ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷರಾದ ಘನತೆವೆತ್ತ ಶ್ರೀ ಎಮ್ಯಾನುಯೆಲ್ ಮ್ಯಾಕ್ರೋನ್ ಅವರು ಇಂದು ಜಂಟಿಯಾಗಿ ಕ್ಯಾಡರಾಚೆಯಲ್ಲಿರುವ ಅಂತಾರಾಷ್ಟ್ರೀಯ ಥರ್ಮೋನ್ಯೂಕ್ಲಿಯರ್ ಪ್ರಾಯೋಗಿಕ ರಿಯಾಕ್ಟರ್ ಗೆ (ಐಟಿಇಆರ್) ಭೇಟಿ ನೀಡಿದ್ದಾರೆ. ನಾಯಕರನ್ನು ಐಟಿಇಆರ್ ಮಹಾನಿರ್ದೇಶಕರು ಸ್ವಾಗತಿಸಿದರು. ಈ ಭೇಟಿಯು ವಿಶಿಷ್ಟವಾಗಿದ್ದು, ವಿಶ್ವದ ಅತ್ಯಂತ ಮಹತ್ವಾಕಾಂಕ್ಷೆಯ ಸಮ್ಮಿಳನ ಇಂಧನ ಯೋಜನೆಗಳಲ್ಲಿ ಒಂದಾದ ಐಟಿಇಆರ್ ಗೆ ಯಾವುದೇ ರಾಷ್ಟ್ರದ ಮುಖ್ಯಸ್ಥರು ಅಥವಾ ಸರ್ಕಾರದ ಮುಖ್ಯಸ್ಥರ ಮೊದಲ ಭೇಟಿಯಾಗಿದೆ. ಭೇಟಿಯ ಸಮಯದಲ್ಲಿ, ವಿಶ್ವದ …
Read More »ಉತ್ತಮ ಕೌಶಲ್ಯ ಅಭಿವೃದ್ಧಿ ಪರಿಸರ ವ್ಯವಸ್ಥೆ ಭಾರತದ ಯುವಜನರನ್ನು ಉದಯೋನ್ಮುಖ ಉದ್ಯೋಗಾವಕಾಶಗಳಿಗೆ ಸಜ್ಜುಗೊಳಿಸುತ್ತದೆ – ಶ್ರೀ ಜಯಂತ್ ಚೌಧರಿ
ಕೌಶಲ್ಯ ಅಭಿವೃದ್ಧಿಗಾಗಿ ಸಮಗ್ರ ಮತ್ತು ಸುರಕ್ಷಿತ ಮೂಲಸೌಕರ್ಯವನ್ನು ಬೆಳೆಸುವ ಮಹತ್ವದ ಹೆಜ್ಜೆಯಾಗಿ, ಕೇಂದ್ರ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ರಾಜ್ಯ ಸಚಿವರಾದ (ಸ್ವತಂತ್ರ ನಿರ್ವಹಣೆ) ಶ್ರೀ ಜಯಂತ್ ಚೌಧರಿ ಅವರು ಇಂದು ಬೆಂಗಳೂರಿನ ರಾಷ್ಟ್ರೀಯ ಕೌಶಲ್ಯ ತರಬೇತಿ ಸಂಸ್ಥೆ (ಎನ್.ಎಸ್.ಟ.ಐ.) (ಸಾಮಾನ್ಯ) ಯಲ್ಲಿ ಹೊಸದಾಗಿ ನಿರ್ಮಿಸಲಾದ ವಸತಿಗೃಹವನ್ನು ಉದ್ಘಾಟಿಸಿದರು. ಈ ಸೌಲಭ್ಯವು ತರಬೇತಿ ಪಡೆಯುವವರಿಗೆ ಸುರಕ್ಷಿತ ಮತ್ತು ಆರಾಮದಾಯಕವಾದ ವಸತಿ ವಾತಾವರಣವನ್ನು ಒದಗಿಸುವ ಗುರಿಯನ್ನು ಹೊಂದಿದೆ ಮತ್ತು ಯುವಕರನ್ನು ಸಬಲೀಕರಣಗೊಳಿಸುವ …
