Saturday, January 03 2026 | 03:39:49 PM
Breaking News

Tag Archives: President of India

ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿ ಮಹಾಸ್ವಾಮೀಜಿಯವರ 1066ನೇ ಜಯಂತಿಯ ಆಚರಣೆಗೆ ಭಾರತದ ರಾಷ್ಟ್ರಪತಿ ಅವರು ಚಾಲನೆ ನೀಡಿದರು

ಕರ್ನಾಟಕದ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಇಂದು (ಡಿಸೆಂಬರ್ 16, 2025) ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿ ಮಹಾಸ್ವಾಮೀಜಿಯವರ 1066ನೇ ಜಯಂತಿ ಆಚರಣೆಗೆ ಭಾರತದ ಸನ್ಮಾನ್ಯ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರಪತಿ, ಯುಗಯುಗಾಂತರಗಳಿಂದ  ಸಂತರು ತಮ್ಮ ಜ್ಞಾನ ಮತ್ತು ಕರುಣೆಯ ಮೂಲಕ ಮಾನವೀಯತೆಯನ್ನು ಮೆರೆದಿದ್ದಾರೆ ಎಂದು ಹೇಳಿದರು. ನಿಜವಾದ ಶ್ರೇಷ್ಠತೆ, ಅಧಿಕಾರ ಅಥವಾ ಸಂಪತ್ತಿನಲ್ಲಿಲ್ಲ ಬದಲಿಗೆ ತ್ಯಾಗ, ಸೇವೆ ಮತ್ತು ಆಧ್ಯಾತ್ಮಿಕ …

Read More »

ಭಾರತದ ರಾಷ್ಟ್ರಪತಿ ಅವರಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಗಣ್ಯ ವ್ಯಕ್ತಿಗಳಿಗೆ ಪ್ರಧಾನಮಂತ್ರಿ ಅಭಿನಂದನೆ

ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತದ ರಾಷ್ಟ್ರಪತಿ ಅವರಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ನಾಲ್ವರು ಗಣ್ಯ ವ್ಯಕ್ತಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭ ಹಾರೈಕೆಗಳನ್ನು ಸಲ್ಲಿಸಿದ್ದಾರೆ. ಸಾಮಾಜಿಕ ಮಾಧ್ಯಮ ವೇದಿಕೆ ‘ಎಕ್ಸ್’ ನಲ್ಲಿ ಸರಣಿ ಪೋಸ್ಟ್ ಗಳಲ್ಲಿ, ಪ್ರಧಾನಮಂತ್ರಿ ಅವರು ಪ್ರತಿಯೊಬ್ಬ ನಾಮನಿರ್ದೇಶಿತರ ಕೊಡುಗೆಗಳನ್ನು ಬಿಂಬಿಸಿದ್ದಾರೆ. ಶ್ರೀ ಉಜ್ವಲ್ ನಿಕಮ್ ಅವರು ಕಾನೂನು ವೃತ್ತಿಗೆ ನೀಡಿದ ಅನುಕರಣೀಯ ಭಕ್ತಿ ಮತ್ತು ಸಾಂವಿಧಾನಿಕ ಮೌಲ್ಯಗಳಿಗೆ ಅಚಲ ಬದ್ಧತೆಯನ್ನು ಪ್ರಧಾನಿ ಶ್ಲಾಘಿಸಿದರು. …

Read More »

ʻಎಂಎಸ್ಎಂಇ ದಿನಾಚರಣೆʼಯಲ್ಲಿ ಪಾಲ್ಗೊಂಡ ಭಾರತದ ರಾಷ್ಟ್ರಪತಿ

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (ಜೂನ್ 27, 2025) ನವದೆಹಲಿಯಲ್ಲಿ ನಡೆದ `ಎಂಎಸ್ಎಂಇ ದಿನಾಚರಣೆ’ಯಲ್ಲಿ ಪಾಲ್ಗೊಂಡು ಮಾತನಾಡಿದರು. ಕಾರ್ಯಕಮ ಉದ್ದೇಶಿಸಿ ಮಾತನಾಡಿದ ಅವರು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು (ಎಂಎಸ್ಎಂಇ) ದೇಶದ ಆರ್ಥಿಕತೆಯ ಬಲವಾದ ಆಧಾರಸ್ತಂಭಗಳಾಗಿವೆ ಎಂದು ಹೇಳಿದರು. ಈ ಉದ್ಯಮಗಳು ʻಜಿಡಿಪಿʼಗೆ ಗಮನಾರ್ಹವಾಗಿ ಕೊಡುಗೆ ನೀಡುತ್ತವೆ ಮತ್ತು ತಳಮಟ್ಟದಲ್ಲಿ ನಾವೀನ್ಯತೆ ಉತ್ತೇಜಿಸುತ್ತವೆ. ದೃಢ ʻಎಂಎಸ್ಎಂಇʼ ಪರಿಸರ ವ್ಯವಸ್ಥೆ ದೇಶದ ಸುಸ್ಥಿರ ಆರ್ಥಿಕ ಅಭಿವೃದ್ಧಿಗೆ …

