Friday, April 17 2026 | 12:43:28 PM
Breaking News

ಅಟಲ್ ಪಿಂಚಣಿ ಯೋಜನೆಯು 8.34 ಕೋಟಿಗೂ ಹೆಚ್ಚು ನೋಂದಣಿಗಳನ್ನು ಕಂಡಿದೆ; ಇದರಲ್ಲಿ ಶೇ.48 ರಷ್ಟು ಮಹಿಳೆಯರಾಗಿದ್ದಾರೆ

ಎಲ್ಲಾ ಭಾರತೀಯರಿಗೆ, ವಿಶೇಷವಾಗಿ ಬಡವರು, ಸೌಲಭ್ಯ ವಂಚಿತರು ಮತ್ತು ಅಸಂಘಟಿತ ವಲಯದ ಕಾರ್ಮಿಕರಿಗೆ ಸಾರ್ವತ್ರಿಕ ಸಾಮಾಜಿಕ ಭದ್ರತಾ ವ್ಯವಸ್ಥೆಯನ್ನು ಒದಗಿಸುವ ಗುರಿಯೊಂದಿಗೆ ಅಟಲ್ ಪಿಂಚಣಿ ಯೋಜನೆ (ಎ.ಪಿ.ವೈ) ಅನ್ನು 09.05.2015 ರಂದು ಪ್ರಾರಂಭಿಸಲಾಯಿತು. ಬ್ಯಾಂಕ್ ಅಥವಾ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಹೊಂದಿರುವ 18-40 ವರ್ಷ ವಯಸ್ಸಿನ ಎಲ್ಲಾ ಭಾರತೀಯ ನಾಗರಿಕರಿಗೆ ಇದು ಮುಕ್ತವಾಗಿದೆ. ಯೋಜನೆಯ ಪ್ರಕಾರ, ಚಂದಾದಾರರು 60 ವರ್ಷ ತಲುಪಿದ ನಂತರ ಪಿಂಚಣಿ ಪ್ರಯೋಜನಗಳನ್ನು ಪಡೆಯುತ್ತಾರೆ. ಆದ್ದರಿಂದ, …

Read More »

ಪ್ರಧಾನಮಂತ್ರಿ ಅವರು ದಿನಾಂಕ 30.11.2025 ರಂದು ಮಾಡಿದ ‘ಮನ್ ಕಿ ಬಾತ್’ – 128ನೇ ಸಂಚಿಕೆಯ ಕನ್ನಡ ಅವತರಣಿಕೆ

ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ‘ಮನದ ಮಾತು’ ಗೆ ಮತ್ತೊಮ್ಮೆ ಸ್ವಾಗತ. ನವೆಂಬರ್ ತಿಂಗಳು ಬಹಳ ಪ್ರೇರಣಾದಾಯಕವಾಗಿತ್ತು. ಕೆಲವೇ ದಿನಗಳ ಹಿಂದೆ, ನವೆಂಬರ್ 26, ‘ಸಂವಿಧಾನ ದಿನದಂದು’ ಸೆಂಟ್ರಲ್ ಹಾಲ್‌ನಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ನಿಮಿತ್ತ ರಾಷ್ಟ್ರವ್ಯಾಪಿ ಕಾರ್ಯಕ್ರಮಗಳಿಗೆ ಭವ್ಯಚಾಲನೆಯನ್ನು ಇದು ನೀಡಿತು. ನವೆಂಬರ್ 25 ರಂದು, ಅಯೋಧ್ಯೆಯ ರಾಮ ಮಂದಿರದಲ್ಲಿ ಧರ್ಮಧ್ವಜವನ್ನು ಹಾರಿಸಲಾಯಿತು. ಅದೇ ದಿನ, ಕುರುಕ್ಷೇತ್ರದ ಜ್ಯೋತಿಸರ್‌ ನಲ್ಲಿ ಪಾಂಚಜನ್ಯ ಸ್ಮಾರಕವನ್ನು ಲೋಕಾರ್ಪಣೆ ಮಾಡಲಾಯಿತು. ಸ್ನೇಹಿತರೇ, ಕೆಲವೇ ದಿನಗಳ ಹಿಂದೆ, ಹೈದರಾಬಾದ್‌ನಲ್ಲಿ ವಿಶ್ವದ ಅತಿದೊಡ್ಡ ಲೀಪ್ ಎಂಜಿನ್ MRO ಸೌಲಭ್ಯವನ್ನು ನಾನು ಉದ್ಘಾಟಿಸಿದೆ. ಭಾರತವು ವಿಮಾನ ನಿರ್ವಹಣೆ, ದುರಸ್ತಿ ಮತ್ತು ಕೂಲಂಕಷ ಪರೀಕ್ಷೆಯಲ್ಲಿ ಪ್ರಮುಖ ಹೆಜ್ಜೆಯನ್ನಿರಿಸಿದೆ. ಕಳೆದ ವಾರ, ಮುಂಬೈನಲ್ಲಿ ನಡೆದ ಸಮಾರಂಭದಲ್ಲಿ, INS ‘ಮಾಹೆ’ ಯನ್ನು ಭಾರತೀಯ ನೌಕಾಪಡೆಗೆ ಸೇರ್ಪಡೆಗೊಳಿಸಲಾಯಿತು. ಕಳೆದ ವಾರವಷ್ಟೇ, ಸ್ಕೈರೂಟ್‌ನ ಇನ್ಫಿನಿಟಿ ಕ್ಯಾಂಪಸ್ ಭಾರತದ ಬಾಹ್ಯಾಕಾಶ ಪರಿಸರ ವ್ಯವಸ್ಥೆಗೆ ಹೊಸ ಚೈತನ್ಯ ತುಂಬಿದೆ. ಭಾರತದ ಹೊಸ ಚಿಂತನೆ, ನಾವೀನ್ಯತೆ ಮತ್ತು ಯುವ ಶಕ್ತಿಗೆ ಇದು ಪ್ರತಿಬಿಂಬವಾಗಿದೆ. ಸ್ನೇಹಿತರೇ, ಕೃಷಿ ವಲಯದಲ್ಲೂ ದೇಶವು ಪ್ರಮುಖ ಸಾಧನೆ ಮೆರೆದಿದೆ. ಭಾರತವು 357 ದಶಲಕ್ಷ ಟನ್ ಆಹಾರ ಧಾನ್ಯ ಉತ್ಪಾದನೆಯೊಂದಿಗೆ ಐತಿಹಾಸಿಕ ದಾಖಲೆಯನ್ನು ಸೃಷ್ಟಿಸಿದೆ. ಮುನ್ನೂರ ಐವತ್ತೇಳು ಮಿಲಿಯನ್ ಟನ್! 10 ವರ್ಷಗಳ ಹಿಂದಿನ ಸ್ಥಿತಿಗೆ ಹೋಲಿಸಿದರೆ, ಭಾರತದ ಆಹಾರ ಧಾನ್ಯ ಉತ್ಪಾದನೆ 100 ದಶಲಕ್ಷ ಟನ್‌ಗಳಷ್ಟು ಹೆಚ್ಚಾಗಿದೆ. ಕ್ರೀಡಾ ಜಗತ್ತಿನಲ್ಲಿಯೂ ಭಾರತವು ತನ್ನ ಛಾಪು ಮೂಡಿಸಿದೆ. ಕೆಲವು ದಿನಗಳ …

Read More »

ರಾಯ್‌ಪುರದಲ್ಲಿ ನಡೆದ 60ನೇ ಅಖಿಲ ಭಾರತ ಪೊಲೀಸ್ ಮಹಾನಿರ್ದೇಶಕರ/ಇನ್‌ಸ್ಪೆಕ್ಟರ್ ಜನರಲ್‌ಗಳ ಸಮ್ಮೇಳನದ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಯ್ ಪುರದಲ್ಲಿಂದು ನಡೆದ 60ನೇ ಅಖಿಲ ಭಾರತ ಪೊಲೀಸ್ ಮಹಾನಿರ್ದೇಶಕರ/ ಇನ್ಸ್‌ ಪೆಕ್ಟರ್‌ ಜನರಲ್‌ ಆಫ್ ಪೊಲೀಸ್‌ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಮೂರು ದಿನಗಳ ಸಮಾವೇಶದ ಘೋಷವಾಕ್ಯ “ವಿಕಸಿತ ಭಾರತ; ಭದ್ರತಾ ಆಯಾಮಗಳು’’ ಎಂಬುದಾಗಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿ, ವೃತ್ತಿಪರತೆ, ಸೂಕ್ಷ್ಮತೆ ಮತ್ತು ತ್ವರಿತ ಸ್ಪಂದಿಸುವಿಕೆ ಹೆಚ್ಚಿಸುವ ಮೂಲಕ ಪೊಲೀಸರ ಬಗ್ಗೆ, ವಿಶೇಷವಾಗಿ ಯುವಕರಲ್ಲಿ ಸಾರ್ವಜನಿಕ ಗ್ರಹಿಕೆಯನ್ನು ಪರಿವರ್ತಿಸುವ ತುರ್ತು …