Read More »100 ಗಿಗಾವ್ಯಾಟ್ ಸೌರ ವಿದ್ಯುತ್ ಸಾಮರ್ಥ್ಯ ಸಾಧಿಸುವ ಮೂಲಕ ಐತಿಹಾಸಿಕ ಮೈಲಿಗಲ್ಲು ಸಾಧಿಸಿದ ಭಾರತ
ಭಾರತವು 100 ಗಿಗಾವ್ಯಾಟ್ ಸ್ಥಾಪಿತ ಸೌರಶಕ್ತಿ ಸಾಮರ್ಥ್ಯವನ್ನು ತಲುಪುವ ಮೂಲಕ ಐತಿಹಾಸಿಕ ಮೈಲಿಗಲ್ಲು ಸಾಧಿಸಿದೆ ಮತ್ತು ನವೀಕರಿಸಬಹುದಾದ ಇಂಧನ ವಲಯದಲ್ಲಿ ಜಾಗತಿಕ ನಾಯಕನಾಗಿ ತನ್ನ ಸ್ಥಾನವನ್ನು ಬಲಪಡಿಸಿಕೊಂಡಿದೆ. ಈ ಗಮನಾರ್ಹ ಸಾಧನೆಯು ಸ್ವಚ್ಛ, ಹಸಿರು ಭವಿಷ್ಯಕ್ಕಾಗಿ ರಾಷ್ಟ್ರದ ಬದ್ಧತೆಗೆ ಸಾಕ್ಷಿಯಾಗಿದೆ ಮತ್ತು ಇದು 2030ರ ವೇಳೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿಗದಿಪಡಿಸಿದ 500 ಗಿಗಾವ್ಯಾಟ್ ನವೀಕರಿಸಬಹುದಾದ ಮೂಲಗಳನ್ನು ಆಧರಿಸಿದ ಇಂಧನ ಸಾಮರ್ಥ್ಯದ ಮಹತ್ವಾಕಾಂಕ್ಷೆಯ ಗುರಿಯನ್ನು ಸಾಧಿಸುವತ್ತ ಮಹತ್ವದ …
Read More »ಭಾರತ ಮತ್ತು ಇತರ 20 ದೇಶಗಳ ಭಾಗವಹಿಸುವಿಕೆಯೊಂದಿಗೆ ವೇವ್ಸ್ 2025 “ರೀಲ್ ಮೇಕಿಂಗ್”ಸವಾಲಿಗಾಗಿ 3,300ಕ್ಕೂ ಹೆಚ್ಚು ನಮೂದುಗಳನ್ನು ಸ್ವೀಕರಿಸಲಾಗಿದೆ
ವರ್ಲ್ಡ್ ಆಡಿಯೋ ವಿಷುಯಲ್ & ಎಂಟರ್ಟೈನ್ಮೆಂಟ್ ಶೃಂಗಸಭೆ (ವೇವ್ಸ್) 2025ರಲ್ಲಿ “ರೀಲ್ ಮೇಕಿಂಗ್” ಚಾಲೆಂಜ್ ಭಾರತ ಮತ್ತು 20 ದೇಶಗಳಿಂದ 3,379 ನೋಂದಣಿಗಳೊಂದಿಗೆ ಅಗಾಧ ಪ್ರತಿಕ್ರಿಯೆಯನ್ನು ಪಡೆದುಕೊಂಡಿದೆ. ಕ್ರಿಯೇಟ್ ಇನ್ ಇಂಡಿಯಾ ವೇವ್ಸ್ 2025ರ ಅಡಿಯಲ್ಲಿ ಪ್ರಮುಖ ಉಪಕ್ರಮವಾಗಿ ಪ್ರಾರಂಭಿಸಲಾದ ಸ್ಪರ್ಧೆಯು ಮಾಧ್ಯಮ ಮತ್ತು ಮನರಂಜನೆಗಾಗಿ ಜಾಗತಿಕ ಕೇಂದ್ರವಾಗಿ ಭಾರತದ ಬೆಳೆಯುತ್ತಿರುವ ಪ್ರಭಾವವನ್ನು ಎತ್ತಿ ತೋರಿಸುತ್ತದೆ ಮತ್ತು ದೇಶದ ವೇಗವಾಗಿ ವಿಸ್ತರಿಸುತ್ತಿರುವ ಡಿಜಿಟಲ್ ಕ್ರಿಯೇಟರ್ ಆರ್ಥಿಕತೆಯನ್ನು ಪ್ರತಿಬಿಂಬಿಸುತ್ತದೆ. ಇದು ಭಾರತ ಸರ್ಕಾರದ “ಕ್ರಿಯೇಟ್ ಇನ್ ಇಂಡಿಯಾ” …