Read More »

2025ರ ಜೂನ್ 27ರಂದು ‘ಎಂಎಸ್ ಎಂಇ’ ದಿನದ ಅಧ್ಯಕ್ಷತೆ ವಹಿಸಲಿರುವ ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು 2025ರ ಜೂನ್ 27ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ ‘ಎಂಎಸ್ಎಂಇ ದಿನ 2025- ಉದ್ಯಮಿ ಭಾರತ ಕಾರ್ಯಕ್ರಮ’ದ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವರಾದ ಶ್ರೀ ಜಿತನ್ ರಾಮ್ ಮಾಂಝಿ, ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವಾಲಯದ ರಾಜ್ಯ ಸಚಿವರಾದ ಸುಶ್ರೀ ಶೋಭಾ ಕರಂದ್ಲಾಜೆ ಮತ್ತು ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಅಧ್ಯಕ್ಷ ಶ್ರೀ ಮನೋಜ್ …

Read More »

ಉಪ ರಾಷ್ಟ್ರಪತಿಗಳು ಭಾರತದ ರಾಷ್ಟ್ರಪತಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ

ಗೌರವಾನ್ವಿತ ಉಪ ರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು ಇಂದು ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು. ಸಾಮಾಜಿಕ ಮಾಧ್ಯಮ  ‘ಎಕ್ಸ್’ ನಲ್ಲಿ ರಾಷ್ಟ್ರಪತಿಗಳಿಗೆ ಶುಭ ಹಾರೈಸುತ್ತಾ ಅವರು ಹೀಗೆ ಹೇಳಿದ್ದಾರೆ: ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಜನ್ಮದಿನದ ಹೃತ್ಪೂರ್ವಕ ಶುಭಾಶಯಗಳು. ವಿನಮ್ರ ಹಿನ್ನೆಲೆಯಿಂದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಅವರ ಅಸಾಧಾರಣ ಪಯಣವು ಅವರ ವಿನಮ್ರತೆ, ಸರಳತೆ ಮತ್ತು ಉದಾತ್ತತೆಯ ಸಂಕೇತವಾಗಿದೆ, …

Read More »

ಆರ್ಟ್ ಆಫ್ ಲಿವಿಂಗ್ ನ ಅಂತಾರಾಷ್ಟ್ರೀಯ ಮಹಿಳಾ ಸಮ್ಮೇಳನದ ಉದ್ಘಾಟನಾ ಅಧಿವೇಶನದಲ್ಲಿ ಭಾರತದ ರಾಷ್ಟ್ರಪತಿ

