Tuesday, January 20 2026 | 01:14:00 AM
Breaking News

ಅಹಮದಾಬಾದ್ ವಿಮಾನ ದುರಂತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

ಅಹಮದಾಬಾದ್‌ನಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಅನೇಕರು ಮೃತಪಟ್ಟಿದ್ದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳ ನೋವು ಮತ್ತು ನಷ್ಟದ ಅರಿವಿದೆ ಎಂದು ಅವರು ಸಂತಾಪ ಸೂಚಿಸಿದ್ದಾರೆ. ಇದಕ್ಕೂ ಮುನ್ನ ಶ್ರೀ ಮೋದಿ ಅವರು ಅಹಮದಾಬಾದ್‌ನಲ್ಲಿ ಅವಘಡದ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ನೇರವಾಗಿ ಪರಾಮರ್ಶಿಸಿದರು. ದುರಂತದ ನಂತರ ಅವಿಶ್ರಾಂತವಾಗಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ತುರ್ತು ಪ್ರತಿಕ್ರಿಯಾ ತಂಡಗಳನ್ನು ಅವರು ಭೇಟಿ ಮಾಡಿದರು. …

Read More »

ಅಹಮದಾಬಾದ್ ದುರಂತದ ಬಗ್ಗೆ ಪ್ರಧಾನಮಂತ್ರಿ ದುಃಖ ವ್ಯಕ್ತಪಡಿಸಿದ್ದಾರೆ, ತ್ವರಿತ ಮತ್ತು ಪರಿಣಾಮಕಾರಿ ನೆರವಿನ ಭರವಸೆ ನೀಡಿದ್ದಾರೆ

ಅಹಮದಾಬಾದ್ ನಲ್ಲಿ ಇಂದು ಸಂಭವಿಸಿದ ದುರಂತದ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ಮತ್ತು ಆಘಾತ ವ್ಯಕ್ತಪಡಿಸಿದ್ದಾರೆ. ಈ ದುರಂತವು ಇಡೀ ರಾಷ್ಟ್ರವನ್ನು ದಿಗ್ಭ್ರಮೆಗೊಳಿಸಿದೆ ಮತ್ತು ದುಃಖಕ್ಕೆ ತಳ್ಳಿದೆ ಮತ್ತು ಇದು ಪದಗಳಲ್ಲಿ ಹೇಳಲಾಗದಷ್ಟು ಹೃದಯವಿದ್ರಾವಕವಾಗಿದೆ ಎಂದು ಅವರು ಹೇಳಿದ್ದಾರೆ. ಸಂತ್ರಸ್ತರಿಗೆ ತ್ವರಿತ ಮತ್ತು ಪರಿಣಾಮಕಾರಿ ಸಹಾಯವನ್ನು ಖಚಿತಪಡಿಸಿಕೊಳ್ಳಲು ಸಚಿವರು ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಶ್ರೀ ಮೋದಿ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ …

Read More »

ದೇಶದಲ್ಲಿ ಸ್ವಾವಲಂಬನೆ ಬಲಗೊಳಿಸುವಲ್ಲಿ ಭಾರತದ ಯುವಶಕ್ತಿ ನೇತೃತ್ವದ ತಂತ್ರಜ್ಞಾನ ನಾವಿನ್ಯತೆಗೆ ಪ್ರಧಾನಮಂತ್ರಿ ಮೆಚ್ಚುಗೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಂತ್ರಜ್ಞಾನವನ್ನು ಮುಂದುವರಿಸುವಲ್ಲಿ ಮತ್ತು ದೇಶದ ಸ್ವಾವಲಂಬನೆಯನ್ನು ಮುನ್ನಡೆಸುವಲ್ಲಿ ಭಾರತದ ಯುವ ನಾವಿನ್ಯಕಾರರ ಪ್ರಮುಖ ಪಾತ್ರವನ್ನು ಶ್ಲಾಘಿಸಿದ್ದಾರೆ. ಕಳೆದ 11 ವರ್ಷಗಳಲ್ಲಿ, ಡಿಜಿಟಲ್ ಇಂಡಿಯಾ ಉಪಕ್ರಮವು  ನಾವಿನ್ಯತೆಯ ಸಮರ್ಪಕ ಬಳಕೆಯ ಮೂಲಕ ಯುವಜನರನ್ನು ಸಬಲಗೊಳಿಸುತ್ತಾ ಜಾಗತಿಕ ತಂತ್ರಜ್ಞಾನ ಶಕ್ತಿ ಕೇಂದ್ರವಾಗಿ ಭಾರತದ ಸ್ಥಾನವನ್ನು ಬಲಪಡಿಸಿದೆ. ಕಳೆದ 11 ವರ್ಷಗಳಲ್ಲಿ ತಂತ್ರಜ್ಞಾನದ ಶಕ್ತಿಯ ಸಮರ್ಪಕ ಬಳಕೆಯಿಂದಾಗಿ ಭಾರತದ ಜನರಿಗೆ ಅಸಂಖ್ಯಾತ ಅನುಕೂಲಗಳುಂಟಾಗಿದೆ ಎಂದು ಶ್ರೀ ಮೋದಿ …