Read More »

2025ರ ವಿಶ್ವ ಏಡ್ಸ್ ದಿನದ ಅಂಗವಾಗಿ ವಿಜ್ಞಾನ ಭವನದಲ್ಲಿ ನಡೆಯುವ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮದ ನೇತೃತ್ವವನ್ನು ಕೇಂದ್ರ ಆರೋಗ್ಯ ಸಚಿವರಾದ ಶ್ರೀ ಜೆ.ಪಿ. ನಡ್ಡಾ ವಹಿಸಲಿದ್ದಾರೆ

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ಜಗತ್ ಪ್ರಕಾಶ್ ನಡ್ಡಾ ಅವರು ಡಿಸೆಂಬರ್ 1, 2025 ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ 2025ರ ರಾಷ್ಟ್ರೀಯ ಮಟ್ಟದ ವಿಶ್ವ ಏಡ್ಸ್ ದಿನಾಚರಣೆಯ ನೇತೃತ್ವ ವಹಿಸಲಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕಾರ್ಯದರ್ಶಿ, ಎನ್‌.ಎ.ಸಿ.ಒ ಹೆಚ್ಚುವರಿ ಕಾರ್ಯದರ್ಶಿ ಮತ್ತು ಮಹಾನಿರ್ದೇಶಕರು ಮತ್ತು ಆರೋಗ್ಯ ಸೇವೆಗಳ ಮಹಾನಿರ್ದೇಶಕರು ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದು, ಹೆಚ್‌.ಐ.ವಿ ತಡೆಗಟ್ಟುವಿಕೆ, ಚಿಕಿತ್ಸೆ, ಆರೈಕೆ …

Read More »

ಭಾರತದ ಜಾಗತಿಕ ಏಡ್ಸ್ ನಿಯಂತ್ರಣದ ಯಶಸ್ಸಿನ ಮೇಲೆ ನಿರ್ಮಾಣ

ವಿಶ್ವ ಏಡ್ಸ್ ದಿನವನ್ನು ಪ್ರತಿ ವರ್ಷ ಡಿಸೆಂಬರ್ 1 ರಂದು ಆಚರಿಸಲಾಗುತ್ತದೆ. 2025ರ ಥೀಮ್ (ವಿಷಯ): ‘ತಡೆಗಳನ್ನು ಮೆಟ್ಟಿ ನಿಲ್ಲುವುದು, ಏಡ್ಸ್ ಪ್ರತಿಕ್ರಿಯೆಯನ್ನು ಪರಿವರ್ತಿಸುವುದು ಭಾರತದಲ್ಲಿ ಬಲವಾದ ನೀತಿ ಚೌಕಟ್ಟು: ಎಚ್‌ಐವಿ/ಎಡ್ಸ್‌ (ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯಿದೆ, ೨೦೧೭ ಎಚ್‌ಐವಿ/ಎಡ್ಸ್‌ ಯಂತಹ ಐತಿಹಾಸಿಕ ಕ್ರಮಗಳು ಎಚ್‌ಐವಿ (ಎಚ್‌ಐವಿ) ಯೊಂದಿಗೆ ಬದುಕುತ್ತಿರುವ ಜನರ ಹಕ್ಕುಗಳನ್ನು ರಕ್ಷಿಸುತ್ತವೆ ಮತ್ತು ತಾರತಮ್ಯವನ್ನು ನಿಷೇಧಿಸುತ್ತವೆ. ರಾಷ್ಟ್ರೀಯ ಏಡ್ಸ್ ಮತ್ತು ಎಸ್‌ಟಿಡಿ ನಿಯಂತ್ರಣ ಕಾರ್ಯಕ್ರಮದ ಮೂಲಕ ಪ್ರಗತಿ: ಭಾರತವು ಎನ್‌ಎಸಿಪಿ  ಹಂತಗಳಾದ್ಯಂತ ವಿಕಸನಗೊಳ್ಳುತ್ತಿರುವ ಕಾರ್ಯತಂತ್ರಗಳ ಮೂಲಕ ಹೊಸ ಸೋಂಕುಗಳನ್ನು ಕಡಿಮೆ ಮಾಡಿದೆ ಮತ್ತು ಎಆರ್‌ಟಿ ಪ್ರವೇಶವನ್ನು ವಿಸ್ತರಿಸಿದೆ. ಪೀಠಿಕೆ ವಿಶ್ವ ಏಡ್ಸ್ ದಿನವನ್ನು ಪ್ರತಿ ವರ್ಷ ಡಿಸೆಂಬರ್ 1 ರಂದು ಜಾಗತಿಕವಾಗಿ ಆಚರಿಸಲಾಗುತ್ತದೆ. ಎಚ್‌ಐವಿ/ಎಡ್ಸ್‌ ಸಾಂಕ್ರಾಮಿಕ ರೋಗದ ಬಗ್ಗೆ ಜಾಗೃತಿ ಮೂಡಿಸುವುದು, ಎಚ್‌ಐವಿ-ಸಂಬಂಧಿತ …

Read More »

ನವೆಂಬರ್ 26ರಂದು ʻಸಫ್ರಾನ್ ಏರ್‌ಕ್ರಾಫ್ಟ್ ಎಂಜಿನ್ ಸರ್ವೀಸಸ್ ಇಂಡಿಯಾʼ ಘಟಕವನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 26ರಂದು ಬೆಳಗ್ಗೆ 10ಗಂಟೆಗೆ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ʻಜಿಎಂಆರ್ ಏರೋಸ್ಪೇಸ್ ಮತ್ತು ಕೈಗಾರಿಕಾ ಪಾರ್ಕ್ʼ – ವಿಶೇಷ ಆರ್ಥಿಕ ವಲಯದಲ್ಲಿರುವ ʻಸಫ್ರಾನ್ ಏರ್‌ಕ್ರಾಫ್ಟ್ ಎಂಜಿನ್ ಸರ್ವೀಸಸ್ ಇಂಡಿಯಾʼ (ಎಸ್ಎಇಎಸ್ಐ) ಘಟಕವನ್ನು ವಿಡಿಯೊ ಕಾನ್ಫರೆನ್ಸಿಂಗ್‌ ಮೂಲಕ ಉದ್ಘಾಟಿಸಲಿದ್ದಾರೆ. ʻಎಸ್‌ಎಇಎಸ್‌ಐʼ ಎಂಬುದು ʻಲೀಪ್‌ʼ (ಲೀಡಿಂಗ್ ಎಡ್ಜ್ ಏವಿಯೇಷನ್ ಪ್ರೊಪಲ್ಶನ್) ಎಂಜಿನ್‌ಗಳಿಗಾಗಿ ʻಸಫ್ರಾನ್ʼ ಸಂಸ್ಥೆ ಸ್ಥಾಪಿಸಿರುವ ವಿಶೇಷವಾದ ʻನಿರ್ವಹಣೆ, ದುರಸ್ತಿ ಮತ್ತು …

Read More »

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ಶ್ರೀ ರಾಮ ಜನ್ಮಭೂಮಿ ಮಂದಿರ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಭಾಷಣ ಮಾಡಿದರು

