ಗಣರಾಜ್ಯೋತ್ಸವ 2025ರ ಮೆರವಣಿಗೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಸ್ತಬ್ಧಚಿತ್ರವು ಸಚಿವಾಲಯದ ಯೋಜನೆಗಳು ಮತ್ತು ಮಹಿಳಾ ನೇತೃತ್ವದ ಅಭಿವೃದ್ಧಿಯ ಜೀವನ ಚಕ್ರದ ಮುಂದುವರಿಕೆ ವಿಧಾನವನ್ನು ಸುಂದರವಾಗಿ ಚಿತ್ರಿಸಿದೆ. ಪ್ರದರ್ಶನದ ಹೃದಯಭಾಗದಲ್ಲಿ ತಾಯಿಯೊಬ್ಬಳು ತನ್ನ ಹೆಣ್ಣು ಮಗುವನ್ನು ಪ್ರೀತಿಯಿಂದ ತಬ್ಬಿಕೊಳ್ಳುತ್ತಿದ್ದಳು, ಇದು ಮಗುವಿನ ಮೊದಲ ಶಿಕ್ಷಕಿಯಾಗಿ ತನ್ನ ಪಾತ್ರವನ್ನು ಸಂಕೇತಿಸುತ್ತದೆ. ಸ್ತಬ್ಧಚಿತ್ರವು ತಾಜಾ ಹಣ್ಣುಗಳು, ತರಕಾರಿಗಳು, ಧಾನ್ಯಗಳು ಮತ್ತು ಹಾಲಿನ ರೋಮಾಂಚಕ ಪ್ರದರ್ಶನಗಳನ್ನು ಒಳಗೊಂಡಿತ್ತು, ಇದು ಅಪೌಷ್ಟಿಕತೆಯನ್ನು ನಿರ್ಮೂಲನೆ ಮಾಡುವ …
Read More »ನವದೆಹಲಿಯ ಕರ್ತವ್ಯ ಪಥದಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆಗೆ ಸಾಕ್ಷಿಯಾದ ಪಂಚಾಯತ್ ಪ್ರತಿನಿಧಿಗಳು
76ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದೇಶಾದ್ಯಂತದ ಪಂಚಾಯತ್ ರಾಜ್ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಮತ್ತು ಅವರ ಪತ್ನಿಯರು 575ಕ್ಕೂ ಹೆಚ್ಚು ವಿಶೇಷ ಅತಿಥಿಗಳಾಗಿ ಭಾಗವಹಿಸಿದ್ದರು, ಅವರು ಗ್ರಾಮೀಣ ಭಾರತದ ನಾಡಿಮಿಡಿತ ಸಂಕೇತಿಸುವ ಭವ್ಯ ಗಣರಾಜ್ಯೋತ್ಸವ ಪರೇಡ್ ವೀಕ್ಷಿಸಿದರು. ಅವರಲ್ಲಿ, ಸುಮಾರು 40%ರಷ್ಟು ಮಹಿಳೆಯರು ಭಾಗವಹಿಸಿದ್ದರು, ಇದು ಲಿಂಗ-ಸಮಾನತೆಯ ಆಡಳಿತ ನೀಡುವ ಕಡೆಗಿನ ಗಮನಾರ್ಹ ಪ್ರಗತಿಗೆ ಉದಾಹರಣೆಯಾಗಿದೆ. ತಳಮಟ್ಟದ ಪ್ರಜಾಪ್ರಭುತ್ವವನ್ನು ಗೌರವಿಸುವ ಪ್ರಯತ್ನದಲ್ಲಿ, ಪಂಚಾಯತ್ ರಾಜ್ ಸಚಿವಾಲಯವು 2025 ಜನವರಿ 25ರಂದು ನವದೆಹಲಿಯಲ್ಲಿ …
Read More »ಕೇಂದ್ರ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು 76ನೇ ಗಣರಾಜ್ಯೋತ್ಸವದ ಮೆರವಣಿಗೆಗಾಗಿ ‘ಮನ್ ಕಿ ಬಾತ್’ ವಿಶೇಷ ಆಹ್ವಾನಿತರೊಂದಿಗೆ ಸಂವಾದ ನಡೆಸಿದರು
