ವಿಶ್ವ ಆಹಾರ ಸುರಕ್ಷತಾ ದಿನ 2025 ರ ಆಚರಣೆಯ ಪ್ರಯುಕ್ತ, ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು (FSSAI), ‘ಸುರಕ್ಷಿತ ಮತ್ತು ಆರೋಗ್ಯಕರ ಆಹಾರ ಸೇವಿಸಿ, ಸ್ಥೂಲಕಾಯ ತಡೆಯಿರಿ’ ಎಂಬ ವಿಷಯದ ಮೇಲೆ ದಿನಾಂಕ 07 ಜೂನ್ 2025 ರಂದು ಬೆಂಗಳೂರಿನ ನಿಮ್ಹಾನ್ಸ್ ನಲ್ಲಿ (NIMHANS) ಒಂದು ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಸ್ಥೂಲಕಾಯ ಮತ್ತು ಸಾಂಕ್ರಾಮಿಕವಲ್ಲದ ರೋಗಗಳ ಹೆಚ್ಚುತ್ತಿರುವ ಸಮಸ್ಯೆಯನ್ನು, ನಮ್ಮ ಸಾಂಪ್ರದಾಯಿಕ, ಸುರಕ್ಷಿತ ಮತ್ತು ಸಂಪೂರ್ಣ ಪೌಷ್ಟಿಕ ಆಹಾರ …
Read More »ನಮ್ಮ ಯುವ ಶಕ್ತಿಯು ಬೆಳಗಲು ಸಾಧ್ಯವಿರುವ ಎಲ್ಲಾ ಅವಕಾಶಗಳನ್ನು ನಾವು ಸದಾ ನೀಡುತ್ತೇವೆ, ಅವರು ವಿಕಸಿತ ಭಾರತದ ಪ್ರಮುಖ ನಿರ್ಮಾತೃಗಳು: ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಭಾರತದ ಯುವಕರ ಜಾಗತಿಕ ಸಾಧನೆಗಳನ್ನು ಎತ್ತಿ ತೋರಿಸಿದರು, ಭಾರತದ ಯುವಕರು ಜಾಗತಿಕವಾಗಿ ತಮ್ಮ ಛಾಪನ್ನು ಮೂಡಿಸಿದ್ದಾರೆ ಎಂದು ಹೇಳಿದರು. ಅವುಗಳನ್ನು ಚೈತನ್ಯ, ನಾವೀನ್ಯತೆ ಮತ್ತು ದೃಢಸಂಕಲ್ಪದ ಸಂಕೇತಗಳೆಂದು ವಿವರಿಸಿದ ಅವರು, ಕಳೆದ 11 ವರ್ಷಗಳಲ್ಲಿ ಯುವ ಶಕ್ತಿಯ ಅಪ್ರತಿಮ ಶಕ್ತಿ ಮತ್ತು ದೃಢಸಂಕಲ್ಪವು ರಾಷ್ಟ್ರದ ಬೆಳವಣಿಗೆಗೆ ಉತ್ತೇಜನ ನೀಡಿದೆ ಎಂದು ಹೇಳಿದರು. ನವೋದ್ಯಮಗಳು, ವಿಜ್ಞಾನ, ಕ್ರೀಡೆ, ಸಮುದಾಯ ಸೇವೆ ಮತ್ತು ಸಂಸ್ಕೃತಿ ಸೇರಿದಂತೆ …
Read More »ಬಲವಾದ ಮತ್ತು ಸ್ಪಂದನಶೀಲ ʻಡಿಆರ್ಆರ್ʼ ಹಣಕಾಸು ವ್ಯವಸ್ಥೆಯು ಸದೃಢತೆಯ ಮೂಲಾಧಾರವೆಂದು ಭಾರತ ನಂಬಿದೆ: ಡಾ. ಪಿ.ಕೆ.ಮಿಶ್ರಾ
ಪ್ರಧಾನಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಡಾ. ಪಿ.