Tuesday, February 03 2026 | 09:04:59 AM
Breaking News

ಜಾಗತಿಕ ಉಪಸ್ಥಿತಿಯನ್ನು ಬಲಪಡಿಸಲು ದುಬೈನಲ್ಲಿ ಎಸ್ಎಐಎಲ್ (ಸೈಲ್) ಪ್ರತಿನಿಧಿ ಕಚೇರಿ ಉದ್ಘಾಟನೆ

ವಾರ್ಷಿಕ 20 ಮಿಲಿಯನ್ ಟನ್ ಕಚ್ಚಾ ಉಕ್ಕು ಸಾಮರ್ಥ್ಯವನ್ನು ಹೊಂದಿರುವ ಭಾರತದ ಅತಿದೊಡ್ಡ ಉಕ್ಕು ಉತ್ಪಾದಕರಲ್ಲಿ ಒಂದಾದ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (ಎಸ್ಎಐಎಲ್) ದುಬೈನಲ್ಲಿ ತನ್ನ ಪ್ರತಿನಿಧಿ ಕಚೇರಿಯನ್ನು ತೆರೆಯಿತು. ಮಧ್ಯಪ್ರಾಚ್ಯದಲ್ಲಿ ಎಸ್ಎಐಎಲ್ ಮೊದಲ ಅಂತಾರಾಷ್ಟ್ರೀಯ ಕಚೇರಿ ಅದರ ಜಾಗತಿಕ ವಿಸ್ತರಣಾ ಕಾರ್ಯತಂತ್ರದಲ್ಲಿ ಮಹತ್ವದ ಹೆಜ್ಜೆಯಾಗಿದೆ. ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕಾ ಸಚಿವರಾದ ಶ್ರೀ ಎಚ್.ಡಿ.ಕುಮಾರಸ್ವಾಮಿ ಅವರು ದುಬೈನಲ್ಲಿರುವ ಭಾರತೀಯ ಕಾನ್ಸುಲ್ ಜನರಲ್ ಶ್ರೀ ಸತೀಶ್ …

Read More »

ಘಾನಾ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ

ಗೌರವಾನ್ವಿತ ಅಧ್ಯಕ್ಷರಾದ ಜಾನ್ ಮಹಾಮ ಅವರೇ, ಉಭಯ ದೇಶಗಳ ಪ್ರತಿನಿಧಿಗಳೇ, ಮಾಧ್ಯಮದ ಸ್ನೇಹಿತರೇ, ನಮಸ್ಕಾರ! ಮೂರು ದಶಕಗಳ ಸುದೀರ್ಘ ಅಂತರದ ನಂತರ, ಭಾರತದ ಪ್ರಧಾನಮಂತ್ರಿಯೊಬ್ಬರು ಘಾನಾಗೆ ಭೇಟಿ ನೀಡುತ್ತಿದ್ದಾರೆ. ಈ ಅವಕಾಶ ಸಿಕ್ಕಿರುವುದು ನನಗೆ ತುಂಬಾ ಹೆಮ್ಮೆಯ ವಿಷಯ. “ಅಯ್ಯ ಮೆ ಅನೆಜೆ ಸೆ ಮೆವೊಹ್” ಘಾನಾದಲ್ಲಿ ನನ್ನನ್ನು  ಸೌಹಾರ್ದತೆ ಮತ್ತು ಗೌರವದಿಂದ ಸ್ವಾಗತಿಸಿರುವುದಕ್ಕಾಗಿ ನಾನು ಬಹಳ ಕೃತಜ್ಞನಾಗಿದ್ದೇನೆ. ಖುದ್ದು ಅಧ್ಯಕ್ಷರೇ  ನನ್ನನ್ನು ಸ್ವೀಕರಿಸಲು ವಿಮಾನ ನಿಲ್ದಾಣಕ್ಕೆ ಬಂದಿರುವುದು ನನಗೆ ಬಹಳ ಗೌರವದ …

Read More »

ಘಾನಾ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಘಾನಾದ ಅಧ್ಯಕ್ಷರಾದ, ಗೌರವಾನ್ವಿತ ಡಾ. ಜಾನ್ ಡ್ರಾಮಾನಿ ಮಹಾಮಾ ಅವರನ್ನು ಭೇಟಿ ಮಾಡಿದರು. ಜ್ಯೂಬಿಲಿ ಹೌಸ್ ಗೆ ಆಗಮಿಸಿದ ಪ್ರಧಾನಮಂತ್ರಿಯವರನ್ನು ಅಧ್ಯಕ್ಷ ಮಹಾಮಾ ಅವರು ಆತ್ಮೀಯವಾಗಿ ಬರಮಾಡಿಕೊಂಡರು. ಕಳೆದ ಮೂರು ದಶಕಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಘಾನಾಕ್ಕೆ ನೀಡುತ್ತಿರುವ ಮೊದಲ ಅಧಿಕೃತ ಭೇಡಿ ಇದಾಗಿದೆ. ಇಬ್ಬರು ನಾಯಕರು ಏಕಾಂತ ಸಭೆ ಮತ್ತು ನಿಯೋಗ ಮಟ್ಟದ ಸಭೆಗಳನ್ನು ನಡೆಸಿ, ವಿಸ್ತೃತ ಮಾತುಕತೆ ನಡೆಸಿದರು. ಉಭಯ …

Read More »

ಘಾನಾ, ಟ್ರಿನಿಡಾಡ್ ಮತ್ತು ಟೊಬಾಗೊ, ಅರ್ಜೆಂಟೀನಾ, ಬ್ರೆಜಿಲ್ ಮತ್ತು ನಮೀಬಿಯಾ ಭೇಟಿಯ ಮುನ್ನ ಪ್ರಧಾನಮಂತ್ರಿ ಅವರ ನಿರ್ಗಮನ ಹೇಳಿಕೆ

ಇಂದು, ನಾನು ಜುಲೈ 2 ರಿಂದ 9, 2025 ರವರೆಗೆ ಘಾನಾ, ಟ್ರಿನಿಡಾಡ್ ಮತ್ತು ಟೊಬಾಗೊ, ಅರ್ಜೆಂಟೀನಾ, ಬ್ರೆಜಿಲ್ ಮತ್ತು ನಮೀಬಿಯಾಕ್ಕೆ ಐದು ರಾಷ್ಟ್ರಗಳ ಭೇಟಿಯನ್ನು ಕೈಗೊಳ್ಳುತ್ತೇನೆ. ಗರವಾನ್ವಿತ ಅಧ್ಯಕ್ಷರಾದ ಜಾನ್ ಡ್ರಾಮನಿ ಮಹಾಮಾ ಅವರ ಆಹ್ವಾನದ ಮೇರೆಗೆ, ನಾನು ಜುಲೈ 2-3 ರಂದು ಘಾನಾಗೆ ಭೇಟಿ ನೀಡಲಿದ್ದೇನೆ. ಘಾನಾ ದೇಶವು ಜಾಗತಿಕ ದಕ್ಷಿಣದಲ್ಲಿ ಮೌಲ್ಯಯುತ ಪಾಲುದಾರ ಮತ್ತು ಆಫ್ರಿಕನ್ ಒಕ್ಕೂಟ ಹಾಗು ಪಶ್ಚಿಮ ಆಫ್ರಿಕಾದ ರಾಜ್ಯಗಳ ಆರ್ಥಿಕ ಸಮುದಾಯದಲ್ಲಿ ಪ್ರಮುಖ ಪಾತ್ರ …

Read More »

2026ನೇ ಸಾಲಿನ ಪದ್ಮ ಪ್ರಶಸ್ತಿಗೆ ಜುಲೈ 31ರವರೆಗೆ ಅರ್ಜಿ ಸಲ್ಲಿಕೆ

2026ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುವ ಪದ್ಮ ಪ್ರಶಸ್ತಿಗಳು -2026 ಗಾಗಿ ನಾಮನಿರ್ದೇಶನಗಳು / ಶಿಫಾರಸುಗಳು 2025ರ ಮಾರ್ಚ್‌ 15 ರಂದು ಪ್ರಾರಂಭವಾಗಿವೆ. ಪದ್ಮ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲು 2025ರ ಜುಲೈ 31 ಕೊನೆಯ ದಿನಾಂಕವಾಗಿದೆ. ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳು / ಶಿಫಾರಸುಗಳನ್ನು ರಾಷ್ಟ್ರೀಯ ಪುರಸ್ಕಾರ ಪೋರ್ಟಲ್‌ (https://awards.gov.in) ನಲ್ಲಿಆನ್‌ಲೈನ್‌ನಲ್ಲಿ ಮಾತ್ರ ಸ್ವೀಕರಿಸಲಾಗುತ್ತದೆ. ಪದ್ಮ ಪ್ರಶಸ್ತಿಗಳಾದ ಪದ್ಮ ವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿಒಂದಾಗಿದೆ. 1954 ರಲ್ಲಿ ಸ್ಥಾಪಿಸಲಾದ ಈ ಪ್ರಶಸ್ತಿಗಳನ್ನು ಪ್ರತಿವರ್ಷ …

