Monday, January 19 2026 | 09:44:12 PM
Breaking News

ಪಂಜಾಬ್ ಕೇಸರಿ ಲಾಲಾ ಲಜಪತ್ ರಾಯ್ ಅವರ ಜಯಂತಿ ಹಿನ್ನೆಲೆಯಲ್ಲಿ ಗೌರವ ಸಮರ್ಪಿಸಿದ ಪ್ರಧಾನಮಂತ್ರಿ

ಪಂಜಾಬ್ ಕೇಸರಿ ಲಾಲಾ ಲಜಪತ್ ರಾಯ್ ಅವರ ಜಯಂತಿ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಮರ್ಪಣೆ ಮಾಡಿದರು. ಈ ಸಂಬಂಧ ಪ್ರಧಾನಮಂತ್ರಿಗಳು ಎಕ್ಸ್‌ನಲ್ಲಿ ಸಂದೇಶ ಹಂಚಿಕೊಂಡಿದ್ದು: “ಭಾರತ ಮಾತೆಯ ಶ್ರಮಜೀವಿ ಸುಪುತ್ರ ಪಂಜಾಬ್ ಕೇಸರಿ ಲಾಲಾ ಲಜಪತ್ ರಾಯ್ ಅವರ ಜಯಂತಿ ಸಂದರ್ಭದಲ್ಲಿ ದೇಶದ ಕೋಟಿ ಕೋಟಿ ಜನರ ಪರವಾಗಿ ಹೃತ್ಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ. ಸ್ವಾತಂತ್ರ್ಯ ಚಳವಳಿಯಲ್ಲಿ ಸಂಪೂರ್ಣ ತೊಡಗಿಸಿಕೊಂಡಿದ್ದ ಈ ಮಹಾನ್ ನಾಯಕ ವಿದೇಶಿ …

Read More »

ಭುವನೇಶ್ವರದಲ್ಲಿ ‘ಉತ್ಕರ್ಷ್ ಒಡಿಶಾ- ಮೇಕ್ ಇನ್ ಒಡಿಶಾ ಸಮಾವೇಶ- 2025’ ಅನ್ನು ಉದ್ಘಾಟಿಸಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಒಡಿಶಾದ ಭುವನೇಶ್ವರದಲ್ಲಿ “ಉತ್ಕರ್ಷ್ ಒಡಿಶಾ – ಮೇಕ್ ಇನ್ ಒಡಿಶಾ ಸಮಾವೇಶ- 2025” ಹಾಗೂ ಮೇಕ್ ಇನ್ ಒಡಿಶಾ ಪ್ರದರ್ಶನ ಮೇಳವನ್ನು ಉದ್ಘಾಟಿಸಿದರು. ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿಗಳು, “2025ರ ಜನವರಿ ತಿಂಗಳಲ್ಲೇ ಒಡಿಶಾಗೆ ಇದು ತಮ್ಮ ಎರಡನೇ ಭೇಟಿಯಾಗಿದೆʼʼ ಎಂದು ಹೇಳುವ ಮೂಲಕ ʼಪ್ರವಾಸಿ ಭಾರತೀಯ ದಿವಸ್ 2025ʼ ಕಾರ್ಯಕ್ರಮವನ್ನು ಉದ್ಘಾಟಿಸಲು ತಾವು ಇದೇ ತಿಂಗಳು ಭೇಟಿ …

Read More »

ಭಾರತ ಸರ್ಕಾರದ ಗ್ರಾಹಕ ವ್ಯವಹಾರಗಳ ಇಲಾಖೆಯು ಭಾರತದಾದ್ಯಂತ ಸಮಯವನ್ನು ಸಮನ್ವಯ (ಸಿಂಕ್ರೊನೈಸ್) ಮಾಡಲು ಕಾನೂನು ಮಾಪನಶಾಸ್ತ್ರ (ಭಾರತೀಯ ಪ್ರಮಾಣಿತ ಸಮಯ) ನಿಯಮಗಳು, 2025ರ ಕರಡನ್ನು ಅಧಿಸೂಚಿಸಿದೆ