ಕೆ. ಮಿಶ್ರಾ ಅವರು 2025ರ ಜೂನ್ 4ರಂದು ಜಿನೀವಾದಲ್ಲಿ ನಡೆದ ʻವಿಪತ್ತು ಅಪಾಯ ತಗ್ಗಿಸಲು (ಡಿಆರ್ಆರ್) ಹಣಕಾಸು ನೆರವು ಕುರಿತ ಸಚಿವರ ದುಂಡುಮೇಜಿನ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ನಿರ್ಣಾಯಕ ಸಭೆಯನ್ನು ಆಯೋಜಿಸಿದ್ದಕ್ಕಾಗಿ ಅವರು ʻವಿಪತ್ತು ಅಪಾಯ ತಗ್ಗಿಸುವ ಕುರಿತಾದ ವಿಶ್ವಸಂಸ್ಥೆಯ ಕಚೇರಿʼ(ಯುಎನ್ಡಿಆರ್ಆರ್) ಮತ್ತು ಅದರ ಪಾಲುದಾರರನ್ನು ಶ್ಲಾಘಿಸಿದರು. ಜಿ20 ಅಧ್ಯಕ್ಷತೆ ಮೂಲಕ ಜಾಗತಿಕ ಸಂವಾದವನ್ನು ಮುಂದುವರಿಸುವಲ್ಲಿ ಬ್ರೆಜಿಲ್ ಮತ್ತು ದಕ್ಷಿಣ ಆಫ್ರಿಕಾದ ಕೊಡುಗೆಗಳನ್ನು ಸಹ ಭಾರತ ಗುರುತಿಸಿತು. ʻವಿಪತ್ತು ಅಪಾಯ ತಗ್ಗಿಸಲು ಹಣಕಾಸು ನೆರವುʼ ಎಂಬುದು ಬಾಹ್ಯ ವಿಷಯವಲ್ಲ. ಬದಲಿಗೆ, ಅದು ರಾಷ್ಟ್ರೀಯ ವಿಪತ್ತು ನಿರ್ವಹಣಾ ವ್ಯವಸ್ಥೆಗಳ ಪರಿಣಾಮಕಾರಿ ಕಾರ್ಯನಿರ್ವಹಣೆಯಾಗಿದೆ. ಜೊತೆಗೆ ಹೆಚ್ಚುತ್ತಿರುವ ಹವಾಮಾನ ಮತ್ತು ವಿಪತ್ತು ಅಪಾಯಗಳ ಹಿನ್ನೆಲೆಯಲ್ಲಿ ಅಭಿವೃದ್ಧಿ ಲಾಭಗಳನ್ನು ರಕ್ಷಿಸಲು ಇದು ಅತ್ಯಂತ ಮುಖ್ಯವಾಗಿದೆ ಎಂದು ಡಾ. ಮಿಶ್ರಾ ಒತ್ತಿಹೇಳಿದರು. ಬಲವಾದ ಮತ್ತು ಸ್ಪಂದನಶೀಲವಾದ ʻವಿಪತ್ತು ಅಪಾಯ ತಗ್ಗಿಸಲು ಹಣಕಾಸು ನೆರವುʼ ವ್ಯವಸ್ಥೆಯು ದೇಶವೊಂದರ ಸದೃಢತೆಗೆ ಮೂಲಾಧಾರವಾಗಿದೆ ಎಂಬ ಭಾರತದ ನಂಬಿಕೆಯನ್ನು ಅವರು ಪುನರುಚ್ಚರಿಸಿದರು. ʻವಿಪತ್ತು ಅಪಾಯ ತಗ್ಗಿಸುವಿಕೆಗಾಗಿ ಹಣಕಾಸು ನೆರವುʼ ಕ್ಷೇತ್ರದಲ್ಲಿ ಭಾರತದ ಪ್ರಯಾಣವನ್ನು ಎತ್ತಿ ತೋರಿದ ಅವರು, ಈ ಮೊದಲಿನ ಹಣಕಾಸು ಆಯೋಗಗಳು ಈ ನಿಟ್ಟಿನಲ್ಲಿ 60 ದಶಲಕ್ಷ ರೂಪಾಯಿಗಳ (ಸುಮಾರು 0.7 ದಶಲಕ್ಷ ಅಮೆರಿಕನ್ ಡಾಲರ್) ಆರಂಭಿಕ ನಿಧಿ ಹಂಚಿಕೆ ಮಾಡಿವೆ ಎಂದು ಮಾಹಿತಿ ನೀಡಿದರು. ಇಂದು, 15ನೇ ಹಣಕಾಸು ಆಯೋಗದ ಅಡಿಯಲ್ಲಿ ಈ ನಿಟ್ಟಿನಲ್ಲಿ ಒಟ್ಟು ವೆಚ್ಚವು 2.32 ಲಕ್ಷ ಕೋಟಿ ರೂಪಾಯಿಗಳನ್ನು (ಸುಮಾರು 28 ಶತಕೋಟಿ ಅಮೆರಿಕನ್ ಡಾಲರ್) ಮೀರಿದೆ ಎಂದು ಹೇಳಿದರು. ʻವಿಪತ್ತು ನಿರ್ವಹಣಾ ಕಾಯ್ದೆ-2005ʼರ ಬೆಂಬಲದೊಂದಿಗೆ ರಾಷ್ಟ್ರೀಯ ಮಟ್ಟದಿಂದ ರಾಜ್ಯ ಮತ್ತು ಜಿಲ್ಲಾ ಮಟ್ಟಗಳಿಗೆ ಪೂರ್ವನಿರ್ಧರಿತ, ನಿಯಮ ಆಧಾರಿತ ಹಂಚಿಕೆಗಳ ಮಹತ್ವವನ್ನು ಮಿಶ್ರಾ ಅವರು ಒತ್ತಿ ಹೇಳಿದರು. ಈ ರೂಪಾಂತರವು ವಿಪತ್ತು ಹಣಕಾಸು ಪ್ರತಿಕ್ರಿಯಾತ್ಮಕವಾಗಿರುವುದರ ಬದಲು, ರಚನಾತ್ಮಕ ಮತ್ತು ನಿರೀಕ್ಷಿತವಾಗಿರುವಂತೆ ಖಾತ್ರಿಪಡಿಸಿದೆ ಎಂದು ಅವರು ಹೇಳಿದರು. ನಾಲ್ಕು ಪ್ರಮುಖ ತತ್ವಗಳ ಮೇಲೆ ನಿರ್ಮಿಸಲಾದ ಭಾರತದ ʻವಿಪತ್ತು ಅಪಾಯ ತಗ್ಗಿಸುವಿಕೆಗಾಗಿ ಹಣಕಾಸು ನೆರವುʼ ಕಾರ್ಯವಿಧಾನವನ್ನು ಅವರು ಶ್ರೀ ಮಿಶ್ರಾ ವಿವರಿಸಿದರು. ಮೊದಲನೆಯ ತತ್ವವೆಂದರೆ ಸನ್ನದ್ಧತೆ, ಅಪಾಯ ತಗ್ಗಿಸುವಿಕೆ, …
Read More »ಜಿಪಿಡಿಆರ್ಆರ್ 2025ರಲ್ಲಿ ಜಿ 20, ಡಬ್ಲ್ಯುಎಚ್ಒ ಮತ್ತು ಎಯು ಜೊತೆ ಡಾ.ಪಿ.ಕೆ.ಮಿಶ್ರಾ ಮಾತುಕತೆ
ಪ್ರಧಾನಮಂತ್ರಿ ಅವರ ಪ್ರಧಾನ ಕಾರ್ಯದರ್ಶಿ ಡಾ. ಪಿ.ಕೆ. ಮಿಶ್ರಾ ಅವರು ಇಂದು ಜಿನೀವಾದಲ್ಲಿ ನಡೆದ ವಿಪತ್ತು ಅಪಾಯ ತಗ್ಗಿಸುವ ಜಾಗತಿಕ ವೇದಿಕೆ (ಜಿಪಿಡಿಆರ್ಆರ್) 2025ರ ಅಂಚಿನಲ್ಲಿ ನಡೆದ ಜಿ20 ವಿಪತ್ತು ಅಪಾಯ ತಗ್ಗಿಸುವ (ಡಿಆರ್ಆರ್) ಕಾರ್ಯ ಗುಂಪಿನ ದುಂಡುಮೇಜಿನ ಸಭೆಯಲ್ಲಿ ಭಾಗವಹಿಸಿದ್ದರು. ಚರ್ಚೆಯ ಸಮಯದಲ್ಲಿ, ಅಭಿವೃದ್ಧಿಯ ಅನಿವಾರ್ಯತೆಗಳ ಜೊತೆಗೆ ಆರ್ಥಿಕ ಸಾಮರ್ಥ್ಯವನ್ನು ಹೆಚ್ಚಿಸುವ ಮೂಲಕ ಜಾಗತಿಕ ವಿಪತ್ತು ಅಪಾಯ ತಗ್ಗಿಸುವ ಪ್ರಯತ್ನಗಳನ್ನು ಮುನ್ನಡೆಸುವಲ್ಲಿ ಜಿ20ಯ ಪ್ರಮುಖ ಪಾತ್ರವನ್ನು ಅವರು ಒತ್ತಿ …
Read More »ಪ್ರಧಾನಮಂತ್ರಿ ಅವರ ಭೇಟಿಗೆ ಮುಂಚಿತವಾಗಿ ಚೆನಾಬ್ ಸೇತುವೆಯಲ್ಲಿನ ವ್ಯವಸ್ಥೆಗಳನ್ನು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಪರಿಶೀಲಿಸಿದರು
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಪರ್ಕವನ್ನು ಹೆಚ್ಚಿಸಲು 46,000 ಕೋಟಿ ರೂ.ಗಳ ದೂರದೃಷ್ಟಿ ಮತ್ತು ಪ್ರಮುಖ ಯೋಜನೆಗಳನ್ನು ರೂಪಿಸಿದ್ದಾರೆ, ಇದು ಈ ಪ್ರದೇಶದ ಸಂಪರ್ಕದಲ್ಲಿ ಐತಿಹಾಸಿಕ ಮೈಲಿಗಲ್ಲಾಗಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭೇಟಿಗೆ ಮುಂಚಿತವಾಗಿ, ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಗಳು ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯಾದ ಅಪ್ರತಿಮ ಚೆನಾಬ್ ಸೇತುವೆಯ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಚೆನಾಬ್ ರೈಲು ಸೇತುವೆ ಜಮ್ಮು ಮತ್ತು …
