Friday, April 10 2026 | 04:47:32 PM
Breaking News

ಡಿಸೆಂಬರ್ 23 ರಂದು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಹೊಸದಾಗಿ ನೇಮಕಗೊಂಡಿರುವ 71 ಸಾವಿರಕ್ಕೂ ಅಧಿಕ ಉದ್ಯೋಗಿಗಳಿಗೆ ರೋಜ್‌ ಗಾರ್ ಮೇಳದಲ್ಲಿ ನೇಮಕಾತಿ ಪತ್ರ ವಿತರಿಸಲಿರುವ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಡಿಸೆಂಬರ್ 23 ರಂದು ಬೆಳಿಗ್ಗೆ 10.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಹೊಸದಾಗಿ ನೇಮಕವಾಗಿರುವ ಸುಮಾರು 71 ಸಾವಿರಕ್ಕೂ ಅಧಿಕ ಮಂದಿಗೆ ನೇಮಕಾತಿ ಪತ್ರಗಳನ್ನು ವಿಡಿಯೋ ಕಾನ್ಸರೆನ್ಸ್‌ ಮೂಲಕ ವಿತರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಮಂತ್ರಿ ಅವರ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ರೋಜ್‌ಗಾರ್ ಮೇಳವು ಒಂದು ಮಹತ್ವದ ಹೆಜ್ಜೆಯಾಗಿದೆ. ಇದು …

Read More »

ಕ್ಯಾಥೋಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ ನವದೆಹಲಿಯ ಸಿಬಿಸಿಐ ಕೇಂದ್ರದಲ್ಲಿ ಡಿಸೆಂಬರ್ 23 ರಂದು ಆಯೋಜಿಸಿರುವ ಕ್ರಿಸ್ಮಸ್ ಆಚರಣೆಯಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿ

ಡಿಸೆಂಬರ್ 23 , 2024 ರಂದು ಸಂಜೆ 6:30ಕ್ಕೆ ನವದೆಹಲಿಯ ಕ್ಯಾಥೋಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ(ಸಿಬಿಸಿಐ) ಕೇಂದ್ರದ ಆವರಣದಲ್ಲಿ ಕ್ಯಾಥೋಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ (ಸಿಬಿಸಿಐ) ಆಯೋಜಿಸಿರುವ ಕ್ರಿಸ್ಮಸ್ ಆಚರಣೆಗಳಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. ಪ್ರಧಾನಮಂತ್ರಿಯವರು ಕಾರ್ಡಿನಲ್‌ ಗಳು, ಬಿಷಪ್‌ ಗಳು ಮತ್ತು ಚರ್ಚ್‌ ನ ಇತರ  ನಾಯಕರು ಸೇರಿದಂತೆ ಕ್ರಿಶ್ಚಿಯನ್ ಸಮುದಾಯದ ಪ್ರಮುಖ ನಾಯಕರೊಂದಿಗೆ ಸಂವಾದ ನಡೆಸಲಿದ್ದಾರೆ. ಭಾರತದ ಕ್ಯಾಥೋಲಿಕ್ ಚರ್ಚ್‌ …

Read More »

ಪ್ರಧಾನಮಂತ್ರಿ ಅವರಿಗೆ ಕುವೈತ್‌ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಕುವೈತ್‌ನ ಅಮೀರ್ ಆಗಿರುವ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಬೇರ್ ಅಲ್-ಸಬಾಹ್ ಅವರು ಕುವೈತ್‌ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ ಮುಬಾರಕ್ ಅಲ್-ಕಬೀರ್ ಆರ್ಡರ್ ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಪ್ರದಾನ ಮಾಡಿದರು. ಕುವೈತ್‌ ಪ್ರಧಾನಿ ಶೇಖ್ ಅಹ್ಮದ್ ಅಲ್-ಅಬ್ದುಲ್ಲಾ ಅಲ್-ಅಹ್ಮದ್ ಅಲ್-ಸಬಾಹ್ ಅವರು ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಭಾರತ ಮತ್ತು ಕುವೈತ್ ನಡುವಿನ ದೀರ್ಘಕಾಲದ ಮೈತ್ರಿಗೆ ಹಾಗೂ ಕುವೈತ್‌ನಲ್ಲಿರುವ ಭಾರತೀಯ ಸಮುದಾಯ ಮತ್ತು ಭಾರತದ 1.4 ಶತಕೋಟಿ …