ದೇಶದ ಸಾಮಾಜಿಕ-ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕತೆಯ  ಒಂದು ಮಹತ್ವದ ಸಂದರ್ಭವನ್ನು ಗುರುತಿಸುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಪವಿತ್ರ ಶ್ರೀ ರಾಮ ಜನ್ಮಭೂಮಿ ದೇವಾಲಯದ ಶಿಖರದಲ್ಲಿ ಕೇಸರಿ ಧ್ವಜವನ್ನು ವಿಧ್ಯುಕ್ತವಾಗಿ ಹಾರಿಸಿದರು. ಧ್ವಜಾರೋಹಣ ಉತ್ಸವವು ದೇವಾಲಯದ ನಿರ್ಮಾಣದ ಪೂರ್ಣಗೊಳಿಸುವಿಕೆಯನ್ನು ಸಂಕೇತಿಸುತ್ತದೆ ಮತ್ತು ಸಾಂಸ್ಕೃತಿಕ ಆಚರಣೆ ಮತ್ತು ರಾಷ್ಟ್ರೀಯ ಏಕತೆಯ ಹೊಸ ಅಧ್ಯಾಯವನ್ನು ಪ್ರಾರಂಭಿಸುತ್ತದೆ. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ , ಇಂದು ಅಯೋಧ್ಯಾ ನಗರವು …

Read More »

ಸಂಚಾರ್ ಸಾಥಿಯು ಅಕ್ಟೋಬರ್ 2025ರಲ್ಲಿ 50,000ಕ್ಕೂ ಹೆಚ್ಚು ಫೋನ್‌ಗಳನ್ನು ಮರುಪಡೆಯಲು ಸಹಾಯ ಮಾಡಿ, ದೇಶಾದ್ಯಂತ ಡಿಜಿಟಲ್ ಭದ್ರತೆಯನ್ನು ಬಲಪಡಿಸಿದೆ

ದೂರಸಂಪರ್ಕ ಇಲಾಖೆಯು (DoT) ತನ್ನ ಡಿಜಿಟಲ್ ಸುರಕ್ಷತಾ ಉಪಕ್ರಮವಾದ ಸಂಚಾರ್ ಸಾಥಿಯು, ಅಕ್ಟೋಬರ್ 2025ರಲ್ಲಿ ಮೊದಲ ಬಾರಿಗೆ ಭಾರತದಾದ್ಯಂತ 50,000 ಕ್ಕೂ ಹೆಚ್ಚು ಕಳುವಾದ ಮೊಬೈಲ್ ಹ್ಯಾಂಡ್‌ಸೆಟ್‌ಗಳನ್ನು ಮರುಪಡೆಯಲು ಸಹಾಯ ಮಾಡಿಕೊಟ್ಟಿದೆ ಎಂದು ಘೋಷಿಸಿದೆ. ಈ ಮೈಲಿಗಲ್ಲು ನಾಗರಿಕರ ಡಿಜಿಟಲ್ ಸ್ವತ್ತುಗಳನ್ನು ಸುರಕ್ಷಿತಗೊಳಿಸುವ ಅಚಲ ಬದ್ಧತೆ ಮತ್ತು ತಂತ್ರಜ್ಞಾನ-ಚಾಲಿತ ಆಡಳಿತದಲ್ಲಿ ಸಾರ್ವಜನಿಕ ನಂಬಿಕೆಯ ಪ್ರತೀಕವಾಗಿದೆ. ದೇಶಾದ್ಯಂತ ಒಟ್ಟಾರೆ ಮರುಪಡೆಯುವಿಕೆಯು 7 ಲಕ್ಷ ಮೈಲಿಗಲ್ಲನ್ನು ದಾಟಿದೆ. ಕರ್ನಾಟಕ ಮತ್ತು ತೆಲಂಗಾಣ ರಾಜ್ಯಗಳು …

Read More »

