Saturday, February 07 2026 | 03:07:21 PM
Breaking News

Tag Archives: Amit Shah

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಲೋಕಸಭೆಯಲ್ಲಿ ಸಂವಿಧಾನ (ನೂರ ಮೂವತ್ತನೇ ತಿದ್ದುಪಡಿ) ಮಸೂದೆ, 2025, ಕೇಂದ್ರಾಡಳಿತ ಪ್ರದೇಶಗಳ (ತಿದ್ದುಪಡಿ) ಮಸೂದೆ, 2025 ಮತ್ತು ಜಮ್ಮು ಮತ್ತು ಕಾಶ್ಮೀರ ಪುನರ್ರಚನೆ (ತಿದ್ದುಪಡಿ) ಮಸೂದೆ, 2025 ಗಳನ್ನು ಮಂಡಿಸಿದರು

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ಲೋಕಸಭೆಯಲ್ಲಿ ಸಂವಿಧಾನ (ನೂರ ಮೂವತ್ತನೇ ತಿದ್ದುಪಡಿ) ಮಸೂದೆ, 2025, ಕೇಂದ್ರಾಡಳಿತ ಪ್ರದೇಶಗಳ (ತಿದ್ದುಪಡಿ) ಮಸೂದೆ, 2025 ಮತ್ತು ಜಮ್ಮು ಮತ್ತು ಕಾಶ್ಮೀರ ಪುನರ್ರಚನೆ (ತಿದ್ದುಪಡಿ) ಮಸೂದೆ, 2025 ಗಳನ್ನು ಮಂಡಿಸಿದರು. ದೇಶದಲ್ಲಿ ರಾಜಕೀಯ ಭ್ರಷ್ಟಾಚಾರದ ವಿರುದ್ಧ ಮೋದಿ ಸರ್ಕಾರದ ಬದ್ಧತೆ ಮತ್ತು ಸಾರ್ವಜನಿಕ ಆಕ್ರೋಶವನ್ನು ಪರಿಗಣಿಸಿ, ಲೋಕಸಭಾಧ್ಯಕ್ಷರ ಒಪ್ಪಿಗೆಯೊಂದಿಗೆ ಇಂದು ಸಂಸತ್ತಿನಲ್ಲಿ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು …

Read More »

ಕೇಂದ್ರ ಗೃಹ ಮತ್ತು ಸಹಕಾರ ಖಾತೆ ಸಚಿವರಾದ ಶ್ರೀ ಅಮಿತ್ ಶಾ ಅವರು ಹರ್ ಘರ್ ತಿರಂಗಾ’ ಅಭಿಯಾನದ ಅಡಿಯಲ್ಲಿ ಇಂದು ನವದೆಹಲಿಯ ತಮ್ಮ ನಿವಾಸದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದರು

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ನವದೆಹಲಿಯ ತಮ್ಮ ನಿವಾಸದಲ್ಲಿ ‘ಹರ್ ಘರ್ ತಿರಂಗಾ’ ಅಭಿಯಾನದ ಅಡಿಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಪ್ರಾರಂಭವಾದ ‘ಹರ್ ಘರ್ ತಿರಂಗಾ’ ಅಭಿಯಾನವು ಇಂದು ದೇಶವನ್ನು ಏಕತೆಯ ಎಳೆಯಲ್ಲಿ ಬಂಧಿಸುವ ಮತ್ತು ದೇಶಭಕ್ತಿಯ ಭಾವನೆಯನ್ನು ಬಲಪಡಿಸುವ ಸಾಮೂಹಿಕ ಅಭಿಯಾನವಾಗಿ ಮಾರ್ಪಟ್ಟಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ …

Read More »

ಹೊಸದಿಲ್ಲಿಯಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರಿಗೆ 2024-25ನೇ ಸಾಲಿನ ಲಾಭಾಂಶದ ರೂಪದಲ್ಲಿ 22.90 ಕೋಟಿ ರೂ.ಗಳ ಚೆಕ್ ಹಸ್ತಾಂತರಿಸಿದ ರೆಪ್ಕೋ ಬ್ಯಾಂಕ್