Read More »ಭಾರತ ಸರ್ಕಾರದ ಗ್ರಾಹಕ ವ್ಯವಹಾರಗಳ ಇಲಾಖೆಯು ಭಾರತದಾದ್ಯಂತ ಸಮಯವನ್ನು ಸಮನ್ವಯ (ಸಿಂಕ್ರೊನೈಸ್) ಮಾಡಲು ಕಾನೂನು ಮಾಪನಶಾಸ್ತ್ರ (ಭಾರತೀಯ ಪ್ರಮಾಣಿತ ಸಮಯ) ನಿಯಮಗಳು, 2025ರ ಕರಡನ್ನು ಅಧಿಸೂಚಿಸಿದೆ
‘ಒಂದು ರಾಷ್ಟ್ರ, ಒಂದು ಸಮಯ’ ಮತ್ತು ಭಾರತೀಯ ಪ್ರಮಾಣಿತ ಸಮಯ (ಐ ಎಸ್ ಟಿ) ಯಲ್ಲಿ ನಿಖರತೆಯನ್ನು ಸಾಧಿಸುವ ಗುರಿಯೊಂದಿಗೆ, ಭಾರತ ಸರ್ಕಾರದ ಗ್ರಾಹಕ ವ್ಯವಹಾರಗಳ ಇಲಾಖೆ ರಾಷ್ಟ್ರೀಯ ಭೌತಿಕ ಪ್ರಯೋಗಾಲಯ (ಎನ್ ಪಿ ಎಲ್) ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸಹಯೋಗದೊಂದಿಗೆ ಐ ಎಸ್ ಟಿಯನ್ನು ಮಿಲಿಸೆಕೆಂಡ್ನಿಂದ ಮೈಕ್ರೋಸೆಕೆಂಡ್ ನಿಖರತೆಯೊಂದಿಗೆ ಪ್ರಸಾರ ಮಾಡುವ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಈ ಯೋಜನೆಯು ಭಾರತದಾದ್ಯಂತ ಐದು ಕಾನೂನು ಮಾಪನಶಾಸ್ತ್ರ ಪ್ರಯೋಗಾಲಯಗಳಿಂದ ಐಎಸ್ ಟಿಯನ್ನು ಪ್ರಸಾರ ಮಾಡಲು ತಂತ್ರಜ್ಞಾನ ಮತ್ತು ಮೂಲಸೌಕರ್ಯಗಳನ್ನು ನಿರ್ಮಿಸುವ ಗುರಿಯನ್ನು ಹೊಂದಿದೆ. ನ್ಯಾವಿಗೇಷನ್, ದೂರಸಂಪರ್ಕ, ಪವರ್ ಗ್ರಿಡ್ ಸಿಂಕ್ರೊನೈಸೇಶನ್, ಬ್ಯಾಂಕಿಂಗ್, ಡಿಜಿಟಲ್ ಆಡಳಿತ ಮತ್ತು ಆಳವಾದ ಬಾಹ್ಯಾಕಾಶ ಸಂಚರಣೆ ಮತ್ತು ಗುರುತ್ವಾಕರ್ಷಣೆ ತರಂಗ ಪತ್ತೆ ಸೇರಿದಂತೆ ಅತ್ಯಾಧುನಿಕ ವೈಜ್ಞಾನಿಕ ಸಂಶೋಧನೆಯಂತಹ ಕ್ಷೇತ್ರಗಳಿಗೆ ಈ ನಿಖರತೆ ಅತ್ಯಗತ್ಯ. ಆದಾಗ್ಯೂ ಈ ಪ್ರಾಮುಖ್ಯತೆಯ ಹೊರತಾಗಿಯೂ, ಐಎಸ್ಟಿಯನ್ನು ಎಲ್ಲಾ ಟೆಲಿಕಾಂ ಸೇವಾ ಪೂರೈಕೆದಾರರು (ಟಿ ಎಸ್ ಪಿಗಳು) ಮತ್ತು ಇಂಟರ್ನೆಟ್ ಸೇವಾ ಪೂರೈಕೆದಾರರು (ಐ ಎಸ್ ಪಿಗಳು) ಕಡ್ಡಾಯವಾಗಿ ಅಳವಡಿಸಿಕೊಳ್ಳುವುದಿಲ್ಲ, ಅವರಲ್ಲಿ ಅನೇಕರು ಜಿಪಿಎಸ್ನಂತಹ ವಿದೇಶಿ ಸಮಯದ ಮೂಲಗಳನ್ನು ಅವಲಂಬಿಸಿದ್ದಾರೆ. ರಾಷ್ಟ್ರೀಯ ಭದ್ರತೆ, ನೈಜ-ಸಮಯದ ಅನ್ವಯಿಕೆಗಳು ಮತ್ತು ನಿರ್ಣಾಯಕ ಮೂಲಸೌಕರ್ಯಗಳ ಸುಗಮ ಕಾರ್ಯಾಚರಣೆಗೆ ಎಲ್ಲಾ ನೆಟ್ವರ್ಕ್ಗಳು ಮತ್ತು ವ್ಯವಸ್ಥೆಗಳನ್ನು ಐಎಸ್ಟಿಗೆ ಸಿಂಕ್ರೊನೈಸ್ ಮಾಡುವುದು ಅತ್ಯಗತ್ಯ. ಈ ಸವಾಲುಗಳನ್ನು ನಿಭಾಯಿಸಲು, ಕಾನೂನು ಮಾಪನಶಾಸ್ತ್ರ ಕಾಯ್ದೆ, 2009 ರ ಅಡಿಯಲ್ಲಿ ಐಎಸ್ಟಿ ಅಳವಡಿಸಿಕೊಳ್ಳಲು ನೀತಿ ಚೌಕಟ್ಟು, ನಿಯಂತ್ರಣ ಮತ್ತು ಶಾಸನವನ್ನು ಅಭಿವೃದ್ಧಿಪಡಿಸಲು ಉನ್ನತ ಅಧಿಕಾರದ ಅಂತರ ಸಚಿವಾಲಯ ಸಮಿತಿಯನ್ನು ರಚಿಸಲಾಗಿತ್ತು. ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ಅಧ್ಯಕ್ಷತೆಯ ಸಮಿತಿಯು ಎನ್ಪಿಎಲ್, ಇಸ್ರೋ, ಐಐಟಿ ಕಾನ್ಪುರ, ಎನ್ಐಸಿ, ಸಿಇಆರ್ಟಿ-ಇನ್, ಸೆಬಿ ಮತ್ತು ರೈಲ್ವೆ, ಟೆಲಿಕಾಂ ಮತ್ತು ಹಣಕಾಸು ಸೇವೆಗಳಂತಹ ಪ್ರಮುಖ ಸರ್ಕಾರಿ ಇಲಾಖೆಗಳ ಪ್ರತಿನಿಧಿಗಳನ್ನು ಒಳಗೊಂಡಿದೆ. ಐಎಸ್ಟಿ ಅಳವಡಿಕೆಯನ್ನು ಕಡ್ಡಾಯಗೊಳಿಸಲು ನಿಯಮಗಳನ್ನು ರೂಪಿಸಲು, ನೆಟ್ವರ್ಕ್ ಗಳಿಗೆ ಸಿಂಕ್ರೊನೈಸೇಶನ್ ಮಾರ್ಗಸೂಚಿಗಳನ್ನು ರೂಪಿಸಲು, ಸಮಯ-ಸ್ಟಾಂಪಿಂಗ್ ಮತ್ತು ಸೈಬರ್ ಭದ್ರತೆಗಾಗಿ ನಿಯಂತ್ರಕ ಚೌಕಟ್ಟುಗಳನ್ನು ಸಿದ್ಧಪಡಿಸಲು ಮತ್ತು ಸುಧಾರಿತ ತಂತ್ರಜ್ಞಾನಗಳು ಮತ್ತು ಮೂಲಸೌಕರ್ಯಗಳ ಮೂಲಕ ಐಎಸ್ಟಿ ಪ್ರಸರಣ ಯೋಜನೆಯ ಪ್ರಗತಿಯನ್ನು ಮೇಲ್ವಿಚಾರಣೆ ಮಾಡಲು ಸಮಿತಿಯ ವಿವಿಧ ಸಭೆಗಳನ್ನು ನಡೆಸಲಾಯಿತು. …
