ಭಾರತ ಸರ್ಕಾರದ ಪ್ರವಾಸೋದ್ಯಮ ಸಚಿವಾಲಯವು ಮಹಾ ಕುಂಭ 2025 ಅನ್ನು ಆಧ್ಯಾತ್ಮಿಕ ಕೂಟಗಳಿಗೆ ಮಾತ್ರವಲ್ಲದೆ ಜಾಗತಿಕ ಪ್ರವಾಸೋದ್ಯಮಕ್ಕೂ ಹೆಗ್ಗುರುತು ಘಟನೆಯನ್ನಾಗಿ ಮಾಡಲು ಸಜ್ಜಾಗಿದೆ. ಈ ಮಹತ್ವದ ಸಂದರ್ಭವನ್ನು ಆಚರಿಸಲು, ಸಚಿವಾಲಯವು ದೇಶೀಯ ಮತ್ತು ಅಂತಾರಾಷ್ಟ್ರೀಯ ಪ್ರವಾಸೋದ್ಯಮವನ್ನು ಹೆಚ್ಚಿಸುವ ಉದ್ದೇಶದಿಂದ ಹಲವಾರು ಉಪಕ್ರಮಗಳನ್ನು ರೂಪಿಸುತ್ತಿದೆ. ಮಹಾ ಕುಂಭವು ವಿಶ್ವದ ಅತಿದೊಡ್ಡ ಮತ್ತು ಅತ್ಯಂತ ಮಹತ್ವದ ಧಾರ್ಮಿಕ ಸಭೆಗಳಲ್ಲಿ ಒಂದಾಗಿದೆ, ಇದನ್ನು ಪ್ರತಿ 12 ವರ್ಷಗಳಿಗೊಮ್ಮೆ ಭಾರತದ ನಾಲ್ಕು ಸ್ಥಳಗಳಲ್ಲಿ ಒಂದರಲ್ಲಿ ನಡೆಸಲಾಗುತ್ತದೆ. …
Read More »ಸ್ವಾಮಿ ವಿವೇಕಾನಂದರ ಜಯಂತಿಯಂದು ಪ್ರಧಾನಮಂತ್ರಿ ಅವರಿಂದ ಗೌರವ ನಮನ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸ್ವಾಮಿ ವಿವೇಕಾನಂದರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಸ್ವಾಮಿ ವಿವೇಕಾನಂದರು ಯುವಕರಿಗೆ ಶಾಶ್ವತ ಸ್ಫೂರ್ತಿಯಾಗಿದ್ದಾರೆ. ಅವರು ಯುವ ಮನಸ್ಸುಗಳಲ್ಲಿ ಉತ್ಸಾಹ ಮತ್ತು ಉದ್ದೇಶವನ್ನು ಬೆಳಗಿಸುತ್ತಿದ್ದಾರೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು. ಈ ಸಂಬಂಧ ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ: “ಸ್ವಾಮಿ ವಿವೇಕಾನಂದರ ಜಯಂತಿಯಂದು ಅವರಿಗೆ ಗೌರವ ನಮನಗಳು. ಯುವಕರಿಗೆ ಶಾಶ್ವತ ಸ್ಫೂರ್ತಿಯಾಗಿರುವ ಅವರು ಯುವ ಮನಸ್ಸುಗಳಲ್ಲಿ …
Read More »ಭುವನೇಶ್ವರದ ಜನತಾ ಮೈದಾನದಲ್ಲಿ ನಡೆಯುತ್ತಿರುವ 18ನೇ ಪ್ರವಾಸಿ ಭಾರತೀಯ ದಿನ ಸಮಾವೇಶದಲ್ಲಿ 09.01.2025ರಂದು ಕೇಂದ್ರ ಸಣ್ಣ, ಅತಿಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ (ಎಂಎಸ್ ಎಂಇ) ರಾಜ್ಯ ಸಚಿವರಾದ ಸುಶ್ರೀ ಶೋಭಾ ಕರಂದ್ಲಾಜೆ ಭಾಗಿ