ಕೇಂದ್ರ ವಾರ್ತಾ ಮತ್ತು ಪ್ರಸಾರ, ರೈಲ್ವೆ ಮತ್ತು ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮದ ವಿಶೇಷ ಆಹ್ವಾನಿತರೊಂದಿಗೆ ಸಂವಾದ ನಡೆಸಿದರು. ಭಾರತದ ಸಾರ್ವಜನಿಕ ಸೇವಾ ಪ್ರಸಾರಕದ ರೆಡಿಯೊ ವಿಭಾಗವಾದ ಆಕಾಶವಾಣಿ ಅವರನ್ನು ಆಕಾಶವಾಣಿ ಭವನದಲ್ಲಿರುವ ತನ್ನ ನವದೆಹಲಿ ಕಚೇರಿಗೆ ಆಹ್ವಾನಿಸಿತು. ಆಕಾಶವಾಣಿ: ಬದಲಾವಣೆಯ ಅಪ್ರತಿಮ ವೀರರ ಸಂಭ್ರಮ ಪ್ರಧಾನಮಂತ್ರಿ ಶ್ರೀ …
Read More »ಗಣರಾಜ್ಯೋತ್ಸವದಂದು ಎಲ್ಲರಿಗೂ ಶುಭ ಕೋರಿದ ಪ್ರಧಾನಮಂತ್ರಿ
ಗಣರಾಜ್ಯೋತ್ಸವದ ಸಂದರ್ಭದಲ್ಲಿ ಎಲ್ಲರಿಗೂ ಶುಭ ಕೋರಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ನಾವು ಗಣರಾಜ್ಯವಾಗಿ 75 ಅದ್ಭುತ ವರ್ಷಗಳನ್ನು ಆಚರಿಸುತ್ತಿದ್ದೇವೆ ಎಂದು ಹೇಳಿದರು. ಈ ಸಂಬಂಧ ಎಕ್ಸ್ ಖಾತೆಯಲ್ಲಿ ಪ್ರತ್ಯೇಕ ಪೋಸ್ಟ್ ಗಳಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ: “ಗಣರಾಜ್ಯೋತ್ಸವದ ಶುಭಾಶಯಗಳು. ಇಂದು, ನಾವು ಗಣರಾಜ್ಯದ 75 ಅದ್ಭುತ ವರ್ಷಗಳನ್ನು ಆಚರಿಸುತ್ತೇವೆ. ನಮ್ಮ ಸಂವಿಧಾನವನ್ನು ರಚಿಸಿದ ಮತ್ತು ನಮ್ಮ ಪ್ರಯಾಣವು ಪ್ರಜಾಪ್ರಭುತ್ವ, ಘನತೆ ಮತ್ತು ಏಕತೆಯಲ್ಲಿ ಬೇರೂರಿದೆ …
Read More »ಜೀವನ ರಕ್ಷಾಪದಕ ಸರಣಿ ಪ್ರಶಸ್ತಿಗಳು-2024 ರನ್ನು ಪ್ರದಾನ ಮಾಡಲು ಮಾಡಿರುವ ಆಯ್ಕೆಯನ್ನು ಅನುಮೋದಿಸಿದ ರಾಷ್ಟ್ರಪತಿ
ಸರ್ವೋತ್ತಮ ಜೀವನ ರಕ್ಷಾಪದಕ 17 ಮಂದಿಗೆ, ಉತ್ತಮ ಜೀವನ ರಕ್ಷಾ ಪದಕ 09 ಮಂದಿಗೆ ಮತ್ತು 23 ಜನರಿಗೆ ಜೀವನ ರಕ್ಷಾ ಪದಕ ಸೇರಿದಂತೆ ಒಟ್ಟಾರೆ 49 ವ್ಯಕ್ತಿಗಳಿಗೆ 2024 ರ ಜೀವನ ರಕ್ಷಾ ಪದಕ ಸರಣಿ ಪ್ರಶಸ್ತಿಗಳನ್ನು ( ಹಾಗೂ ಇವುಗಳಲ್ಲಿ ಆರು ಪ್ರಶಸ್ತಿ ಪುರಸ್ಕೃತರಿಗೆ ಮರಣೋತ್ತರ ಪ್ರಶಸ್ತಿ ) ಪ್ರದಾನ ಮಾಡಲು ಭಾರತದ ರಾಷ್ಟ್ರಪತಿಗಳು ಅನುಮೋದನೆ ನೀಡಿದ್ದಾರೆ. ವಿವಿಧ ಜೀವನ ರಕ್ಷಾ ಪದಕ ಪುರಸ್ಕೃತರ ವಿವರಗಳು ಕೆಳಕಂಡಂತಿವೆ:- …
Read More »2025ನೇ ಸಾಲಿನ ಪದ್ಮ ಪ್ರಶಸ್ತಿಗಳು ಪ್ರಕಟ
ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಗಳನ್ನು ಅಂದರೆ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀಗಳನ್ನು ಮೂರು ವರ್ಗಗಳಲ್ಲಿ ಪ್ರದಾನ ಮಾಡಲಾಗುವುದು. ಈ ಪ್ರಶಸ್ತಿಗಳನ್ನು ವಿವಿಧ ವಿಭಾಗಗಳು/ ಕ್ಷೇತ್ರಗಳಲ್ಲಿ ಚಟುವಟಿಕೆಗಳನ್ನು ಅಂದರೆ ಕಲೆ, ಸಾಮಾಜಿಕ ಸೇವೆ, ಸಾರ್ವಜನಿಕ ವ್ಯವಹಾರ, ವಿಜ್ಞಾನ ಮತ್ತು ಇಂಜಿನಿಯರಿಂಗ್, ವ್ಯಾಪಾರ ಮತ್ತು ಉದ್ಯಮ, ವೈದ್ಯಕೀಯ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ನಾಗರಿಕ ಸೇವೆ ಇತ್ಯಾದಿಗಳಲ್ಲಿ ನೀಡಲಾಗುವುದು. ‘ಪದ್ಮವಿಭೂಷಣ’ ಪ್ರಶಸ್ತಿಯನ್ನು ಅಸಾಧಾರಣ ಮತ್ತು ಅತ್ಯುನ್ನತ ಸೇವೆಗಾಗಿ ನೀಡಲಾಗುವುದು …
Read More »ಪ್ರಧಾನಮಂತ್ರಿ ಗತಿಶಕ್ತಿ ನೇತೃತ್ವದ ನೆಟ್ ವರ್ಕ್ ಯೋಜನಾ ಗುಂಪಿನ 86ನೇ ಸಭೆ ಬಹು ಮಾದರಿ ಸಂಪರ್ಕಕ್ಕಾಗಿ ನಾಲ್ಕು ರೈಲು ಮತ್ತು ರಸ್ತೆ ಯೋಜನೆಗಳನ್ನು ಮೌಲ್ಯಮಾಪನ ಮಾಡಿತು
ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆಯ (ಡಿಪಿಐಐಟಿ) ಜಂಟಿ ಕಾರ್ಯದರ್ಶಿ ಶ್ರೀ ಇ. ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ನೆಟ್ ವರ್ಕ್ ಯೋಜನಾ ಗುಂಪಿನ (ಎನ್ ಪಿ ಜಿ) 86ನೇ ಸಭೆ, ಪಿಎಂ ಗತಿಶಕ್ತಿಯ ತತ್ವಗಳಿಗೆ ಅನುಗುಣವಾಗಿ ನಾಲ್ಕು ಯೋಜನೆಗಳನ್ನು (2 ರೈಲ್ವೆ ಮತ್ತು 2 ಹೆದ್ದಾರಿ ಅಭಿವೃದ್ಧಿ ಯೋಜನೆಗಳು) ಮೌಲ್ಯಮಾಪನ ಮಾಡಿತು. ರಸ್ತೆ ಮತ್ತು ರೈಲು ವಲಯಗಳಲ್ಲಿನ ಮೂಲಸೌಕರ್ಯ ಯೋಜನೆಗಳನ್ನು ಮೌಲ್ಯಮಾಪನ ಮಾಡಲು 2025ರ ಜನವರಿ 24 …
