ವಿಶ್ವ ಪರಿಸರ ದಿನದ ಅಂಗವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿಲ್ಲಿಯ ಭಗವಾನ್ ಮಹಾವೀರ್ ವನಸ್ಥಲಿ ಉದ್ಯಾನವನದಲ್ಲಿ ಗಿಡ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಏಕ್ ಪೆಡ್ ಮಾ ಕೆ ನಾಮ್ ಉಪಕ್ರಮವನ್ನು ಬಲಪಡಿಸುವ ಸಲುವಾಗಿ ಸಸಿ ನೆಟ್ಟಿದ್ದಾರೆ. ಅರಾವಳಿ ಹಸಿರು ಗೋಡೆ ಯೋಜನೆಯಡಿಯಲ್ಲಿ ಅರಾವಳಿ ಶ್ರೇಣಿಯನ್ನು ಮರು ಅರಣ್ಯೀಕರಣಗೊಳಿಸುವ ಮಹತ್ವವನ್ನು ಶ್ರೀ ಮೋದಿ ಅವರು ಎತ್ತಿ ತೋರಿಸಿದ್ದಾರೆ. ಭೂಗ್ರಹದ ಅತ್ಯಂತ ಹಳೆಯ ಶ್ರೇಣಿಗಳಲ್ಲಿ ಒಂದಾದ ಅರಾವಳಿ ವಲಯವು ಗುಜರಾತ್, ರಾಜಸ್ಥಾನ, ಹರಿಯಾಣ ಮತ್ತು ದಿಲ್ಲಿಯನ್ನು ವ್ಯಾಪಿಸಿದೆ ಎಂಬುದರತ್ತ ಪ್ರಧಾನಿ ಗಮನ ಸೆಳೆದರು. ಈ ಪ್ರದೇಶವು ಹಲವಾರು ಪರಿಸರ ಸವಾಲುಗಳನ್ನು ಎದುರಿಸುತ್ತಿದೆ ಮತ್ತು ಅವುಗಳನ್ನು ಪರಿಹರಿಸಲು ಸರ್ಕಾರ ಬದ್ಧವಾಗಿದೆ ಎಂದು ಅವರು ಒತ್ತಿ ಹೇಳಿದರು. ಅರಾವಳಿ ಶ್ರೇಣಿ ಮತ್ತು ಅದರಾಚೆಗೆ, ಸಾಂಪ್ರದಾಯಿಕ ಗಿಡ ನೆಡುವ ವಿಧಾನಗಳ ಜೊತೆಗೆ, ವಿಶೇಷವಾಗಿ ಸ್ಥಳಾವಕಾಶದ ಮಿತಿಗಳಿರುವ ನಗರ ಮತ್ತು ಅರೆ-ನಗರ ಪ್ರದೇಶಗಳಲ್ಲಿ ನಾವು ಹೊಸ ತಂತ್ರಗಳನ್ನು ಪ್ರೋತ್ಸಾಹಿಸುತ್ತೇವೆ ಎಂದು ಶ್ರೀ ಮೋದಿ ಹೇಳಿದರು. ಮೇರಿ ಲೈಫ್ ಪೋರ್ಟಲ್ನಲ್ಲಿ ತೋಟಗಾರಿಕೆ/ಪ್ಲಾಂಟೇಶನ್ ಚಟುವಟಿಕೆಗಳನ್ನು ಜಿಯೋ-ಟ್ಯಾಗ್ ಮಾಡಲಾಗುತ್ತದೆ ಮತ್ತು ಮೇಲ್ವಿಚಾರಣೆ ಮಾಡಲಾಗುತ್ತದೆ ಎಂದೂ ಶ್ರೀ ಮೋದಿ ಹೇಳಿದರು. ದೇಶದ ಯುವಜನರು ಈ ಆಂದೋಲನದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಮತ್ತು ಭೂಗ್ರಹದ ಹಸಿರು ಹೊದಿಕೆಯನ್ನು ಹೆಚ್ಚಿಸಲು ಕೊಡುಗೆ ನೀಡಬೇಕೆಂದು ಪ್ರಧಾನಿ ಆಗ್ರಹಿಸಿದರು. ಈ ಬಗ್ಗೆ X ಥ್ರೆಡ್ನಲ್ಲಿ ಪ್ರಧಾನಿ ಹೀಗೆ ಹೇಳಿದ್ದಾರೆ; “ಇಂದು, #ವಿಶ್ವ ಪರಿಸರ ದಿನದಂದು(#WorldEnvironmentDay), ನಾವು ವಿಶೇಷ ಗಿಡ ನೆಡುವ ಅಭಿಯಾನದೊಂದಿಗೆ #EkPedMaaKeNaam ಉಪಕ್ರಮವನ್ನು ಬಲಪಡಿಸಿದ್ದೇವೆ. ದಿಲ್ಲಿಯ ಭಗವಾನ್ ಮಹಾವೀರ್ ವನಸ್ಥಲಿ ಉದ್ಯಾನವನದಲ್ಲಿ ನಾನು ಸಸಿ ನೆಟ್ಟಿದ್ದೇನೆ. ಇದು ಅರಾವಳಿ ಶ್ರೇಣಿಯನ್ನು – ಅರಾವಳಿ ಹಸಿರು ಗೋಡೆ ಯೋಜನೆಯಲ್ಲಿ ಮರು ಅರಣ್ಯೀಕರಣಗೊಳಿಸುವ ನಮ್ಮ ಪ್ರಯತ್ನದ ಒಂದು ಭಾಗವಾಗಿದೆ.” “ಗುಜರಾತ್, ರಾಜಸ್ಥಾನ, ಹರಿಯಾಣ ಮತ್ತು ದಿಲ್ಲಿಯನ್ನು ಒಳಗೊಂಡ ಅರಾವಳಿ ಶ್ರೇಣಿಯು ನಮ್ಮ ಭೂಗ್ರಹದ ಅತ್ಯಂತ ಹಳೆಯ ಶ್ರೇಣಿಯಾಗಿದೆ ಎಂದು ವ್ಯಾಪಕವಾಗಿ ತಿಳಿಯಲಾಗಿದೆ. ಕಳೆದ ಹಲವಾರು ವರ್ಷಗಳಿಂದ ಈ ಶ್ರೇಣಿಗೆ ಸಂಬಂಧಿಸಿದ ಹಲವಾರು ಪರಿಸರ ಸವಾಲುಗಳು ಮುನ್ನೆಲೆಗೆ ಬಂದಿವೆ, ಇವುಗಳನ್ನು ತಗ್ಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ಶ್ರೇಣಿಯೊಂದಿಗೆ ಸಂಪರ್ಕ ಹೊಂದಿದ ಪ್ರದೇಶಗಳನ್ನು ಪುನರುಜ್ಜೀವನಗೊಳಿಸುವುದರತ್ತ ನಾವು ಗಮನ ಹರಿಸಿದ್ದೇವೆ. ನಾವು ಆಯಾ ಸ್ಥಳೀಯ ಆಡಳಿತಗಳೊಂದಿಗೆ ಕೆಲಸ ಮಾಡಲಿದ್ದೇವೆ ಮತ್ತು ನೀರಿನ ವ್ಯವಸ್ಥೆಗಳನ್ನು ಸುಧಾರಿಸುವುದು, ಧೂಳಿನ ಬಿರುಗಾಳಿಗಳನ್ನು ನಿಗ್ರಹಿಸುವುದು, ಥಾರ್ ಮರುಭೂಮಿಯು ಪೂರ್ವಕ್ಕೆ ವಿಸ್ತರಣೆಗೊಳ್ಳುವುದನ್ನು ನಿಲ್ಲಿಸುವುದು ಸೇರಿದಂತೆ ಇನ್ನೂ ಹೆಚ್ಚಿನ ವಿಷಯಗಳಿಗೆ ಒತ್ತು ನೀಡಲಿದ್ದೇವೆ.” “ಅರಾವಳಿ ಶ್ರೇಣಿ ಮತ್ತು ಅದರಾಚೆಗೆ, ಸಾಂಪ್ರದಾಯಿಕ ಗಿಡ ನೆಡುವ ವಿಧಾನಗಳ …
Read More »ಜೂನ್ 6 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರಧಾನಮಂತ್ರಿ ಭೇಟಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನ್ 6 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಈ ಪ್ರದೇಶದಲ್ಲಿ ರೈಲು ಮೂಲಸೌಕರ್ಯ ಮತ್ತು ಸಂಪರ್ಕವನ್ನು ಹೆಚ್ಚಿಸುವ ತಮ್ಮ ಬದ್ಧತೆಗೆ ಅನುಗುಣವಾಗಿ, ಪ್ರಧಾನ ಮಂತ್ರಿಗಳು ಬೆಳಿಗ್ಗೆ 11 ಗಂಟೆಗೆ ಚೆನಾಬ್ ಸೇತುವೆಯನ್ನು ಉದ್ಘಾಟಿಸಲಿದ್ದಾರೆ ಮತ್ತು ಸೇತುವೆಯ ಡೆಕ್ಗೆ ಭೇಟಿ ನೀಡಲಿದ್ದಾರೆ. ನಂತರ, ಅವರು ಅಂಜಿ ಸೇತುವೆಗೆ ಭೇಟಿ ನೀಡಿ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಅವರು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ. ಬಳಿಕ, ಅವರು