Friday, April 03 2026 | 05:18:54 PM
Breaking News

ಭಾರತದ ಪ್ರಧಾನಮಂತ್ರಿ ಮತ್ತು ಫ್ರಾನ್ಸ್ ಅಧ್ಯಕ್ಷರು ಜಂಟಿಯಾಗಿ ಐಟಿಇಆರ್ ಘಟಕಕ್ಕೆ ಭೇಟಿ ನೀಡಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷರಾದ ಘನತೆವೆತ್ತ ಶ್ರೀ ಎಮ್ಯಾನುಯೆಲ್ ಮ್ಯಾಕ್ರೋನ್ ಅವರು ಇಂದು ಜಂಟಿಯಾಗಿ ಕ್ಯಾಡರಾಚೆಯಲ್ಲಿರುವ ಅಂತಾರಾಷ್ಟ್ರೀಯ ಥರ್ಮೋನ್ಯೂಕ್ಲಿಯರ್ ಪ್ರಾಯೋಗಿಕ ರಿಯಾಕ್ಟರ್ ಗೆ (ಐಟಿಇಆರ್) ಭೇಟಿ ನೀಡಿದ್ದಾರೆ. ನಾಯಕರನ್ನು ಐಟಿಇಆರ್ ಮಹಾನಿರ್ದೇಶಕರು ಸ್ವಾಗತಿಸಿದರು. ಈ ಭೇಟಿಯು ವಿಶಿಷ್ಟವಾಗಿದ್ದು, ವಿಶ್ವದ ಅತ್ಯಂತ ಮಹತ್ವಾಕಾಂಕ್ಷೆಯ ಸಮ್ಮಿಳನ ಇಂಧನ ಯೋಜನೆಗಳಲ್ಲಿ ಒಂದಾದ ಐಟಿಇಆರ್ ಗೆ ಯಾವುದೇ ರಾಷ್ಟ್ರದ ಮುಖ್ಯಸ್ಥರು ಅಥವಾ ಸರ್ಕಾರದ ಮುಖ್ಯಸ್ಥರ ಮೊದಲ ಭೇಟಿಯಾಗಿದೆ. ಭೇಟಿಯ ಸಮಯದಲ್ಲಿ, ವಿಶ್ವದ …

Read More »

ಉತ್ತಮ ಕೌಶಲ್ಯ ಅಭಿವೃದ್ಧಿ ಪರಿಸರ ವ್ಯವಸ್ಥೆ ಭಾರತದ ಯುವಜನರನ್ನು ಉದಯೋನ್ಮುಖ ಉದ್ಯೋಗಾವಕಾಶಗಳಿಗೆ ಸಜ್ಜುಗೊಳಿಸುತ್ತದೆ – ಶ್ರೀ ಜಯಂತ್ ಚೌಧರಿ

ಕೌಶಲ್ಯ ಅಭಿವೃದ್ಧಿಗಾಗಿ ಸಮಗ್ರ ಮತ್ತು ಸುರಕ್ಷಿತ ಮೂಲಸೌಕರ್ಯವನ್ನು ಬೆಳೆಸುವ ಮಹತ್ವದ ಹೆಜ್ಜೆಯಾಗಿ, ಕೇಂದ್ರ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ರಾಜ್ಯ ಸಚಿವರಾದ (ಸ್ವತಂತ್ರ ನಿರ್ವಹಣೆ) ಶ್ರೀ ಜಯಂತ್ ಚೌಧರಿ ಅವರು ಇಂದು ಬೆಂಗಳೂರಿನ ರಾಷ್ಟ್ರೀಯ ಕೌಶಲ್ಯ ತರಬೇತಿ ಸಂಸ್ಥೆ (ಎನ್.ಎಸ್.ಟ.ಐ.) (ಸಾಮಾನ್ಯ) ಯಲ್ಲಿ ಹೊಸದಾಗಿ ನಿರ್ಮಿಸಲಾದ ವಸತಿಗೃಹವನ್ನು ಉದ್ಘಾಟಿಸಿದರು. ಈ ಸೌಲಭ್ಯವು ತರಬೇತಿ ಪಡೆಯುವವರಿಗೆ ಸುರಕ್ಷಿತ ಮತ್ತು ಆರಾಮದಾಯಕವಾದ ವಸತಿ ವಾತಾವರಣವನ್ನು ಒದಗಿಸುವ ಗುರಿಯನ್ನು ಹೊಂದಿದೆ ಮತ್ತು ಯುವಕರನ್ನು ಸಬಲೀಕರಣಗೊಳಿಸುವ …

