ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) 2025ರ ಜುಲೈ 28 ಮತ್ತು 29 ರಂದು ಒಡಿಶಾ ಕರಾವಳಿಯ ಡಾ. ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ʻಪ್ರಳಯ್ʼ ಕ್ಷಿಪಣಿಯ ಸತತ ಎರಡು ಪರೀಕ್ಷಾರ್ಥ ಪ್ರಯೋಗಗಳನ್ನು ಯಶಸ್ವಿಯಾಗಿ ನಡೆಸಿತು. ಕ್ಷಿಪಣಿ ವ್ಯವಸ್ಥೆಯ ಗರಿಷ್ಠ ಮತ್ತು ಕನಿಷ್ಠ ವ್ಯಾಪ್ತಿಯ ಸಾಮರ್ಥ್ಯವನ್ನು ಪ್ರಮಾಣಿಕರಿಸಲು ʻಬಳಕೆದಾರ ಮೌಲ್ಯಮಾಪನ ಪ್ರಯೋಗʼಗಳ ಭಾಗವಾಗಿ ಈ ಪರೀಕ್ಷಾರ್ಥ ಪ್ರಯೋಗ ನಡೆಸಲಾಯಿತು. ಕ್ಷಿಪಣಿಗಳು ನಿಖರವಾಗಿ ಉದ್ದೇಶಿತ ಪಥವನ್ನು ಅನುಸರಿಸಿದವು ಮತ್ತು ಎಲ್ಲಾ …
Read More »ಪ್ರಧಾನಮಂತ್ರಿ ಅವರು ದಿನಾಂಕ 27.07.2025 ರಂದು ಮಾಡಿದ ‘ಮನ್ ಕಿ ಬಾತ್’ – 124 ನೇ ಸಂಚಿಕೆಯ ಕನ್ನಡ ಅವತರಣಿಕೆ
ನನ್ನ ಪ್ರೀತಿಯ ದೇಶವಾಸಿಗಳೇ, ನಮಸ್ಕಾರ. ‘ಮನದ ಮಾತಿನಲ್ಲಿ’ ಮತ್ತೊಮ್ಮೆ ನಾವು ದೇಶದ ಯಶಸ್ಸಿನ ಬಗ್ಗೆ, ದೇಶವಾಸಿಗಳ ಸಾಧನೆಗಳ ಬಗ್ಗೆ ಮಾತನಾಡಲಿದ್ದೇವೆ. ಕ್ರೀಡೆಯಾಗಿರಲಿ, ವಿಜ್ಞಾನವಾಗಿರಲಿ ಅಥವಾ ಸಂಸ್ಕೃತಿಯಾಗಿರಲಿ ಎಲ್ಲ ಕ್ಷೇತ್ರಗಳಲ್ಲಿ ಕಳೆದ ಕೆಲವು ವಾರಗಳಲ್ಲಿ, ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುವಂತಹ ಘಟನೆಗಳು ನಡೆದಿವೆ. ಇತ್ತೀಚೆಗೆ, ಬಾಹ್ಯಾಕಾಶದಿಂದ ಶುಭಾಂಶು ಶುಕ್ಲಾ ಹಿಂದಿರುಗಿದ ಕುರಿತು ದೇಶದಲ್ಲಿ ಬಹಳಷ್ಟು ಚರ್ಚೆಗಳು ನಡೆದಿವೆ. ಶುಭಾಂಶು ಭೂಮಿಗೆ ಸುರಕ್ಷಿತವಾಗಿ ಬಂದಿಳಿದ ತಕ್ಷಣ, ಜನರು ಸಂತೋಷದಿಂದ ಕುಣಿದು ಕುಪ್ಪಳಿಸಿದರು, ಪ್ರತಿಯೊಬ್ಬರ ಹೃದಯದಲ್ಲೂ ಸಂತಸದ …
Read More »ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಜುಲೈ 24 ರಂದು ನವದೆಹಲಿಯಲ್ಲಿ ‘ರಾಷ್ಟ್ರೀಯ ಸಹಕಾರ ನೀತಿ 2025’ ಅನ್ನು ಅನಾವರಣಗೊಳಿಸಲಿದ್ದಾರೆ