ಕತ್ರಾದಲ್ಲಿ 46,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಲಿದ್ದಾರೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಚೆನಾಬ್ ಮತ್ತು ಅಂಜಿ ರೈಲು ಸೇತುವೆಗಳು ನದಿಯಿಂದ 359 ಮೀಟರ್ ಎತ್ತರದಲ್ಲಿರುವ ವಾಸ್ತುಶಿಲ್ಪದ ಅದ್ಭುತ ಚೆನಾಬ್ ರೈಲು ಸೇತುವೆ ವಿಶ್ವದ ಅತಿ ಎತ್ತರದ ರೈಲ್ವೆ ಕಮಾನು ಸೇತುವೆಯಾಗಿದೆ. ಇದು ಭೂಕಂಪ ಮತ್ತು ಭಾರೀ ಗಾಳಿ ಪರಿಸ್ಥಿತಿಗಳನ್ನು ತಡೆದುಕೊಳ್ಳುವಂತೆ ವಿನ್ಯಾಸಗೊಳಿಸಲಾದ 1,315 ಮೀಟರ್ ಉದ್ದದ ಉಕ್ಕಿನ ಕಮಾನು ಸೇತುವೆಯಾಗಿದೆ. ಈ ಸೇತುವೆಯ ಮುಖ್ಯ ಪ್ರಯೋಜನ ಎಂದರೆ ಅದು ಜಮ್ಮು ಮತ್ತು ಶ್ರೀನಗರ ನಡುವಿನ ಸಂಪರ್ಕವನ್ನು ಹೆಚ್ಚಿಸುತ್ತದೆ. ಸೇತುವೆಯ ಮೇಲೆ ಚಲಿಸುವ ವಂದೇ ಭಾರತ್ ರೈಲು ಮೂಲಕ, ಕತ್ರಾ ಮತ್ತು ಶ್ರೀನಗರ ನಡುವೆ ಪ್ರಯಾಣಿಸಲು ಕೇವಲ 3 ಗಂಟೆ ಸಾಕಾಗುತ್ತದೆ, ಇದು ಚಾಲ್ತಿಯಲ್ಲಿರುವ ಪ್ರಯಾಣದ ಸಮಯವನ್ನು 2-3 ಗಂಟೆಗಳಷ್ಟು ಕಡಿಮೆ ಮಾಡುತ್ತದೆ. ಅಂಜಿ ಸೇತುವೆ ಭಾರತದ ಮೊದಲ ಕೇಬಲ್-ಸ್ಟೇಡ್ (ಗೋಪುರಗಳಿಗೆ ಕೇಬಲ್ ಗಳಿಂದ ಬಿಗಿದು ಕಟ್ಟಿದ) ರೈಲು ಸೇತುವೆಯಾಗಿದ್ದು, ಇದು ಸವಾಲಿನ ಭೂಪ್ರದೇಶದಲ್ಲಿ ರಾಷ್ಟ್ರಕ್ಕೆ ಸೇವೆ ಸಲ್ಲಿಸಲಿದೆ. ಸಂಪರ್ಕ ಯೋಜನೆಗಳು ಮತ್ತು ಇತರ ಅಭಿವೃದ್ಧಿ ಉಪಕ್ರಮಗಳು ಪ್ರಧಾನಮಂತ್ರಿಯವರು ಉಧಮ್ಪುರ-ಶ್ರೀನಗರ-ಬಾರಾಮುಲ್ಲಾ ರೈಲು ಸಂಪರ್ಕ (ಯು.ಎಸ್.ಬಿ.ಆರ್.ಎಲ್.-USBRL) …
Read More »ದೆಹಲಿ ಸರ್ಕಾರದ ಸುಸ್ಥಿರ ಸಾರಿಗೆ ಉಪಕ್ರಮದ ಅಡಿಯಲ್ಲಿ 200 ಎಲೆಕ್ಟ್ರಿಕ್ ಬಸ್ ಗಳಿಗೆ ಹಸಿರು ನಿಶಾನೆ ತೋರಲಿರುವ ಪ್ರಧಾನಮಂತ್ರಿ
ವಿಶ್ವ ಪರಿಸರ ದಿನಾಚರಣೆಯ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಜೂನ್ 5 ರಂದು ಬೆಳಗ್ಗೆ 10:15ಕ್ಕೆ ನವದೆಹಲಿಯ ಭಗವಾನ್ ಮಹಾವೀರ್ ವನಸ್ಥಲಿ ಉದ್ಯಾನವನದಲ್ಲಿ ವಿಶೇಷ ಮರ ನೆಡುವ ಉಪಕ್ರಮದ ನೇತೃತ್ವ ವಹಿಸಲಿದ್ದು, ಪರಿಸರ ನಿರ್ವಹಣೆ ಮತ್ತು ಹಸಿರು ಚಲನಶೀಲತೆಗೆ ಭಾರತದ ಬದ್ಧತೆಯನ್ನು ಪುನರುಚ್ಚರಿಸಲಿದ್ದಾರೆ. ಪ್ರಧಾನಮಂತ್ರಿ ಅವರು ಏಕ್ ಪೆಡ್ ಮಾ ಕೆ ನಾಮ್ ಉಪಕ್ರಮದ ಅಡಿಯಲ್ಲಿ ಆಲದ ಸಸಿಯನ್ನು ನೆಡಲಿದ್ದಾರೆ. ಇದು 700 ಕಿ.ಮೀ ಅರಾವಳಿ …