ರೆಪ್ಕೋ ಬ್ಯಾಂಕ್ 2024-25ನೇ ಸಾಲಿನ ಲಾಭಾಂಶದ ರೂಪದಲ್ಲಿ 22.90 ಕೋಟಿ ರೂ.ಗಳ ಚೆಕ್ ಅನ್ನು ಹೊಸದಿಲ್ಲಿಯಲ್ಲಿ  ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರಿಗೆ ಹಸ್ತಾಂತರಿಸಿತು. 2024-25ನೇ ಹಣಕಾಸು ವರ್ಷದಲ್ಲಿ 140 ಕೋಟಿ ರೂ.ಗಳ ಲಾಭವನ್ನು ಗಳಿಸಿದ್ದಕ್ಕಾಗಿ ಕೇಂದ್ರ ಗೃಹ ಸಚಿವರು ರೆಪ್ಕೋ ಬ್ಯಾಂಕ್ ತಂಡವನ್ನು ಅಭಿನಂದಿಸಿದರು, ಇದು ಸಹಕಾರಿ ಬ್ಯಾಂಕಿನ ಇತಿಹಾಸದಲ್ಲಿಯೇ ಅತ್ಯಧಿಕವಾಗಿದೆ. ‘X’ ನಲ್ಲಿ ಮಾಡಲಾದ ಪೋಸ್ಟ್‌ನಲ್ಲಿ ಶ್ರೀ ಅಮಿತ್ ಶಾ ಅವರು ಗೃಹ …

Read More »

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಜುಲೈ 24 ರಂದು ನವದೆಹಲಿಯಲ್ಲಿ ‘ರಾಷ್ಟ್ರೀಯ ಸಹಕಾರ ನೀತಿ 2025’ ಅನ್ನು ಅನಾವರಣಗೊಳಿಸಲಿದ್ದಾರೆ

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು 2025ರ ಜುಲೈ 24ರಂದು ನವದೆಹಲಿಯ ಅಟಲ್ ಅಕ್ಷಯ್ ಉರ್ಜಾ ಭವನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸಹಕಾರ ನೀತಿ 2025 ಅನ್ನು ಪ್ರಕಟಿಸಲಿದ್ದಾರೆ. ರಾಷ್ಟ್ರೀಯ ಸಹಕಾರಿ ನೀತಿಯ ಕರಡು ಸಮಿತಿಯ ಸದಸ್ಯರು, ಎಲ್ಲಾ ರಾಷ್ಟ್ರೀಯ ಸಹಕಾರಿ ಒಕ್ಕೂಟಗಳ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರು, ಸಚಿವಾಲಯದ ಹಿರಿಯ ಅಧಿಕಾರಿಗಳು, ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (ಎನ್ ಸಿಡಿಸಿ), ರಾಷ್ಟ್ರೀಯ ಸಹಕಾರಿ …

Read More »

ಹಿಮಾಚಲ ಪ್ರದೇಶದಲ್ಲಿ ನೈಸರ್ಗಿಕ ವಿಪತ್ತುಗಳ ಆವರ್ತನ ಮತ್ತು ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು ಬಹು-ವಲಯ ಕೇಂದ್ರ ತಂಡವನ್ನು ರಚಿಸಲು ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್‌ ಶಾ ನಿರ್ದೇಶನ ನೀಡಿದ್ದಾರೆ