Read More »

ಇಲೇಕ್ಟ್ರಿಸಿಟೀ ಡೇರಿವೇಟಿವ್ಝ ಪ್ರಾರಂಭಿಸಲು ಎಂಸಿಎಕ್ಸ್ ಗೆ ಸೆಬಿ ಅನುಮೋದನೆ

ಭಾರತದ ಇಂಧನ ಮಾರುಕಟ್ಟೆಯ ವಿಕಾಸದಲ್ಲಿ ಒಂದು ಪ್ರಮುಖ ಮೈಲಿಗಲ್ಲು ಮುಂಬೈ: ಭಾರತದ ಪ್ರಮುಖ ಸರಕು ಉತ್ಪನ್ನಗಳ ವಿನಿಮಯ ಕೇಂದ್ರವಾದ ಮಲ್ಟಿ ಕಮಾಡಿಟಿ ಎಕ್ಸ್ಚೇಂಜ್ ಆಫ್ ಇಂಡಿಯಾ ಲಿಮಿಟೆಡ್ (ಎಂಸಿಎಕ್ಸ್), ಭಾರತದ ಇಂಧನ ವ್ಯಾಪಾರ ಕ್ಷೇತ್ರದ ವಿಕಾಸದಲ್ಲಿ ಒಂದು ಪ್ರಮುಖ ಮೈಲಿಗಲ್ಲನ್ನು ಗುರುತಿಸುವ ಇಲೇಕ್ಟ್ರಿಸಿಟೀ ಡೇರಿವೇಟಿವ್ಝ ಪ್ರಾರಂಭಿಸಲು ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ನಿಂದ ಅನುಮೋದನೆ ಪಡೆದಿದೆ. ಈ ಬೆಳವಣಿಗೆಯು ನಿಯಂತ್ರಕರಾದ ಸೆಬಿ ಮತ್ತು ಕೇಂದ್ರ ವಿದ್ಯುತ್ …

Read More »

ಭಾರತವು ವಿಶ್ವದ ಆಹಾರ ಬುಟ್ಟಿಯಾಗಲಿದೆ: ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್

ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಭಾರತವನ್ನು ವಿಶ್ವದ ಆಹಾರ ಬುಟ್ಟಿಯಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಘೋಷಿಸಿದ್ದಾರೆ. ದೇಶದ 145 ಕೋಟಿ ನಾಗರಿಕರಿಗೆ ಆಹಾರವನ್ನು ನೀಡುವುದರ ಜೊತೆಗೆ, ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳು, ಕೃಷಿ ವಿಶ್ವವಿದ್ಯಾಲಯಗಳು, ಕೃಷಿ ವಿಜ್ಞಾನ ಕೇಂದ್ರಗಳು (ಕೆವಿಕೆಗಳು), ರೈತರು ಮತ್ತು ವಿಜ್ಞಾನಿಗಳೊಂದಿಗೆ ಸಹಯೋಗದೊಂದಿಗೆ ಈ ಗುರಿಯನ್ನು ಸಾಧಿಸಲು ಸಮಗ್ರ ಮಾರ್ಗಸೂಚಿಯನ್ನು ರೂಪಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಬೆಂಗಳೂರಿನ ಐಸಿಎಆರ್-ಐಐಎಚ್‌ಆರ್ ಆವರಣದಲ್ಲಿ ಇಂದು ರೈತರನ್ನು ಉದ್ದೇಶಿಸಿ ಮಾತನಾಡಿದ ಸಚಿವರು, 2047ರ ವೇಳೆಗೆ ವಿಕಸಿತ ಭಾರತ (ಅಭಿವೃದ್ಧಿ ಹೊಂದಿದ ಭಾರತ) ಎಂಬ ಪ್ರಧಾನಮಂತ್ರಿಯವರ ದೃಷ್ಟಿಕೋನಕ್ಕೆ ಅನುಗುಣವಾಗಿ ಈ ಉಪಕ್ರಮವನ್ನು ರೂಪಿಸಲಾಗಿದೆ ಎಂದು ಸ್ಪಷ್ಟಪಡಿಸಿದರು. ಈ ಅಭಿಯಾನದ ಧ್ಯೇಯವಾಕ್ಯ “ವಿಕಸಿತ ಕೃಷಿ ಭಾರತ”. ಈ ಕಾರ್ಯಕ್ರಮದ ಭಾಗವಾಗಿ, “ಪ್ರಯೋಗಾಲಯದಿಂದ ಭೂಮಿಗೆ” ಉಪಕ್ರಮವನ್ನು ಪ್ರಾರಂಭಿಸಲಾಗಿದ್ದು, ವೈಜ್ಞಾನಿಕ ಜ್ಞಾನ ಮತ್ತು ಬೆಂಬಲವನ್ನು ಒದಗಿಸಲು ದೇಶಾದ್ಯಂತ 16,000 ಕ್ಕೂ ಹೆಚ್ಚು ವಿಜ್ಞಾನಿಗಳು ರೈತರೊಂದಿಗೆ  ತೊಡಗಿಸಿಕೊಂಡಿದ್ದಾರೆ. ಕಳೆದ ಹತ್ತು ದಿನಗಳಲ್ಲಿ, 1,896 ತಂಡಗಳು 8,188 ಹಳ್ಳಿಗಳಲ್ಲಿ ಸುಮಾರು 9 ಲಕ್ಷ ರೈತರೊಂದಿಗೆ ಸಂವಾದ ನಡೆಸಿವೆ. ಕರ್ನಾಟಕದಲ್ಲಿಯೇ, ಕೃಷಿ ಮತ್ತು ಸಂಬಂಧಿತ ಇಲಾಖೆಗಳ ವಿಜ್ಞಾನಿಗಳು ಮತ್ತು ಅಧಿಕಾರಿಗಳನ್ನು ಒಳಗೊಂಡ 70ಕ್ಕೂ ಹೆಚ್ಚು ಅಂತರಶಿಸ್ತೀಯ ತಂಡಗಳು ಪ್ರತಿದಿನ ತೋಟಗಳಿಗೆ ಭೇಟಿ ನೀಡುತ್ತಿವೆ. ಅವಶ್ಯಕತೆ ಆಧಾರಿತ, ಸಮಸ್ಯೆ ಆಧಾರಿತ ಕೃಷಿ ಸಂಶೋಧನಾ ಕಾರ್ಯಕ್ರಮಗಳನ್ನು ರೂಪಿಸಲು ಈ ತಂಡಗಳು ರೈತರಿಂದ ನೇರವಾಗಿ ಹಿಮ್ಮಾಹಿತಿಯನ್ನು ಪಡೆದುಕೊಂಡು ದಾಖಲಿಸುತ್ತಿವೆ. ಇಲ್ಲಿಯವರೆಗೆ, 639 ತಂಡಗಳು 2,495 ಹಳ್ಳಿಗಳಿಗೆ ಭೇಟಿ ನೀಡಿ, 2,77,264 ರೈತರೊಂದಿಗೆ ತೊಡಗಿಸಿಕೊಂಡಿವೆ. “ಒಂದು ರಾಷ್ಟ್ರ, ಒಂದು ಕೃಷಿ, ಒಂದು ತಂಡ” ಎಂಬ ಪರಿಕಲ್ಪನೆಯನ್ನು ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಹೊಂದಿದೆ ಎಂದು ಶ್ರೀ ಚೌಹಾಣ್ ಹೇಳಿದರು. ರೈತರು ತಮ್ಮ ಉತ್ಪನ್ನಗಳಿಗೆ ನ್ಯಾಯಯುತ ಬೆಲೆಯನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು, ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ (ಎಂ.ಐ.ಎಸ್.) ಅಡಿಯಲ್ಲಿ ಕೇಂದ್ರ ಸರ್ಕಾರವು ಸಾರಿಗೆ ವೆಚ್ಚವನ್ನು ಭರಿಸುತ್ತದೆ ಮತ್ತು ಆ ಮೂಲಕ ಮಾರುಕಟ್ಟೆಗಳಿಗೆ ಪ್ರವೇಶವನ್ನು ಬೆಂಬಲಿಸುತ್ತದೆ. …

Read More »