Read More »

ವೇವ್ಸ್ 2025 “ರೀಲ್ ಮೇಕಿಂಗ್” ಚಾಲೆಂಜ್

ಪರಿಚಯ ವೇವ್ಸ್ 2025 “ರೀಲ್ ಮೇಕಿಂಗ್” ಚಾಲೆಂಜ್ ಒಂದು ಅನನ್ಯ ಸ್ಪರ್ಧೆಯಾಗಿದ್ದು, ಇದು ರಚನೆಕಾರರು ಮತ್ತು ಉತ್ಸಾಹಿಗಳಿಗೆ ಮೆಟಾ ಉಪಕರಣಗಳನ್ನು ಬಳಸಿಕೊಂಡು 30-90 ಸೆಕೆಂಡುಗಳಲ್ಲಿ ಫಿಲ್ಮ್ ಫಾರ್ಮ್ಯಾಟ್ ಮೂಲಕ ತಮ್ಮ ಕಥೆ ಹೇಳುವ ಕೌಶಲ್ಯವನ್ನು ಪ್ರದರ್ಶಿಸಲು ಅವಕಾಶ ನೀಡುತ್ತದೆ. ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಸಹಭಾಗಿತ್ವದಲ್ಲಿ ಭಾರತದ ಇಂಟೆರ್ ನೆಟ್ ಮತ್ತು ಮೊಬೈಲ್ ಅಸೋಸಿಯೇಷನ್ ಆಯೋಜಿಸಿರುವ ಈ ಸವಾಲಿಗೆ ಅಗಾಧ ಪ್ರತಿಕ್ರಿಯೆ ವ್ಯಕ್ತವಾಗಿದೆ. ಫೆಬ್ರವರಿ 5, 2025 ರವರೆಗೆ ಭಾರತ …

Read More »

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ನವದೆಹಲಿಯಲ್ಲಿ ‘ಸೈಬರ್ ಭದ್ರತೆ ಮತ್ತು ಸೈಬರ್ ಅಪರಾಧ’ ಕುರಿತು ಗೃಹ ಸಚಿವಾಲಯದ ಸಂಸದೀಯ ಸಲಹಾ ಸಮಿತಿಯ ಅಧ್ಯಕ್ಷತೆ ವಹಿಸಿದ್ದರು

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ನವದೆಹಲಿಯಲ್ಲಿ ‘ಸೈಬರ್ ಭದ್ರತೆ ಮತ್ತು ಸೈಬರ್ ಅಪರಾಧ’ ವಿಷಯದ ಕುರಿತು ಗೃಹ ಸಚಿವಾಲಯದ ಸಂಸದೀಯ ಸಲಹಾ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಶ್ರೀ ನಿತ್ಯಾನಂದ ರೈ, ಶ್ರೀ ಬಂಡಿ ಸಂಜಯ್ ಕುಮಾರ್, ಸಮಿತಿಯ ಸದಸ್ಯರು, ಕೇಂದ್ರ ಗೃಹ ಕಾರ್ಯದರ್ಶಿ ಮತ್ತು ಗೃಹ ಸಚಿವಾಲಯದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಸಭೆಯಲ್ಲಿ …

Read More »