ಹಿಮಾಚಲ ಪ್ರದೇಶದಲ್ಲಿ ನೈಸರ್ಗಿಕ ವಿಪತ್ತುಗಳ ಆವರ್ತನ ಮತ್ತು ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು ಬಹು-ವಲಯ ಕೇಂದ್ರ ತಂಡವನ್ನು ರಚಿಸುವಂತೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್‌ ಶಾ ನಿರ್ದೇಶನ ನೀಡಿದರು. ಕೇಂದ್ರ ಗೃಹ ಸಚಿವರ ನೇತೃತ್ವದಲ್ಲಿಇತ್ತೀಚೆಗೆ ನಡೆದ ಸಭೆಯಲ್ಲಿ, ಮೇಘಸ್ಫೋಟ, ಪ್ರವಾಹ, ಭೂಕುಸಿತ ಮತ್ತು ಧಾರಾಕಾರ ಮಳೆಯ ಆವರ್ತನ ಮತ್ತು ತೀವ್ರತೆಯಲ್ಲಿ ರಾಜ್ಯವು ಹೆಚ್ಚಳವನ್ನು ಕಂಡಿದೆ, ಇದು ರಾಜ್ಯದಲ್ಲಿ ವ್ಯಾಪಕ ಜೀವಹಾನಿ, ಮೂಲಸೌಕರ್ಯ, ಜೀವನೋಪಾಯಕ್ಕೆ ಹಾನಿ ಮತ್ತು ಪರಿಸರ ನಾಶಕ್ಕೆ ಕಾರಣವಾಗಿದೆ …

Read More »

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಪ್ರತಿಷ್ಠಿತ 2029ರ ವಿಶ್ವ ಪೊಲೀಸ್ ಮತ್ತು ಅಗ್ನಿಶಾಮಕ ಕ್ರೀಡಾಕೂಟಕ್ಕೆ ಭಾರತಕ್ಕೆ ಆತಿಥ್ಯ ನೀಡಲು ನಿರ್ಧರಿಸಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದ್ದಾರೆ

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಪ್ರತಿಷ್ಠಿತ 2029ರ ವಿಶ್ವ ಪೊಲೀಸ್ ಮತ್ತು ಅಗ್ನಿಶಾಮಕ ಕ್ರೀಡಾಕೂಟಕ್ಕೆ ಭಾರತವನ್ನು ಆತಿಥ್ಯ ವಹಿಸುವ ದೇಶವಾಗಿ ನೇಮಿಸಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಅಮಿತ್ ಶಾ ಅವರು, “ಪ್ರತಿಷ್ಠಿತ 2029ರ ವಿಶ್ವ ಪೊಲೀಸ್ ಮತ್ತು ಅಗ್ನಿಶಾಮಕ ಕ್ರೀಡಾಕೂಟಕ್ಕೆ ಭಾರತವನ್ನು ಆತಿಥ್ಯ ದೇಶವಾಗಿ ನಿಯೋಜಿಸಿರುವುದರಿಂದ ಇದು ಪ್ರತಿಯೊಬ್ಬ ನಾಗರಿಕರಿಗೆ ಬಹಳ ಹೆಮ್ಮೆಯ ಕ್ಷಣವಾಗಿದೆ. …

Read More »