Read More »ಏಕ್ ಪೆಡ್ ಮಾ ಕೆ ನಾಮ್ ಉಪಕ್ರಮವನ್ನು ಬಲಪಡಿಸುವ ಮತ್ತು ಅರಾವಳಿ ಹಸಿರು ಗೋಡೆ ಯೋಜನೆಯಡಿಯಲ್ಲಿ ಅರಾವಳಿ ಶ್ರೇಣಿಯನ್ನು ಮರು ಅರಣ್ಯೀಕರಣಗೊಳಿಸುವ ಸಂಕಲ್ಪದೊಂದಿಗೆ ದಿಲ್ಲಿಯ ಭಗವಾನ್ ಮಹಾವೀರ್ ವನಸ್ಥಲಿ ಉದ್ಯಾನವನದಲ್ಲಿ ಸಸಿ ನೆಟ್ಟ ಪ್ರಧಾನಮಂತ್ರಿ
ವಿಶ್ವ ಪರಿಸರ ದಿನದ ಅಂಗವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿಲ್ಲಿಯ ಭಗವಾನ್ ಮಹಾವೀರ್ ವನಸ್ಥಲಿ ಉದ್ಯಾನವನದಲ್ಲಿ ಗಿಡ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಏಕ್ ಪೆಡ್ ಮಾ ಕೆ ನಾಮ್ ಉಪಕ್ರಮವನ್ನು ಬಲಪಡಿಸುವ ಸಲುವಾಗಿ ಸಸಿ ನೆಟ್ಟಿದ್ದಾರೆ. ಅರಾವಳಿ ಹಸಿರು ಗೋಡೆ ಯೋಜನೆಯಡಿಯಲ್ಲಿ ಅರಾವಳಿ ಶ್ರೇಣಿಯನ್ನು ಮರು ಅರಣ್ಯೀಕರಣಗೊಳಿಸುವ ಮಹತ್ವವನ್ನು ಶ್ರೀ ಮೋದಿ ಅವರು ಎತ್ತಿ ತೋರಿಸಿದ್ದಾರೆ. ಭೂಗ್ರಹದ ಅತ್ಯಂತ ಹಳೆಯ ಶ್ರೇಣಿಗಳಲ್ಲಿ ಒಂದಾದ ಅರಾವಳಿ ವಲಯವು ಗುಜರಾತ್, ರಾಜಸ್ಥಾನ, ಹರಿಯಾಣ ಮತ್ತು ದಿಲ್ಲಿಯನ್ನು ವ್ಯಾಪಿಸಿದೆ ಎಂಬುದರತ್ತ ಪ್ರಧಾನಿ ಗಮನ ಸೆಳೆದರು. ಈ ಪ್ರದೇಶವು ಹಲವಾರು ಪರಿಸರ ಸವಾಲುಗಳನ್ನು ಎದುರಿಸುತ್ತಿದೆ ಮತ್ತು ಅವುಗಳನ್ನು ಪರಿಹರಿಸಲು ಸರ್ಕಾರ ಬದ್ಧವಾಗಿದೆ ಎಂದು ಅವರು ಒತ್ತಿ ಹೇಳಿದರು. ಅರಾವಳಿ ಶ್ರೇಣಿ ಮತ್ತು ಅದರಾಚೆಗೆ, ಸಾಂಪ್ರದಾಯಿಕ ಗಿಡ ನೆಡುವ ವಿಧಾನಗಳ ಜೊತೆಗೆ, ವಿಶೇಷವಾಗಿ ಸ್ಥಳಾವಕಾಶದ ಮಿತಿಗಳಿರುವ ನಗರ ಮತ್ತು ಅರೆ-ನಗರ ಪ್ರದೇಶಗಳಲ್ಲಿ ನಾವು ಹೊಸ ತಂತ್ರಗಳನ್ನು ಪ್ರೋತ್ಸಾಹಿಸುತ್ತೇವೆ ಎಂದು ಶ್ರೀ ಮೋದಿ ಹೇಳಿದರು. ಮೇರಿ ಲೈಫ್ ಪೋರ್ಟಲ್ನಲ್ಲಿ ತೋಟಗಾರಿಕೆ/ಪ್ಲಾಂಟೇಶನ್ ಚಟುವಟಿಕೆಗಳನ್ನು ಜಿಯೋ-ಟ್ಯಾಗ್ ಮಾಡಲಾಗುತ್ತದೆ ಮತ್ತು ಮೇಲ್ವಿಚಾರಣೆ ಮಾಡಲಾಗುತ್ತದೆ ಎಂದೂ ಶ್ರೀ ಮೋದಿ ಹೇಳಿದರು. ದೇಶದ ಯುವಜನರು ಈ ಆಂದೋಲನದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಮತ್ತು ಭೂಗ್ರಹದ ಹಸಿರು ಹೊದಿಕೆಯನ್ನು ಹೆಚ್ಚಿಸಲು ಕೊಡುಗೆ ನೀಡಬೇಕೆಂದು ಪ್ರಧಾನಿ ಆಗ್ರಹಿಸಿದರು. ಈ ಬಗ್ಗೆ X ಥ್ರೆಡ್ನಲ್ಲಿ ಪ್ರಧಾನಿ ಹೀಗೆ ಹೇಳಿದ್ದಾರೆ; “ಇಂದು, #ವಿಶ್ವ ಪರಿಸರ ದಿನದಂದು(#WorldEnvironmentDay), ನಾವು ವಿಶೇಷ ಗಿಡ ನೆಡುವ ಅಭಿಯಾನದೊಂದಿಗೆ #EkPedMaaKeNaam ಉಪಕ್ರಮವನ್ನು ಬಲಪಡಿಸಿದ್ದೇವೆ. ದಿಲ್ಲಿಯ ಭಗವಾನ್ ಮಹಾವೀರ್ ವನಸ್ಥಲಿ ಉದ್ಯಾನವನದಲ್ಲಿ ನಾನು ಸಸಿ ನೆಟ್ಟಿದ್ದೇನೆ. ಇದು ಅರಾವಳಿ ಶ್ರೇಣಿಯನ್ನು – ಅರಾವಳಿ ಹಸಿರು ಗೋಡೆ ಯೋಜನೆಯಲ್ಲಿ ಮರು ಅರಣ್ಯೀಕರಣಗೊಳಿಸುವ ನಮ್ಮ ಪ್ರಯತ್ನದ ಒಂದು ಭಾಗವಾಗಿದೆ.” “ಗುಜರಾತ್, ರಾಜಸ್ಥಾನ, ಹರಿಯಾಣ ಮತ್ತು ದಿಲ್ಲಿಯನ್ನು ಒಳಗೊಂಡ ಅರಾವಳಿ ಶ್ರೇಣಿಯು ನಮ್ಮ ಭೂಗ್ರಹದ ಅತ್ಯಂತ ಹಳೆಯ ಶ್ರೇಣಿಯಾಗಿದೆ ಎಂದು ವ್ಯಾಪಕವಾಗಿ ತಿಳಿಯಲಾಗಿದೆ. ಕಳೆದ ಹಲವಾರು ವರ್ಷಗಳಿಂದ ಈ ಶ್ರೇಣಿಗೆ ಸಂಬಂಧಿಸಿದ ಹಲವಾರು ಪರಿಸರ ಸವಾಲುಗಳು ಮುನ್ನೆಲೆಗೆ ಬಂದಿವೆ, ಇವುಗಳನ್ನು ತಗ್ಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ಶ್ರೇಣಿಯೊಂದಿಗೆ ಸಂಪರ್ಕ ಹೊಂದಿದ ಪ್ರದೇಶಗಳನ್ನು ಪುನರುಜ್ಜೀವನಗೊಳಿಸುವುದರತ್ತ ನಾವು ಗಮನ ಹರಿಸಿದ್ದೇವೆ. ನಾವು ಆಯಾ ಸ್ಥಳೀಯ ಆಡಳಿತಗಳೊಂದಿಗೆ ಕೆಲಸ ಮಾಡಲಿದ್ದೇವೆ ಮತ್ತು ನೀರಿನ ವ್ಯವಸ್ಥೆಗಳನ್ನು ಸುಧಾರಿಸುವುದು, ಧೂಳಿನ ಬಿರುಗಾಳಿಗಳನ್ನು ನಿಗ್ರಹಿಸುವುದು, ಥಾರ್ ಮರುಭೂಮಿಯು ಪೂರ್ವಕ್ಕೆ ವಿಸ್ತರಣೆಗೊಳ್ಳುವುದನ್ನು ನಿಲ್ಲಿಸುವುದು ಸೇರಿದಂತೆ ಇನ್ನೂ ಹೆಚ್ಚಿನ ವಿಷಯಗಳಿಗೆ ಒತ್ತು ನೀಡಲಿದ್ದೇವೆ.” “ಅರಾವಳಿ ಶ್ರೇಣಿ ಮತ್ತು ಅದರಾಚೆಗೆ, ಸಾಂಪ್ರದಾಯಿಕ ಗಿಡ ನೆಡುವ ವಿಧಾನಗಳ …
Read More »ಬಡವರ ಕಲ್ಯಾಣಕ್ಕೆ ಸಮರ್ಪಿತವಾದ ಸಹಾನುಭೂತಿಯುಳ್ಳ ಸರ್ಕಾರ: ಪ್ರಧಾನಮಂತ್ರಿ
ದೇಶವು ಪರಿವರ್ತನಶೀಲ ಮತ್ತು ಎಲ್ಲರನ್ನೂ ಒಳಗೊಂಡ ಆಡಳಿತದ 11ನೇ ವರ್ಷವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಬಡವರ ಕಲ್ಯಾಣಕ್ಕೆ ಎನ್ಡಿಎ ಸರ್ಕಾರದ ಅಚಲ ಬದ್ಧತೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪುನರುಚ್ಚರಿಸಿದ್ದಾರೆ. ಸಬಲೀಕರಣ, ಮೂಲಸೌಕರ್ಯ ಮತ್ತು ಒಳಗೊಳ್ಳುವಿಕೆಯ ಮೇಲೆ ಗಮನ ಕೇಂದ್ರೀಕರಿಸಿದ ಸಹಾನುಭೂತಿಯುಳ್ಳ ಸರ್ಕಾರವು 25 ಕೋಟಿಗೂ ಹೆಚ್ಚು ಜನರನ್ನು ಬಡತನದಿಂದ ಮೇಲೆತ್ತುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಅವರು ಹೇಳಿದ್ದಾರೆ. ʻಪ್ರಧಾನಮಂತ್ರಿ ಆವಾಸ್ ಯೋಜನೆʼ, ʻಪಿಎಂ ಉಜ್ವಲ ಯೋಜನೆʼ, ʻಜನ್ ಧನ್ ಯೋಜನೆʼ ಮತ್ತು ʻಆಯುಷ್ಮಾನ್ ಭಾರತ್ʼನಂತಹ ಪರಿವರ್ತಕ ಯೋಜನೆಗಳ ಪರಿಣಾಮವನ್ನು ಪ್ರಧಾನಿ ಎತ್ತಿ ತೋರಿದರು. ಈ ಯೋಜನೆಗಳು ವಸತಿ, ಶುದ್ಧ ಅಡುಗೆ ಇಂಧನ, ಬ್ಯಾಂಕಿಂಗ್ ಮತ್ತು ಆರೋಗ್ಯ ಸೇವೆಗಳ ಲಭ್ಯತೆಯನ್ನು ವಿಸ್ತರಿಸಿವೆ. ಪ್ರಯೋಜನಗಳ ಪಾರದರ್ಶಕ ಮತ್ತು ಪರಿಣಾಮಕಾರಿ ವಿತರಣೆಯನ್ನು ಖಚಿತಪಡಿಸಿಕೊಳ್ಳುವಲ್ಲಿ ʻನೇರ ಲಾಭ ವರ್ಗಾವಣೆʼ (ಡಿಬಿಟಿ), ಡಿಜಿಟಲ್ ಸೇರ್ಪಡೆ ಮತ್ತು ಗ್ರಾಮೀಣ ಮೂಲಸೌಕರ್ಯದ ಮಹತ್ವವನ್ನು ಅವರು ಒತ್ತಿ ಹೇಳಿದ್ದಾರೆ. ಪ್ರಧಾನಮಂತ್ರಿಯವರು ʻಎಕ್ಸ್ʼ ಪೋಸ್ಟ್ನಲ್ಲಿ ಹೀಗೆ ಹೇಳಿದ್ದಾರೆ: “ಬಡವರ ಕಲ್ಯಾಣಕ್ಕೆ ಸಮರ್ಪಿತವಾದ ಸಹಾನುಭೂತಿಯುಳ್ಳ ಸರ್ಕಾರ! ಕಳೆದ ದಶಕದಲ್ಲಿ, ಎನ್ಡಿಎ ಸರ್ಕಾರವು ಹಲವಾರು ಜನರನ್ನು ಬಡತನದ ಹಿಡಿತದಿಂದ ಮೇಲೆತ್ತಲು ಹೊಸ ಉಪಕ್ರಮಗಳನ್ನು ಕೈಗೊಂಡಿದೆ. ಸಬಲೀಕರಣ, ಮೂಲಸೌಕರ್ಯ ಮತ್ತು ಒಳಗೊಳ್ಳುವಿಕೆಯ ಮೇಲೆ ಗಮನ ಕೇಂದ್ರೀಕರಿಸಿದೆ. ನಮ್ಮ ಎಲ್ಲಾ ಪ್ರಮುಖ ಯೋಜನೆಗಳು ಬಡವರ ಜೀವನವನ್ನು ಪರಿವರ್ತಿಸಿವೆ. ಪಿಎಂ ಆವಾಸ್ ಯೋಜನೆ, ಪಿಎಂ ಉಜ್ವಲ ಯೋಜನೆ, ಜನ್ ಧನ್ ಯೋಜನೆ ಮತ್ತು ʻಆಯುಷ್ಮಾನ್ ಭಾರತ್ʼನಂತಹ ಉಪಕ್ರಮಗಳು ವಸತಿ, ಶುದ್ಧ ಅಡುಗೆ ಇಂಧನ, ಬ್ಯಾಂಕಿಂಗ್ ಮತ್ತು ಆರೋಗ್ಯ ಸೇವೆಗಳ ಲಭ್ಯತೆಯನ್ನು ಹೆಚ್ಚಿಸಿವೆ. ʻಡಿಬಿಟಿʼ, ಡಿಜಿಟಲ್ ಸೇರ್ಪಡೆ ಮತ್ತು ಗ್ರಾಮೀಣ ಮೂಲಸೌಕರ್ಯಗಳಿಗೆ ಒತ್ತು ನೀಡಿರುವುದು ಪಾರದರ್ಶಕತೆ ಮತ್ತು ಪ್ರಯೋಜನಗಳನ್ನು ಕೊನೆಯ ಮೈಲಿವರೆಗೆ ವೇಗವಾಗಿ ತಲುಪಿಸುವುದನ್ನು ಖಾತರಿಪಡಿಸಿದೆ. ಈ ಕಾರಣದಿಂದಾಗಿಯೇ 25 ಕೋಟಿಗೂ ಹೆಚ್ಚು ಜನರು ಬಡತನವನ್ನು ಸೋಲಿಸಿದ್ದಾರೆ. ಪ್ರತಿಯೊಬ್ಬ ನಾಗರಿಕನಿಗೂ ಘನತೆಯಿಂದ ಬದುಕುವ ಅವಕಾಶವಿರುವ ಎಲ್ಲರನ್ನೂ ಒಳಗೊಂಡ ಮತ್ತು ಸ್ವಾವಲಂಬಿ ಭಾರತವನ್ನು ನಿರ್ಮಿಸಲು ಎನ್ಡಿಎ ಬದ್ಧವಾಗಿದೆ. #11YearsOfGaribKalyan” भारत : 1885 से 1950 (इतिहास पर एक दृष्टि) …