Read More »

ಪ್ರಧಾನಮಂತ್ರಿಗಳಿಂದ ಕುವೈತ್‌ನ ಅಮೀರ್ ಅವರ ಭೇಟಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಕುವೈತ್‌ನ ಅಮೀರ್ ಆಗಿರುವ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಬೇರ್ ಅಲ್-ಸಬಾಹ್ ಅವರನ್ನು ಭೇಟಿ ಮಾಡಿದರು. ಇದು ಉಭಯ ನಾಯಕರ ನಡುವಿನ ಮೊದಲ ಭೇಟಿಯಾಗಿತ್ತು. ಬಯಾನ್ ಅರಮನೆಗೆ ಆಗಮಿಸಿದಾಗ, ಪ್ರಧಾನಿ ಮೋದಿ ಅವರಿಗೆ ಔಪಚಾರಿಕ ಸ್ವಾಗತ ನೀಡಲಾಯಿತು ಮತ್ತು ಕುವೈತ್ ಪ್ರಧಾನಿ ಅಹ್ಮದ್ ಅಲ್-ಅಬ್ದುಲ್ಲಾ ಅಲ್-ಅಹ್ಮದ್ ಅಲ್-ಸಬಾಹ್ ಅವರು ಪ್ರಧಾನಮಂತ್ರಿ ಅವರನ್ನು ಬರಮಾಡಿಕೊಂಡರು. ಎರಡೂ ದೇಶಗಳ ನಡುವಿನ ಬಲವಾದ ಐತಿಹಾಸಿಕ ಮತ್ತು ಸೌಹಾರ್ದ ಸಂಬಂಧಗಳನ್ನು …

Read More »

ಕುವೈತ್ ಗೆ ತೆರಳುವ ಮುನ್ನ ಪ್ರಧಾನಮಂತ್ರಿಯವರ ಹೇಳಿಕೆ

ಇಂದು, ಕುವೈತ್ ನ ಅಮೀರ್ ಅವರ ಹೈನೆಸ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಆಹ್ವಾನದ ಮೇರೆಗೆ ನಾನು ಕುವೈತ್ ಗೆ ಎರಡು ದಿನಗಳ ಭೇಟಿಯನ್ನು ಪ್ರಾರಂಭಿಸುತ್ತಿದ್ದೇನೆ. ಕುವೈತ್ ಜೊತೆಗಿನ ನಮ್ಮ ಸಂಬಂಧ ತಲೆಮಾರುಗಳಿಂದ ಬೆಳೆದು ಬಂದಿದೆ. ಇದನ್ನು ನಾವು ತುಂಬಾ ಮುಖ್ಯವೆಂದು ಭಾವಿಸುತ್ತೇವೆ. ನಾವು ಉತ್ತಮ ವ್ಯಾಪಾರ ಮತ್ತು ಇಂಧನ ಪಾಲುದಾರರು ಮಾತ್ರವಲ್ಲ, ಪಶ್ಚಿಮ ಏಷ್ಯಾದಲ್ಲಿ ಶಾಂತಿ, ಭದ್ರತೆ ಮತ್ತು ಸಮೃದ್ಧಿಗಾಗಿ ಒಟ್ಟಾಗಿ ಕೆಲಸ ಮಾಡುತ್ತೇವೆ. ಕುವೈತ್ …

Read More »