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಮಂಗಳವಾರ ಉತ್ತರ ಪ್ರದೇಶದ ವಾರಣಾಸಿಯಲ್ಲಿ ʻಕೇಂದ್ರ ವಲಯ ಮಂಡಳಿʼಯ 25ನೇ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು 2025ರ ಜೂನ್ 24ರ ಮಂಗಳವಾರ ಉತ್ತರ ಪ್ರದೇಶದ ವಾರಣಾಸಿಯಲ್ಲಿ `ಕೇಂದ್ರ ವಲಯ ಮಂಡಳಿ’ಯ 25ನೇ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಸಭೆಯಲ್ಲಿ ಸದಸ್ಯ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಪ್ರತಿ ರಾಜ್ಯದ ಇಬ್ಬರು ಹಿರಿಯ ಸಚಿವರು ಭಾಗವಹಿಸಲಿದ್ದಾರೆ. ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳು ಮತ್ತು ಇತರ ಹಿರಿಯ ಅಧಿಕಾರಿಗಳು ಹಾಗೂ ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ. ʻಕೇಂದ್ರ ವಲಯ ಮಂಡಳಿʼಯು ಛತ್ತೀಸ್‌ಗಢ, ಮಧ್ಯಪ್ರದೇಶ, ಉತ್ತರಾಖಂಡ ಮತ್ತು ಉತ್ತರ ಪ್ರದೇಶ ರಾಜ್ಯಗಳನ್ನು ಒಳಗೊಂಡಿದೆ. ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಬರುವ ಅಂತರ-ರಾಜ್ಯ ಮಂಡಳಿ ಸಚಿವಾಲಯವು ಉತ್ತರ ಪ್ರದೇಶ ಸರ್ಕಾರದ ಸಹಯೋಗದೊಂದಿಗೆ ಈ ಸಭೆಯನ್ನು ಆಯೋಜಿಸಿದೆ. ʻರಾಜ್ಯಗಳ ಪುನರ್‌ಸಂಘಟನೆ ಕಾಯ್ದೆ-1956ʼರ ಸೆಕ್ಷನ್ 15 ರಿಂದ 22ರ ಅಡಿಯಲ್ಲಿ, ಐದು ವಲಯ ಮಂಡಳಿಗಳನ್ನು ಸ್ಥಾಪಿಸಲಾಯಿತು. ಕೇಂದ್ರ ಗೃಹ ಸಚಿವರು ಈ ಐದು ವಲಯ ಮಂಡಳಿಗಳ ಅಧ್ಯಕ್ಷರಾಗಿದ್ದಾರೆ. ಸದಸ್ಯ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು / ಲೆಫ್ಟಿನೆಂಟ್ ಗವರ್ನರ್ಗಳು / ಆಡಳಿತಗಾರರು ಇದರ ಸದಸ್ಯರಾಗಿರುತ್ತಾರೆ. ಈ ಸದಸ್ಯರಲ್ಲಿ, ಒಂದು ಸದಸ್ಯ ರಾಜ್ಯದ ಮುಖ್ಯಮಂತ್ರಿ (ಪ್ರತಿ ವರ್ಷ ಆವರ್ತನೆ) ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಾರೆ. ಪ್ರತಿ ಸದಸ್ಯ ರಾಜ್ಯದಿಂದ, ರಾಜ್ಯಪಾಲರು ಇಬ್ಬರು ಮಂತ್ರಿಗಳನ್ನು ಮಂಡಳಿಯ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡುತ್ತಾರೆ. ಪ್ರತಿ ʻವಲಯ ಮಂಡಳಿʼಯು ಮುಖ್ಯ ಕಾರ್ಯದರ್ಶಿಗಳ ಮಟ್ಟದಲ್ಲಿ ಶಾಶ್ವತ ಸಮಿತಿಯನ್ನು ರಚಿಸಿದೆ. ರಾಜ್ಯಗಳು ಪ್ರಸ್ತಾಪಿಸಿದ ಸಮಸ್ಯೆಗಳನ್ನು ಮೊದಲಿಗೆ ಚರ್ಚೆಗಾಗಿ ಸಂಬಂಧಪಟ್ಟ ವಲಯ ಮಂಡಳಿಯ ಶಾಶ್ವತ ಸಮಿತಿಯ ಮುಂದಿಡಲಾಗುತ್ತದೆ. ಶಾಶ್ವತ ಸಮಿತಿಯ ಪರಿಶೀಲನೆಯ ನಂತರ, ಉಳಿದ ಸಮಸ್ಯೆಗಳನ್ನು ಹೆಚ್ಚಿನ ಚರ್ಚೆಗಾಗಿ ವಲಯ ಮಂಡಳಿ ಸಭೆಯ ಮುಂದಿಡಲಾಗುತ್ತದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಸರ್ವಾಂಗೀಣ ಅಭಿವೃದ್ಧಿಗಾಗಿ ಸಹಕಾರ ಮತ್ತು ಸ್ಪರ್ಧಾತ್ಮಕ ಒಕ್ಕೂಟ ವ್ಯವಸ್ಥೆಯನ್ನು ಬಳಸಿಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ. ಬಲವಾದ ರಾಜ್ಯಗಳು ಬಲವಾದ ರಾಷ್ಟ್ರವನ್ನು ನಿರ್ಮಿಸಬಲ್ಲವು ಎಂಬ ನಂಬಿಕೆಯೊಂದಿಗೆ, ʻವಲಯ ಮಂಡಳಿʼಗಳು ಎರಡು ಅಥವಾ ಹೆಚ್ಚು ರಾಜ್ಯಗಳ ಮೇಲೆ ಪರಿಣಾಮ ಬೀರುವ ಅಥವಾ ಕೇಂದ್ರ ಮತ್ತು ರಾಜ್ಯಗಳ ಮೇಲೆ ಪರಿಣಾಮ ಬೀರುವ ವಿಷಯಗಳ ಬಗ್ಗೆ ಸಂವಾದ ಮತ್ತು ಚರ್ಚೆಗೆ ರಚನಾತ್ಮಕ ಕಾರ್ಯವಿಧಾನವನ್ನು ಒದಗಿಸುತ್ತವೆ.  ಈ ಮೂಲಕ ಪರಸ್ಪರ ಸಹಕಾರವನ್ನು ಹೆಚ್ಚಿಸಲು ಪ್ರಮುಖ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತವೆ. ʻವಲಯ ಮಂಡಳಿʼಗಳು ಸಲಹೆದಾರನ ಪಾತ್ರವನ್ನು ವಹಿಸುತ್ತದೆ; ಆದಾಗ್ಯೂ, ಕಳೆದ ಕೆಲವು ವರ್ಷಗಳಲ್ಲಿ, ಈ ಮಂಡಳಿಗಳು ವಿವಿಧ ಕ್ಷೇತ್ರಗಳಲ್ಲಿ ಪರಸ್ಪರ ತಿಳಿವಳಿಕೆ ಮತ್ತು ಸಹಕಾರದ ಆರೋಗ್ಯಕರ ಬಂಧಗಳನ್ನು ಉತ್ತೇಜಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುವುದನ್ನು ಕಾಣಬಹುದು. ಎಲ್ಲಾ ರಾಜ್ಯ ಸರ್ಕಾರಗಳು, ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳ ಸಹಕಾರದೊಂದಿಗೆ, ಕಳೆದ ಹನ್ನೊಂದು ವರ್ಷಗಳಲ್ಲಿ ವಿವಿಧ ವಲಯ ಮಂಡಳಿಗಳು ಮತ್ತು ಅವುಗಳ ಶಾಶ್ವತ ಸಮಿತಿಗಳ ಒಟ್ಟು 61 ಸಭೆಗಳು ನಡೆದಿವೆ. ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಲೈಂಗಿಕ ಅಪರಾಧಗಳ ಪ್ರಕರಣಗಳ ತ್ವರಿತ ತನಿಖೆ ಮತ್ತು ಅವುಗಳ ತ್ವರಿತ ವಿಲೇವಾರಿಗಾಗಿ ತ್ವರಿತ ವಿಶೇಷ ನ್ಯಾಯಾಲಯಗಳ (ಎಫ್‌ಟಿಎಸ್‌ಸಿ) ಅನುಷ್ಠಾನ ಸೇರಿದಂತೆ ರಾಷ್ಟ್ರೀಯ ಪ್ರಾಮುಖ್ಯತೆಯ ವಿಶಾಲ ವಿಷಯಗಳ ಬಗ್ಗೆಯೂ ವಲಯ ಮಂಡಳಿಗಳು ಚರ್ಚಿಸುತ್ತವೆ. ಪ್ರತಿ ಹಳ್ಳಿಯ ಗೊತ್ತುಪಡಿಸಿದ ಪ್ರದೇಶದಲ್ಲಿ ಶಾಶ್ವತ ಬ್ಯಾಂಕಿಂಗ್ ಶಾಖೆಯ ಸೌಲಭ್ಯಗಳನ್ನು ಒದಗಿಸುವುದು; ತುರ್ತು ಪ್ರತಿಕ್ರಿಯೆ ಬೆಂಬಲ ವ್ಯವಸ್ಥೆ …