Read More »ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎನ್ ಸಿ ಸಿ ಕೆಡೆಟ್ ಗಳು, ಎನ್ ಎಸ್ ಎಸ್ ಸ್ವಯಂಸೇವಕರು, ಬುಡಕಟ್ಟು ಅತಿಥಿಗಳು ಮತ್ತು ಸ್ತಬ್ಧಚಿತ್ರ ಕಲಾವಿದರೊಂದಿಗೆ ಸಂವಾದ ನಡೆಸಿದರು
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿನ್ನೆ (2025ರ ಜನವರಿ 24) ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಮುಂಬರುವ ಗಣರಾಜ್ಯೋತ್ಸವದ ಮೆರವಣಿಗೆಯ ಭಾಗವಾಗಲಿರುವ ಎನ್ ಸಿ ಸಿ ಕೆಡೆಟ್ ಗಳು, ಎನ್ ಎಸ್ ಎಸ್ ಸ್ವಯಂಸೇವಕರು, ಬುಡಕಟ್ಟು ಅತಿಥಿಗಳು ಮತ್ತು ಸ್ತಬ್ಧಚಿತ್ರ ಕಲಾವಿದರೊಂದಿಗೆ ಸಂವಾದ ನಡೆಸಿದರು. ಸಂವಾದದ ಸಮಯದಲ್ಲಿ, ಅನೇಕ ಭಾಗವಹಿಸುವವರು ಪ್ರಧಾನಿಯನ್ನು ವೈಯಕ್ತಿಕವಾಗಿ ಭೇಟಿಯಾದ ಸಂತಸವನ್ನು ವ್ಯಕ್ತಪಡಿಸಿದರು. ಇದಕ್ಕೆ ಪ್ರಧಾನಮಂತ್ರಿ “ಇದು ಭಾರತೀಯ ಪ್ರಜಾಪ್ರಭುತ್ವದ ಶಕ್ತಿಯನ್ನು ಪ್ರದರ್ಶಿಸುತ್ತದೆ” …
Read More »15ನೇ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಪಾಲ್ಗೊಂಡ ರಾಷ್ಟ್ರಪತಿ
ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (ಜನವರಿ 25, 2025) ಹೊಸದಿಲ್ಲಿಯಲ್ಲಿ ನಡೆದ 15 ನೇ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಪಾಲ್ಗೊಂಡು ಭಾಷಣ ಮಾಡಿದರು. ಈ ಸಂದರ್ಭದಲ್ಲಿ ರಾಷ್ಟ್ರಪತಿಗಳು ಚುನಾವಣೆಗಳನ್ನು ಸುಗಮವಾಗಿ ನಡೆಸುವಲ್ಲಿ ಅನುಕರಣೀಯ ಕಾರ್ಯಕ್ಷಮತೆಯನ್ನು ಪ್ರದರ್ಶಿಸಿದ ರಾಜ್ಯ ಮತ್ತು ಜಿಲ್ಲಾ ಅಧಿಕಾರಿಗಳಿಗೆ ಅತ್ಯುತ್ತಮ ಚುನಾವಣಾ ಅಭ್ಯಾಸ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಮುಖ್ಯ ಚುನಾವಣಾ ಆಯುಕ್ತ ಶ್ರೀ ರಾಜೀವ್ ಕುಮಾರ್ ಅವರಿಂದ “ಇಂಡಿಯಾ ವೋಟ್ಸ್ 2024: ಎ ಸಾಗಾ ಆಫ್ ಡೆಮಾಕ್ರಸಿ” ಪುಸ್ತಕದ ಮೊದಲ ಪ್ರತಿಯನ್ನು ಅವರು