Read More »ಮಹಾರಾಷ್ಟ್ರದ ಜೆ ಎನ್ ಪಿ ಎ ಬಂದರು (ಪಗೋಟೆ) ನಿಂದ ಚೌಕ್ ವರೆಗೆ (29.219 ಕಿ.ಮೀ) ಬಿಒಟಿ (ಟೋಲ್) ಮಾದರಿಯಲ್ಲಿ 6 ಪಥದ ಪ್ರವೇಶ ನಿಯಂತ್ರಿತ ಗ್ರೀನ್ ಫೀಲ್ಡ್ ಹೆದ್ದಾರಿ ನಿರ್ಮಾಣಕ್ಕೆ ಸಂಪುಟದ ಅನುಮೋದನೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು, ಮಹಾರಾಷ್ಟ್ರದ ಜೆ ಎನ್ ಪಿ ಎ ಬಂದರಿನಿಂದ (ಪಗೋಟೆ) ದಿಂದ ಚೌಕ್ ವರೆಗೆ (29.219 ಕಿ.ಮೀ) 6 ಪಥದ ಪ್ರವೇಶ ನಿಯಂತ್ರಿತ ಗ್ರೀನ್ ಫೀಲ್ಡ್ ಹೈ ಸ್ಪೀಡ್ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಅನುಮೋದನೆ ನೀಡಿದೆ. ಈ ಯೋಜನೆಯನ್ನು ನಿರ್ಮಾಣ, ಕಾರ್ಯಾಚರಣೆ ಮತ್ತು ವರ್ಗಾವಣೆ (ಬಿಒಟಿ) ಮಾದರಿಯಲ್ಲಿ ಒಟ್ಟು 4500.62 ಕೋಟಿ ರೂ. ಬಂಡವಾಳ ವೆಚ್ಚದಲ್ಲಿ …
Read More »ಅಸ್ಸಾಂನ ನಮ್ರೂಪ್ ನ ಬ್ರಹ್ಮಪುತ್ರ ವ್ಯಾಲಿ ಫರ್ಟಿಲೈಸರ್ ಕಾರ್ಪೊರೇಷನ್ ಲಿಮಿಟೆಡ್ (ಬಿವಿಎಫ್ಸಿಎಲ್) ನ ಹಾಲಿ ಆವರಣದಲ್ಲಿಹೊಸ ಬ್ರೌನ್ ಫೀಲ್ಡ್ ಅಮೋನಿಯಾ-ಯೂರಿಯಾ ಕಾಂಪ್ಲೆಕ್ಸ್ ನಮ್ರೂಪ್ 4 ರಸಗೊಬ್ಬರ ಘಟಕ ಸ್ಥಾಪನೆಗೆ ಸಂಪುಟದ ಅನುಮೋದನೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಅಸ್ಸಾಂನ ನಮ್ರೂಪ್ನ ಬ್ರಹ್ಮಪುತ್ರ ವ್ಯಾಲಿ ಫರ್ಟಿಲೈಸರ್ ಕಾರ್ಪೊರೇಷನ್ ಲಿಮಿಟೆಡ್ (ಬಿವಿಎಫ್ಸಿಎಲ್) ನ ಹಾಲಿ ಆವರಣದಲ್ಲಿ ಯೂರಿಯಾ ಉತ್ಪಾದನೆಯ ವಾರ್ಷಿಕ 12.7 ಲಕ್ಷ ಮೆಟ್ರಿಕ್ ಟನ್ (ಎಲ್ಎಂಟಿ) ಸಾಮರ್ಥ್ಯದ ಹೊಸ ಬ್ರೌನ್ ಫೀಲ್ಡ್ ಅಮೋನಿಯಾ-ಯೂರಿಯಾ ಸಂಕೀರ್ಣವನ್ನು ಅಂದಾಜು ಒಟ್ಟು ಯೋಜನಾ ವೆಚ್ಚ 10,601.40 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಸ್ಥಾಪಿಸುವ ಪ್ರಸ್ತಾಪಕ್ಕೆ ತನ್ನ ಅನುಮೋದನೆ ನೀಡಿದೆ. ಜಂಟಿ …