‘ಒಂದು ರಾಷ್ಟ್ರ, ಒಂದು ಸಮಯ’ ಮತ್ತು ಭಾರತೀಯ ಪ್ರಮಾಣಿತ ಸಮಯ (ಐ ಎಸ್ ಟಿ) ಯಲ್ಲಿ ನಿಖರತೆಯನ್ನು ಸಾಧಿಸುವ ಗುರಿಯೊಂದಿಗೆ, ಭಾರತ ಸರ್ಕಾರದ ಗ್ರಾಹಕ ವ್ಯವಹಾರಗಳ ಇಲಾಖೆ ರಾಷ್ಟ್ರೀಯ ಭೌತಿಕ ಪ್ರಯೋಗಾಲಯ (ಎನ್ ಪಿ ಎಲ್) ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸಹಯೋಗದೊಂದಿಗೆ ಐ ಎಸ್ ಟಿಯನ್ನು ಮಿಲಿಸೆಕೆಂಡ್ನಿಂದ ಮೈಕ್ರೋಸೆಕೆಂಡ್ ನಿಖರತೆಯೊಂದಿಗೆ ಪ್ರಸಾರ ಮಾಡುವ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಈ ಯೋಜನೆಯು ಭಾರತದಾದ್ಯಂತ ಐದು ಕಾನೂನು ಮಾಪನಶಾಸ್ತ್ರ ಪ್ರಯೋಗಾಲಯಗಳಿಂದ ಐಎಸ್ ಟಿಯನ್ನು ಪ್ರಸಾರ ಮಾಡಲು ತಂತ್ರಜ್ಞಾನ ಮತ್ತು ಮೂಲಸೌಕರ್ಯಗಳನ್ನು ನಿರ್ಮಿಸುವ  ಗುರಿಯನ್ನು ಹೊಂದಿದೆ. ನ್ಯಾವಿಗೇಷನ್, ದೂರಸಂಪರ್ಕ, ಪವರ್ ಗ್ರಿಡ್ ಸಿಂಕ್ರೊನೈಸೇಶನ್, ಬ್ಯಾಂಕಿಂಗ್, ಡಿಜಿಟಲ್ ಆಡಳಿತ ಮತ್ತು ಆಳವಾದ ಬಾಹ್ಯಾಕಾಶ ಸಂಚರಣೆ ಮತ್ತು ಗುರುತ್ವಾಕರ್ಷಣೆ ತರಂಗ ಪತ್ತೆ ಸೇರಿದಂತೆ ಅತ್ಯಾಧುನಿಕ ವೈಜ್ಞಾನಿಕ ಸಂಶೋಧನೆಯಂತಹ ಕ್ಷೇತ್ರಗಳಿಗೆ ಈ ನಿಖರತೆ ಅತ್ಯಗತ್ಯ. ಆದಾಗ್ಯೂ ಈ  ಪ್ರಾಮುಖ್ಯತೆಯ ಹೊರತಾಗಿಯೂ, ಐಎಸ್ಟಿಯನ್ನು ಎಲ್ಲಾ ಟೆಲಿಕಾಂ ಸೇವಾ ಪೂರೈಕೆದಾರರು (ಟಿ ಎಸ್ ಪಿಗಳು) ಮತ್ತು ಇಂಟರ್ನೆಟ್ ಸೇವಾ ಪೂರೈಕೆದಾರರು (ಐ ಎಸ್ ಪಿಗಳು) ಕಡ್ಡಾಯವಾಗಿ ಅಳವಡಿಸಿಕೊಳ್ಳುವುದಿಲ್ಲ, ಅವರಲ್ಲಿ ಅನೇಕರು ಜಿಪಿಎಸ್ನಂತಹ ವಿದೇಶಿ ಸಮಯದ ಮೂಲಗಳನ್ನು ಅವಲಂಬಿಸಿದ್ದಾರೆ. ರಾಷ್ಟ್ರೀಯ ಭದ್ರತೆ, ನೈಜ-ಸಮಯದ ಅನ್ವಯಿಕೆಗಳು ಮತ್ತು ನಿರ್ಣಾಯಕ ಮೂಲಸೌಕರ್ಯಗಳ ಸುಗಮ ಕಾರ್ಯಾಚರಣೆಗೆ ಎಲ್ಲಾ ನೆಟ್ವರ್ಕ್ಗಳು ಮತ್ತು ವ್ಯವಸ್ಥೆಗಳನ್ನು ಐಎಸ್ಟಿಗೆ ಸಿಂಕ್ರೊನೈಸ್ ಮಾಡುವುದು ಅತ್ಯಗತ್ಯ. ಈ ಸವಾಲುಗಳನ್ನು ನಿಭಾಯಿಸಲು, ಕಾನೂನು ಮಾಪನಶಾಸ್ತ್ರ ಕಾಯ್ದೆ, 2009 ರ ಅಡಿಯಲ್ಲಿ ಐಎಸ್ಟಿ ಅಳವಡಿಸಿಕೊಳ್ಳಲು ನೀತಿ ಚೌಕಟ್ಟು, ನಿಯಂತ್ರಣ ಮತ್ತು ಶಾಸನವನ್ನು ಅಭಿವೃದ್ಧಿಪಡಿಸಲು ಉನ್ನತ ಅಧಿಕಾರದ ಅಂತರ ಸಚಿವಾಲಯ ಸಮಿತಿಯನ್ನು ರಚಿಸಲಾಗಿತ್ತು. ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ಅಧ್ಯಕ್ಷತೆಯ ಸಮಿತಿಯು ಎನ್ಪಿಎಲ್, ಇಸ್ರೋ, ಐಐಟಿ ಕಾನ್ಪುರ, ಎನ್ಐಸಿ, ಸಿಇಆರ್ಟಿ-ಇನ್, ಸೆಬಿ ಮತ್ತು ರೈಲ್ವೆ, ಟೆಲಿಕಾಂ ಮತ್ತು ಹಣಕಾಸು ಸೇವೆಗಳಂತಹ ಪ್ರಮುಖ ಸರ್ಕಾರಿ ಇಲಾಖೆಗಳ ಪ್ರತಿನಿಧಿಗಳನ್ನು ಒಳಗೊಂಡಿದೆ. ಐಎಸ್ಟಿ ಅಳವಡಿಕೆಯನ್ನು ಕಡ್ಡಾಯಗೊಳಿಸಲು ನಿಯಮಗಳನ್ನು ರೂಪಿಸಲು, ನೆಟ್ವರ್ಕ್ ಗಳಿಗೆ ಸಿಂಕ್ರೊನೈಸೇಶನ್ ಮಾರ್ಗಸೂಚಿಗಳನ್ನು ರೂಪಿಸಲು, ಸಮಯ-ಸ್ಟಾಂಪಿಂಗ್ ಮತ್ತು ಸೈಬರ್ ಭದ್ರತೆಗಾಗಿ ನಿಯಂತ್ರಕ ಚೌಕಟ್ಟುಗಳನ್ನು ಸಿದ್ಧಪಡಿಸಲು ಮತ್ತು ಸುಧಾರಿತ ತಂತ್ರಜ್ಞಾನಗಳು ಮತ್ತು ಮೂಲಸೌಕರ್ಯಗಳ ಮೂಲಕ ಐಎಸ್ಟಿ ಪ್ರಸರಣ ಯೋಜನೆಯ ಪ್ರಗತಿಯನ್ನು ಮೇಲ್ವಿಚಾರಣೆ ಮಾಡಲು ಸಮಿತಿಯ ವಿವಿಧ ಸಭೆಗಳನ್ನು ನಡೆಸಲಾಯಿತು. …