Read More »

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರಿಂದ ಬೆಂಗಳೂರಿನ ಆದಿಚುಂಚನಗಿರಿ ವಿಶ್ವವಿದ್ಯಾಲಯ (ACU) ಕ್ಯಾಂಪಸ್ ಉದ್ಘಾಟನೆ

ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ಬೆಂಗಳೂರಿನಲ್ಲಿ ಆದಿಚುಂಚನಗಿರಿ ವಿಶ್ವವಿದ್ಯಾಲಯದ (ಎಸಿಯು) ಬೆಂಗಳೂರು ಕ್ಯಾಂಪಸ್ ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ, ನಮ್ಮ ಸಂಸ್ಕೃತಿಯ ಮೂಲ ತತ್ವ “ಸರ್ವ ಜನ ಹಿತಾಯ, ಸರ್ವ ಜನ ಸುಖಾಯ” ಎಂಬುದಾಗಿದೆ. ಇದರರ್ಥ ಕೇವಲ ತನ್ನ ಬಗ್ಗೆ ಮಾತ್ರವಲ್ಲದೆ ಎಲ್ಲರ ಕಲ್ಯಾಣ ಮತ್ತು ಸಂತೋಷದ ಬಗ್ಗೆ ಚಿಂತಿಸುವುದು ಎಂದು ಹೇಳಿದರು. …

Read More »

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ, ಭಾರತ ಸರ್ಕಾರವು ಪ್ರಕೃತಿ ವಿಕೋಪಗಳು ಮತ್ತು ವಿಪತ್ತುಗಳ ಸಮಯದಲ್ಲಿ ರಾಜ್ಯ ಸರ್ಕಾರಗಳೊಂದಿಗೆ ಜೊತೆಯಾಗಿ ನಿಂತಿದೆ

2023ರ ಪ್ರವಾಹ, ಭೂಕುಸಿತ, ಮೇಘಸ್ಫೋಟದ ನಂತರ ಹಿಮಾಚಲ ಪ್ರದೇಶ ರಾಜ್ಯಕ್ಕೆ ಚೇತರಿಕೆ ಮತ್ತು ಪುನರ್ ನಿರ್ಮಾಣ ಯೋಜನೆಗೆ ಒಟ್ಟು 2006.40 ಕೋಟಿ ರೂ.ಗಳನ್ನು  ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರ ಅಧ್ಯಕ್ಷತೆಯ ಉನ್ನತ ಮಟ್ಟದ ಸಮಿತಿಯು ಅನುಮೋದಿಸಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (ಎನ್.ಡಿ.ಆರ್.ಎಫ್) ಅಡಿಯಲ್ಲಿ ಚೇತರಿಕೆ ಮತ್ತು ಪುನರ್ನಿರ್ಮಾಣ ನಿಧಿ ವಿಭಾಗದಿಂದ ರಾಜ್ಯಕ್ಕೆ ಆರ್ಥಿಕ ಸಹಾಯದ ಪ್ರಸ್ತಾವನೆಯನ್ನು ಹಣಕಾಸು ಸಚಿವರು, ಕೃಷಿ ಸಚಿವರು ಮತ್ತು …

Read More »

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಮಿತಿಯು ಐದು ರಾಜ್ಯಗಳಿಗೆ 1554.99 ಕೋಟಿ ರೂ.ಗಳ ಹೆಚ್ಚುವರಿ ಕೇಂದ್ರ ನೆರವಿನ ತನ್ನ ಅನುಮೋದನೆ ನೀಡಿದೆ

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಮಿತಿ (ಎಚ್ಎಲ್ ಸಿ) 2024ರಲ್ಲಿ ಪ್ರವಾಹ, ಪ್ರವಾಹ, ಭೂಕುಸಿತ, ಚಂಡಮಾರುತದಿಂದ ಹಾನಿಗೊಳಗಾದ ಐದು ರಾಜ್ಯಗಳಿಗೆ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿ (ಎನ್ ಡಿ ಆರ್ ಎಫ್) ಅಡಿಯಲ್ಲಿ 1554.99 ಕೋಟಿ ರೂ.ಗಳ ಹೆಚ್ಚುವರಿ ಕೇಂದ್ರ ನೆರವನ್ನು ನೀಡಲು ಅನುಮೋದನೆ ನೀಡಿದೆ. ಈ ನೈಸರ್ಗಿಕ ವಿಪತ್ತುಗಳನ್ನು ಎದುರಿಸಿದ ಐದು ರಾಜ್ಯಗಳ ಜನರಿಗೆ ಸಹಾಯ ಮಾಡುವ …

Read More »