Read More »ಭಾರತದ 76ನೇ ಗಣರಾಜ್ಯೋತ್ಸವದಂದು ಶುಭಾಶಯ ಕೋರಿದ ಫ್ರಾನ್ಸ್ ಅಧ್ಯಕ್ಷರು ಮತ್ತು ಐರ್ಲೆಂಡ್ ಪ್ರಧಾನಮಂತ್ರಿ ಅವರಿಗೆ ಪ್ರಧಾನಮಂತ್ರಿ ಧನ್ಯವಾದ ಅರ್ಪಿಸಿದರು
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಾರತದ 76ನೇ ಗಣರಾಜ್ಯೋತ್ಸವದ ಶುಭಾಶಯ ಕೋರಿದ ಫ್ರಾನ್ಸ್ ಅಧ್ಯಕ್ಷ ಘನತೆವೆತ್ತ ಎಮ್ಯಾನುಯೆಲ್ ಮ್ಯಾಕ್ರೋನ್ ಮತ್ತು ಐರ್ಲೆಂಡ್ ಪ್ರಧಾನಮಂತ್ರಿ ಘನತೆವೆತ್ತ ಮೈಕೆಲ್ ಮಾರ್ಟಿನ್ ಅವರಿಗೆ ಧನ್ಯವಾದ ಅರ್ಪಿಸಿದರು. ಈ ಸಂಬಂಧ ಎಕ್ಸ್ ಖಾತೆಯಲ್ಲಿ ಫ್ರಾನ್ಸ್ ಅಧ್ಯಕ್ಷರ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಶ್ರೀ ನರೇಂದ್ರ ಮೋದಿ ಹೀಗೆ ಹೇಳಿದರು: “ನನ್ನ ಆತ್ಮೀಯ ಸ್ನೇಹಿತ, ಅಧ್ಯಕ್ಷ @EmmanuelMacron, ಭಾರತದ 76ನೇ ಗಣರಾಜ್ಯೋತ್ಸವದಂದು ನಿಮ್ಮ ಪ್ರೀತಿಯ ಶುಭಾಶಯಗಳನ್ನು …
Read More »ಭಾರತದ 76ನೇ ಗಣರಾಜ್ಯೋತ್ಸವದ ಶುಭಾಶಯಗಳಿಗಾಗಿ ವಿಶ್ವ ನಾಯಕರಿಗೆ ಧನ್ಯವಾದ ಅರ್ಪಿಸಿದ ಪ್ರಧಾನಮಂತ್ರಿ
ಭಾರತದ 76ನೇ ಗಣರಾಜ್ಯೋತ್ಸವದ ಶುಭಾಶಯಗಳು ಮತ್ತು ಶುಭಸಂದೇಶಗಳಿಗಾಗಿ ವಿಶ್ವ ನಾಯಕರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಧನ್ಯವಾದಗಳನ್ನು ತಿಳಿಸಿದರು. ನೇಪಾಳದ ಪ್ರಧಾನಮಂತ್ರಿಯವರು ಎಕ್ಸ್ ತಾಣದಲ್ಲಿ ನೀಡಿದ ಹೇಳಿಕೆಗೆ ಪ್ರತಿಕ್ರಿಯೆಯಾಗಿ, ಪ್ರಧಾನಮಂತ್ರಿಯವರು ಈ ರೀತಿ ಹೇಳಿದರು: “ಪ್ರಧಾನಮಂತ್ರಿ @kpsharmaoli, ನಿಮ್ಮ ಆತ್ಮೀಯ ಶುಭಾಶಯಗಳಿಗೆ ಧನ್ಯವಾದಗಳು. ಭಾರತವು ತನ್ನ ಗಣರಾಜ್ಯಕ್ಕೆ 75 ವರ್ಷಗಳನ್ನು ಪೂರೈಸುತ್ತಿರುವಾಗ, ನಮ್ಮ ಎರಡು ರಾಷ್ಟ್ರಗಳ ಪ್ರಜೆಗಳ ನಡುವಿನ ಸ್ನೇಹದ ಐತಿಹಾಸಿಕ ಬಂಧಗಳನ್ನು ನಾವು ಆಳವಾಗಿ ಪಾಲಿಸುತ್ತೇವೆ ಮತ್ತು …
Read More »ಭಾರತದ ನವೀಕರಿಸಬಹುದಾದ ಇಂಧನ ಕ್ರಾಂತಿ
ಭಾರತವು ಸುಸ್ಥಿರ ಭವಿಷ್ಯದತ್ತ ತನ್ನ ಪರಿವರ್ತನೆಯನ್ನು ವೇಗಗೊಳಿಸುತ್ತಿರುವುದರಿಂದ, ಅದರ ನವೀಕರಿಸಬಹುದಾದ ಇಂಧನ (ಆರ್ ಇ) ವಲಯವು ಅಭೂತಪೂರ್ವ ಬೆಳವಣಿಗೆಯನ್ನು ಕಂಡಿದೆ. 2024ರಲ್ಲಿ, ಸೌರ ಮತ್ತು ಪವನ ಶಕ್ತಿ ಸ್ಥಾಪನೆಗಳು, ನೀತಿ ಪ್ರಗತಿಗಳು ಮತ್ತು ಮೂಲಸೌಕರ್ಯ ಸುಧಾರಣೆಗಳಲ್ಲಿ ದೇಶವು ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ, 2025ರಲ್ಲಿ ಮಹತ್ವಾಕಾಂಕ್ಷೆಯ ಗುರಿಗಳಿಗೆ ವೇದಿಕೆಯನ್ನು ಸ್ಥಾಪಿಸಿದೆ. 2030ರ ವೇಳೆಗೆ 500 ಗಿಗಾವ್ಯಾಟ್ ಪಳೆಯುಳಿಕೆಯೇತರ ಇಂಧನ ಆಧಾರಿತ ಇಂಧನ ಸಾಮರ್ಥ್ಯವನ್ನು ಸಾಧಿಸುವ ಬದ್ಧತೆಯೊಂದಿಗೆ, ಭಾರತವು ಶುದ್ಧ ಇಂಧನದಲ್ಲಿ ಜಾಗತಿಕ …
Read More »ರಾಷ್ಟ್ರೀಯ ಆರೋಗ್ಯ ಮಿಷನ್ (2021-24) ಅಡಿಯಲ್ಲಿ ಸಾಧನೆಗಳಿಗೆ ಸಂಪುಟದ ಅನುಮೋದನೆ: ಭಾರತದ ಸಾರ್ವಜನಿಕ ಆರೋಗ್ಯ ಫಲಿತಾಂಶಗಳನ್ನು ಸುಧಾರಿಸುವಲ್ಲಿ ಒಂದು ಮೈಲಿಗಲ್ಲು
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಗೆ 2021-22, 2022-23 ಮತ್ತು 2023-24ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್.ಎಚ್.