Read More »

ಭಾರತದ 76ನೇ ಗಣರಾಜ್ಯೋತ್ಸವದಂದು ಶುಭಾಶಯ ಕೋರಿದ ಫ್ರಾನ್ಸ್ ಅಧ್ಯಕ್ಷರು ಮತ್ತು ಐರ್ಲೆಂಡ್ ಪ್ರಧಾನಮಂತ್ರಿ ಅವರಿಗೆ ಪ್ರಧಾನಮಂತ್ರಿ ಧನ್ಯವಾದ ಅರ್ಪಿಸಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಾರತದ 76ನೇ ಗಣರಾಜ್ಯೋತ್ಸವದ ಶುಭಾಶಯ ಕೋರಿದ ಫ್ರಾನ್ಸ್ ಅಧ್ಯಕ್ಷ ಘನತೆವೆತ್ತ ಎಮ್ಯಾನುಯೆಲ್ ಮ್ಯಾಕ್ರೋನ್ ಮತ್ತು ಐರ್ಲೆಂಡ್ ಪ್ರಧಾನಮಂತ್ರಿ ಘನತೆವೆತ್ತ ಮೈಕೆಲ್ ಮಾರ್ಟಿನ್ ಅವರಿಗೆ ಧನ್ಯವಾದ ಅರ್ಪಿಸಿದರು. ಈ ಸಂಬಂಧ ಎಕ್ಸ್ ಖಾತೆಯಲ್ಲಿ ಫ್ರಾನ್ಸ್ ಅಧ್ಯಕ್ಷರ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಶ್ರೀ ನರೇಂದ್ರ ಮೋದಿ ಹೀಗೆ ಹೇಳಿದರು: “ನನ್ನ ಆತ್ಮೀಯ ಸ್ನೇಹಿತ, ಅಧ್ಯಕ್ಷ @EmmanuelMacron, ಭಾರತದ 76ನೇ ಗಣರಾಜ್ಯೋತ್ಸವದಂದು ನಿಮ್ಮ ಪ್ರೀತಿಯ ಶುಭಾಶಯಗಳನ್ನು …

Read More »

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಗಣರಾಜ್ಯೋತ್ಸವ 2025 ಪರೇಡ್ ಸ್ತಬ್ಧಚಿತ್ರವು ತಾಯಿಯ ಆರೈಕೆ, ಜೀವನ ಚಕ್ರ ನಿರಂತರತೆ ಮತ್ತು ಮಹಿಳಾ ನಾಯಕತ್ವವನ್ನು ಚಿತ್ರಿಸುತ್ತದೆ

ಗಣರಾಜ್ಯೋತ್ಸವ 2025ರ ಮೆರವಣಿಗೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಸ್ತಬ್ಧಚಿತ್ರವು ಸಚಿವಾಲಯದ ಯೋಜನೆಗಳು ಮತ್ತು ಮಹಿಳಾ ನೇತೃತ್ವದ ಅಭಿವೃದ್ಧಿಯ ಜೀವನ ಚಕ್ರದ ಮುಂದುವರಿಕೆ ವಿಧಾನವನ್ನು ಸುಂದರವಾಗಿ ಚಿತ್ರಿಸಿದೆ. ಪ್ರದರ್ಶನದ ಹೃದಯಭಾಗದಲ್ಲಿ ತಾಯಿಯೊಬ್ಬಳು ತನ್ನ ಹೆಣ್ಣು ಮಗುವನ್ನು ಪ್ರೀತಿಯಿಂದ ತಬ್ಬಿಕೊಳ್ಳುತ್ತಿದ್ದಳು, ಇದು ಮಗುವಿನ ಮೊದಲ ಶಿಕ್ಷಕಿಯಾಗಿ ತನ್ನ ಪಾತ್ರವನ್ನು ಸಂಕೇತಿಸುತ್ತದೆ. ಸ್ತಬ್ಧಚಿತ್ರವು ತಾಜಾ ಹಣ್ಣುಗಳು, ತರಕಾರಿಗಳು, ಧಾನ್ಯಗಳು ಮತ್ತು ಹಾಲಿನ ರೋಮಾಂಚಕ ಪ್ರದರ್ಶನಗಳನ್ನು ಒಳಗೊಂಡಿತ್ತು, ಇದು ಅಪೌಷ್ಟಿಕತೆಯನ್ನು ನಿರ್ಮೂಲನೆ ಮಾಡುವ …

Read More »

ನವದೆಹಲಿಯ ಕರ್ತವ್ಯ ಪಥದಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆಗೆ ಸಾಕ್ಷಿಯಾದ ಪಂಚಾಯತ್ ಪ್ರತಿನಿಧಿಗಳು

76ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದೇಶಾದ್ಯಂತದ ಪಂಚಾಯತ್ ರಾಜ್ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಮತ್ತು ಅವರ ಪತ್ನಿಯರು 575ಕ್ಕೂ ಹೆಚ್ಚು ವಿಶೇಷ ಅತಿಥಿಗಳಾಗಿ ಭಾಗವಹಿಸಿದ್ದರು, ಅವರು ಗ್ರಾಮೀಣ ಭಾರತದ ನಾಡಿಮಿಡಿತ ಸಂಕೇತಿಸುವ ಭವ್ಯ ಗಣರಾಜ್ಯೋತ್ಸವ ಪರೇಡ್ ವೀಕ್ಷಿಸಿದರು. ಅವರಲ್ಲಿ, ಸುಮಾರು 40%ರಷ್ಟು ಮಹಿಳೆಯರು ಭಾಗವಹಿಸಿದ್ದರು, ಇದು ಲಿಂಗ-ಸಮಾನತೆಯ ಆಡಳಿತ ನೀಡುವ ಕಡೆಗಿನ ಗಮನಾರ್ಹ ಪ್ರಗತಿಗೆ ಉದಾಹರಣೆಯಾಗಿದೆ. ತಳಮಟ್ಟದ ಪ್ರಜಾಪ್ರಭುತ್ವವನ್ನು ಗೌರವಿಸುವ ಪ್ರಯತ್ನದಲ್ಲಿ, ಪಂಚಾಯತ್ ರಾಜ್ ಸಚಿವಾಲಯವು 2025 ಜನವರಿ 25ರಂದು ನವದೆಹಲಿಯಲ್ಲಿ …

Read More »

ಕೇಂದ್ರ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು 76ನೇ ಗಣರಾಜ್ಯೋತ್ಸವದ ಮೆರವಣಿಗೆಗಾಗಿ ‘ಮನ್ ಕಿ ಬಾತ್’ ವಿಶೇಷ ಆಹ್ವಾನಿತರೊಂದಿಗೆ ಸಂವಾದ ನಡೆಸಿದರು

ಕೇಂದ್ರ ವಾರ್ತಾ ಮತ್ತು ಪ್ರಸಾರ, ರೈಲ್ವೆ ಮತ್ತು ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮದ ವಿಶೇಷ ಆಹ್ವಾನಿತರೊಂದಿಗೆ ಸಂವಾದ ನಡೆಸಿದರು. ಭಾರತದ ಸಾರ್ವಜನಿಕ ಸೇವಾ ಪ್ರಸಾರಕದ ರೆಡಿಯೊ ವಿಭಾಗವಾದ ಆಕಾಶವಾಣಿ ಅವರನ್ನು ಆಕಾಶವಾಣಿ ಭವನದಲ್ಲಿರುವ ತನ್ನ ನವದೆಹಲಿ ಕಚೇರಿಗೆ ಆಹ್ವಾನಿಸಿತು. ಆಕಾಶವಾಣಿ: ಬದಲಾವಣೆಯ ಅಪ್ರತಿಮ ವೀರರ ಸಂಭ್ರಮ ಪ್ರಧಾನಮಂತ್ರಿ ಶ್ರೀ …

Read More »

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾದ ಶ್ರೀ ಪಿಯೂಷ್ ಗೋಯಲ್ 2025 ಜನವರಿ 27-28ರ ವರೆಗೆ ಓಮನ್‌ಗೆ ಭೇಟಿ ನೀಡಲಿದ್ದಾರೆ

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಶ್ರೀ ಪಿಯೂಷ್ ಗೋಯಲ್ ಅವರು 11ನೇ ಜಂಟಿ ಆಯೋಗದ ಸಭೆ(ಜೆಸಿಎಂ)ಯಲ್ಲಿ ಭಾಗವಹಿಸಲು ಓಮನ್‌ನ ಮಸ್ಕತ್‌ಗೆ ಭೇಟಿ ನೀಡಲಿದ್ದಾರೆ. 2025 ಜನವರಿ 27-28ರ ವರೆಗೆ ನಡೆಯಲಿರುವ ಈ ಸಭೆಯಲ್ಲಿ ಓಮನ್ ಸುಲ್ತಾನ ಮತ್ತು ವಾಣಿಜ್ಯ, ಕೈಗಾರಿಕೆ ಮತ್ತು ಹೂಡಿಕೆ ಉತ್ತೇಜನ ಖಾತೆ ಸಚಿವರಾದ ಕೈಸ್ ಬಿನ್ ಮೊಹಮ್ಮದ್ ಬಿನ್ ಮೂಸಾ ಅಲ್-ಯೂಸೆಫ್  ಅವರೊಂದಿಗೆ ಗೋಯಲ್ ಭಾಗವಹಿಸಲಿದ್ದಾರೆ. ನಮ್ಮ ಪ್ರಮುಖ ವ್ಯಾಪಾರ ಪಾಲುದಾರರಲ್ಲಿ ಒಂದಾದ ಓಮನ್ …