ಭಾರತ ಇಂಧನ ಸಪ್ತಾಹ 2025ರಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಹೇಳಿಕೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಸಂದೇಶದ ಮೂಲಕ ಭಾರತ ಇಂಧನ ಸಪ್ತಾಹ 2025 ಉದ್ದೇಶಿಸಿ ಮಾತನಾಡಿದರು. ಯಶೋಭೂಮಿಯಲ್ಲಿ ಸೇರಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ಇಂದು ಇಲ್ಲಿ ಭಾಗವಹಿಸಿರುವವರು ಇಂಧನ ಸಪ್ತಾಹದ ಭಾಗ ಮಾತ್ರವಲ್ಲ, ಭಾರತದ ಇಂಧನ ಮಹತ್ವಾಕಾಂಕ್ಷೆಗಳಿಗೂ ಅವಿಭಾಜ್ಯ ಅಂಗ ಎಂದು ಒತ್ತಿ ಹೇಳಿದರು. ವಿದೇಶಗಳಿಂದ ಬಂದ ಗಣ್ಯ ಅತಿಥಿಗಳು ಸೇರಿ ಭಾಗವಹಿಸಿರುವ ಎಲ್ಲರನ್ನೂ ಅವರು ಆತ್ಮೀಯವಾಗಿ ಸ್ವಾಗತಿಸಿದರು ಮತ್ತು ಈ ಕಾರ್ಯಕ್ರಮದಲ್ಲಿ ಅವರ …

Read More »

ತಮಿಳು ನಾಡಿನ ಜನಪ್ರಿಯ ಥೈಪೂಸಂ ಹಬ್ಬದ ಪ್ರಯುಕ್ತ ಪ್ರಧಾನಮಂತ್ರಿ ಶುಭಾಶಯ

ಇಂದು ತಮಿಳು ನಾಡಿನಲ್ಲಿ ಹಿಂದೂಗಳು ಆಚರಿಸುವ ಸುಬ್ರಹ್ಮಣ್ಯ ಸ್ವಾಮಿ ಆರಾಧಿಸುವ ಥೈಪೂಸಂ ಹಬ್ಬದ ಪ್ರಯುಕ್ತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶುಭಾಶಯ ತಿಳಿಸಿದರು. “ಮುರುಗನ್ ದೇವರ ದೈವಿಕ ಅನುಗ್ರಹವು ನಮಗೆ ಶಕ್ತಿ, ಸಮೃದ್ಧಿ ಮತ್ತು ಬುದ್ಧಿವಂತಿಕೆಯೊಂದಿಗೆ ಮಾರ್ಗದರ್ಶನ ನೀಡಲಿ. ಈ ಪವಿತ್ರ ಸಂದರ್ಭದಲ್ಲಿ, ಎಲ್ಲರಿಗೂ ಸಂತೋಷ, ಉತ್ತಮ ಆರೋಗ್ಯ ಮತ್ತು ಯಶಸ್ಸನ್ನು ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದು ಶ್ರೀ ಮೋದಿ ಹೇಳಿದರು. ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಪ್ರಧಾನಮಂತ್ರಿಗಳು, …

Read More »

ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಪುಣ್ಯ ತಿಥಿಯಂದು ಪ್ರಧಾನಮಂತ್ರಿಯವರಿಂದ ಗೌರವ ನಮನ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಪುಣ್ಯ ತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. “ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರು ದೂರದೃಷ್ಟಿಯ ಚಿಂತಕರಾಗಿದ್ದು, ಅವರು ಭಾರತದ ಸೇವೆಗೆ ತಮ್ಮನ್ನು ಸಮರ್ಪಿಸಿಕೊಂಡಿದ್ದರು. ಸಮಾಜದ ದೀನ ದಲಿತ ವ್ಯಕ್ತಿಯನ್ನು ಮೇಲಕ್ಕೆತ್ತುವ ಅವರ ಪ್ರಯತ್ನಗಳು ಬಲಿಷ್ಠ ರಾಷ್ಟ್ರದೆಡೆಗಿನ ನಮ್ಮ ಪ್ರಯಾಣಕ್ಕೆ ಸ್ಫೂರ್ತಿ ನೀಡುತ್ತವೆ” ಎಂದು ಶ್ರೀ ಮೋದಿಯವರು ಹೇಳಿದ್ದಾರೆ. ಪ್ರಧಾನಮಂತ್ರಿಯವರು Xನಲ್ಲಿ; “ಪಂಡಿತ್ ದೀನ್ ದಯಾಳ್ ಉಪಾಧ್ಯಾಯ …

Read More »

ಪ್ಯಾರೀಸ್ ನಲ್ಲಿ ನಡೆದ ಎಐ ಕ್ರಿಯಾ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಪ್ರಸ್ತಾವಿಕ ಭಾಷಣ