Read More »

ಗೃಹಬಳಕೆ ವೆಚ್ಚ ಸಮೀಕ್ಷೆ: 2022-23 ಮತ್ತು 2023-24

ಪರಿಚಯ ಆಗಸ್ಟ್ 2022 – ಜುಲೈ 2023 ಮತ್ತು ಆಗಸ್ಟ್ 2023 – ಜುಲೈ 2024ರ ಅವಧಿಯಲ್ಲಿ ನಡೆಸಿದ ಸತತ ಗೃಹಬಳಕೆಯ ಬಳಕೆ ವೆಚ್ಚ ಸಮೀಕ್ಷೆಗಳು (HCES) ನಿರ್ದಿಷ್ಟ ಉಲ್ಲೇಖ ಅವಧಿಗಳಲ್ಲಿ ಕುಟುಂಬ ಸದಸ್ಯರ ಆಹಾರ ಪದಾರ್ಥಗಳ ಸೇವನೆಯ ಮಾಹಿತಿಯನ್ನು ಸಂಗ್ರಹಿಸಿವೆ. ಆಹಾರ ಸೇವನೆಯ ದತ್ತಾಂಶ ಮತ್ತು ವಿವಿಧ ಆಹಾರ ಪದಾರ್ಥಗಳ ಪೌಷ್ಟಿಕಾಂಶದ ಮೌಲ್ಯಗಳನ್ನು ಆಧರಿಸಿ, ರಾಜ್ಯ, ವಲಯ, ಮಾಸಿಕ ತಲಾವಾರು ಬಳಕೆಯ ವೆಚ್ಚದ ಫ್ರಾಕ್ಟೈಲ್ ವರ್ಗ (ಎಂಪಿಸಿಇ) ಮುಂತಾದ …

Read More »

ರಾಷ್ಟ್ರೀಯ ಕ್ರೀಡಾ ನೀತಿ 2025ಕ್ಕೆ ಸಂಪುಟದ ಅನುಮೋದನೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, ರಾಷ್ಟ್ರೀಯ ಕ್ರೀಡಾ ನೀತಿ (ಎನ್ ಎಸ್ ಪಿ) 2025ಕ್ಕೆ ಅನುಮೋದನೆ ನೀಡಿದೆ. ಇದು ದೇಶದ ಕ್ರೀಡಾ ಕ್ಷೇತ್ರವನ್ನು ಮರುರೂಪಿಸುವ ಮತ್ತು ಕ್ರೀಡೆಗಳ ಮೂಲಕ ನಾಗರಿಕರನ್ನು ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿರುವ ಒಂದು ಮಹತ್ವದ ಉಪಕ್ರಮವಾಗಿದೆ. ಹೊಸ ನೀತಿಯು ಅಸ್ತಿತ್ವದಲ್ಲಿರುವ ರಾಷ್ಟ್ರೀಯ ಕ್ರೀಡಾ ನೀತಿ, 2001 ಅನ್ನು ರದ್ದುಗೊಳಿಸುತ್ತದೆ ಮತ್ತು ಭಾರತವನ್ನು ಜಾಗತಿಕ ಕ್ರೀಡಾ ಶಕ್ತಿ …

Read More »

ಕಾರ್ಯತಂತ್ರದ ಮತ್ತು ಉದಯೋನ್ಮುಖ ಕ್ಷೇತ್ರಗಳಲ್ಲಿ ಸಂಶೋಧನೆ, ಅಭಿವೃದ್ಧಿ ಮತ್ತು ನಾವೀನ್ಯತೆಯನ್ನು ಹೆಚ್ಚಿಸಲು ಸಂಶೋಧನೆ ಅಭಿವೃದ್ಧಿ ಮತ್ತು ನಾವೀನ್ಯತೆ (RDI) ಯೋಜನೆಗೆ ಸಚಿವ ಸಂಪುಟದ ಅನುಮೋದನೆ