Read More »

ಗಣರಾಜ್ಯೋತ್ಸವದಂದು ಎಲ್ಲರಿಗೂ ಶುಭ ಕೋರಿದ ಪ್ರಧಾನಮಂತ್ರಿ

ಗಣರಾಜ್ಯೋತ್ಸವದ ಸಂದರ್ಭದಲ್ಲಿ ಎಲ್ಲರಿಗೂ ಶುಭ ಕೋರಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ನಾವು ಗಣರಾಜ್ಯವಾಗಿ 75 ಅದ್ಭುತ ವರ್ಷಗಳನ್ನು ಆಚರಿಸುತ್ತಿದ್ದೇವೆ ಎಂದು ಹೇಳಿದರು. ಈ ಸಂಬಂಧ ಎಕ್ಸ್ ಖಾತೆಯಲ್ಲಿ ಪ್ರತ್ಯೇಕ ಪೋಸ್ಟ್ ಗಳಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ: “ಗಣರಾಜ್ಯೋತ್ಸವದ ಶುಭಾಶಯಗಳು. ಇಂದು, ನಾವು ಗಣರಾಜ್ಯದ 75 ಅದ್ಭುತ ವರ್ಷಗಳನ್ನು ಆಚರಿಸುತ್ತೇವೆ. ನಮ್ಮ ಸಂವಿಧಾನವನ್ನು ರಚಿಸಿದ ಮತ್ತು ನಮ್ಮ ಪ್ರಯಾಣವು ಪ್ರಜಾಪ್ರಭುತ್ವ, ಘನತೆ ಮತ್ತು ಏಕತೆಯಲ್ಲಿ ಬೇರೂರಿದೆ …

Read More »

ಭಾರತದ 76ನೇ ಗಣರಾಜ್ಯೋತ್ಸವದ ಶುಭಾಶಯಗಳಿಗಾಗಿ ವಿಶ್ವ ನಾಯಕರಿಗೆ ಧನ್ಯವಾದ ಅರ್ಪಿಸಿದ ಪ್ರಧಾನಮಂತ್ರಿ

ಭಾರತದ 76ನೇ ಗಣರಾಜ್ಯೋತ್ಸವದ ಶುಭಾಶಯಗಳು ಮತ್ತು ಶುಭಸಂದೇಶಗಳಿಗಾಗಿ ವಿಶ್ವ ನಾಯಕರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಧನ್ಯವಾದಗಳನ್ನು ತಿಳಿಸಿದರು. ನೇಪಾಳದ ಪ್ರಧಾನಮಂತ್ರಿಯವರು ಎಕ್ಸ್ ತಾಣದಲ್ಲಿ ನೀಡಿದ ಹೇಳಿಕೆಗೆ ಪ್ರತಿಕ್ರಿಯೆಯಾಗಿ, ಪ್ರಧಾನಮಂತ್ರಿಯವರು ಈ ರೀತಿ ಹೇಳಿದರು: “ಪ್ರಧಾನಮಂತ್ರಿ @kpsharmaoli, ನಿಮ್ಮ ಆತ್ಮೀಯ ಶುಭಾಶಯಗಳಿಗೆ ಧನ್ಯವಾದಗಳು.  ಭಾರತವು ತನ್ನ ಗಣರಾಜ್ಯಕ್ಕೆ 75 ವರ್ಷಗಳನ್ನು ಪೂರೈಸುತ್ತಿರುವಾಗ, ನಮ್ಮ ಎರಡು ರಾಷ್ಟ್ರಗಳ ಪ್ರಜೆಗಳ ನಡುವಿನ ಸ್ನೇಹದ ಐತಿಹಾಸಿಕ ಬಂಧಗಳನ್ನು ನಾವು ಆಳವಾಗಿ ಪಾಲಿಸುತ್ತೇವೆ ಮತ್ತು …

Read More »