ಗೌರವಾನ್ವಿತರೇ, ಮಿತ್ರರೇ, ಸಣ್ಣ ಪ್ರಯೋಗದೊಂದಿಗೆ ಆರಂಭಿಸೋಣ. ನೀವು ನಿಮ್ಮ ವೈದ್ಯಕೀಯ ವರದಿಯನ್ನು ಎಐ ಆಪ್‌ ನಲ್ಲಿ ಅಪ್ ಲೋಡ್ ಮಾಡಿದರೆ, ಅದು ಯಾವುದೇ ಗೊಂದಲಗಳಿಲ್ಲದೆ ಅದು ಸರಳ ಭಾಷೆಯಲ್ಲಿ ನಿಮ್ಮ ಆರೋಗ್ಯದ ಬಗ್ಗೆ ವಿವರಿಸುತ್ತದೆ. ಆದರೆ, ನೀವು ಅದೇ ಅಪ್ಲಿಕೇಶನ್ ಅನ್ನು ಎಡಗೈಯಿಂದ ಬರೆಯುವವರ ಚಿತ್ರವನ್ನು ಬರೆಯಲು ಕೇಳಿದರೆ, ಅಪ್ಲಿಕೇಶನ್ ಹೆಚ್ಚಾಗಿ ಬಲಗೈಯಿಂದ ಬರೆಯುವವರನ್ನು ಸೆಳೆಯುತ್ತದೆ. ಏಕೆಂದರೆ ತರಬೇತಿ ಡೇಟಾವು ಅದನ್ನೇ ಮೇಲುಗೈ ಆಗುವಂತೆ ಮಾಡುತ್ತದೆ. ಕೃತಕ ಬುದ್ಧಿಮತ್ತೆಯ (ಎಐ) …

Read More »

ನಡೆಯುತ್ತಿರುವ ಮಹಾಕುಂಭ 2025ರ ಸಮಯದಲ್ಲಿ ಭಕ್ತರು ಬರುವುದನ್ನು ಮತ್ತು ಸುಗಮವಾಗಿ ಹಿಂತಿರುಗುವುದನ್ನು ಖಚಿತಪಡಿಸಿಕೊಳ್ಳಲು ಭಾರತೀಯ ರೈಲ್ವೆ ಯುದ್ಧೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿದೆ

ನಿರಂತರ ಭಾರೀ ಜನದಟ್ಟಣೆಯ ಹೊರತಾಗಿಯೂ, ಭಾರತೀಯ ರೈಲ್ವೆಯು ನಡೆಯುತ್ತಿರುವ ಮಹಾಕುಂಭ ಮೇಳದ ಸಮಯದಲ್ಲಿ ಭಕ್ತರನ್ನು ಕರೆತರುವ ಮೂಲಕ ಮತ್ತು ಅವರ ಮನೆಗೆ ಕರೆದೊಯ್ಯುವ ಮೂಲಕ ಸೇವೆ ಸಲ್ಲಿಸಲು ಯುದ್ಧೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಪ್ರಯಾಗ್ರಾಜ್‌ ಪ್ರದೇಶದ ಎಂಟು ವಿವಿಧ ನಿಲ್ದಾಣಗಳಿಂದ ಸುಮಾರು 330 ರೈಲುಗಳು 12 ಲಕ್ಷ  50 ಸಾವಿರ ಪ್ರಯಾಣಿಕರನ್ನು ತಮ್ಮ ಮನೆಗಳಿಗೆ ಕರೆದೊಯ್ದಿವೆ ಎಂದು ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್‌ ಮಾಧ್ಯಮಗಳ ಮೂಲಕ ರಾಷ್ಟ್ರಕ್ಕೆ ಮಾಹಿತಿ ನೀಡಿದರು. ನೂಕುನುಗ್ಗಲು …

Read More »

ವೇವ್ಸ್ 2025ರಲ್ಲಿ ನಡೆಯುವ ಭಾರತದಲ್ಲಿ ಸೃಜನಶೀಲ ಸವಾಲು ಆವೃತ್ತಿ – 1ರಲ್ಲಿ ಶಿಕ್ಷಣವು ಗೇಮಿಂಗ್ ಅನ್ನು ಎದುರುಗೊಳ್ಳಲಿದೆ