Read More »ಪ್ರಧಾನಮಂತ್ರಿಯವರು 24 ಫೆಬ್ರವರಿ 2025 ರಂದು ಬಿಹಾರದ ಭಾಗಲಪುರದಲ್ಲಿ ಪಿಎಂ-ಕಿಸಾನ್ ಯೋಜನೆಯ 19ನೇ ಕಂತು ಬಿಡುಗಡೆ ಮಾಡಲಿದ್ದಾರೆ
ಪ್ರಧಾನಮಂತ್ರಿ-ಕಿಸಾನ್ ಯೋಜನೆಯಡಿ 19 ನೇ ಕಂತಿನ ಬಿಡುಗಡೆ ಕುರಿತು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಶುಕ್ರವಾರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಪಿಎಂ-ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯು 24 ಫೆಬ್ರವರಿ 2019 ರಂದು ಪ್ರಾರಂಭವಾಯಿತು, ಇದು ಕೇಂದ್ರ ವಲಯದ ಯೋಜನೆಯಾಗಿದ್ದು, ಅರ್ಹ ರೈತ ಕುಟುಂಬಗಳಿಗೆ ವಾರ್ಷಿಕ 6,000 ರೂ. ಆರ್ಥಿಕ ಸಹಾಯವನ್ನು ಒದಗಿಸುತ್ತದೆ. ಇದುವರೆಗೆ ದೇಶದ 11 ಕೋಟಿಗೂ ಹೆಚ್ಚು …
Read More »ಪ್ರಧಾನಮಂತ್ರಿ ಭೇಟಿ ಮಾಡಿದ ದೆಹಲಿ ಮುಖ್ಯಮಂತ್ರಿ
ದೆಹಲಿ ಮುಖ್ಯಮಂತ್ರಿ ಶ್ರೀಮತಿ ರೇಖಾ ಗುಪ್ತಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾಡಿದರು. ಪ್ರಧಾನಮಂತ್ರಿಗಳ ಕಚೇರಿ ಎಕ್ಸ್ ಖಾತೆಯಲ್ಲಿ, “ದೆಹಲಿ ಮುಖ್ಯಮಂತ್ರಿ Smt. @gupta_rekha Ji ಪ್ರಧಾನಮಂತ್ರಿ @narendramodi ಭೇಟಿ ಮಾಡಿದರು” ಎಂದು ಬರೆದುಕೊಂಡಿದೆ. भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर …
Read More »ಫೆಬ್ರವರಿ 23 ರಿಂದ 25 ರವರೆಗೆ ಮಧ್ಯಪ್ರದೇಶ, ಬಿಹಾರ ಮತ್ತು ಅಸ್ಸಾಂ ರಾಜ್ಯಗಳಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 23 ರಿಂದ 25, 2025 ರವರೆಗೆ ಮಧ್ಯಪ್ರದೇಶ, ಬಿಹಾರ ಮತ್ತು ಅಸ್ಸಾಂ ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ. ಫೆಬ್ರವರಿ 23, 2025 ರಂದು, ಅವರು ಮಧ್ಯಪ್ರದೇಶದ ಛತ್ತರ್ ಪುರ ಜಿಲ್ಲೆಯಲ್ಲಿ ಪ್ರಯಾಣಿಸಲಿದ್ದಾರೆ ಮತ್ತು ಅಂದು ಮಧ್ಯಾಹ್ನ 2 ಗಂಟೆಗೆ, ಪ್ರಧಾನಮಂತ್ರಿಯವರು ಬಾಗೇಶ್ವರ್ ಧಾಮ್ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಫೆಬ್ರವರಿ 24 ,2025 ರಂದು, ಸುಮಾರು 10 ಗಂಟೆಗೆ, …