ಒಡಿಶಾದ ಭುವನೇಶ್ವರದ ಜನತಾ ಮೈದಾನದಲ್ಲಿ ನಡೆಯುತ್ತಿರುವ 18ನೇ ಪ್ರವಾಸಿ ಭಾರತೀಯ ದಿನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಜನವರಿ 9ರಂದು ಉದ್ಘಾಟಿಸಿದರು. “ವಿಕಸಿತ ಭಾರತಕ್ಕೆ ಅನಿವಾಸಿ ಭಾರತೀಯರ ಕೊಡುಗೆ” ಎಂಬ ಧ್ಯೇಯ ವಾಕ್ಯದೊಂದಿಗೆ ನಡೆಯುತ್ತಿರುವ ಈ ಕಾರ್ಯಕ್ರಮವು ರಾಷ್ಟ್ರ ನಿರ್ಮಾಣದಲ್ಲಿ ಭಾರತದ ವಲಸಿಗರ ಪ್ರಮುಖ ಪಾತ್ರವನ್ನು ಪ್ರಮುಖವಾಗಿ ಎತ್ತಿ ತೋರಿಸುತ್ತಿದೆ.ಈ ಕಾರ್ಯಕ್ರಮದಲ್ಲಿ ನಾನಾ ಸಚಿವರು, ಅಧಿಕಾರಿಗಳು ಮತ್ತು ಗಮನಾರ್ಹ ಸಂಖ್ಯೆಯ ಪ್ರವಾಸಿ ಭಾರತೀಯರು ಭಾಗವಹಿಸಿದ್ದಾರೆ. ಕೇಂದ್ರ ಎಂಎಸ್ಎಂಇ ಮತ್ತು ಕಾರ್ಮಿಕ ಹಾಗೂ ಉದ್ಯೋಗ ಖಾತೆ ರಾಜ್ಯ ಸಚಿವರಾದ ಸುಶ್ರೀ ಶೋಭಾ ಕರಂದ್ಲಾಜೆ, ಎಂಎಸ್ ಎಂಇ ಮತ್ತು ಅದರ ಸಂಸ್ಥೆಗಳು ತೆರೆದಿರುವ ಥೀಮ್ ಪೆವಿಲಿಯನ್ ಗೆ ಭೇಟಿ ನೀಡಿದ್ದರು. ಭುವನೇಶ್ವರದ ಕೇಂದ್ರೀಯ ಯಂತ್ರಾಗಾರ ಮತ್ತು ತರಬೇತಿ ಕೇಂದ್ರ (ಸಿಟಿಟಿಸಿ) ಅಭಿವೃದ್ಧಿಪಡಿಸಿರುವ ಚಂದ್ರಯಾನ-3 ಮಾದರಿಯನ್ನು ಪ್ರದರ್ಶಿಸಲಾಯಿತು. ಈ ಕೇಂದ್ರವು ಉತ್ತಮ ಗುಣಮಟ್ಟದ ನಿರ್ಣಾಯಕ ಘಟಕಗಳ ತಯಾರಿಕೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಇದು ಚಂದ್ರಯಾನ -3 ಮಿಷನ್ ಮತ್ತು “ಮೇಕ್ ಇನ್ ಇಂಡಿಯಾ” ಉಪಕ್ರಮದ ಯಶಸ್ಸಿಗೆ ಗಮನಾರ್ಹ ಕೊಡುಗೆ ನೀಡಿದೆ. ಅಲ್ಲದೆ, ಸಚಿವರು ಎಆರ್-ವಿಆರ್ ಅನುಭವ ಕೇಂದ್ರಗಳು, ಡ್ರೋಣ್ ತಂತ್ರಜ್ಞಾನಗಳು ಮತ್ತು ಸೌರ ಫಲಕ ಉತ್ಪಾದನಾ ಘಟಕಗಳು ಸೇರಿದಂತೆ ಹೊಸ ತಂತ್ರಜ್ಞಾನ ಪ್ರದರ್ಶನ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಅವರು ಖಾದಿ ಚರಕಗಳು, ಕೈ ಮಗ್ಗಗಳು ಮತ್ತು ಪೇಪರ್ ಮ್ಯಾಚೆಯಂತಹ ಸಾಂಪ್ರದಾಯಿಕ ಕರಕುಶಲ ವಸ್ತುಗಳನ್ನು ಪ್ರದರ್ಶಿಸುವ ಖಾದಿ ಮತ್ತು ಗ್ರಾಮೋದ್ಯೋಗ ಕುಶಲಕರ್ಮಿಗಳೊಂದಿಗೆ ಸಮಾಲೋಚಿಸಿದರು. ಅವರು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಭಾರತದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಸೆಪ್ಟೆಂಬರ್ 17ರಂದು ಉದ್ಘಾಟಿಸಿದ ಈ ಯೋಜನೆಯು, 18 ವ್ಯಾಪಾರಗಳಲ್ಲಿ ತೊಡಗಿರುವ ಕುಶಲಕರ್ಮಿಗಳು ಮತ್ತು ಕಸುಬುದಾರರಿಗೆ ಸಂಪೂರ್ಣ ಆರ್ಥಿಕ ನೆರವನ್ನು ಒದಗಿಸುವ ಎಂಎಸ್ ಎಂಇ ಸಚಿವಾಲಯದ ಪ್ರಮುಖ ಯೋಜನೆಯಾಗಿದೆ. ವೈದ್ಯಕೀಯ ಸಾಧನಗಳು, ಏರೋ ಎಂಜಿನಿಯರಿಂಗ್, ನೀರು ಶುದ್ಧೀಕರಣ ತಂತ್ರಜ್ಞಾನಗಳು ಮತ್ತು ರೇಷ್ಮೆ ಮತ್ತು ತೆಂಗಿನ ನಾರಿನ ಉತ್ಪನ್ನಗಳಂತಹ ಸ್ಥಳೀಯ ಕರಕುಶಲ ವಸ್ತುಗಳಲ್ಲಿ ಭಾರತದ ಪ್ರಗತಿಯನ್ನು ಪ್ರಮುಖವಾಗಿ ಪ್ರಸ್ತಾಪಿಸಿದ ಸುಶ್ರೀ ಶೋಭಾ ಕರಂದ್ಲಾಜೆ ಅವರು “ಚರಕದಿಂದ ಚಂದ್ರಯಾನಕ್ಕೆ” ಎಂಬ ಸೂಕ್ತ ಶೀರ್ಷಿಕೆಯ ಎಂಎಸ್ಎಂಇ ವಲಯದ ಥೀಮ್ ಮಳಿಗೆಯನ್ನು ಶ್ಲಾಘಿಸಿದರು. ಅವರು ದುಬೈನ ಅನಿವಾಸಿ ಭಾರತೀಯರೊಂದಿಗೆ ಸಂವಾದ ನಡೆಸಿದರು. ಜಾಗತಿಕವಾಗಿ ಭಾರತೀಯ ಸಂಸ್ಕೃತಿ ಮತ್ತು ಕರಕುಶಲತೆಯನ್ನು ಉತ್ತೇಜಿಸುವಲ್ಲಿ ಅವರ ಪಾತ್ರವನ್ನು ಒತ್ತಿ ಹೇಳಿದರು. 2047ರ ವೇಳೆಗೆ “ವಿಕಸಿತ ಭಾರತ” ಗುರಿ ಸಾಧಿಸುವ ಗೌರವಾನ್ವಿತ ಪ್ರಧಾನ ಮಂತ್ರಿಯವರ ದೂರದೃಷ್ಟಿಯ ಸಾಕಾರದಲ್ಲಿ ಅನಿವಾಸಿ ಭಾರತೀಯರ ಪಾತ್ರ ನಿರ್ಣಾಯಕವಾಗಿದೆ ಎಂದು ಅವರು ಹೇಳಿದರು. ಪ್ರವಾಸಿ ಭಾರತೀಯರು ತಮ್ಮ ಬೇರುಗಳೊಂದಿಗೆ ಮತ್ತೆ ಸಂಪರ್ಕ ಸಾಧಿಸುವಂತೆ ಮತ್ತು ಭಾರತದ ಪ್ರಗತಿಗಾಥೆಗೆ ಸಕ್ರಿಯ ಕೊಡುಗೆ ನೀಡುವಂತೆ ಸಚಿವರು ಪ್ರೋತ್ಸಾಹಿಸಿದರು.