ಭಾರತದ ಸಂಶೋಧನೆ ಮತ್ತು ನಾವೀನ್ಯತೆ ಪರಿಸರ ವ್ಯವಸ್ಥೆಗೆ ಹೊಸ ಚೈತನ್ಯ ನೀಡುವ ಮಹತ್ವದ ಕ್ರಮವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಇಂದು ₹1 ಲಕ್ಷ ಕೋಟಿಗಳ ಬೃಹತ್ ನಿಧಿಯೊಂದಿಗೆ ‘ಸಂಶೋಧನೆ, ಅಭಿವೃದ್ಧಿ ಮತ್ತು ನಾವೀನ್ಯತೆ (RDI)’ ಯೋಜನೆಗೆ ತನ್ನ ಅನುಮೋದನೆ ನೀಡಿದೆ. ನಾವೀನ್ಯತೆಯನ್ನು ಮುನ್ನಡೆಸುವಲ್ಲಿ ಮತ್ತು ಸಂಶೋಧನೆಗಳಿಗೆ ವಾಣಿಜ್ಯ ಸ್ವರೂಪ ನೀಡುವಲ್ಲಿ ಖಾಸಗಿ ವಲಯದ ಮಹತ್ವದ ಪಾತ್ರವನ್ನು ಮನಗಂಡು ಈ ಯೋಜನೆಯನ್ನು ರೂಪಿಸಲಾಗಿದೆ. …

Read More »

ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್ಐ) ಯೋಜನೆಗೆ ಸಚಿವ ಸಂಪುಟದ ಅನುಮೋದನೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಉತ್ಪಾದನಾ ವಲಯದ ಮೇಲೆ ವಿಶೇಷ ಗಮನ ಹರಿಸಿ, ʻಉದ್ಯೋಗ ಆಧರಿತ ಪ್ರೋತ್ಸಾಹಧನʼ(ಇಎಲ್ಐ) ಯೋಜನೆಗೆ ಅನುಮೋದನೆ ನೀಡಿದೆ. ಉದ್ಯೋಗ ಸೃಷ್ಟಿ, ಎಲ್ಲ ವಲಯಗಳಲ್ಲಿ ಉದ್ಯೋಗಾವಕಾಶ ಮತ್ತು ಸಾಮಾಜಿಕ ಭದ್ರತೆಯನ್ನು ಹೆಚ್ಚಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಈ ಯೋಜನೆಯಡಿ, ಮೊದಲ ಬಾರಿಯ ಉದ್ಯೋಗಿಗಳಿಗೆ ಒಂದು ತಿಂಗಳ ವೇತನ (15,000 ರೂ.ವರೆಗೆ), ಉದ್ಯೋಗದಾತರಿಗೆ ಹೆಚ್ಚುವರಿ ಉದ್ಯೋಗ ಸೃಷ್ಟಿಗಾಗಿ ಎರಡು ವರ್ಷಗಳವರೆಗೆ …

Read More »

ತಮಿಳುನಾಡಿನಲ್ಲಿ 1,853 ಕೋಟಿ ರೂ. ವೆಚ್ಚದಲ್ಲಿ ಪರಮಕುಡಿ-ರಾಮನಾಥಪುರಂ ವಿಭಾಗದ (ಎನ್‌ ಎಚ್‌ 87) ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಸಂಪುಟ ಅನುಮೋದನೆ

ತಮಿಳುನಾಡಿನಲ್ಲಿ ಪರಮಕುಡಿ – ರಾಮನಾಥಪುರಂ ವಿಭಾಗದ (46.7 ಕಿ.ಮೀ) ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಯೋಜನೆಯನ್ನು ಹೈಬ್ರಿಡ್ ಆನ್ಯುಯಿಟಿ ಮೋಡ್ (ಎಚ್‌ ಎ ಎಂ) ನಲ್ಲಿ ಅಭಿವೃದ್ಧಿಪಡಿಸಲಾಗುವುದು, ಇದರ ಒಟ್ಟು ಬಂಡವಾಳ ವೆಚ್ಚ 1,853 ಕೋಟಿ ರೂ. ಪ್ರಸ್ತುತ, ಮಧುರೈ, ಪರಮಕುಡಿ, ರಾಮನಾಥಪುರಂ, ಮಂಟಪಂ, ರಾಮೇಶ್ವರಂ ಮತ್ತು ಧನುಷ್ಕೋಡಿ ನಡುವಿನ ಸಂಪರ್ಕವು ಅಸ್ತಿತ್ವದಲ್ಲಿರುವ ದ್ವಿಪಥ ರಾಷ್ಟ್ರೀಯ ಹೆದ್ದಾರಿ 87 (ಎನ್‌ ಎಚ್-87) ಮತ್ತು …

Read More »