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು 2025ರ ಜುಲೈ 24ರಂದು ನವದೆಹಲಿಯ ಅಟಲ್ ಅಕ್ಷಯ್ ಉರ್ಜಾ ಭವನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸಹಕಾರ ನೀತಿ 2025 ಅನ್ನು ಪ್ರಕಟಿಸಲಿದ್ದಾರೆ. ರಾಷ್ಟ್ರೀಯ ಸಹಕಾರಿ ನೀತಿಯ ಕರಡು ಸಮಿತಿಯ ಸದಸ್ಯರು, ಎಲ್ಲಾ ರಾಷ್ಟ್ರೀಯ ಸಹಕಾರಿ ಒಕ್ಕೂಟಗಳ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರು, ಸಚಿವಾಲಯದ ಹಿರಿಯ ಅಧಿಕಾರಿಗಳು, ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (ಎನ್ ಸಿಡಿಸಿ), ರಾಷ್ಟ್ರೀಯ ಸಹಕಾರಿ …
Read More »ಸಂಸತ್ತಿನ 2025ರ ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಹೇಳಿಕೆ
2025ರ ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸತ್ ಆವರಣದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದರು. ಮುಂಗಾರು ಅಧಿವೇಶನಕ್ಕೆ ಎಲ್ಲರನ್ನೂ ಸ್ವಾಗತಿಸಿದ ಪ್ರಧಾನಮಂತ್ರಿ, ಮುಂಗಾರು ನಾವೀನ್ಯತೆ ಮತ್ತು ನವೀಕರಣವನ್ನು ಸಂಕೇತಿಸುತ್ತದೆ ಎಂದು ಹೇಳಿದರು, ದೇಶಾದ್ಯಂತ ಪ್ರಸ್ತುತ ಹವಾಮಾನ ಪರಿಸ್ಥಿತಿಗಳು ಅನುಕೂಲಕರವಾಗಿ ಮುಂದುವರಿಯುತ್ತಿವೆ, ಕೃಷಿಗೆ ಪ್ರಯೋಜನಕಾರಿ ಮುನ್ಸೂಚನೆಗಳನ್ನು ನೀಡುತ್ತಿವೆ ಎಂದು ಅವರು ಹೇಳಿದರು. ಮಳೆಯು ಗ್ರಾಮೀಣ ಆರ್ಥಿಕತೆ ಮತ್ತು ದೇಶದ ಒಟ್ಟಾರೆ ಆರ್ಥಿಕ ರಚನೆಯಲ್ಲಿ ಮಾತ್ರವಲ್ಲದೆ, ಪ್ರತಿಯೊಂದು …
Read More »ಕಾಶಿ ಘೋಷಣೆಯೊಂದಿಗೆ ವಾರಣಾಸಿಯಲ್ಲಿ ಯುವ ಆಧ್ಯಾತ್ಮಿಕ ಶೃಂಗಸಭೆ ಮುಕ್ತಾಯ
ವಿಕಸಿತ ಭಾರತಕ್ಕಾಗಿ ನಶಾ ಮುಕ್ತ ಯುವ ಎಂಬ ವಿಷಯದ ಮೇಲೆ ಯುವ ಆಧ್ಯಾತ್ಮಿಕ ಶೃಂಗಸಭೆ ಇಂದು ವಾರಣಾಸಿಯ ರುದ್ರಾಕ್ಷಿ ಅಂತಾರಾಷ್ಟ್ರೀಯ ಸಮಾವೇಶ ಕೇಂದ್ರದಲ್ಲಿ ಕಾಶಿ ಘೋಷಣೆಯನ್ನು ಔಪಚಾರಿಕವಾಗಿ ಅಂಗೀಕರಿಸುವುದರೊಂದಿಗೆ ಮುಕ್ತಾಯಗೊಂಡಿತು. ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ ಆಯೋಜಿಸಿದ್ದ ಈ ಶೃಂಗಸಭೆಯಲ್ಲಿ 600ಕ್ಕೂ ಹೆಚ್ಚು ಯುವ ನಾಯಕರು, 120ಕ್ಕೂ ಹೆಚ್ಚು ಆಧ್ಯಾತ್ಮಿಕ ಮತ್ತು ಸಾಮಾಜಿಕ-ಸಾಂಸ್ಕೃತಿಕ ಸಂಸ್ಥೆಗಳ ಪ್ರತಿನಿಧಿಗಳು, ಶಿಕ್ಷಣ ತಜ್ಞರು ಮತ್ತು ಕ್ಷೇತ್ರ ತಜ್ಞರು ಭಾಗವಹಿಸಿದ್ದರು. ಇದು 2047ರ ವೇಳೆಗೆ …