Read More »ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳ ಬಂಡವಾಳ ವೆಚ್ಚವನ್ನು ವೇಗಗೊಳಿಸಲು ಮತ್ತು ಅವುಗಳ ಅಭಿವೃದ್ಧಿ ಮತ್ತು ಕಲ್ಯಾಣ ವೆಚ್ಚಗಳಿಗೆ ಹಣಕಾಸು ಒದಗಿಸಲು ₹1,73,030 ಕೋಟಿಗಳ ತೆರಿಗೆ ಹಂಚಿಕೆಯನ್ನು ಬಿಡುಗಡೆ ಮಾಡಿದೆ
ಕೇಂದ್ರ ಸರ್ಕಾರ ಇಂದು ರಾಜ್ಯ ಸರ್ಕಾರಗಳಿಗೆ ₹1,73,030 ಕೋಟಿ ತೆರಿಗೆ ಹಂಚಿಕೆಯನ್ನು ಬಿಡುಗಡೆ ಮಾಡಿದ್ದು, ಡಿಸೆಂಬರ್ 2024 ರಲ್ಲಿ ಬಿಡುಗಡೆ ಮಾಡಬೇಕಿದ್ದ ₹89,086 ಕೋಟಿ ಹಂಚಿಕೆಗೆ ಬದಲಾಗಿ ಹೆಚ್ಚಿನ ಹಂಚಿಕೆಯನ್ನು ಮಾಡಲಾಗಿದೆ. ರಾಜ್ಯಗಳು ಬಂಡವಾಳ ವೆಚ್ಚವನ್ನು ವೇಗಗೊಳಿಸಲು ಮತ್ತು ಅವುಗಳ ಅಭಿವೃದ್ಧಿ ಮತ್ತು ಕಲ್ಯಾಣ ವೆಚ್ಚಗಳಿಗೆ ಹಣಕಾಸು ಒದಗಿಸಲು ಈ ತಿಂಗಳು ಹೆಚ್ಚಿನ ಹಣವನ್ನು ಬಿಡುಗಡೆ ಮಾಡಲಾಗಿದೆ. ಬಿಡುಗಡೆಯಾದ ಮೊತ್ತದ ರಾಜ್ಯವಾರು ವಿವರಗಳನ್ನು ಕೆಳಗಿನ ಕೋಷ್ಟಕದಲ್ಲಿ ನೀಡಲಾಗಿದೆ: ಕ್ರ.ಸಂ. ರಾಜ್ಯದ ಹೆಸರು …
Read More »ಉದ್ಯಮಿ ನಿಖಿಲ್ ಕಾಮತ್ ಪಾಡ್ಕ್ಯಾಸ್ಟ್ ನಲ್ಲಿ ಪ್ರಧಾನಮಂತ್ರಿ ಭಾಗಿ
ಉದ್ಯಮಿ ನಿಖಿಲ್ ಕಾಮತ್ ಅವರು ನಡೆಸಿಕೊಡುವ ಪಾಡ್ಕ್ಯಾಸ್ಟ್ ನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ರಾಜಕೀಯ ಪಯಣ ಮತ್ತು ವೈಯಕ್ತಿಕ ದೃಷ್ಟಿಕೋನಗಳ ಬಗ್ಗೆ ಒಳನೋಟಗಳನ್ನು ಹಂಚಿಕೊಂಡಿದ್ದಾರೆ. ನಿಖಿಲ್ ಕಾಮತ್ ಅವರ ಎಕ್ಸ್ ಪೋಸ್ಟ್ ಗೆ ಶ್ರೀ ಮೋದಿ ಅವರ ಪ್ರತಿಕ್ರಿಯೆ ಹೀಗಿದೆ: “ನಾವು ನಿಮಗಾಗಿ ಇದನ್ನು ನಿರೂಪಿಸಲು ಸಂತಸಪಟ್ಟಷ್ಟೇ, ನೀವೆಲ್ಲರೂ ಇದನ್ನು ಆಲಿಸಿ ಆನಂದಿಸುವಿರಿ ಎಂದು ನಾನು ಭಾವಿಸುತ್ತೇನೆ!” भारत : 1885 से 1950 …
Read More »ಖ್ಯಾತ ಹಿನ್ನೆಲೆ ಗಾಯಕರಾದ ಶ್ರೀ ಪಿ. ಜಯಚಂದ್ರನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