ನಿಮ್ಮ ನಗರದ ಸುಸ್ಥಿರ ಅಭಿವೃದ್ಧಿ ಗುರಿಗಳ (ಎಸ್.ಡಿ.ಜಿ) ಪ್ರಗತಿಯ ಬಗ್ಗೆ ನಿಮಗೆ ಆಳವಾದ ಜ್ಞಾನವಿದ್ದರೆ, ರಾಷ್ಟ್ರೀಯ ವೇದಿಕೆಯಲ್ಲಿ ಗುರುತಿಸಲ್ಪಡುವ ಅವಕಾಶ ಇಲ್ಲಿದೆ. ವಿಶ್ವ ದೃಶ್ಯ ಶ್ರವಣ ಮತ್ತು ಮನೋರಂಜನಾ ಶೃಂಗಸಭೆ (ವೇವ್ಸ್) 2025 ತಮ್ಮ ನಗರದ ಸುಸ್ಥಿರತೆಯ ಪ್ರಯತ್ನಗಳು, ಸವಾಲುಗಳು ಮತ್ತು ಸಾಧನೆಗಳನ್ನು ಅರ್ಥಮಾಡಿಕೊಳ್ಳುವ ವ್ಯಕ್ತಿಗಳಿಗೆ ಒಂದು ಅನನ್ಯ ಅವಕಾಶವನ್ನು ನೀಡುತ್ತದೆ. ‘ಸಿಟಿ ಕ್ವೆಸ್ಟ್: ಶೇಡ್ಸ್ ಆಫ್ ಭಾರತ್’ ಎಂಬ ನವೀನ ಶೈಕ್ಷಣಿಕ ಆಟವು ವೇವ್ಸ್ 2025ರ ಅಡಿಯಲ್ಲಿ ನಡೆಯುತ್ತಿರುವ ‘ಕ್ರಿಯೇಟ್ ಇನ್ ಇಂಡಿಯಾ ಚಾಲೆಂಜ್‌’ನ ಪ್ರಮುಖ ಅಂಶವಾಗಿದೆ. ಈ ಆಕರ್ಷಕ ಆಟವನ್ನು ಸುಸ್ಥಿರ ಅಭಿವೃದ್ಧಿ ಗುರಿಗಳ(ಎಸ್.ಡಿ.ಗಳು)ನ್ನು ಗುರಿಯಾಗಿಸುವ ಮೂಲಕ ನಗರ ಅಭಿವೃದ್ಧಿಯ ಮಾಪನಗಳನ್ನು ಆಟ ಆಡುವ ಮೂಲಕ ಕ್ರಿಯೇಟ್ ಇನ್ ಇಂಡಿಯಾ ಚಾಲೆಂಜ್ ಯುವಕರಿಗೆ ಶಿಕ್ಷಣ ನೀಡಲು ಮತ್ತು ಪ್ರೇರೇಪಿಸಲು ವಿನ್ಯಾಸಗೊಳಿಸಲಾಗಿದೆ. ಇದು ಬಾಲ್ಯದ ಟ್ರಂಪ್ ಕಾರ್ಡ್ ಆಟದ ಸಂತೋಷವನ್ನು ಮೆಲುಕು ಹಾಕುವಾಗ ದೇಶಾದ್ಯಂತ 56 ನಗರಗಳ ಸಾಮರ್ಥ್ಯ ಮತ್ತು ಸವಾಲುಗಳನ್ನು ಸಹ ಪರಿಶೋಧಿಸುತ್ತದೆ. ಈ ವೇದಿಕೆಯು ಸುಸ್ಥಿರ ಭವಿಷ್ಯದತ್ತ ಗಮನಾರ್ಹ ದಾಪುಗಾಲು ಹಾಕುತ್ತಿರುವ ನಗರಗಳನ್ನು ಪ್ರಮುಖವಾಗಿ ಗುರುತಿಸಲು ಸ್ಥಳ ಒದಗಿಸುತ್ತದೆ. ನಗರ ಸುಸ್ಥಿರತೆಯ ಚಾಂಪಿಯನ್ ಆಗಿ ಎದ್ದು ಕಾಣಿರಿ ಮತ್ತು ನಗರದ ಎಸ್.ಡಿ.