Read More »ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀಮತಿ ರೇಖಾ ಗುಪ್ತಾ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀಮತಿ ರೇಖಾ ಗುಪ್ತಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ರೇಖಾ ಅವರು ಕ್ಯಾಂಪಸ್ ರಾಜಕೀಯ, ರಾಜ್ಯ ಸಂಘಟನೆ, ಪುರಸಭೆಯ ಆಡಳಿತ ಮತ್ತು ಇತ್ತೀಚಿನ ಶಾಸಕ ಸ್ಥಾನದಲ್ಲಿ ಸಕ್ರಿಯರಾಗಿದ್ದು ಮುಖ್ಯಮಂತ್ರಿ ಸ್ಥಾನದವರೆಗೆ ತಳಮಟ್ಟದಿಂದ ಬೆಳೆದು ಬಂದಿದ್ದಾರೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. ಎಕ್ಸ್ ನಲ್ಲಿ ಶ್ರೀ ಮೋದಿ ಅವರು ಹೀಗೆ ಬರೆದಿದ್ದಾರೆ: “ದೆಹಲಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀಮತಿ ರೇಖಾ …
Read More »ದೆಹಲಿ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಪರ್ವೇಶ್ ಸಾಹಿಬ್ ಸಿಂಗ್, ಶ್ರೀ ಆಶಿಶ್ ಸೂದ್, ಸರ್ದಾರ್ ಮಂಜಿಂದರ್ ಸಿಂಗ್ ಸಿರ್ಸಾ, ಶ್ರೀ ರವೀಂದರ್ ಇಂದ್ರಜ್ ಸಿಂಗ್, ಶ್ರೀ ಕಪಿಲ್ ಮಿಶ್ರಾ ಮತ್ತು ಶ್ರೀ ಪಂಕಜ್ ಕುಮಾರ್ ಸಿಂಗ್ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದ್ದಾರೆ
ದೆಹಲಿ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಪರ್ವೇಶ್ ಸಾಹಿಬ್ ಸಿಂಗ್, ಶ್ರೀ ಆಶಿಶ್ ಸೂದ್, ಸರ್ದಾರ್ ಮಂಜಿಂದರ್ ಸಿಂಗ್ ಸಿರ್ಸಾ, ಶ್ರೀ ರವೀಂದರ್ ಇಂದ್ರಜ್ ಸಿಂಗ್, ಶ್ರೀ ಕಪಿಲ್ ಮಿಶ್ರಾ ಮತ್ತು ಶ್ರೀ ಪಂಕಜ್ ಕುಮಾರ್ ಸಿಂಗ್ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದ್ದಾರೆ ಮತ್ತು ಅವರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಪ್ರಧಾನಮಂತ್ರಿಯವರು ಎಕ್ಸ್ ತಾಣದಲ್ಲಿ ಹೀಗೆ ಹೇಳಿದ್ದಾರೆ; “ದೆಹಲಿ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಪರ್ವೇಶ್ ಸಾಹಿಬ್ …
Read More »
Matribhumi Samachar Kannad