ಅದ್ದೂರಿಯಾಗಿ ನಡೆಯುತ್ತಿರುವ “ರಣ್ ಉತ್ಸವ”ದ ಸಮಯದಲ್ಲಿ ಕಛ್ಚ್ ನ ಅದ್ಭುತ ಸಂಸ್ಕೃತಿ ಮತ್ತು ಹೃದಯಸ್ಪರ್ಶಿ ಆತಿಥ್ಯವನ್ನು ಸ್ವೀಕರಿಸಲು, ಪ್ರಾಚೀನ “ಬಿಳುಪು ರಣ್” (ಬಿಳಿಬಿಳಿಯಾಗಿ ಹೊಳೆಯುವ ಮರಳು) ನ ಸೌಂದರ್ಯ ಅನುಭವಿಸಲು ಪ್ರತಿಯೊಬ್ಬರನ್ನು ಒತ್ತಾಯಿಸಿದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು “ರಣ್ ಉತ್ಸವ”ಕ್ಕೆ ಎಲ್ಲರನ್ನು ಆಹ್ವಾನಿಸಿದ್ದಾರೆ, ಇದು ಮಾರ್ಚ್ 2025 ರವರೆಗೆ ನಡೆಯಲಿದೆ. ಈ ಹಬ್ಬವು ಮರೆಯಲಾಗದ ಅನುಭವವನ್ನು ನೀಡುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು  ಹೇಳಿದರು. ಎಕ್ಸ್ ನ ಸಂದೇಶದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೀಗೆ ಬರೆದಿದ್ದಾರೆ: ” ನಿಮ್ಮೆಲ್ಲರಿಗಾಗಿ ಕಛ್ಚ್ ಕಾಯುತ್ತಿದೆ! ಬನ್ನಿ, ನಡೆಯುತ್ತಿರುವ “ರಣ್ ಉತ್ಸವ”ದ ಸಮಯದಲ್ಲಿ ಕಛ್ಚ್  ನ ಪ್ರಾಚೀನ ಬಿಳುಪು ರಣ್ …

Read More »

ಕುವೈತ್ ನಲ್ಲಿ 101 ವರ್ಷದ ಮಾಜಿ ಐ ಎಫ್ ಎಸ್ ಅಧಿಕಾರಿಯನ್ನು ಭೇಟಿಯಾಗಲು ಪ್ರಧಾನಮಂತ್ರಿ ಎದುರು ನೋಡುತ್ತಿದ್ದಾರೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಮಾಡಿದ ಮನವಿಗೆ ಸ್ಪಂದಿಸಿದ ಪ್ರಧಾನಮಂತ್ರಿ ಅವರು, ಇಂದು ಕುವೈತ್ ನಲ್ಲಿ 101 ವರ್ಷದ ಮಾಜಿ ಐಎಫ್ ಎಸ್ ಅಧಿಕಾರಿ ಶ್ರೀ ಮಂಗಲ್ ಸೈನ್ ಹಂಡಾ ಜೀ ಅವರನ್ನು ಭೇಟಿ ಮಾಡಲು ತಾವು ಎದುರು ನೋಡುತ್ತಿರುವುದಾಗಿ ತಿಳಿಸಿದರು. ಈ ಕುರಿತು ಎಕ್ಸ್ ಖಾತೆಯಲ್ಲಿ ಅವರು ಹೀಗೆ ಬರೆದಿದ್ದಾರೆ: “ಖಂಡಿತ! ನಾನು ಇಂದು ಕುವೈತ್ ನಲ್ಲಿ @MangalSainHanda ಜೀ ಅವರನ್ನು ಭೇಟಿಯಾಗಲು ಎದುರು ನೋಡುತ್ತಿದ್ದೇನೆ,’’ ಎಂದಿದ್ದಾರೆ. …

Read More »

ರಾಜಸ್ಥಾನದ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ಪ್ರಧಾನಮಂತ್ರಿ ಶೋಕ, ಪರಿಹಾರ ಘೋಷಣೆ

ರಾಜಸ್ಥಾನದ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ವ್ಯಕ್ತಪಡಿಸಿದ್ದಾರೆ.  ಅಪಘಾತದಲ್ಲಿ ಮೃತಪಟ್ಟವರ ವಾರಸುದಾರರಿಗೆ ಪಿ ಎಂ ಎನ್ ಆರ್ ಎಫ್ ನಿಂದ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ  ರೂ.  50,000 ಪರಿಹಾರವನ್ನು ಶ್ರೀ ಮೋದಿ ಅವರು ಪ್ರಕಟಿಸಿದ್ದಾರೆ. ಪ್ರಧಾನಮಂತ್ರಿಗಳ ಕಾರ್ಯಾಲಯ ಎಕ್ಸ್ ನಲ್ಲಿ ಮಾಡಿರುವ ಪೋಸ್ಟ್ ಹೀಗಿದೆ: “ರಾಜಸ್ಥಾನದ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಿಂದ …

Read More »

2024ರ ಡಿಸೆಂಬರ್ 21 ರಂದು ಉಪರಾಷ್ಟ್ರಪತಿಯವರು ಚಂಡೀಗಢಕ್ಕೆ ಭೇಟಿ ನೀಡಲಿದ್ದಾರೆ

ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು 2024ರ ಡಿಸೆಂಬರ್ 21 ರಂದು ಚಂಡೀಗಢದಲ್ಲಿ ಒಂದು ದಿನದ ಪ್ರವಾಸದಲ್ಲಿರುತ್ತಾರೆ. ಅವರ ಭೇಟಿಯ ಸಂದರ್ಭದಲ್ಲಿ, ಚಂಡೀಗಢದ ಪಂಜಾಬ್ ವಿಶ್ವವಿದ್ಯಾಲಯದ ಕುಲಪತಿಯೂ ಆಗಿರುವ ಭಾರತದ ಉಪರಾಷ್ಟ್ರಪತಿಯವರು ಪಂಜಾಬ್ ವಿಶ್ವವಿದ್ಯಾನಿಲಯದ ಹಳೆಯ ವಿದ್ಯಾರ್ಥಿಗಳ 5ನೇ ಜಾಗತಿಕ ಸಭೆಯನ್ನು ಉದ್ಘಾಟಿಸಲಿದ್ದಾರೆ.   भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर …

Read More »

ಸಾರ್ವಜನಿಕ ನಂಬಿಕೆ ಮತ್ತು ನಿರೀಕ್ಷೆಗಳನ್ನು ಗೌರವಿಸುವಂತೆ ರಾಜ್ಯಸಭಾ ಅಧ್ಯಕ್ಷರಾದ ಶ್ರೀ ಜಗದೀಪ್ ಧನಕರ್ ಸಂಸದರಿಗೆ ಮನವಿ

ರಾಜ್ಯಸಭೆಯಲ್ಲಿ ಇಂದು ಗದ್ದಲದ ನಡುವೆಯೇ ಸಭಾಪತಿ ಶ್ರೀ ಜಗದೀಪ್ ಧನಕರ್ ಅವರು ಸಂಸದೀಯ ಕಾರ್ಯಕಲಾಪಗಳ ಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದರು. “ಗೌರವಾನ್ವಿತ ಸದಸ್ಯರೇ, ಜಗತ್ತು ನಮ್ಮ ಪ್ರಜಾಪ್ರಭುತ್ವವನ್ನು ನೋಡುತ್ತಿದೆ, ಆದರೂ ನಾವು ನಮ್ಮ ನಡವಳಿಕೆಯ ಮೂಲಕ ನಮ್ಮ ನಾಗರಿಕರನ್ನು ವಿಫಲಗೊಳಿಸುತ್ತೇವೆ. ಈ ಸಂಸದೀಯ ಅಡೆತಡೆಗಳು ಸಾರ್ವಜನಿಕ ನಂಬಿಕೆ ಮತ್ತು ನಿರೀಕ್ಷೆಗಳನ್ನು ಅಣಕಿಸುತ್ತವೆ. ಶ್ರದ್ಧೆಯಿಂದ ಸೇವೆ ಸಲ್ಲಿಸುವ ನಮ್ಮ ಮೂಲಭೂತ ಕರ್ತವ್ಯವನ್ನು ನಿರ್ಲಕ್ಷಿಸಲಾಗಿದೆ. ತರ್ಕಬದ್ಧ ಸಂವಾದವು ಮೇಲುಗೈ ಸಾಧಿಸಬೇಕಾದಲ್ಲಿ, ನಾವು ಅವ್ಯವಸ್ಥೆಯನ್ನು …

Read More »