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (ಫೆಬ್ರವರಿ 14, 2025) ಬೆಂಗಳೂರಿನಲ್ಲಿ ನಡೆದ ಆರ್ಟ್ ಆಫ್ ಲಿವಿಂಗ್ ನ ಅಂತಾರಾಷ್ಟ್ರೀಯ ಮಹಿಳಾ ಸಮ್ಮೇಳನದ ಉದ್ಘಾಟನಾ ಅಧಿವೇಶನದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರಪತಿಗಳು, ಭಾರತದ ನಾರಿ ಶಕ್ತಿಯು ಮಹತ್ವಾಕಾಂಕ್ಷೆ, ಸಾಧನೆ ಮತ್ತು ಕೊಡುಗೆ ನೀಡಲು ಸಿದ್ದಗೊಳ್ಳುತ್ತಿದೆ ಎಂದರು. ಅದು ವಿಜ್ಞಾನ, ಕ್ರೀಡೆ, ರಾಜಕೀಯ, ಕಲೆ ಅಥವಾ ಸಂಸ್ಕೃತಿಯಾಗಿರಲಿ, ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳು ತಲೆ ಎತ್ತಿ ಮುಂದೆ ಸಾಗುತ್ತಿದ್ದಾರೆ. ಅವರು ತಮ್ಮ ಕುಟುಂಬ, ಸಂಸ್ಥೆಗಳು ಮತ್ತು ದೇಶ ಹೆಮ್ಮೆಪಡುವಂತೆ ಮಾಡುತ್ತಿದ್ದಾರೆ. ಮಾನಸಿಕ ಸ್ಥೈರ್ಯ-ಶಕ್ತಿಯಿಲ್ಲದೆ ಅಡೆತಡೆಗಳನ್ನು ಮುರಿಯಲು ಮತ್ತು ಸ್ಟೀರಿಯೊಟೈಪ್ ಗಳಿಗೆ  ಸವಾಲೆಸೆಯಲು  ಸಾಧ್ಯವಿಲ್ಲ. ಪ್ರತಿಯೊಬ್ಬ ಮಹಿಳೆಯೂ ಧೈರ್ಯವನ್ನು ಒಟ್ಟುಗೂಡಿಸಬೇಕು, ದೊಡ್ಡ ಕನಸುಗಳನ್ನು ಕಾಣಬೇಕು ಮತ್ತು ತನ್ನ ಕನಸುಗಳನ್ನು ಸಾಧಿಸಲು ಎಲ್ಲಾ ಶಕ್ತಿ ಮತ್ತು ಸಾಮರ್ಥ್ಯವನ್ನು ಬಳಸಿಕೊಳ್ಳಬೇಕು ಎಂದು ಅವರು ಆಗ್ರಹಿಸಿದರು. ಪ್ರತಿಯೊಬ್ಬರೂ ತಮ್ಮ ಗುರಿ ಸಾಧನೆಯತ್ತ  ಇಡುವ ಪ್ರತಿಯೊಂದು ಸಣ್ಣ ಹೆಜ್ಜೆಯೂ ಅಭಿವೃದ್ಧಿ ಹೊಂದಿದ ಭಾರತದತ್ತ ಒಂದು ಹೆಜ್ಜೆಯಾಗುತ್ತದೆ ಎಂದು ಅವರು ಹೇಳಿದರು. ನಾವು ತಾಂತ್ರಿಕ ಅಸ್ತವ್ಯಸ್ತಗಳ  ಯುಗದಲ್ಲಿದ್ದೇವೆ ಎಂದು ರಾಷ್ಟ್ರಪತಿ  ನುಡಿದರು. ತಂತ್ರಜ್ಞಾನದ ಪ್ರಗತಿಯು ನಮಗೆ ಕೆಲವು ರೀತಿಯಲ್ಲಿ ಉತ್ತಮ ಗುಣಮಟ್ಟದ ಜೀವನವನ್ನು ನೀಡಿದೆ. ಅಂತಹ ಸ್ಪರ್ಧಾತ್ಮಕ ಜಗತ್ತಿನಲ್ಲಿ, ನಮ್ಮ ಮಾನವೀಯ ಮೌಲ್ಯಗಳು ಹಾಗೇ ಉಳಿಯುವುದನ್ನು ನಾವು ಖಚಿತಪಡಿಸಿಕೊಳ್ಳಬೇಕು. ವಾಸ್ತವವಾಗಿ, ಸಹಾನುಭೂತಿ, ಪ್ರೀತಿ ಮತ್ತು ಏಕತೆಯ ಮಾನವೀಯ ಮೌಲ್ಯಗಳನ್ನು ಉತ್ತೇಜಿಸಲು ಪ್ರತಿಯೊಬ್ಬ ಮನುಷ್ಯನು ಪ್ರಜ್ಞಾಪೂರ್ವಕವಾಗಿ ಹೆಚ್ಚುವರಿ ಪ್ರಯತ್ನವನ್ನು ಮಾಡಬೇಕಾಗಿದೆ. ಇಲ್ಲಿ ಮಹಿಳೆಯರ ಪಾತ್ರ ಬಹಳ ಮುಖ್ಯವಾಗುತ್ತದೆ. ಮಹಿಳೆಯರಿಗೆ ಸಹಾನುಭೂತಿಯ ಮೂಲಕ ಮುನ್ನಡೆಸುವ ವಿಶೇಷ ಸಾಮರ್ಥ್ಯವಿದೆ. ಅವರು ವ್ಯಕ್ತಿಯನ್ನು ಮೀರಿ ನೋಡುವ ಮತ್ತು ಜಾಗತಿಕ ಮಟ್ಟದಲ್ಲಿ ಕುಟುಂಬಗಳು, ಸಮುದಾಯಗಳು ಮತ್ತು ಸಂಬಂಧಗಳ ಯೋಗಕ್ಷೇಮಕ್ಕಾಗಿ ಕೆಲಸ ಮಾಡುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಈ ಸಮ್ಮೇಳನದಲ್ಲಿ ಭಾಗವಹಿಸುತ್ತಿರುವ  ಎಲ್ಲಾ ಮಹಿಳೆಯರು, ತಮ್ಮ ಜೀವನವನ್ನು ಮತ್ತು ತಮ್ಮ ಸುತ್ತಲಿನವರ ಜೀವನವನ್ನು ಹೆಚ್ಚು ಸುಂದರ ಮತ್ತು ಶಾಂತಿಯುತವಾಗಿಸಲು ಅನ್ವಯಿಸಬಹುದಾದ ಆಧ್ಯಾತ್ಮಿಕ ತತ್ವಗಳನ್ನು ಮೈಗೂಡಿಸಿಕೊಳ್ಳುತ್ತಾರೆ  ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು. ಆರ್ಟ್ ಆಫ್ ಲಿವಿಂಗ್,  ಶಿಕ್ಷಣ ಕ್ಷೇತ್ರದಲ್ಲಿ ಹಲವಾರು ಉಪಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ರಾಷ್ಟ್ರಪತಿಗಳು ಸಂತಸ ವ್ಯಕ್ತಪಡಿಸಿದರು. ನಮ್ಮ ಮಕ್ಕಳ ಶಿಕ್ಷಣಕ್ಕಿಂತ ಮಾನವೀಯತೆಯ ಕ್ಷೇತ್ರದಲ್ಲಿ ಬೇರೆ ಯಾವ  ದೊಡ್ಡ ಹೂಡಿಕೆಯೂ  ಇಲ್ಲ ಎಂದು ಅವರು ಹೇಳಿದರು. ಸರಿಯಾದ ಮಾರ್ಗದರ್ಶನ ಮತ್ತು ಬೆಂಬಲದೊಂದಿಗೆ, ಅನೇಕ ಮಕ್ಕಳು ನಮ್ಮ ರಾಷ್ಟ್ರದ ಪ್ರಯಾಣದಲ್ಲಿ ಸಕ್ರಿಯವಾಗಿ ಭಾಗವಹಿಸಬಹುದು ಎಂದ ಅವರು  ಹವಾಮಾನ ಬದಲಾವಣೆಯಂತಹ ಜಾಗತಿಕ ಸವಾಲುಗಳನ್ನು ಎದುರಿಸಲು ಒಟ್ಟಾಗಿ ಕೆಲಸ ಮಾಡುವ ಅಗತ್ಯವನ್ನು ಒತ್ತಿ ಹೇಳಿದರು. ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಲು ಅವರು ಎಲ್ಲರನ್ನೂ ಒತ್ತಾಯಿಸಿದರು.

Read More »

ಕರ್ನಾಟಕ ಮತ್ತು ಜಾರ್ಖಂಡ್ ಗಳಿಗೆ ಫೆಬ್ರವರಿ 14 ಮತ್ತು 15 ರಂದು ಭಾರತದ ರಾಷ್ಟ್ರಪತಿಗಳ ಭೇಟಿ

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು 2025ರ ಫೆಬ್ರವರಿ 14 ಮತ್ತು 15 ರಂದು ಕರ್ನಾಟಕ ಮತ್ತು ಜಾರ್ಖಂಡ್‌ಗೆ ಭೇಟಿ ನೀಡಲಿದ್ದಾರೆ. ಫೆಬ್ರವರಿ 14 ರಂದು ರಾಷ್ಡ್ರಪತಿಗಳು ಬೆಂಗಳೂರಿನ‌ ಆರ್ಟ್ ಆಫ್ ಲಿವಿಂಗ್ ನಲ್ಲಿ ಆಯೋಜನೆಯಾಗಿರುವ 10ನೇ ಅಂತಾರಾಷ್ಟ್ರೀಯ ಮಹಿಳಾ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಫೆಬ್ರವರಿ 15 ರಂದು ರಾಷ್ಟ್ರಪತಿಗಳು ರಾಂಚಿಯಲ್ಲಿ ಬಿಐಟಿ ಮೆಸ್ರಾದ ಪ್ಲಾಟಿನಂ ಜುಬಿಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಲಿದ್ದಾರೆ.   भारत : 1885 …

Read More »

ನಾಳೆ ಯುನಾನಿ ದಿನದ ಸಂದರ್ಭದಲ್ಲಿ, ದೆಹಲಿಯಲ್ಲಿ ನಡೆಯುವ ಸಮಗ್ರ ಆರೋಗ್ಯ ಪರಿಹಾರಗಳ ಕುರಿತಾದ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಭಾರತದ ರಾಷ್ಟ್ರಪತಿ ಉದ್ಘಾಟಿಸಲಿದ್ದಾರೆ