ಎಂ.) ಅಡಿಯಲ್ಲಿ ಆಗಿರುವ ಪ್ರಗತಿಯ ಬಗ್ಗೆ ವಿವರಿಸಲಾಯಿತು. ತಾಯಂದಿರ ಮರಣ ಪ್ರಮಾಣ, ಶಿಶು ಮರಣ ಪ್ರಮಾಣ, 5 ವರ್ಷದೊಳಗಿನ ಮಕ್ಕಳ ಮರಣ ಪ್ರಮಾಣದಲ್ಲಾಗಿರುವ ತ್ವರಿತ ಇಳಿಕೆ ಮತ್ತು ಒಟ್ಟು ಫಲವತ್ತತೆ ದರ ಮತ್ತು ಟಿಬಿ, ಮಲೇರಿಯಾ, ಕಾಲಾ-ಅಜರ್, ಡೆಂಗ್ಯೂ, ಕ್ಷಯ, ಕುಷ್ಠರೋಗ, ವೈರಲ್ ಹೆಪಟೈಟಿಸ್ ಮುಂತಾದ ವಿವಿಧ ರೋಗಗಳ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಆಗಿರುವ ಪ್ರಗತಿ ಹಾಗು ರಾಷ್ಟ್ರೀಯ ಕುಡಗೋಲು ಕೋಶ ರಕ್ತಹೀನತೆ ನಿರ್ಮೂಲನಾ ಮಿಷನ್ ನಂತಹ ಹೊಸ ಉಪಕ್ರಮಗಳಿಗೆ ಸಂಬಂಧಿಸಿದಂತೆ ಆಗಿರುವ ಪ್ರಗತಿಯ ಬಗ್ಗೆಯೂ ಸಂಪುಟಕ್ಕೆ ವಿವರಿಸಲಾಯಿತು. ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್ಎಚ್ಎಂ) ಮಾನವ ಸಂಪನ್ಮೂಲವನ್ನು ವಿಸ್ತರಿಸುವಲ್ಲಿ, ನಿರ್ಣಾಯಕ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಮತ್ತು ಆರೋಗ್ಯ ತುರ್ತುಸ್ಥಿತಿಗಳಿಗೆ ಸಮಗ್ರ ಪ್ರತಿಕ್ರಿಯೆಯನ್ನು ಬೆಳೆಸುವಲ್ಲಿ, ನಿರಂತರ ಪ್ರಯತ್ನಗಳ ಮೂಲಕ ಭಾರತದ ಸಾರ್ವಜನಿಕ ಆರೋಗ್ಯ ಫಲಿತಾಂಶಗಳನ್ನು ಸುಧಾರಿಸಲು ಗಮನಾರ್ಹವಾಗಿ ಕೊಡುಗೆ ನೀಡಿದೆ. ಕಳೆದ ಮೂರು ವರ್ಷಗಳಲ್ಲಿ, ಎನ್ಎಚ್ಎಂ ತಾಯಿ ಮತ್ತು ಮಕ್ಕಳ ಆರೋಗ್ಯ , ರೋಗ ನಿರ್ಮೂಲನೆ ಮತ್ತು ಆರೋಗ್ಯ ಮೂಲಸೌಕರ್ಯ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಗಣನೀಯ ಪ್ರಗತಿಯನ್ನು ಸಾಧಿಸಿದೆ. ಮಿಷನ್ನಿನ ಪ್ರಯತ್ನಗಳು ಭಾರತದ ಆರೋಗ್ಯ ಸುಧಾರಣೆಗಳಿಗೆ, ವಿಶೇಷವಾಗಿ ಕೋವಿಡ್ -19 ಜಾಗತಿಕ ಸಾಂಕ್ರಾಮಿಕ ಸಮಯದಲ್ಲಿ ವಿಶೇಷ ಕೊಡುಗೆ ನೀಡಿವೆ ಮತ್ತು ದೇಶಾದ್ಯಂತ ಹೆಚ್ಚು ಪ್ರವೇಶಿಸಬಹುದಾದ (ಎಲ್ಲರಿಗೂ ಲಭ್ಯವಾಗಬಹುದಾದ) ಮತ್ತು ಗುಣಮಟ್ಟದ ಆರೋಗ್ಯ ಸೇವೆಗಳನ್ನು ಖಚಿತಪಡಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿವೆ. ಆರೋಗ್ಯ ಕ್ಷೇತ್ರದಲ್ಲಿ ಮಾನವ ಸಂಪನ್ಮೂಲದಲ್ಲಿ ಆಗಿರುವ ಗಮನಾರ್ಹ ಹೆಚ್ಚಳವು ಎನ್ಎಚ್ಎಂನ ಪ್ರಮುಖ ಸಾಧನೆಯಾಗಿದೆ. 2021-22ರ ಹಣಕಾಸು ವರ್ಷದಲ್ಲಿ, ಸಾಮಾನ್ಯ ಕರ್ತವ್ಯ ವೈದ್ಯಕೀಯ ಅಧಿಕಾರಿಗಳು (ಜಿಡಿಎಂಒಗಳು), ತಜ್ಞರು, ಸ್ಟಾಫ್ ನರ್ಸ್ಗಳು, …
Read More »ಬೇಟಿ ಬಚಾವೋ ಬೇಟಿ ಪಡಾವೋ ಉಪಕ್ರಮವು ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡಿದೆ ಮತ್ತು ಭಾರತದ ಪ್ರಗತಿಯಲ್ಲಿ ಮಹಿಳೆಯರನ್ನು ಮುಂಚೂಣಿಯಲ್ಲಿರಿಸಿದೆ: ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೇಟಿ ಬಚಾವೋ ಬೇಟಿ ಪಡಾವೋ ಉಪಕ್ರಮವು ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡಿದೆ ಮತ್ತು ಭಾರತದ ಪ್ರಗತಿಯಲ್ಲಿ ಮಹಿಳೆಯರನ್ನು ಮುಂಚೂಣಿಯಲ್ಲಿರಿಸಿದೆ ಎಂದು ಹೇಳಿದ್ದಾರೆ. ಅವರು ಕೇಂದ್ರ ಸಚಿವೆ ಶ್ರೀಮತಿ ಅನ್ನಪೂರ್ಣ ದೇವಿ ಅವರ ಲೇಖನವು ಭಾರತದ ಹೆಣ್ಣುಮಕ್ಕಳು ಹೇಗೆ ಬದಲಾವಣೆ ತರುತ್ತಿದ್ದಾರೆ, ಉದ್ಯಮಿಗಳು ಮತ್ತು ನಾಯಕಿಯರಾಗಿ ಹೊರಹೊಮ್ಮುತ್ತಿದ್ದಾರೆಂಬುದನ್ನು ಎತ್ತಿ ತೋರಿಸುತ್ತದೆ ಎಂದು ಅವರು ತಿಳಿಸಿದ್ದಾರೆ. ಪ್ರಧಾನಮಂತ್ರಿ ಅವರು ಕೇಂದ್ರ ಸಚಿವೆ ಶ್ರೀಮತಿ ಅನ್ನಪೂರ್ಣ …
Read More »
Matribhumi Samachar Kannad