ಐಐಎಸ್ಎಫ್ 2025ರ ಪೂರ್ವಭಾವಿಯಾಗಿ ರಾಮನ್ ಸಂಶೋಧನಾ ಸಂಸ್ಥೆಯಿಂದ ಉಪನ್ಯಾಸ ಆಯೋಜನೆ

ವೈಜ್ಞಾನಿಕ ಮನೋಭಾವ ಉತ್ತೇಜಿಸುವ ಮತ್ತು ವಿಜ್ಞಾನ ಆಸಕ್ತರಲ್ಲಿ ಅರಿವು ಮೂಡಿಸುವ ಪ್ರಯತ್ನಗಳ ಭಾಗವಾಗಿ, ರಾಮನ್ ಸಂಶೋಧನಾ ಸಂಸ್ಥೆಯು ಭಾರತೀಯ ಅಂತಾರಾಷ್ಟ್ರೀಯ ವಿಜ್ಞಾನ ಉತ್ಸವ (ಐಐಎಸ್‍ಎಫ್) 2025ರ ಪೂರ್ವಭಾವಿಯಾಗಿ ಕಾರ್ಯಕ್ರಮವೊಂದನ್ನು ಆಯೋಜಿಸಿತು. ಡಿಸೆಂಬರ್ 6-9, 2025 ರಂದು ಹರಿಯಾಣದ ಪಂಚಕುಲದಲ್ಲಿ ನಿಗದಿಯಾಗಿರುವ ಐಐಎಸ್‍ಎಫ್ 2025, “ವಿಜ್ಞಾನದಿಂದ ಸಮೃದ್ಧಿ: ಆತ್ಮನಿರ್ಭರ ಭಾರತಕ್ಕಾಗಿ” ಎಂಬ ವಿಷಯದಡಿ ಭವಿಷ್ಯದ ತಂತ್ರಜ್ಞಾನ, ಸುಸ್ಥಿರತೆ ಮತ್ತು ವ್ಯಾಪಕ ವೈಜ್ಞಾನಿಕ ಪ್ರಚಾರದ ಮೇಲೆ ಕೇಂದ್ರೀಕರಿಸಿದ 14 ವಿಷಯಾಧಾರಿತ ವ್ಯಾಪ್ತಿಗಳನ್ನು ಒಳಗೊಂಡಿರಲಿದೆ. ಐಐಎಸ್‍ಎಫ್ 2025ಕ್ಕಿಂತ …

Read More »

ಐಎಫ್‌ಎಫ್‌ಐ ಯಲ್ಲಿ ಮೊಳಗಿದ ಜಾಗತಿಕ ದನಿಗಳು: ಎರಡು ಶಕ್ತಿಶಾಲಿ ಚಿತ್ರಗಳ ಮೂಲಕ ಮಾತೃತ್ವ, ಅಸ್ಮಿತೆ ಮತ್ತು ಇತಿಹಾಸದ ಅನ್ವೇಷಣೆ

ಇಂದು ಐಎಫ್‌ಎಫ್‌ಐ  ವೇದಿಕೆಯಲ್ಲಿ ಎರಡು ತೀರಾ ಭಿನ್ನವಾದ, ಆದರೂ ಭಾವನಾತ್ಮಕವಾಗಿ ಬೆಸೆದಿರುವ ಜಗತ್ತುಗಳ ಸಂಗಮವಾಯಿತು. ‘ಮದರ್ಸ್ ಬೇಬಿ’ ಮತ್ತು ‘ಮೈ ಫಾದರ್ಸ್ ಶ್ಯಾಡೋ’ ಚಿತ್ರತಂಡಗಳು ಸಿನಿಮಾ ಕಲೆ, ನೆನಪುಗಳು ಮತ್ತು ಸಿನಿಮಾವು ಬದುಕಿನ ನೈಜತೆಯನ್ನು ಹೇಗೆ ಪ್ರತಿಬಿಂಬಿಸುತ್ತದೆ ಎಂಬುದರ ಕುರಿತು ಉತ್ಸಾಹಭರಿತ ಸಂವಾದ ನಡೆಸಿದವು. ಈ ಕಾರ್ಯಕ್ರಮದಲ್ಲಿ ‘ಮದರ್ಸ್ ಬೇಬಿ’ ಚಿತ್ರದ ಛಾಯಾಗ್ರಾಹಕ ರಾಬರ್ಟ್ ಒಬೆರೈನರ್ ಮತ್ತು ಪ್ರೊಡಕ್ಷನ್ ಡಿಸೈನರ್ ಜೋಹಾನ್ಸ್ ಸಲಾತ್ ಅವರೊಂದಿಗೆ, ‘ಮೈ ಫಾದರ್ಸ್ ಶ್ಯಾಡೋ’ ಚಿತ್ರದ …

Read More »