Read More »ಜೂನ್ 6 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರಧಾನಮಂತ್ರಿ ಭೇಟಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನ್ 6 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಈ ಪ್ರದೇಶದಲ್ಲಿ ರೈಲು ಮೂಲಸೌಕರ್ಯ ಮತ್ತು ಸಂಪರ್ಕವನ್ನು ಹೆಚ್ಚಿಸುವ ತಮ್ಮ ಬದ್ಧತೆಗೆ ಅನುಗುಣವಾಗಿ, ಪ್ರಧಾನ ಮಂತ್ರಿಗಳು ಬೆಳಿಗ್ಗೆ 11 ಗಂಟೆಗೆ ಚೆನಾಬ್ ಸೇತುವೆಯನ್ನು ಉದ್ಘಾಟಿಸಲಿದ್ದಾರೆ ಮತ್ತು ಸೇತುವೆಯ ಡೆಕ್ಗೆ ಭೇಟಿ ನೀಡಲಿದ್ದಾರೆ. ನಂತರ, ಅವರು ಅಂಜಿ ಸೇತುವೆಗೆ ಭೇಟಿ ನೀಡಿ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಅವರು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ. ಬಳಿಕ, ಅವರು ಕತ್ರಾದಲ್ಲಿ 46,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಲಿದ್ದಾರೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಚೆನಾಬ್ ಮತ್ತು ಅಂಜಿ ರೈಲು ಸೇತುವೆಗಳು ನದಿಯಿಂದ 359 ಮೀಟರ್ ಎತ್ತರದಲ್ಲಿರುವ ವಾಸ್ತುಶಿಲ್ಪದ ಅದ್ಭುತ ಚೆನಾಬ್ ರೈಲು ಸೇತುವೆ ವಿಶ್ವದ ಅತಿ ಎತ್ತರದ ರೈಲ್ವೆ ಕಮಾನು ಸೇತುವೆಯಾಗಿದೆ. ಇದು ಭೂಕಂಪ ಮತ್ತು ಭಾರೀ ಗಾಳಿ ಪರಿಸ್ಥಿತಿಗಳನ್ನು ತಡೆದುಕೊಳ್ಳುವಂತೆ ವಿನ್ಯಾಸಗೊಳಿಸಲಾದ 1,315 ಮೀಟರ್ ಉದ್ದದ ಉಕ್ಕಿನ ಕಮಾನು ಸೇತುವೆಯಾಗಿದೆ. ಈ ಸೇತುವೆಯ ಮುಖ್ಯ ಪ್ರಯೋಜನ ಎಂದರೆ ಅದು ಜಮ್ಮು ಮತ್ತು ಶ್ರೀನಗರ ನಡುವಿನ ಸಂಪರ್ಕವನ್ನು ಹೆಚ್ಚಿಸುತ್ತದೆ. ಸೇತುವೆಯ ಮೇಲೆ ಚಲಿಸುವ ವಂದೇ ಭಾರತ್ ರೈಲು ಮೂಲಕ, ಕತ್ರಾ ಮತ್ತು ಶ್ರೀನಗರ ನಡುವೆ ಪ್ರಯಾಣಿಸಲು ಕೇವಲ 3 ಗಂಟೆ ಸಾಕಾಗುತ್ತದೆ, ಇದು ಚಾಲ್ತಿಯಲ್ಲಿರುವ ಪ್ರಯಾಣದ ಸಮಯವನ್ನು 2-3 ಗಂಟೆಗಳಷ್ಟು ಕಡಿಮೆ ಮಾಡುತ್ತದೆ. ಅಂಜಿ ಸೇತುವೆ ಭಾರತದ ಮೊದಲ ಕೇಬಲ್-ಸ್ಟೇಡ್ (ಗೋಪುರಗಳಿಗೆ ಕೇಬಲ್ ಗಳಿಂದ ಬಿಗಿದು ಕಟ್ಟಿದ) ರೈಲು ಸೇತುವೆಯಾಗಿದ್ದು, ಇದು ಸವಾಲಿನ ಭೂಪ್ರದೇಶದಲ್ಲಿ ರಾಷ್ಟ್ರಕ್ಕೆ ಸೇವೆ ಸಲ್ಲಿಸಲಿದೆ. ಸಂಪರ್ಕ ಯೋಜನೆಗಳು ಮತ್ತು ಇತರ ಅಭಿವೃದ್ಧಿ ಉಪಕ್ರಮಗಳು ಪ್ರಧಾನಮಂತ್ರಿಯವರು ಉಧಮ್ಪುರ-ಶ್ರೀನಗರ-ಬಾರಾಮುಲ್ಲಾ ರೈಲು ಸಂಪರ್ಕ (ಯು.ಎಸ್.ಬಿ.ಆರ್.ಎಲ್.-USBRL) …
Read More »ದೆಹಲಿ ಸರ್ಕಾರದ ಸುಸ್ಥಿರ ಸಾರಿಗೆ ಉಪಕ್ರಮದ ಅಡಿಯಲ್ಲಿ 200 ಎಲೆಕ್ಟ್ರಿಕ್ ಬಸ್ ಗಳಿಗೆ ಹಸಿರು ನಿಶಾನೆ ತೋರಲಿರುವ ಪ್ರಧಾನಮಂತ್ರಿ
ವಿಶ್ವ ಪರಿಸರ ದಿನಾಚರಣೆಯ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಜೂನ್ 5 ರಂದು ಬೆಳಗ್ಗೆ 10:15ಕ್ಕೆ ನವದೆಹಲಿಯ ಭಗವಾನ್ ಮಹಾವೀರ್ ವನಸ್ಥಲಿ ಉದ್ಯಾನವನದಲ್ಲಿ ವಿಶೇಷ ಮರ ನೆಡುವ ಉಪಕ್ರಮದ ನೇತೃತ್ವ ವಹಿಸಲಿದ್ದು, ಪರಿಸರ ನಿರ್ವಹಣೆ ಮತ್ತು ಹಸಿರು ಚಲನಶೀಲತೆಗೆ ಭಾರತದ ಬದ್ಧತೆಯನ್ನು ಪುನರುಚ್ಚರಿಸಲಿದ್ದಾರೆ. ಪ್ರಧಾನಮಂತ್ರಿ ಅವರು ಏಕ್ ಪೆಡ್ ಮಾ ಕೆ ನಾಮ್ ಉಪಕ್ರಮದ ಅಡಿಯಲ್ಲಿ ಆಲದ ಸಸಿಯನ್ನು ನೆಡಲಿದ್ದಾರೆ. ಇದು 700 ಕಿ.ಮೀ ಅರಾವಳಿ …
Read More »ಸೋನಿಯ ವಾಯಿದೆ 3,573 ರೂ. ಮತ್ತು ಬೆಳ್ಳಿಯ ವಾಯಿದೆ 3,928 ರೂ. ಕುಸಿತ: ಕಚ್ಚಾ ತೈಲ ವಾಯಿದೆ 408 ರೂ. ಇಳಿಕೆ
ನೈಸರ್ಗಿಕ ಅನಿಲ ವಾಯಿದೆಯಲ್ಲಿ 27.10 ರೂ. ಏರಿಕೆ: ಹತ್ತಿ-ಕ್ಯಾಂಡಿ ವಾಯಿದೆಯಲ್ಲಿ 1,760 ರೂ. ಕುಸಿತ: ಮೆಂಥಾ ತೈಲದಲ್ಲಿ 6.50 ರೂ. ಮೃದುತೆ: ಲೋಹಗಳ ವಾಯಿದೆಗಳಲ್ಲಿ ಎಲ್ಲೆಡೆ ಕುಸಿತ: ಸರಕು ವಾಯಿದೆಗಳಲ್ಲಿ 188,600 ಕೋಟಿ ರೂ. ಮತ್ತು ಸರಕು ಆಯ್ಕೆಗಳಲ್ಲಿ 1,402,398 ಕೋಟಿ ರೂ. ವಹಿವಾಟು ದಾಖಲು: ಸೋನ-ಬೆಳ್ಳಿಯ ವಾಯಿದೆಗಳಲ್ಲಿ 147,636 ಕೋಟಿ ರೂ. ವ್ಯಾಪಾರ: ಬುಲಿಯನ್ ಸೂಚ್ಯಂಕ ಬುಲ್ಡೆಕ್ಸ್ ಫ್ಯೂಚರ್ಸ್ 21,323 ಅಂಕಗಳ ಮಟ್ಟದಲ್ಲಿ ಮುಂಬೈ: ದೇಶದ ಪ್ರಮುಖ ಸರಕು …
Read More »
Matribhumi Samachar Kannad