Read More »ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ವಾಪಸ್ಸಾಗಿದ್ದನ್ನು ಸ್ವಾಗತಿಸಿ ನಿರ್ಣಯ ಕೈಗೊಂಡ ಕೇಂದ್ರ ಸಚಿವ ಸಂಪುಟ
ಭಾರತದ ಅನಂತ ಆಕಾಂಕ್ಷೆಗಳನ್ನು ಪ್ರತಿನಿಧಿಸುವ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ತಮ್ಮ ಬಾಹ್ಯಾಕಾಶ ಪ್ರಯಾಣದಿಂದ 2025ರ ಜುಲೈ 15 ರಂದು ಸುರಕ್ಷಿತವಾಗಿ ಭೂಮಿಗೆ ಮರಳಿದ್ದಾರೆ. ಇದು ಇಡೀ ರಾಷ್ಟ್ರಕ್ಕೆ ಹೆಮ್ಮೆ, ವೈಭವ ಮತ್ತು ಸಂತೋಷದ ಕ್ಷಣವಾಗಿದೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ತಮ್ಮ ಐತಿಹಾಸಿಕ 18 ದಿನಗಳ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ಭೂಮಿಗೆ ಹಿಂತಿರುಗಿರುವುದರ ರಾಷ್ಟ್ರದ ಸಂಭ್ರಮಾಚರಣೆಗೆ ಸಚಿವ ಸಂಪುಟವು ಕೈ …
Read More »ಪ್ರಧಾನಮಂತ್ರಿ ಧನ್ ಧಾನ್ಯ ಕೃಷಿ ಯೋಜನೆಗೆ ಸಂಪುಟದ ಅನುಮೋದನೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, 2025-26ರಿಂದ ಆರು ವರ್ಷಗಳ ಅವಧಿಗೆ 100 ಜಿಲ್ಲೆಗಳನ್ನು ಒಳಗೊಳ್ಳುವ “ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆ”ಗೆ ಅನುಮೋದನೆ ನೀಡಿದೆ. ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆ ನೀತಿ ಆಯೋಗದ ಮಹತ್ವಾಕಾಂಕ್ಷೆಯ ಜಿಲ್ಲಾ ಕಾರ್ಯಕ್ರಮದಿಂದ ಸ್ಫೂರ್ತಿ ಪಡೆದಿದೆ ಮತ್ತು ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳ ಮೇಲೆ ಪ್ರತ್ಯೇಕವಾಗಿ ಕೇಂದ್ರೀಕರಿಸುವ ಯೋಜನೆಗಳಲ್ಲಿ ಇದು ಮೊದಲನೆಯದು. ಈ ಯೋಜನೆಯು ಕೃಷಿ ಉತ್ಪಾದಕತೆಯನ್ನು …
Read More »ನವೀಕರಿಸಬಹುದಾದ ಇಂಧನ ಸಾಮರ್ಥ್ಯವನ್ನು ಸ್ಥಾಪಿಸಲು ಎನ್ ಟಿ ಪಿ ಸಿ ರಿನ್ಯೂಯಬಲ್ ಎನರ್ಜಿ ಲಿಮಿಟೆಡ್ ಮತ್ತು ಅದರ ಇತರ ಜಂಟಿ ಉದ್ಯಮಗಳು/ ಅಂಗಸಂಸ್ಥೆಗಳಲ್ಲಿ ಹೂಡಿಕೆ ಮಾಡಲು ಎನ್ ಟಿ ಪಿ ಸಿ ಲಿಮಿಟೆಡ್ ಗೆ ಹೆಚ್ಚಿನ ಅಧಿಕಾರ ನೀಡಲು ಸಂಪುಟ ಅನುಮೋದನೆ ನೀಡಿದೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು, ಮಹಾರತ್ನ ಸಿ ಪಿ ಎಸ್ ಇ ಗಳಿಗೆ ಅಧಿಕಾರ ನಿಯೋಜನೆಗಾಗಿ ಅಸ್ತಿತ್ವದಲ್ಲಿರುವ ಮಾರ್ಗಸೂಚಿಗಳನ್ನು ಮೀರಿ ಎನ್ ಟಿ ಪಿ ಸಿ ಲಿಮಿಟೆಡ್ ಗೆ ಹೆಚ್ಚಿನ ಅಧಿಕಾರ ನೀಡಲು ಅನುಮೋದನೆ ನೀಡಿದೆ. ಇದು ಅಂಗಸಂಸ್ಥೆಯಾದ ಎನ್ ಟಿ ಪಿ ಸಿ ಗ್ರೀನ್ ಎನರ್ಜಿ ಲಿಮಿಟೆಡ್ (ಎನ್ ಜಿ ಇ ಎಲ್) ನಲ್ಲಿ ಹೂಡಿಕೆ ಮಾಡಲು ಅನುವು …
Read More »ಮಕ್ಕಳ ಆಧಾರ್ ಬಯೋಮೆಟ್ರಿಕ್ಸ್ ನವೀಕರಿಸಲು ಪೋಷಕರು ಮತ್ತು ಸಂರಕ್ಷಣಕಾರರನ್ನು ಯು.ಐ.ಡಿ.ಎ.ಐ ಒತ್ತಾಯಿಸಿದೆ. 5 ರಿಂದ 7 ವರ್ಷದೊಳಗಿನ ಮಕ್ಕಳಿಗೆ ಉಚಿತ
ಏಳು ವರ್ಷ ತುಂಬಿದ ಆದರೆ ಆಧಾರ್ನಲ್ಲಿ ತಮ್ಮ ಬಯೋಮೆಟ್ರಿಕ್ಸ್ಅನ್ನು ಇನ್ನೂ ನವೀಕರಿಸದ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ನವೀಕರಣ (ಎಂ.ಬಿ.ಯು) ಪೂರ್ಣಗೊಳಿಸುವ ಮಹತ್ವವನ್ನು ವಿಶಿಷ್ಟ ಗುರುತಿನ ಪ್ರಾಧಿಕಾರ (ಯು.ಐ.ಡಿ.ಎ.ಐ) ಪುನರುಚ್ಚರಿಸಿದೆ. ಇದು ಆಧಾರ್ ಅಡಿಯಲ್ಲಿ ಅಸ್ತಿತ್ವದಲ್ಲಿರುವ ಅವಶ್ಯಕತೆಯಾಗಿದ್ದು, ಪೋಷಕರು ಅಥವಾ ಸಂರಕ್ಷಣಕಾರರು ತಮ್ಮ ಮಗುವಿನ ವಿವರಗಳನ್ನು ಯಾವುದೇ ಆಧಾರ್ ಸೇವಾ ಕೇಂದ್ರ ಅಥವಾ ಗೊತ್ತುಪಡಿಸಿದ ಆಧಾರ್ ಕೇಂದ್ರದಲ್ಲಿ ನವೀಕರಿಸಬಹುದು. ಎಂ.ಬಿ.ಯು ಅಭ್ಯಾಸವನ್ನು ಪೂರ್ಣಗೊಳಿಸಲು ಯು.ಐ.ಡಿ.ಎ.ಐ ಅಂತಹ ಮಕ್ಕಳ ಆಧಾರ್ನಲ್ಲಿ ನೋಂದಾಯಿಸಲಾದ ಮೊಬೈಲ್ …
Read More »ಪ್ರಧಾನಮಂತ್ರಿ ಆಕಾಂಕ್ಷಿ ಜಿಲ್ಲೆಗಳಿಗೂ ರಾಷ್ಟ್ರೀಯ ಹೆದ್ದಾರಿಗಳನ್ನು ಸಂಪರ್ಕ ಕಲ್ಪಿಸಲು ಯೋಜನೆ: ಶ್ರೀ ನಿತಿನ್ ಗಡ್ಕರಿ
ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರು ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಇಂದು ಎರಡು ಸಾವಿರದ ನಲವತ್ತೆರೆಡು ಕೋಟಿ ರೂಪಾಯಿ ವೆಚ್ಚದ ಒಂಬತ್ತು ವಿವಿಧ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಚಾಲನೆ ನೀಡಿ, ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಹಾಗು ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ, ಲೋಕಸಭಾ ಸದಸ್ಯರಾದ …
Read More »
Matribhumi Samachar Kannad