶಿ (ಎ ಎಚ್ ಆರ್) ಡಾ.ರಾಜೀವ್ ಬಹ್ಲ್, ಡಿ ಜಿ ಎಚ್ ಎಸ್ …
Read More »
Matribhumi Samachar Kannad