ಹೆಚ್ಚುತ್ತಿರುವ ಸ್ಥೂಲಕಾಯದ ಸಮಸ್ಯೆಯನ್ನು ಕಡಿಮೆ ಮಾಡಲು ದೇಶಾದ್ಯಂತ ಉಪಕ್ರಮಕ್ಕೆ ಕೇಂದ್ರ ಆರೋಗ್ಯ ಸಚಿವರಾದ​​​​​​​ ಶ್ರೀ ಜೆ.ಪಿ. ನಡ್ಡಾ ಚಾಲನೆ

ಆರೋಗ್ಯಕರ ಸಮಾಜವು ಬಲವಾದ ಮತ್ತು ಅಭಿವೃದ್ಧಿ ಹೊಂದಿದ ರಾಷ್ಟ್ರದ ಅಡಿಪಾಯ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ಜೆ.ಪಿ. ನಡ್ಡಾ ಒತ್ತಿ ಹೇಳಿದ್ದಾರೆ. ಬೆಂಗಳೂರಿನ ನಿಮ್ಹಾನ್ಸ್‌ನಲ್ಲಿ ಇಂದು ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ಆಯೋಜಿಸಿದ್ದ ವಿಶ್ವ ಆಹಾರ ಸುರಕ್ಷತಾ ದಿನದ ಕಾರ್ಯಕ್ರಮದಲ್ಲಿ  ದಿಕ್ಸೂಚಿ ಭಾಷಣ ಮಾಡಿದ ಸಚಿವರು, ತೈಲದಲ್ಲಿ ಕರಿದ ಆಹಾರಗಳ  ಸೇವನೆಯನ್ನು ಶೇಕಡಾ 10 ರಷ್ಟು ಕಡಿಮೆ ಮಾಡಲು ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಯವರು ನೀಡಿರುವ  ಕರೆಯನ್ನು ನೆನಪಿಸಿಕೊಂಡರು. ಎಚ್ಚರಿಕೆಯಿಂದ ತಿನ್ನುವ ಪ್ರಾಮುಖ್ಯತೆಯನ್ನು ಎತ್ತಿ ತೋರಿಸಿದ ಶ್ರೀ ನಡ್ಡಾ, ಜನರು ತಮ್ಮ ಕ್ಯಾಲೋರಿ ಸೇವನೆಯ ಪ್ರಮಾಣವನ್ನು ಮೇಲ್ವಿಚಾರಣೆ ಮಾಡಲು ಮತ್ತು ಸಮತೋಲಿತ ಆಹಾರ ಸೇವನೆಯ ಪದ್ಧತಿಯನ್ನು ಕಾಪಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.  ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್)ಯ ಇತ್ತೀಚಿನ ಅಧ್ಯಯನವನ್ನು ಉಲ್ಲೇಖಿಸಿದ ಅವರು, ಇದು 2008 ಮತ್ತು 2020ರ ನಡುವೆ ಭಾರತದಲ್ಲಿ ಬೊಜ್ಜು ಪ್ರಮಾಣವು ನಗರ ಪ್ರದೇಶಗಳಲ್ಲಿ 39.6% ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 23.1%ಕ್ಕೆ ಏರಿದೆ ಎಂಬುದನ್ನು ಬಹಿರಂಗಪಡಿಸಿದೆ. ಈಗಲೇ ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ, 2050ರ ವೇಳೆಗೆ ಭಾರತದ ಜನಸಂಖ್ಯೆಯ ಮೂರನೇ ಒಂದು ಭಾಗದಷ್ಟು ಜನರು ಬೊಜ್ಜು ಸಮಸ್ಯೆ ಎದುರಿಸುವ  ಸಾಧ್ಯತೆ ಇದೆ ಎಂದು ಎಚ್ಚರಿಸಿದರು. ಜಾಗೃತಿ ಅಭಿಯಾನದ ಭಾಗವಾಗಿ, ಸಚಿವರು “ಈಟ್ ರೈಟ್ ಆಕ್ಟಿವಿಟಿ ಪುಸ್ತಕ”ವನ್ನು ಬಿಡುಗಡೆ ಮಾಡಿದರು, ಇದನ್ನು ಶಿಕ್ಷಣ ಇಲಾಖೆಯ ಮೂಲಕ ಶಾಲಾ ಮಕ್ಕಳಿಗೆ ಮತ್ತು ರೈಲ್ವೆ ಮಂಡಳಿಯಿಂದ ಪ್ರಯಾಣಿಕರಿಗೆ ವಿತರಿಸಲಾಗುವುದು. ಶ್ರೀ ನಡ್ಡಾ ಅವರು ನವೀನ ವರ್ತನೆ ಬದಲಾವಣೆ ತಂತ್ರವನ್ನು ಅಂದರೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಆಶ್ರಯದಲ್ಲಿ ಎಫ್‌ಎಸ್‌ಎಸ್‌ಎಐ ಅಭಿವೃದ್ಧಿಪಡಿಸಿದ ಶಾಲೆಗಳು, ಕೆಲಸದ ಸ್ಥಳಗಳು ಮತ್ತು ಸಾರ್ವಜನಿಕ ಸಂಸ್ಥೆಗಳಲ್ಲಿ ಸಕ್ಕರೆ ಮತ್ತು ತೈಲ ಬೋರ್ಡ್ ಗಳ  ವ್ಯಾಪಕ ಪ್ರಚಾರವನ್ನು ಶ್ಲಾಘಿಸಿದರು, ಇದು ಪ್ರಬಲ ದೃಶ್ಯ ಪ್ರಚಾರ ಸಾಧನವಾಗಿ  ಕಾರ್ಯನಿರ್ವಹಿಸುತ್ತದೆ, ದೈನಂದಿನ ಆಹಾರ ಪದಾರ್ಥಗಳಲ್ಲಿ ಅಡಗಿರುವ ಸಕ್ಕರೆ ಮತ್ತು ಕೊಬ್ಬಿನ ಬಗ್ಗೆ ಸ್ಪಷ್ಟ, ಸಂಬಂಧಿತ ಮಾಹಿತಿಯನ್ನು ಪ್ರದರ್ಶಿಸುತ್ತದೆ. ಎನ್‌ಸಿಇಆರ್‌ಟಿ ಶಾಲಾ ಪಠ್ಯಕ್ರಮದಲ್ಲಿ ಆರೋಗ್ಯಕರ ಆಹಾರ ಪದ್ಧತಿಯನ್ನು ಒಂದು …

Read More »

ಬೆಂಗಳೂರಿನ ಐಸಿಎಆರ್-ಐಐಎಚ್ಆರ್ (ICAR-IIHR) ನಲ್ಲಿ – ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ

ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR), ಭಾರತ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ, ಮೇ 29 ರಿಂದ ಜೂನ್ 12, 2025 ರವರೆಗೆ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’ ಎಂಬ ರಾಷ್ಟ್ರವ್ಯಾಪಿ ಬೃಹತ್ ಮುಂಗಾರು ಪೂರ್ವ ಅಭಿಯಾನವನ್ನು ಪ್ರಾರಂಭಿಸಿದೆ. ಐಸಿಎಆರ್ ಸಂಸ್ಥೆಗಳು, ಕೃಷಿ ವಿಶ್ವವಿದ್ಯಾಲಯಗಳು, ಕೆವಿಕೆಗಳು ಮತ್ತು ರಾಜ್ಯ ಸರ್ಕಾರದ ಇಲಾಖೆಗಳನ್ನು ಒಳಗೊಂಡ ಒಮ್ಮುಖ ಕ್ರಮದಲ್ಲಿ ಇದು ನಡೆಯುತ್ತಿದೆ. ಕಳೆದ ಹತ್ತು ದಿನಗಳಲ್ಲಿ ದೇಶದಾದ್ಯಂತ 1896 …

Read More »