ಖ್ಯಾತ ಹಿನ್ನೆಲೆ ಗಾಯಕರಾದ ಶ್ರೀ ಪಿ. ಜಯಚಂದ್ರನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ವಿವಿಧ ಭಾಷೆಗಳಲ್ಲಿ ಅವರ ಭಾವಪೂರ್ಣ ಗಾಯನಗಳು ಮುಂದಿನ ಪೀಳಿಗೆಗೂ ಹೃದಯಸ್ಪರ್ಶಿಯಾಗಿರಲಿವೆ ಎಂದು ಹೇಳಿದ್ದಾರೆ. ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ: “ಶ್ರೀ ಪಿ. ಜಯಚಂದ್ರನ್ ಅವರು ವೈವಿಧ್ಯಮಯ ಭಾವನೆಗಳನ್ನು ವ್ಯಕ್ತಪಡಿಸುವ ವಿಶಿಷ್ಟ ಧ್ವನಿಯನ್ನು ಹೊಂದಿದ್ದರು. ವಿವಿಧ ಭಾಷೆಗಳಲ್ಲಿ ಅವರ ಭಾವಪೂರ್ಣ ಗಾಯನವು ಮುಂಬರುವ ಪೀಳಿಗೆಗಳಿಗೂ ಹೃದಯಸ್ಪರ್ಶಿಯಾಗಿ ಮುಂದುವರಿಯಲಿವೆ. …
Read More »ಕೇಂದ್ರ ಬಾಹ್ಯಾಕಾಶ ಇಲಾಖೆ ರಾಜ್ಯ ಸಚಿವರಾದ ಡಾ.ಜಿತೇಂದ್ರ ಸಿಂಗ್ ಅವರು ಇಸ್ರೋದ ಹಿರಿಯ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು
ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ; ಭೂ ವಿಜ್ಞಾನ (ಸ್ವತಂತ್ರ ಉಸ್ತುವಾರಿ), ಬಾಹ್ಯಾಕಾಶ ಇಲಾಖೆಯ ರಾಜ್ಯ ಸಚಿವರಾದ ಡಾ.ಜಿತೇಂದ್ರ ಸಿಂಗ್ ಅವರು ಇಂದು ಬೆಂಗಳೂರಿನಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಗೌರವಾನ್ವಿತ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಈ ಪರಿಶೀಲನಾ ಸಭೆಯಲ್ಲಿ ಇಸ್ರೋದ ನಿರ್ಗಮಿತ ಅಧ್ಯಕ್ಷ ಡಾ.ಎಸ್.ಸೋಮನಾಥ್, ನೂತನ ಅಧ್ಯಕ್ಷ ಡಾ.ವಿ.ನಾರಾಯಣನ್, ಇಸ್ರೋ ಮಿಷನ್ ನಿರ್ದೇಶಕರು ಉಪಸ್ಥಿತರಿದ್ದರು. ಶ್ರೀ ಜಿತೇಂದ್ರ ಸಿಂಗ್ ಅವರಿಗೆ ಹಿರಿಯ ಅಧಿಕಾರಿಗಳು …
Read More »ಆಂಧ್ರಪ್ರದೇಶದ ತಿರುಪತಿಯಲ್ಲಿ ಕಾಲ್ತುಳಿತದಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಆಂಧ್ರಪ್ರದೇಶದ ತಿರುಪತಿಯಲ್ಲಿ ಕಾಲ್ತುಳಿತದಿಂದ ಉಂಟಾದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಈ ಸಂಬಂಧ ಪ್ರಧಾನ ಮಂತ್ರಿಗಳ ಕಾರ್ಯಾಲಯ ಎಕ್ಸ್ ಖಾತೆಯಲ್ಲಿ ಹೀಗೆ ಹೇಳಿದೆ; “ಆಂಧ್ರಪ್ರದೇಶದ ತಿರುಪತಿಯಲ್ಲಿ ಕಾಲ್ತುಳಿತದಿಂದ ದುಃಖವಾಗಿದೆ. ತಮ್ಮ ಹತ್ತಿರದ ಮತ್ತು ಪ್ರೀತಿಪಾತ್ರರನ್ನು ಕಳೆದುಕೊಂಡವರೊಂದಿಗೆ ನನ್ನ ಆಲೋಚನೆಗಳಿವೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ಆಂಧ್ರಪ್ರದೇಶ ಸರ್ಕಾರ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದೆ: ಪ್ರಧಾನಮಂತ್ರಿ @narendramodi’’ ಎಂದಿದ್ದಾರೆ. भारत : …
Read More »ಒಡಿಶಾದಲ್ಲಿ 18ನೇ ಪ್ರವಾಸಿ ಭಾರತೀಯ ದಿನ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಭುವನೇಶ್ವರದಲ್ಲಿ ಇಂದು 18ನೇ ಪ್ರವಾಸಿ ಭಾರತೀಯ ದಿನವನ್ನು ಉದ್ಘಾಟಿಸಿದರು. ಜಗತ್ತಿನ ನಾನಾ ಮೂಲೆಗಳಿಂದ ಆಗಮಿಸಿರುವ ಪ್ರತಿನಿಧಿಗಳು ಹಾಗೂ ಅನಿವಾಸಿ ಭಾರತೀಯರನ್ನು ಸ್ವಾಗತಿಸಿದ ಶ್ರೀ ನರೇಂದ್ರ ಮೋದಿ ಅವರು ಭವಿಷ್ಯದಲ್ಲಿ ಜಗತ್ತಿನಾದ್ಯಂತದ ವಿವಿಧ ಭಾರತೀಯ ಅನಿವಾಸಿ ಕಾರ್ಯಕ್ರಮಗಳಲ್ಲಿ ಉದ್ಘಾಟನಾ ಗೀತೆಯನ್ನು ನುಡಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು. ಭಾರತೀಯ ವಲಸಿಗರ ಭಾವನೆಗಳು ಮತ್ತು ಅನುಭವಗಳನ್ನು ಸೆರೆಹಿಡಿದ ಅದ್ಭುತ ಗಾಯನಕ್ಕಾಗಿ ಅವರು ಗ್ರ್ಯಾಮಿ ಪ್ರಶಸ್ತಿ ವಿಜೇತ …
Read More »ಕರ್ನಾಟಕದ ಬೆಂಗಳೂರಿಗೆ 2025ರ ಜನವರಿ 11ರಂದು ಉಪರಾಷ್ಟ್ರಪತಿ ಭೇಟಿ
ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು 2025ರ ಜನವರಿ 11 ರಂದು ಬೆಂಗಳೂರಿಗೆ (ಕರ್ನಾಟಕ) ಭೇಟಿ ನೀಡಲಿದ್ದಾರೆ. ಭೇಟಿಯ ಸಂದರ್ಭದಲ್ಲಿ, ಉಪರಾಷ್ಟ್ರಪತಿಗಳು ಕರ್ನಾಟಕದ ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಾರ್ವಜನಿಕ ಸೇವಾ ಆಯೋಗಗಳ ಅಧ್ಯಕ್ಷರ 25ನೇ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक …
Read More »
Matribhumi Samachar Kannad