ಫಲಿತಾಂಶ ಹೊರಬಿದ್ದಿದೆ! ಭಾರತದ ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ನವದೆಹಲಿಯ ವಿಜ್ಞಾನ ಭವನದಲ್ಲಿ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ (ಎಂಒಎಚ್ಯುಎ) ಆಯೋಜಿಸಿದ್ದ ʻಸ್ವಚ್ಛ ಸರ್ವೇಕ್ಷಣಾ 2024-25ʼ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಕೇಂದ್ರ ಸಚಿವರಾದ ಶ್ರೀ ಮನೋಹರ್ ಲಾಲ್ ಮತ್ತು ಸಹಾಯಕ ಸಚಿವರಾದ ಶ್ರೀ ತೋಖಾನ್ ಸಾಹು ಅವರ ಉಪಸ್ಥಿತಿಯಲ್ಲಿ 23 ʻಸೂಪರ್ ಸ್ವಚ್ಛ ಲೀಗ್ ನಗರʼಗಳು ಪ್ರಶಸ್ತಿ ಸ್ವೀಕರಿಸಿದವು. ಭಾರತದಲ್ಲಿ ಹೊಸ ತಲೆಮಾರಿನ ಸ್ವಚ್ಛ ನಗರಗಳು ಉದಯಿಸಿದ್ದು …
Read More »ಮಾಜಿ ರಾಷ್ಟ್ರಪತಿ ಡಾ. ಜಾಕೀರ್ ಹುಸೇನ್ ಅವರ ಜನ್ಮ ದಿನಾಚರಣೆಯಂದು ಪುಷ್ಪ ನಮನ ಸಲ್ಲಿಸಿದ ರಾಷ್ಟ್ರಪತಿಯವರು
ಭಾರತದ ರಾಷ್ಟ್ರಪತಿಯವರಾದ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (ಫೆಬ್ರವರಿ 8, 2025ರಂದು) ರಾಷ್ಟ್ರಪತಿ ಭವನದಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಡಾ. ಜಾಕಿರ್ ಹುಸೇನ್ ಅವರ ಜನ್ಮ ದಿನಾಚರಣೆಯಂದು ಪುಷ್ಪ ನಮನ ಸಲ್ಲಿಸಿದರು. भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के …
Read More »ಜೀವನ ರಕ್ಷಾಪದಕ ಸರಣಿ ಪ್ರಶಸ್ತಿಗಳು-2024 ರನ್ನು ಪ್ರದಾನ ಮಾಡಲು ಮಾಡಿರುವ ಆಯ್ಕೆಯನ್ನು ಅನುಮೋದಿಸಿದ ರಾಷ್ಟ್ರಪತಿ
ಸರ್ವೋತ್ತಮ ಜೀವನ ರಕ್ಷಾಪದಕ 17 ಮಂದಿಗೆ, ಉತ್ತಮ ಜೀವನ ರಕ್ಷಾ ಪದಕ 09 ಮಂದಿಗೆ ಮತ್ತು 23 ಜನರಿಗೆ ಜೀವನ ರಕ್ಷಾ ಪದಕ ಸೇರಿದಂತೆ ಒಟ್ಟಾರೆ 49 ವ್ಯಕ್ತಿಗಳಿಗೆ 2024 ರ ಜೀವನ ರಕ್ಷಾ ಪದಕ ಸರಣಿ ಪ್ರಶಸ್ತಿಗಳನ್ನು ( ಹಾಗೂ ಇವುಗಳಲ್ಲಿ ಆರು ಪ್ರಶಸ್ತಿ ಪುರಸ್ಕೃತರಿಗೆ ಮರಣೋತ್ತರ ಪ್ರಶಸ್ತಿ ) ಪ್ರದಾನ ಮಾಡಲು ಭಾರತದ ರಾಷ್ಟ್ರಪತಿಗಳು ಅನುಮೋದನೆ ನೀಡಿದ್ದಾರೆ. ವಿವಿಧ ಜೀವನ ರಕ್ಷಾ ಪದಕ ಪುರಸ್ಕೃತರ ವಿವರಗಳು ಕೆಳಕಂಡಂತಿವೆ:- …
Read More »15ನೇ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಪಾಲ್ಗೊಂಡ ರಾಷ್ಟ್ರಪತಿ
ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (ಜನವರಿ 25, 2025) ಹೊಸದಿಲ್ಲಿಯಲ್ಲಿ ನಡೆದ 15 ನೇ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಪಾಲ್ಗೊಂಡು ಭಾಷಣ ಮಾಡಿದರು. ಈ ಸಂದರ್ಭದಲ್ಲಿ ರಾಷ್ಟ್ರಪತಿಗಳು ಚುನಾವಣೆಗಳನ್ನು ಸುಗಮವಾಗಿ ನಡೆಸುವಲ್ಲಿ ಅನುಕರಣೀಯ ಕಾರ್ಯಕ್ಷಮತೆಯನ್ನು ಪ್ರದರ್ಶಿಸಿದ ರಾಜ್ಯ ಮತ್ತು ಜಿಲ್ಲಾ ಅಧಿಕಾರಿಗಳಿಗೆ ಅತ್ಯುತ್ತಮ ಚುನಾವಣಾ ಅಭ್ಯಾಸ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಮುಖ್ಯ ಚುನಾವಣಾ ಆಯುಕ್ತ ಶ್ರೀ ರಾಜೀವ್ ಕುಮಾರ್ ಅವರಿಂದ “ಇಂಡಿಯಾ ವೋಟ್ಸ್ 2024: ಎ ಸಾಗಾ ಆಫ್ ಡೆಮಾಕ್ರಸಿ” ಪುಸ್ತಕದ ಮೊದಲ ಪ್ರತಿಯನ್ನು ಅವರು ಸ್ವೀಕರಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರಪತಿಗಳು, ನಮ್ಮ ಪ್ರಜಾಪ್ರಭುತ್ವವು ವಿಶ್ವದ ಅತ್ಯಂತ ಹಳೆಯ ಪ್ರಜಾಪ್ರಭುತ್ವ ಮಾತ್ರವಲ್ಲ, ವಿಶ್ವದ ಅತಿದೊಡ್ಡ, ವೈವಿಧ್ಯಮಯ, ಯುವ, ಅಂತರ್ಗತ ಮತ್ತು ಸೂಕ್ಷ್ಮ ಪ್ರಜಾಪ್ರಭುತ್ವವಾಗಿದೆ ಎಂಬುದು ನಮಗೆಲ್ಲರಿಗೂ ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು. ಭಾರತದ ಪ್ರಜಾಪ್ರಭುತ್ವವು ಆಧುನಿಕ ಜಗತ್ತಿಗೆ ವಿಶಿಷ್ಟ ಉದಾಹರಣೆಯಾಗಿದೆ. ವಿಶ್ವದ ಅನೇಕ ದೇಶಗಳು ನಮ್ಮ ಚುನಾವಣಾ ವ್ಯವಸ್ಥೆ ಮತ್ತು ನಿರ್ವಹಣೆಯಿಂದ ಕಲಿಯುತ್ತಿವೆ ಎಂದು ಅವರು ಹೇಳಿದರು. ನಮ್ಮ ಅಂತರ್ಗತ ಪ್ರಜಾಪ್ರಭುತ್ವದ ಪ್ರಭಾವಶಾಲಿ ನೋಟವು ಚುನಾವಣೆಗಳಲ್ಲಿ ಗೋಚರಿಸುತ್ತದೆ ಎಂದು ರಾಷ್ಟ್ರಪತಿ ಹೇಳಿದರು. ಚುನಾವಣೆಗಳಲ್ಲಿ ಹೆಚ್ಚುತ್ತಿರುವ ಮಹಿಳೆಯರ ಭಾಗವಹಿಸುವಿಕೆಯು ನಮ್ಮ ಸಮಾಜ ಮತ್ತು ದೇಶದ ಒಟ್ಟಾರೆ ಅಭಿವೃದ್ಧಿಯ ಪ್ರಮುಖ ಸಂಕೇತವಾಗಿದೆ. 85 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ಮತದಾರರು, ವಿಕಲಚೇತನ ಮತದಾರರು ಮತ್ತು ದೂರದ ಪ್ರದೇಶಗಳಲ್ಲಿ ವಾಸಿಸುವ ಬುಡಕಟ್ಟು ಮತದಾರರಿಗೆ ಮತದಾನ ಪ್ರಕ್ರಿಯೆಯನ್ನು ಸುಗಮಗೊಳಿಸಲು ಚುನಾವಣಾ ಆಯೋಗ ವಿಶೇಷ ಪ್ರಯತ್ನಗಳನ್ನು ಮಾಡಿದೆ ಎಂಬುದರತ್ತ ಅವರು ಗಮನ ಸೆಳೆದರು. ಈ ರೀತಿಯಾಗಿ, ಚುನಾವಣಾ ಆಯೋಗವು ಅಂತರ್ಗತ ಮತ್ತು ಸೂಕ್ಷ್ಮ ಚುನಾವಣಾ ನಿರ್ವಹಣೆಗೆ ಉತ್ತಮ ಉದಾಹರಣೆಯನ್ನು ನೀಡಿದೆ ಎಂದೂ ಅವರು ಹೇಳಿದರು. ಮತದಾನಕ್ಕೆ ಸಂಬಂಧಿಸಿದ ಆದರ್ಶಗಳು ಮತ್ತು ಜವಾಬ್ದಾರಿಗಳು ನಮ್ಮ ಪ್ರಜಾಪ್ರಭುತ್ವದ ಪ್ರಮುಖ ಆಯಾಮಗಳಾಗಿವೆ ಎಂದು ರಾಷ್ಟ್ರಪತಿ ಹೇಳಿದರು. ಚುನಾವಣಾ ಆಯೋಗ ಹೊರಡಿಸಿದ ಮತದಾರರ ಪ್ರತಿಜ್ಞೆ ಎಲ್ಲಾ ನಾಗರಿಕರಿಗೆ ಮಾರ್ಗದರ್ಶನ ನೀಡುತ್ತದೆ. ಪ್ರಜಾಪ್ರಭುತ್ವದಲ್ಲಿ ಸಂಪೂರ್ಣ ನಂಬಿಕೆಯ ಜೊತೆಗೆ, ಮತದಾರರು ಎಲ್ಲಾ ರೀತಿಯ ಸಂಕುಚಿತ ಮನೋಭಾವ, ತಾರತಮ್ಯ ಮತ್ತು ಪ್ರಲೋಭನೆಗಳನ್ನು ಮೀರಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸುವ ದೃಢ ಸಂಕಲ್ಪವನ್ನು ಹೊಂದಿರಬೇಕು ಎಂದು ಅವರು ಹೇಳಿದರು. ಪ್ರಬುದ್ಧ ಮತದಾರರು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತಾರೆ ಎಂದು ಅವರು ನುಡಿದರು. 2011 ರಿಂದ, ಭಾರತದ ಚುನಾವಣಾ ಆಯೋಗದ ಸಂಸ್ಥಾಪನಾ ದಿನದ ನೆನಪಿಗಾಗಿ ಪ್ರತಿವರ್ಷ ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ. ಈ ಕಾರ್ಯಕ್ರಮವು ಮತದಾರರ ಕೇಂದ್ರೀಕರಣವನ್ನು ಒತ್ತಿಹೇಳುವುದು, ನಾಗರಿಕರಲ್ಲಿ ಚುನಾವಣಾ ಜಾಗೃತಿಯನ್ನು ಹೆಚ್ಚಿಸುವುದು ಮತ್ತು ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಅವರ ಸಕ್ರಿಯ ಭಾಗವಹಿಸುವಿಕೆಯನ್ನು ಪ್ರೇರೇಪಿಸುವ ಗುರಿಯನ್ನು ಹೊಂದಿದೆ.
Read More »2024ನೇ ಸಾಲಿನ ಕ್ರೀಡಾ ಮತ್ತು ಸಾಹಸ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ಇಂದು (ಜನವರಿ 17, 2025) ನಡೆದ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು 2024ರ ಕ್ರೀಡಾ ಮತ್ತು ಸಾಹಸ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಈ ಪ್ರಶಸ್ತಿಗಳಲ್ಲಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ-2024 ಸೇರಿವೆ. ದ್ರೋಣಾಚಾರ್ಯ ಪ್ರಶಸ್ತಿ-2024; ಅರ್ಜುನ ಪ್ರಶಸ್ತಿ-2024; ತೇನ್ ಜಿಂಗ್ ನಾರ್ಗೆ ರಾಷ್ಟ್ರೀಯ ಸಾಹಸ ಪ್ರಶಸ್ತಿಗಳು-2023; ರಾಷ್ಟ್ರೀಯ ಖೇಲ್ ಪ್ರೋತ್ಸಾಹನ್ ಪುರಸ್ಕಾರ-2024; ಮತ್ತು ಮೌಲಾನಾ ಅಬುಲ್ ಕಲಾಂ ಆಜಾದ್ ಟ್ರೋಫಿ …
Read More »ರಾಷ್ಟ್ರಪತಿಯವರು ಬೆಂಗಳೂರಿನಲ್ಲಿ ನಿಮ್ಹಾನ್ಸ್ ನ ಸುವರ್ಣ ಮಹೋತ್ಸವ ಆಚರಣೆಯಲ್ಲಿ ಭಾಗವಹಿಸಿದರು
ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (ಜನವರಿ 3, 2025) ಬೆಂಗಳೂರಿನಲ್ಲಿ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನಗಳ ಸಂಸ್ಥೆಯ (ನಿಮ್ಹಾನ್ಸ್) ಸುವರ್ಣ ಮಹೋತ್ಸವ ಆಚರಣೆಯಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರಪತಿಯವರು, ಅಸಾಮಾನ್ಯ ರೋಗಿಗಳ ಆರೈಕೆಯೊಂದಿಗೆ ನವೀನ ಸಂಶೋಧನೆ ಮತ್ತು ಕಠಿಣ ಶೈಕ್ಷಣಿಕ ಕಾರ್ಯಕ್ರಮವು ನಿಮ್ಹಾನ್ಸ್ ಅನ್ನು ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಕ್ಷೇತ್ರದಲ್ಲಿ ನಿರ್ವಿವಾದ ನಾಯಕನನ್ನಾಗಿ ಮಾಡಿದೆ ಎಂದು ಹೇಳಿದರು. ಬಳ್ಳಾರಿ ಮಾದರಿ …
Read More »ರಾಷ್ಟ್ರಪತಿ ಅವರಿಂದ ಅತ್ಯಾಧುನಿಕ ರೋಗಪತ್ತೆ ಸೌಲಭ್ಯಗಳಾದ- ಸುಧಾರಿತ 3ಟಿ ಎಂ ಆರ್ ಐ ಸ್ಕ್ಯಾನರ್ ಮತ್ತು ಡಿ ಎಸ್ ಎ ಸಿಸ್ಟಮ್ ರಾಷ್ಟ್ರಕ್ಕೆ ಸಮರ್ಪಣೆ
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನಗಳ ಸಂಸ್ಥೆ (ನಿಮ್ಹಾನ್ಸ್) 2025ರ ಜನವರಿ 3ರಂದು ತನ್ನ ಸುವರ್ಣ ಮಹೋತ್ಸವವನ್ನು ಸಮಾವೇಶ ಸಭಾಂಗಣದಲ್ಲಿ ಆಚರಿಸಿಕೊಳ್ಳಲು ಸಕಲ ರೀತಿಯಲ್ಲಿ ಸಜ್ಜಾಗಿದೆ. ನಿಮ್ಹಾನ್ಸ್ ಐದು ದಶಕಗಳ ಗಮನಾರ್ಹ ಸೇವೆಯನ್ನು ಸ್ಮರಿಸುತ್ತಿರುವುದರಿಂದ, ಇದು ಸಂಸ್ಥೆಯ ಬದ್ಧತೆ, ನಾವೀನ್ಯತೆ ಮತ್ತು ಶ್ರೇಷ್ಠತೆಯ ದೃಢವಾದ ಅನ್ವೇಷಣೆಯಿಂದ ಕೂಡಿರುವ ಅದರ ಪಯಣವನ್ನು ಪ್ರತಿಬಿಂಬಿಸುತ್ತದೆ. ಭಾರತದ ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಲಿದ್ದಾರೆ. …
Read More »ವಿಜಯ್ ದಿನದ ಸಂದರ್ಭದಲ್ಲಿ 1971ರ ಯುದ್ಧದಲ್ಲಿ ಹುತಾತ್ಮ ವೀರರಿಗೆ ಗೌರವ ಸಲ್ಲಿಸಿ ರಾಷ್ಟ್ರವನ್ನು ಮುನ್ನಡೆಸಿದ ರಾಷ್ಟ್ರಪತಿ; ಯೋಧರ ಅಂತಿಮ ತ್ಯಾಗ ರಾಷ್ಟ್ರದ ಹೆಮ್ಮೆ ಮತ್ತು ಸ್ಫೂರ್ತಿಗೆ ಮೂಲ: ಶ್ರೀಮತಿ ದ್ರೌಪದಿ ಮುರ್ಮು
ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ವಿಜಯ್ ದಿನದ ಅಂಗವಾಗಿ 1971ರ ಯುದ್ಧದ ವೀರ ಸೈನಿಕರಿಗೆ ಗೌರವ ಸಲ್ಲಿಸುವ ಮೂಲಕ ರಾಷ್ಟ್ರವನ್ನು ಮುನ್ನಡೆಸಿದರು. ಪ್ರತಿ ವರ್ಷ ಡಿಸೆಂಬರ್ 16 ರಂದು ಪಾಕಿಸ್ತಾನದ ವಿರುದ್ಧ ಭಾರತದ ಐತಿಹಾಸಿಕ ವಿಜಯದ ಸ್ಮರಣಾರ್ಥವಾಗಿ ವಿಜಯ್ ದಿನವನ್ನು ಆಚರಿಸಲಾಗುತ್ತದೆ. ತಮ್ಮ ಸಾಮಾಜಿಕ ಜಾಲತಾಣ ಪೋಸ್ಟ್ X ನಲ್ಲಿ ರಾಷ್ಟ್ರಪತಿಗಳು, ಪ್ರತಿಯೊಬ್ಬ ಭಾರತೀಯನಿಗೂ ಸ್ಫೂರ್ತಿ ನೀಡುವ ಮತ್ತು ರಾಷ್ಟ್ರೀಯ ಹೆಮ್ಮೆಯ ಮೂಲವಾಗಿ ಉಳಿಯುವ ಧೈರ್ಯಶಾಲಿಗಳ ಅಂತಿಮ ತ್ಯಾಗವನ್ನು …
Read More »
Matribhumi Samachar Kannad