ಜಿ ಪ್ರಯಾಣದ ಬಗ್ಗೆ ನಿಮ್ಮ ಜ್ಞಾನವನ್ನು ಪ್ರದರ್ಶಿಸಲು ಅವಕಾಶವನ್ನು ಪಡೆಯಿರಿ, ಮೇ 1-4, 2025 ರಂದು ಮುಂಬೈನಲ್ಲಿ ನಡೆಯುವ ವೇವ್ಸ್ 2025 ರಲ್ಲಿ ವಿಜೇತರನ್ನು ಸನ್ಮಾನಿಸಲಾಗುತ್ತದೆ. ಆಟದ ಕುರಿತು  ಸಿಟಿ ಕ್ವೆಸ್ಟ್ ಆಟವು ಸಿಂಗಲ್-ಪ್ಲೇಯರ್ ಸ್ವರೂಪದಲ್ಲಿ ತೊಡಗಿಸಿಕೊಳ್ಳುತ್ತದೆ, ಅಲ್ಲಿ ಆಟಗಾರರು ಸಿಟಿ ಕಾರ್ಡ್‌ಗಳ ಡೆಕ್ ಬಳಸಿ ಕಂಪ್ಯೂಟರ್ ಎದುರಾಳಿಯ ವಿರುದ್ಧ ಸ್ಪರ್ಧಿಸುತ್ತಾರೆ. ಪ್ರತಿ ಕಾರ್ಡ್ ಆರು ನಿಯತಾಂಕಗಳನ್ನು ಒಳಗೊಂಡಿರುತ್ತದೆ, ಇದು ಆಟಗಾರರಿಗೆ ಹಸಿವು ಸೂಚ್ಯಂಕ, ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮ ಮತ್ತು ಲಿಂಗ ಸಮಾನತೆಯಂತಹ ವಿವಿಧ ಅಂಕಿಅಂಶಗಳ ಆಧಾರದ ಮೇಲೆ ನಗರಗಳನ್ನು ಹೋಲಿಸಲು ಅನುವು ಮಾಡಿಕೊಡುತ್ತದೆ. ಇದು 15 ಸುಸ್ಥಿರ ಅಭಿವೃದ್ಧಿ ಗುರಿಗಳ ಜಾಡು ಪತ್ತೆ ಮಾಡುತ್ತದೆ ಮತ್ತು ನೀತಿ ಆಯೋಗದ ನಗರ ಸೂಚ್ಯಂಕ (2021) ಬಳಸಿಕೊಂಡು 56 ನಗರಗಳಲ್ಲಿ ಅಗ್ರ ಶ್ರೆಯಾಂಕದ 6 ಎಸ್.ಡಿ.ಜಿಗಳನ್ನು ಬಳಸುತ್ತದೆ. ಸಂವಾದಾತ್ಮಕ ಆಟದ ಮೂಲಕ, ಇದು 56 ಭಾರತೀಯ ನಗರಗಳ ಅಭಿವೃದ್ಧಿ ಸವಾಲುಗಳು ಮತ್ತು ಸಾಧನೆಗಳ ಬಗ್ಗೆ ಆಟಗಾರರಿಗೆ ಶಿಕ್ಷಣ ನೀಡುತ್ತದೆ, ಸುಸ್ಥಿರ ಅಭ್ಯಾಸಗಳ ಪ್ರಭಾವವನ್ನು ಒತ್ತಿ ಹೇಳುತ್ತದೆ. ಸಂವಾದಾತ್ಮಕವಾಗಿ ಆಟ ಆಡಲು ಅವಕಾಶ ನೀಡಲಿದ್ದು, ಇದು ಆಟಗಾರರಿಗೆ ಶಿಕ್ಷಣ ನೀಡುತ್ತದೆ. ಆಟಗಾರರು ಸಿಟಿ ಕ್ವೆಸ್ಟ್ ಮೂಲಕ ಪ್ರತಿಯೊಂದು ನಗರದ ಗುಣಲಕ್ಷಣಗಳನ್ನು ಅನ್ವೇಷಿಸುವಾಗ, …

Read More »