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ನಾಳೆ ನವದೆಹಲಿಯ ವಿಜ್ಞಾನ ಭವನದಲ್ಲಿ ಎರಡು ದಿನಗಳ ಯುನಾನಿ ದಿನದ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಭೂ ವಿಜ್ಞಾನ ಸಚಿವಾಲಯದ ರಾಜ್ಯ ಸಚಿವರಾದ (ಸ್ವತಂತ್ರ ಉಸ್ತುವಾರಿ) ಡಾ. ಜಿತೇಂದ್ರ ಸಿಂಗ್ ಮತ್ತು ಆಯುಷ್ ಸಚಿವಾಲಯದ ರಾಜ್ಯ ಸಚಿವರಾದ (ಸ್ವತಂತ್ರ ಉಸ್ತುವಾರಿ) ಶ್ರೀ ಪ್ರತಾಪ್ರಾವ್ ಜಾಧವ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿರುತ್ತಾರೆ. ಪ್ರತಿ ವರ್ಷ ಫೆಬ್ರವರಿ 11 …

Read More »

ನಾಳೆ ಪ್ರಯಾಗ್ರಾಜ್ ಗೆ ಭೇಟಿ ನೀಡಲಿರುವ ಭಾರತದ ರಾಷ್ಟ್ರಪತಿ

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ನಾಳೆ (ಫೆಬ್ರವರಿ 10, 2025) ಪ್ರಯಾಗ್ರಾಜ್ (ಉತ್ತರ ಪ್ರದೇಶ) ಗೆ ಭೇಟಿ ನೀಡಲಿದ್ದಾರೆ. ಪ್ರಯಾಗ್‌ರಾಜ್‌ ಗೆ ತನ್ನ ಒಂದು ದಿನವಿಡೀ ಭೇಟಿಯ ಸಂದರ್ಭದಲ್ಲಿ, ಭಾರತದ ರಾಷ್ಟ್ರಪತಿಯವರು ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿ , ಸಂಗಮದಲ್ಲಿ ಪೂಜೆಯನ್ನು ಕೂಡ ಮಾಡಲಿದ್ದಾರೆ. ಅಕ್ಷಯವತ್ ಮತ್ತು ಹನುಮಾನ್ ಮಂದಿರಗಳಲ್ಲಿ ಪೂಜೆ ಮತ್ತು ದರ್ಶನವನ್ನು ಮಾಡಲಿದ್ದಾರೆ, ಮತ್ತು ಡಿಜಿಟಲ್ ಕುಂಭ ಅನುಭವ ಕೇಂದ್ರಕ್ಕೂ ಭೇಟಿ ನೀಡಲಿದ್ದಾರೆ.   भारत …

Read More »

2025ರ ಗಣರಾಜ್ಯೋತ್ಸವದ ಮುನ್ನಾದಿನದಂದು ರಾಷ್ಟ್ರವನ್ನುದ್ದೇಶಿಸಿ ಭಾರತದ ಘನತೆವೆತ್ತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರ ಭಾಷಣ

ನನ್ನ ಪ್ರೀತಿಯ ದೇಶವಾಸಿಗಳೇ, ನಮಸ್ಕಾರ! ಈ ಐತಿಹಾಸಿಕ ಸಂದರ್ಭದಲ್ಲಿ ನಿಮ್ಮನ್ನು ಉದ್ದೇಶಿಸಿ ಮಾತನಾಡಲು ನನಗೆ ಸಂತೋಷವಾಗಿದೆ. ಗಣರಾಜ್ಯೋತ್ಸವದ ಮುನ್ನಾದಿನದಂದು, ನಾನು ನಿಮಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ! 75 ವರ್ಷಗಳ ಹಿಂದೆ ಇದೇ ಜನವರಿ 26ರಂದು ನಮ್ಮ ಸಂಸ್ಥಾಪಕ ದಾಖಲೆಯಾದ ಭಾರತದ ಸಂವಿಧಾನ ಜಾರಿಗೆ ಬಂದಿತು. ಸಂವಿಧಾನ ರಚನಾ ಸಭೆಯು ಸುಮಾರು ಮೂರು ವರ್ಷಗಳ ಚರ್ಚೆಯ ನಂತರ, 1949ರ ನವೆಂಬರ್ 26ರಂದು ಸಂವಿಧಾನವನ್ನು ಅಂಗೀಕರಿಸಿತು. ಆ ದಿನವನ್ನು, ಅಂದರೆ, ನವೆಂಬರ್ …

Read More »