ಸ್ವೀಕರಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರಪತಿಗಳು, ನಮ್ಮ ಪ್ರಜಾಪ್ರಭುತ್ವವು ವಿಶ್ವದ ಅತ್ಯಂತ ಹಳೆಯ ಪ್ರಜಾಪ್ರಭುತ್ವ ಮಾತ್ರವಲ್ಲ, ವಿಶ್ವದ ಅತಿದೊಡ್ಡ, ವೈವಿಧ್ಯಮಯ, ಯುವ, ಅಂತರ್ಗತ ಮತ್ತು ಸೂಕ್ಷ್ಮ ಪ್ರಜಾಪ್ರಭುತ್ವವಾಗಿದೆ ಎಂಬುದು ನಮಗೆಲ್ಲರಿಗೂ ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು. ಭಾರತದ ಪ್ರಜಾಪ್ರಭುತ್ವವು ಆಧುನಿಕ ಜಗತ್ತಿಗೆ ವಿಶಿಷ್ಟ ಉದಾಹರಣೆಯಾಗಿದೆ. ವಿಶ್ವದ ಅನೇಕ ದೇಶಗಳು ನಮ್ಮ ಚುನಾವಣಾ ವ್ಯವಸ್ಥೆ ಮತ್ತು ನಿರ್ವಹಣೆಯಿಂದ ಕಲಿಯುತ್ತಿವೆ ಎಂದು ಅವರು ಹೇಳಿದರು. ನಮ್ಮ ಅಂತರ್ಗತ ಪ್ರಜಾಪ್ರಭುತ್ವದ ಪ್ರಭಾವಶಾಲಿ ನೋಟವು ಚುನಾವಣೆಗಳಲ್ಲಿ ಗೋಚರಿಸುತ್ತದೆ ಎಂದು ರಾಷ್ಟ್ರಪತಿ ಹೇಳಿದರು. ಚುನಾವಣೆಗಳಲ್ಲಿ ಹೆಚ್ಚುತ್ತಿರುವ ಮಹಿಳೆಯರ ಭಾಗವಹಿಸುವಿಕೆಯು ನಮ್ಮ ಸಮಾಜ ಮತ್ತು ದೇಶದ ಒಟ್ಟಾರೆ ಅಭಿವೃದ್ಧಿಯ ಪ್ರಮುಖ ಸಂಕೇತವಾಗಿದೆ. 85 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ಮತದಾರರು, ವಿಕಲಚೇತನ ಮತದಾರರು ಮತ್ತು ದೂರದ ಪ್ರದೇಶಗಳಲ್ಲಿ ವಾಸಿಸುವ ಬುಡಕಟ್ಟು ಮತದಾರರಿಗೆ ಮತದಾನ ಪ್ರಕ್ರಿಯೆಯನ್ನು ಸುಗಮಗೊಳಿಸಲು ಚುನಾವಣಾ ಆಯೋಗ ವಿಶೇಷ ಪ್ರಯತ್ನಗಳನ್ನು ಮಾಡಿದೆ ಎಂಬುದರತ್ತ ಅವರು ಗಮನ ಸೆಳೆದರು. ಈ ರೀತಿಯಾಗಿ, ಚುನಾವಣಾ ಆಯೋಗವು ಅಂತರ್ಗತ ಮತ್ತು ಸೂಕ್ಷ್ಮ ಚುನಾವಣಾ ನಿರ್ವಹಣೆಗೆ ಉತ್ತಮ ಉದಾಹರಣೆಯನ್ನು ನೀಡಿದೆ ಎಂದೂ ಅವರು ಹೇಳಿದರು. ಮತದಾನಕ್ಕೆ ಸಂಬಂಧಿಸಿದ ಆದರ್ಶಗಳು ಮತ್ತು ಜವಾಬ್ದಾರಿಗಳು ನಮ್ಮ ಪ್ರಜಾಪ್ರಭುತ್ವದ ಪ್ರಮುಖ ಆಯಾಮಗಳಾಗಿವೆ ಎಂದು ರಾಷ್ಟ್ರಪತಿ ಹೇಳಿದರು. ಚುನಾವಣಾ ಆಯೋಗ ಹೊರಡಿಸಿದ ಮತದಾರರ ಪ್ರತಿಜ್ಞೆ ಎಲ್ಲಾ ನಾಗರಿಕರಿಗೆ ಮಾರ್ಗದರ್ಶನ ನೀಡುತ್ತದೆ. ಪ್ರಜಾಪ್ರಭುತ್ವದಲ್ಲಿ ಸಂಪೂರ್ಣ ನಂಬಿಕೆಯ ಜೊತೆಗೆ, ಮತದಾರರು ಎಲ್ಲಾ ರೀತಿಯ ಸಂಕುಚಿತ ಮನೋಭಾವ, ತಾರತಮ್ಯ ಮತ್ತು ಪ್ರಲೋಭನೆಗಳನ್ನು ಮೀರಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸುವ ದೃಢ ಸಂಕಲ್ಪವನ್ನು ಹೊಂದಿರಬೇಕು ಎಂದು ಅವರು ಹೇಳಿದರು. ಪ್ರಬುದ್ಧ ಮತದಾರರು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತಾರೆ ಎಂದು ಅವರು ನುಡಿದರು. 2011 ರಿಂದ, ಭಾರತದ ಚುನಾವಣಾ ಆಯೋಗದ ಸಂಸ್ಥಾಪನಾ ದಿನದ ನೆನಪಿಗಾಗಿ ಪ್ರತಿವರ್ಷ ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ. ಈ ಕಾರ್ಯಕ್ರಮವು ಮತದಾರರ ಕೇಂದ್ರೀಕರಣವನ್ನು ಒತ್ತಿಹೇಳುವುದು, ನಾಗರಿಕರಲ್ಲಿ ಚುನಾವಣಾ ಜಾಗೃತಿಯನ್ನು ಹೆಚ್ಚಿಸುವುದು ಮತ್ತು ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಅವರ ಸಕ್ರಿಯ ಭಾಗವಹಿಸುವಿಕೆಯನ್ನು ಪ್ರೇರೇಪಿಸುವ ಗುರಿಯನ್ನು ಹೊಂದಿದೆ.
Read More »2025ರ ಗಣರಾಜ್ಯೋತ್ಸವದ ಮುನ್ನಾದಿನದಂದು ರಾಷ್ಟ್ರವನ್ನುದ್ದೇಶಿಸಿ ಭಾರತದ ಘನತೆವೆತ್ತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರ ಭಾಷಣ
ನನ್ನ ಪ್ರೀತಿಯ ದೇಶವಾಸಿಗಳೇ, ನಮಸ್ಕಾರ! ಈ ಐತಿಹಾಸಿಕ ಸಂದರ್ಭದಲ್ಲಿ ನಿಮ್ಮನ್ನು ಉದ್ದೇಶಿಸಿ ಮಾತನಾಡಲು ನನಗೆ ಸಂತೋಷವಾಗಿದೆ. ಗಣರಾಜ್ಯೋತ್ಸವದ ಮುನ್ನಾದಿನದಂದು, ನಾನು ನಿಮಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ! 75 ವರ್ಷಗಳ ಹಿಂದೆ ಇದೇ ಜನವರಿ 26ರಂದು ನಮ್ಮ ಸಂಸ್ಥಾಪಕ ದಾಖಲೆಯಾದ ಭಾರತದ ಸಂವಿಧಾನ ಜಾರಿಗೆ ಬಂದಿತು. ಸಂವಿಧಾನ ರಚನಾ ಸಭೆಯು ಸುಮಾರು ಮೂರು ವರ್ಷಗಳ ಚರ್ಚೆಯ ನಂತರ, 1949ರ ನವೆಂಬರ್ 26ರಂದು ಸಂವಿಧಾನವನ್ನು ಅಂಗೀಕರಿಸಿತು. ಆ ದಿನವನ್ನು, ಅಂದರೆ, ನವೆಂಬರ್ …
Read More »
Matribhumi Samachar Kannad