ತೀವ್ರ ಶಾಖದ ಅಪಾಯಗಳನ್ನು ಪರಿಹರಿಸಲು ಗಡಿಯಾಚೆಗಿನ ಸಹಕಾರಕ್ಕೆ ಡಾ. ಪಿ.ಕೆ. ಮಿಶ್ರಾ ಕರೆ

ಪ್ರಧಾನಮಂತ್ರಿ ಅವರ ಪ್ರಧಾನ ಕಾರ್ಯದರ್ಶಿ ಡಾ. ಪಿ.ಕೆ. ಮಿಶ್ರಾ ಅವರು, ತೀವ್ರ ಶಾಖವನ್ನು ಜಾಗತಿಕ ಬಿಕ್ಕಟ್ಟಾಗಿ ಎದುರಿಸುವ ತುರ್ತು ಅಗತ್ಯವನ್ನು ಒತ್ತಿಹೇಳಿದ್ದಾರೆ, ಇದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಯವರ ಕರೆಯನ್ನು ಪ್ರತಿಧ್ವನಿಸಿದೆ. ಜಿನೀವಾದಲ್ಲಿ ನಿನ್ನೆ (2025ರ ಜೂನ್ 06) ನಡೆದ ತೀವ್ರ ಶಾಖ ಅಪಾಯ ಆಡಳಿತ ಕುರಿತ ವಿಶೇಷ ಅಧಿವೇಶನದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಅವರು, ಹೆಚ್ಚುತ್ತಿರುವ ತಾಪಮಾನವು ಸಾರ್ವಜನಿಕ ಆರೋಗ್ಯ, ಆರ್ಥಿಕ ಸ್ಥಿರತೆ ಮತ್ತು ಪರಿಸರ ಸ್ಥಿತಿಸ್ಥಾಪಕತ್ವಕ್ಕೆ ವ್ಯವಸ್ಥಿತ ಅಪಾಯವನ್ನುಂಟುಮಾಡುತ್ತದೆ …

Read More »

ವಿಪತ್ತು ಸ್ಥಿತಿಸ್ಥಾಪಕತ್ವವನ್ನು ಬಲಪಡಿಸಲು 5 ಪ್ರಮುಖ ಜಾಗತಿಕ ಆದ್ಯತೆಗಳನ್ನು ಪ್ರಧಾನಮಂತ್ರಿ ವಿವರಿಸಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೊ ಕಾನ್ಫರೆನ್ಸ್ ಮೂಲಕ ವಿಪತ್ತು ಸ್ಥಿತಿಸ್ಥಾಪಕ ಮೂಲಸೌಕರ್ಯ 2025ರ ಅಂತಾರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಭಾಷಣ ಮಾಡಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಯುರೋಪ್ ನಲ್ಲಿ ಮೊಟ್ಟಮೊದಲ ಬಾರಿಗೆ ಆತಿಥ್ಯ ವಹಿಸಿರುವ ವಿಪತ್ತು ಸ್ಥಿತಿಸ್ಥಾಪಕ ಮೂಲಸೌಕರ್ಯ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನ 2025ಕ್ಕೆ ಭಾಗವಹಿಸುವವರನ್ನು ಸ್ವಾಗತಿಸಿದರು. ಈ ಕಾರ್ಯಕ್ರಮವನ್ನು ಆಯೋಜಿಸಲು ಬೆಂಬಲ ನೀಡಿದ ಫ್ರಾನ್ಸ್ ಅಧ್ಯಕ್ಷ ಗೌರವಾನ್ವಿತ ಶ್ರೀ ಎಮ್ಯಾನುಯೆಲ್ ಮ್ಯಾಕ್ರೋನ್ ಮತ್ತು ಫ್ರಾನ್ಸ್ ಸರ್ಕಾರಕ್ಕೆ …

Read More »

ಜೂನ್ 07, 2025 ರಂದು ನಿಮ್ಹಾನ್ಸ್ ನಲ್ಲಿ ನಡೆಯಲಿರುವ FSSAI ಕಾರ್ಯಕ್ರಮದಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ಜಗತ್ ಪ್ರಕಾಶ್ ನಡ್ಡಾ ಭಾಗವಹಿಸಲಿದ್ದಾರೆ

ವಿಶ್ವ ಆಹಾರ ಸುರಕ್ಷತಾ ದಿನ 2025 ರ ಆಚರಣೆಯ ಪ್ರಯುಕ್ತ, ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು (FSSAI), ‘ಸುರಕ್ಷಿತ ಮತ್ತು ಆರೋಗ್ಯಕರ ಆಹಾರ ಸೇವಿಸಿ, ಸ್ಥೂಲಕಾಯ ತಡೆಯಿರಿ’ ಎಂಬ ವಿಷಯದ ಮೇಲೆ ದಿನಾಂಕ 07 ಜೂನ್ 2025 ರಂದು ಬೆಂಗಳೂರಿನ ನಿಮ್ಹಾನ್ಸ್ ನಲ್ಲಿ (NIMHANS) ಒಂದು ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಸ್ಥೂಲಕಾಯ ಮತ್ತು ಸಾಂಕ್ರಾಮಿಕವಲ್ಲದ ರೋಗಗಳ ಹೆಚ್ಚುತ್ತಿರುವ ಸಮಸ್ಯೆಯನ್ನು, ನಮ್ಮ ಸಾಂಪ್ರದಾಯಿಕ, ಸುರಕ್ಷಿತ ಮತ್ತು ಸಂಪೂರ್ಣ ಪೌಷ್ಟಿಕ ಆಹಾರ …

Read More »